Homeಮುಖಪುಟಇಸ್ರೇಲ್‌ ಪೊಲೀಸರಿಗೆ ಕೇರಳದ ಉಡುಪು ಕಾರ್ಖಾನೆಯಿಂದ ಸಮವಸ್ತ್ರ ರಫ್ತು

ಇಸ್ರೇಲ್‌ ಪೊಲೀಸರಿಗೆ ಕೇರಳದ ಉಡುಪು ಕಾರ್ಖಾನೆಯಿಂದ ಸಮವಸ್ತ್ರ ರಫ್ತು

- Advertisement -
- Advertisement -

ಪ್ಯಾಲೆಸ್ತೀನ್ ಮೇಲಿನ ಇಸ್ರೇಲ್ ಯುದ್ಧದ ಬಗ್ಗೆ ಕೇರಳದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ, ಕೇರಳದ ಕಂಪೆನಿಯೊಂದು ಇಸ್ರೇಲ್ ಪೊಲೀಸ್ ಪಡೆಗಳೊಂದಿಗೆ ದೃಢವಾದ ವ್ಯವಹಾರ ಸಂಬಂಧವನ್ನು ಹೊಂದಿದೆ ಎನ್ನವುದು ಇದೀಗ ಬಹಿರಂಗವಾಗಿದೆ.

ಕೇರಳದ ಕಣ್ಣೂರು ಜಿಲ್ಲೆಯ ಒಂದು ಉಡುಪು ಕಾರ್ಖಾನೆಯು ಕಳೆದ ಆರು ವರ್ಷಗಳಿಂದ ಇಸ್ರೇಲ್‌ ಪೊಲೀಸ್ ಸಿಬ್ಬಂದಿಗೆ ಸಮವಸ್ತ್ರವನ್ನು ಪೂರೈಸುತ್ತಿದೆ. ಕಣ್ಣೂರಿನ ಕೂತುಪರಂಬದಲ್ಲಿರುವ ಮರಿಯನ್ ಅಪ್ಯಾರಲ್ ಫ್ಯಾಕ್ಟರಿಯಿಂದ ಪ್ರತಿ ವರ್ಷ ಇಸ್ರೇಲಿ ಪೊಲೀಸ್ ಸಿಬ್ಬಂದಿಗೆ ಸುಮಾರು ಒಂದು ಲಕ್ಷ ಸಮವಸ್ತ್ರಗಳನ್ನು ರಫ್ತು ಮಾಡಲಾಗುತ್ತಿದೆ.

ಇದಲ್ಲದೆ ಕಂಪೆನಿಯು ವಿವಿಧ ದೇಶಗಳಿಗೆ ಯುನಿಫಾರ್ಮ್‌ ರಫ್ತು ಮಾಡುತ್ತಿದೆ. ಕಂಪೆನಿಯಲ್ಲಿ 1,500 ಉದ್ಯೋಗಿಗಳಲ್ಲಿ ಸುಮಾರು 1,300 ಮಂದಿ ಮಹಿಳಾ ಸಿಬ್ಬಂದಿಗಳಿದ್ದಾರೆ. ಬೀಡಿ ಉದ್ಯಮ ಬಿಕ್ಕಟ್ಟನ್ನು ಎದುರಿಸಿದ ಬಳಿಕ ಉದ್ಯೋಗ ಕಳೆದುಕೊಂಡ ಅನೇಕರಿಗೆ ಸಂಸ್ಥೆಯು ಉದ್ಯೋಗವನ್ನು ಒದಗಿಸಿದೆ. ಮುಂಬೈನಲ್ಲಿ ಸಂಸ್ಥೆಯ ಪ್ರಧಾನ ಕಚೇರಿ ಇದ್ದು, ಸಂಸ್ಥೆಯನ್ನು ಉದ್ಯಮಿ ಥಾಮಸ್ ಒಲಿಕಲ್ ನಡೆಸುತ್ತಿದ್ದಾರೆ.

ಈ ವರ್ಷವೂ ಇಸ್ರೇಲ್‌ನ ಪುರುಷ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಗೆ ಸುಮಾರು 1 ಲಕ್ಷ ಸಮವಸ್ತ್ರಗಳನ್ನು ಪೂರೈಸಲು ಬುಕ್ಕಿಂಗ್ ಮಾಡಲಾಗಿದೆ ಎಂದು ಮರಿಯನ್ ಫ್ಯಾಕ್ಟರಿ ಮ್ಯಾನೇಜರ್ ಶಿಜಿನ್ ಕುಮಾರ್ ಹೇಳಿದ್ದಾರೆ.

ನಾವು ಆರು ವರ್ಷಗಳ ಹಿಂದೆ ಮೊದಲ ಆರ್ಡರ್‌ನ್ನು ಸ್ವೀಕರಿಸಿದ್ದೇವೆ. ಇಸ್ರೇಲ್‌ನ ತಂಡವು ನಮ್ಮ ಕಂಪೆನಿಗೆ ಭೇಟಿ ನೀಡಿದೆ ಮತ್ತು ನಮ್ಮ ಬಟ್ಟೆಗಳಿಂದ ಅವರು ತೃಪ್ತರಾಗಿದ್ದಾರೆ. ಆ ಬಳಿಕ ನಾವು ಅವರಿಂದ ಪ್ರತಿ ವರ್ಷ ಆರ್ಡರ್‌ಗಳನ್ನು ಪಡೆಯುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಕಾರ್ಖಾನೆಯಲ್ಲಿ ಉತ್ಪಾದಿಸಿದ ಮತ್ತು ಆಮದು ಮಾಡಿಕೊಳ್ಳುವ ಬಟ್ಟೆಗಳನ್ನು ಒಳಗೊಂಡಂತೆ ವಿವಿಧ ರೀತಿಯ ಬಟ್ಟೆಗಳನ್ನು ಬಳಸಲಾಗುತ್ತದೆ. ಉಡುಪು ಕಾರ್ಖಾನೆಯು ಇಸ್ರೇಲ್‌ನ ಜೈಲು ಅಧಿಕಾರಿಗಳಿಗೆ ಸಮವಸ್ತ್ರಕ್ಕಾಗಿ ಆರ್ಡರ್‌ ಪಡೆಯುತ್ತಿತ್ತು.

ಮೇರಿಯನ್ ಅಪ್ಯಾರಲ್ ಸಮವಸ್ತ್ರ ತಯಾರಿಕೆಯ ಜವಾಬ್ಧಾರಿ ನಿರ್ವಹಿಸುತ್ತಿದ್ದಾರೆ. ಈ ಸಂಸ್ಥೆಯಿಂದ ಇಸ್ರೇಲ್ ಫಿಲಿಪೈನ್ಸ್ ಮತ್ತು ಕುವೈತ್‌ನಂತಹ ಹಲವು ದೇಶಗಳ ಭದ್ರತಾ ಸಂಸ್ಥೆಗಳಿಗೆ ಸಮವಸ್ತ್ರವನ್ನು ಪೂರೈಸುತ್ತಿದ್ದಾರೆ. ಸಂಸ್ಥೆಯ ಉತ್ಪಾದನಾ ಘಟಕವು ಆರಂಭದಲ್ಲಿ ತಿರುವನಂತಪುರದಲ್ಲಿತ್ತು ಬಳಿಕ ಕಣ್ಣೂರಿಗೆ ಸ್ಥಳಾಂತರಗೊಳಿಸಲಾಗಿದೆ.

ಇದನ್ನು ಓದಿ: ಸಲಿಂಗ ವಿವಾಹ: ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು; ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...