HomeUncategorizedಕೇರಳ ಚಿನ್ನ ಕಳ್ಳಸಾಗಾಣಿಕೆ: ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಬಂಧನ?

ಕೇರಳ ಚಿನ್ನ ಕಳ್ಳಸಾಗಾಣಿಕೆ: ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಬಂಧನ?

ಜುಲೈ 5 ರಂದು ತಿರುವನಂತನಪುರಂ ವಿಮಾನ ನಿಲ್ಧಾಣದ ಕಸ್ಟಮ್ ಅಧಿಕಾರಿಗಳು 30 ಕೆಜಿ ಬಂಗಾರವನ್ನು ಯುಎಇ ರಾಜತಾಂತ್ರಿಕ ಬ್ಯಾಗ್‌ನಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದರು.

- Advertisement -
- Advertisement -

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂನ ಖಾಸಗಿ ಆಯುರ್ವೇದ ಆಸ್ಪತ್ರೆಯಿಂದ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಇಂದು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿದ ಕೆಲವೇ ನಿಮಿಷಗಳಲ್ಲಿ ಈ ಘಟನೆ ನಡೆದಿದೆ.

ಅವರನ್ನು ಕೊಚ್ಚಿಯ ED ಕಚೇರಿಗೆ ಕರೆದೊಯ್ಯಲಾಗುವುದು. ಅವರ ಬಂಧನವನ್ನು ಸಂಜೆಯೊಳಗೆ ದಾಖಲಿಸಲಾಗುವುದು ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಅಧಿಕಾರಿಗಳ ವಿಚಾರಣೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅನಾರೋಗ್ಯದ ನೆಪವೊಡ್ಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ

ರಾಜತಾಂತ್ರಿಕ ಮಾರ್ಗಗಳ ಮೂಲಕ ಚಿನ್ನದ ಕಳ್ಳ ಸಾಗಣೆಯಲ್ಲಿ ಮಾಜಿ ಉನ್ನತ ಅಧಿಕಾರಿಗಳ ಪಾತ್ರವಿದೆ ಎಂಬ ಕಾರಣಕ್ಕೆ ಜಾಮೀನು ಅರ್ಜಿಯನ್ನು ED ವಿರೋಧಿಸಿದೆ.

ಶಿವಶಂಕರ್ ಮತ್ತು ಅವರ ಚಾರ್ಟರ್ಡ್ ಅಕೌಂಟೆಂಟ್ ವೇಣುಗೋಪಾಲ್ ಅವರ ಹೇಳಿಕೆಯಲ್ಲಿನ ವಿರೋಧಾಭಾಸಗಳನ್ನು ED ಉಲ್ಲೇಖಿಸಿ, ಈ ಪ್ರಕರಣದಲ್ಲಿ ಸ್ವಪ್ನಾ ಸುರೇಶ್ ಅವರೊಂದಿಗಿನ ಸಂಬಂಧವನ್ನು ಖಚಿತಪಡಿಸಿದೆ.

ಈ ಮೊದಲು ಎಂ.ಶಿವಶಂಕರ್ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಚಿನ್ನ ಕಳ್ಳ ಸಾಗಾಣಿಕೆಯಲ್ಲಿ ಇವರ ಹೆಸರು ಪ್ರಸ್ತಾಪವಾಗಿದ್ದಕ್ಕೆ ಪ್ರಸ್ತುತ ಅಮಾನತುಗೊಂಡಿದ್ದಾರೆ.

ಇದನ್ನೂ ಓದಿ: ಕೇರಳ ಚಿನ್ನ ಕಳ್ಳ ಸಾಗಾಣಿಕೆ; ಪ್ರಕರಣವನ್ನು ’ಎನ್‌ಐಎ’ಗೆ ವಹಿಸಿದ ಕೇಂದ್ರ ಸರ್ಕಾರ

ಜುಲೈ 5 ರಂದು ತಿರುವನಂತನಪುರಂ ವಿಮಾನ ನಿಲ್ಧಾಣದ ಕಸ್ಟಮ್ ಅಧಿಕಾರಿಗಳು 30 ಕೆಜಿ ಬಂಗಾರವನ್ನು ಯುಎಇ ರಾಜತಾಂತ್ರಿಕ ಬ್ಯಾಗ್‌ನಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದರು.

