HomeUncategorizedಕೇರಳ ಚಿನ್ನ ಕಳ್ಳಸಾಗಾಣಿಕೆ: ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಬಂಧನ?

ಕೇರಳ ಚಿನ್ನ ಕಳ್ಳಸಾಗಾಣಿಕೆ: ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಬಂಧನ?

ಜುಲೈ 5 ರಂದು ತಿರುವನಂತನಪುರಂ ವಿಮಾನ ನಿಲ್ಧಾಣದ ಕಸ್ಟಮ್ ಅಧಿಕಾರಿಗಳು 30 ಕೆಜಿ ಬಂಗಾರವನ್ನು ಯುಎಇ ರಾಜತಾಂತ್ರಿಕ ಬ್ಯಾಗ್‌ನಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದರು.

- Advertisement -
- Advertisement -

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂನ ಖಾಸಗಿ ಆಯುರ್ವೇದ ಆಸ್ಪತ್ರೆಯಿಂದ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಇಂದು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿದ ಕೆಲವೇ ನಿಮಿಷಗಳಲ್ಲಿ ಈ ಘಟನೆ ನಡೆದಿದೆ.

ಅವರನ್ನು ಕೊಚ್ಚಿಯ ED ಕಚೇರಿಗೆ ಕರೆದೊಯ್ಯಲಾಗುವುದು. ಅವರ ಬಂಧನವನ್ನು ಸಂಜೆಯೊಳಗೆ ದಾಖಲಿಸಲಾಗುವುದು ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಅಧಿಕಾರಿಗಳ ವಿಚಾರಣೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅನಾರೋಗ್ಯದ ನೆಪವೊಡ್ಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ

ರಾಜತಾಂತ್ರಿಕ ಮಾರ್ಗಗಳ ಮೂಲಕ ಚಿನ್ನದ ಕಳ್ಳ ಸಾಗಣೆಯಲ್ಲಿ ಮಾಜಿ ಉನ್ನತ ಅಧಿಕಾರಿಗಳ ಪಾತ್ರವಿದೆ ಎಂಬ ಕಾರಣಕ್ಕೆ ಜಾಮೀನು ಅರ್ಜಿಯನ್ನು ED ವಿರೋಧಿಸಿದೆ.

ಶಿವಶಂಕರ್ ಮತ್ತು ಅವರ ಚಾರ್ಟರ್ಡ್ ಅಕೌಂಟೆಂಟ್ ವೇಣುಗೋಪಾಲ್ ಅವರ ಹೇಳಿಕೆಯಲ್ಲಿನ ವಿರೋಧಾಭಾಸಗಳನ್ನು ED ಉಲ್ಲೇಖಿಸಿ, ಈ ಪ್ರಕರಣದಲ್ಲಿ ಸ್ವಪ್ನಾ ಸುರೇಶ್ ಅವರೊಂದಿಗಿನ ಸಂಬಂಧವನ್ನು ಖಚಿತಪಡಿಸಿದೆ.

ಈ ಮೊದಲು ಎಂ.ಶಿವಶಂಕರ್ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಚಿನ್ನ ಕಳ್ಳ ಸಾಗಾಣಿಕೆಯಲ್ಲಿ ಇವರ ಹೆಸರು ಪ್ರಸ್ತಾಪವಾಗಿದ್ದಕ್ಕೆ ಪ್ರಸ್ತುತ ಅಮಾನತುಗೊಂಡಿದ್ದಾರೆ.

ಇದನ್ನೂ ಓದಿ: ಕೇರಳ ಚಿನ್ನ ಕಳ್ಳ ಸಾಗಾಣಿಕೆ; ಪ್ರಕರಣವನ್ನು ’ಎನ್‌ಐಎ’ಗೆ ವಹಿಸಿದ ಕೇಂದ್ರ ಸರ್ಕಾರ

ಜುಲೈ 5 ರಂದು ತಿರುವನಂತನಪುರಂ ವಿಮಾನ ನಿಲ್ಧಾಣದ ಕಸ್ಟಮ್ ಅಧಿಕಾರಿಗಳು 30 ಕೆಜಿ ಬಂಗಾರವನ್ನು ಯುಎಇ ರಾಜತಾಂತ್ರಿಕ ಬ್ಯಾಗ್‌ನಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದರು.