ಈ ಚಿನ್ನ ಕಳ್ಳ ಸಾಗಾಣಿಕೆಯಲ್ಲಿ ರಾಯಭಾರಿ ಕಚೇರಿಯ ಮಾಜಿ ಉದ್ಯೋಗಿಗಳಾದ ಸ್ವಪ್ನಾ ಸುರೇಶ್ ಹಾಗೂ ಸರಿತ್‌ ನಾಯರ್‌ ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ಕಂಡುಕೊಂಡಿದ್ದಾರೆ. ಇಬ್ಬರೂ ಆರು ತಿಂಗಳ ಹಿಂದಿನವರೆಗೂ ರಾಯಭಾರಿ ಕಚೇರಿಯಲ್ಲಿ ಕೆಲಸ ಮಾಡಿದ್ದರು ಎನ್ನಲಾಗಿದೆ.

ಅಧಿಕಾರಿಗಳು ಚಿನ್ನದ ಮೌಲ್ಯವನ್ನು 15  ಕೋಟಿ ಎಂದು ಹೇಳಿದ್ದಾರೆ. ಸರಿತ್ ನಾಯರ್‌ ಕಸ್ಟಮ್ಸ್ ವಿಭಾಗದ ವಶದಲ್ಲಿದ್ದರೆ, ಸ್ವಪ್ನಾ ಸುರೇಶ್ ಪರಾರಿಯಾಗಿದ್ದರು.

ಇದನ್ನೂ ಓದಿ: ಶಿರಾ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ಈ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಗೆ ಈ ಹಿಂದೆ ಪತ್ರ ಬರೆದಿದ್ದು, ಈ ಪ್ರಕರಣದ ಬಗ್ಗೆ ಕೇಂದ್ರ ಸಂಸ್ಥೆಗಳು ತನಿಖೆ ನಡೆಸುವಂತೆ ಕೋರಿದ್ದರು. ಅಲ್ಲದೆ ಕೇರಳದ ಕಾಂಗ್ರೆಸ್ ಘಟಕ ಕೂಡಾ ಬುಧವಾರ ಪತ್ರ ಬರೆದಿದ್ದು ಕೇಂದ್ರ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುವಂತೆ ಕೋರಿತ್ತು.

“ಈ ಪ್ರಕರಣವನ್ನಿಟ್ಟುಕೊಂಡು ರಾಜ್ಯದ ಕಮ್ಯೂನಿಸ್ಟ್ ಸರ್ಕಾರವನ್ನು ಗುರಿಯಾಗಿಸುತ್ತಿದ್ದಾರೆ, ಆದರೆ ನಮಗೆ ಮರೆಮಾಡಲು ಏನೂ ಇಲ್ಲ. ಯಾವುದೇ ತನಿಖೆಗೆ ರಾಜ್ಯ ಸಿದ್ಧ ಎಂದು ಮುಖ್ಯಮಂತ್ರಿ ಪ್ರಧಾನಿಗೆ ಪತ್ರ ಕಳುಹಿಸಿದ್ದರು. ಆದರೆ ತನಿಖೆಯನ್ನು ವಿಳಂಬ ಮಾಡಿ ಸರ್ಕಾರವನ್ನು ಮುಜುಗರಕ್ಕೀಡಾಗುವ ಹಾಗೆ ಮಾಡುತ್ತಿದ್ದಾರೆ ಎಂದು ಅನುಮಾನ ಬರುತ್ತಿದೆ” ಎಂದು ಎಡ ಪ್ರಜಾಸತ್ತಾತ್ಮಕ ಒಕ್ಕೂಟದ ಕನ್ವೀನರ್ ವಿ.ಎಸ್.ವಿಜಯರಾಘವನ್ ಅಭಿಪ್ರಾಯಪಟ್ಟಿದ್ದರು.


ಇದನ್ನೂ ಓದಿ: ಮಧ್ಯಪ್ರದೇಶ: ವಿವಾದಾತ್ಮಕ ಹೇಳಿಕೆ; ಬಿಜೆಪಿ ನಾಯಕಿಗೆ ನೋಟಿಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...