ಈ ಚಿನ್ನ ಕಳ್ಳ ಸಾಗಾಣಿಕೆಯಲ್ಲಿ ರಾಯಭಾರಿ ಕಚೇರಿಯ ಮಾಜಿ ಉದ್ಯೋಗಿಗಳಾದ ಸ್ವಪ್ನಾ ಸುರೇಶ್ ಹಾಗೂ ಸರಿತ್‌ ನಾಯರ್‌ ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ಕಂಡುಕೊಂಡಿದ್ದಾರೆ. ಇಬ್ಬರೂ ಆರು ತಿಂಗಳ ಹಿಂದಿನವರೆಗೂ ರಾಯಭಾರಿ ಕಚೇರಿಯಲ್ಲಿ ಕೆಲಸ ಮಾಡಿದ್ದರು ಎನ್ನಲಾಗಿದೆ.

ಅಧಿಕಾರಿಗಳು ಚಿನ್ನದ ಮೌಲ್ಯವನ್ನು 15  ಕೋಟಿ ಎಂದು ಹೇಳಿದ್ದಾರೆ. ಸರಿತ್ ನಾಯರ್‌ ಕಸ್ಟಮ್ಸ್ ವಿಭಾಗದ ವಶದಲ್ಲಿದ್ದರೆ, ಸ್ವಪ್ನಾ ಸುರೇಶ್ ಪರಾರಿಯಾಗಿದ್ದರು.

ಇದನ್ನೂ ಓದಿ: ಶಿರಾ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ಈ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಗೆ ಈ ಹಿಂದೆ ಪತ್ರ ಬರೆದಿದ್ದು, ಈ ಪ್ರಕರಣದ ಬಗ್ಗೆ ಕೇಂದ್ರ ಸಂಸ್ಥೆಗಳು ತನಿಖೆ ನಡೆಸುವಂತೆ ಕೋರಿದ್ದರು. ಅಲ್ಲದೆ ಕೇರಳದ ಕಾಂಗ್ರೆಸ್ ಘಟಕ ಕೂಡಾ ಬುಧವಾರ ಪತ್ರ ಬರೆದಿದ್ದು ಕೇಂದ್ರ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುವಂತೆ ಕೋರಿತ್ತು.

“ಈ ಪ್ರಕರಣವನ್ನಿಟ್ಟುಕೊಂಡು ರಾಜ್ಯದ ಕಮ್ಯೂನಿಸ್ಟ್ ಸರ್ಕಾರವನ್ನು ಗುರಿಯಾಗಿಸುತ್ತಿದ್ದಾರೆ, ಆದರೆ ನಮಗೆ ಮರೆಮಾಡಲು ಏನೂ ಇಲ್ಲ. ಯಾವುದೇ ತನಿಖೆಗೆ ರಾಜ್ಯ ಸಿದ್ಧ ಎಂದು ಮುಖ್ಯಮಂತ್ರಿ ಪ್ರಧಾನಿಗೆ ಪತ್ರ ಕಳುಹಿಸಿದ್ದರು. ಆದರೆ ತನಿಖೆಯನ್ನು ವಿಳಂಬ ಮಾಡಿ ಸರ್ಕಾರವನ್ನು ಮುಜುಗರಕ್ಕೀಡಾಗುವ ಹಾಗೆ ಮಾಡುತ್ತಿದ್ದಾರೆ ಎಂದು ಅನುಮಾನ ಬರುತ್ತಿದೆ” ಎಂದು ಎಡ ಪ್ರಜಾಸತ್ತಾತ್ಮಕ ಒಕ್ಕೂಟದ ಕನ್ವೀನರ್ ವಿ.ಎಸ್.ವಿಜಯರಾಘವನ್ ಅಭಿಪ್ರಾಯಪಟ್ಟಿದ್ದರು.


ಇದನ್ನೂ ಓದಿ: ಮಧ್ಯಪ್ರದೇಶ: ವಿವಾದಾತ್ಮಕ ಹೇಳಿಕೆ; ಬಿಜೆಪಿ ನಾಯಕಿಗೆ ನೋಟಿಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...