Homeಮುಖಪುಟರಾಷ್ಟ್ರಪತಿಗಳ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಕೇರಳ ಸರ್ಕಾರ

ರಾಷ್ಟ್ರಪತಿಗಳ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಕೇರಳ ಸರ್ಕಾರ

- Advertisement -
- Advertisement -

ಕೇರಳ ಸರ್ಕಾರವು ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ಒಪ್ಪಿಗೆಯನ್ನು ನೀಡಲು ಯಾವುದೇ ಕಾರಣವನ್ನು ನೀಡದೆ ತಡೆ ಹಿಡಿದಿದ್ದಕ್ಕಾಗಿ ಕೇರಳ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಸುಪ್ರೀಂಕೋರ್ಟ್‌ ಕದ ತಟ್ಟಿದೆ.

ಕೇರಳ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದ ಮಸೂದೆಗಳಿಗೆ ಅಂಕಿತ ನೀಡದೆ ಅನಿರ್ದಿಷ್ಟ ವಿಳಂಬ ಉಂಟು ಮಾಡಿ ನಂತರ ಅವುಗಳನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರ ವಿರುದ್ಧವೂ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ ಕದ ತಟ್ಟಿತ್ತು.

ಯಾವುದೇ ಕಾರಣ ನೀಡದೆ ನಾಲ್ಕು ವಿಧೇಯಕಗಳಿಗೆ ಒಪ್ಪಿಗೆಯನ್ನು ತಡೆಹಿಡಿಯುವ ರಾಷ್ಟ್ರಪತಿಗಳ ಕಾರ್ಯವು ಅತ್ಯಂತ ನಿರಂಕುಶವಾಗಿದೆ. ನಾಲ್ಕು ಮಸೂದೆಗಳಿಗೆ ಯಾವುದೇ ಕಾರಣ ನೀಡದೆ ಅಂಗೀಕಾರ ತಡೆಹಿಡಿದಿರುವುದು ಸಂವಿಧಾನದ ವಿಧಿ 14, 200 ಮತ್ತು 201ರ ಉಲ್ಲಂಘನೆಯಾಗಿದೆ. ಒಟ್ಟು 7 ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಅಂಕಿತ ಹಾಕಲು ಕಳುಹಿಸಿಕೊಡಲಾಗಿತ್ತು. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ರಾಷ್ಟ್ರಪತಿಗಳ ಕಾರ್ಯದರ್ಶಿ, ಕೇರಳ ರಾಜ್ಯಪಾಲ, ರಾಜ್ಯಪಾಲರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಕೇರಳ ಸರ್ಕಾರ ಪರವಾಗಿ ಹಿರಿಯ ವಕೀಲ ಸಿ ಕೆ ಶಶಿ ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಲಿದ್ದಾರೆ.

ಕೇರಳ ವಿಧಾನಸಭೆಯಲ್ಲಿ ಪಾಸ್‌ ಆದ ಬಿಲ್‌ಗಳಿಗೆ ಅಂಕಿತ ಹಾಕದೆ ರಾಜ್ಯಪಾಲರು ಬಾಕಿಯಿಟ್ಟಿದ್ದಾರೆ ಎಂದು ಈ ಮೊದಲು ಪಿಣರಾಯಿ ವಿಜಯನ್ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 8 ಮಸೂದೆಗಳನ್ನು ಅಂಗೀಕರಿಸದೆ ರಾಜ್ಯಪಾಲರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿತ್ತು. ಇದಲ್ಲದೆ ಮಸೂದೆಗಳನ್ನು ವಿಲೇವಾರಿಗೆ ರಾಜ್ಯಪಾಲರಿಗೆ ಕಾಲಮಿತಿಯನ್ನು ನಿಗದಿಪಡಿಸಲು ನಿರಾಕರಿಸಿದ ಕೇರಳ ಹೈಕೋರ್ಟ್ ತೀರ್ಪಿನ ವಿರುದ್ಧ ಕೂಡ ಮೇಲ್ಮನವಿ ಸಲ್ಲಿಸಲಾಗಿತ್ತು. ನವೆಂಬರ್ 2ರಂದು ಸಲ್ಲಿಸಲಾದ ಅರ್ಜಿಯಲ್ಲಿ ರಾಜ್ಯಪಾಲರು ಸಂವಿಧಾನವನ್ನು ಉಲ್ಲಂಘನೆ ಮಾಡಿದ್ದಾರೆ ಮತ್ತು ಅನಿರ್ದಿಷ್ಟ ಅವಧಿಗೆ ಮಸೂದೆಗಳಿಗೆ ಅಂಕಿತ ಹಾಕದೆ ನಿರಂಕುಶ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಕೇರಳ ಸರಕಾರ ಹೇಳಿತ್ತು.

ಕೇರಳ ವಿಧಾನಸಭೆಯಲ್ಲಿ ಅಂಗೀಕಾರವಾದ ಬಿಲ್‌ಗಳನ್ನು ಅಂಕಿತ ಹಾಕದೆ ವಿಳಂಬ ಮಾಡಿರುವ ಬಗ್ಗೆ ಕೇರಳ  ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಮಸೂದೆಗಳನ್ನು ಬಾಕಿ ಇರಿಸಿಕೊಳ್ಳಲು ರಾಜ್ಯಪಾಲರು ಯಾವುದೇ ಕಾರಣವನ್ನು ನೀಡಿಲ್ಲ. ಶಾಸಕಾಂಗ ಅಂಗೀಕರಿಸಿದ ಬಿಲ್‌ಗಳನ್ನು ತಡೆಯಲು ರಾಜ್ಯಪಾಲರು ತಮ್ಮ ಅಧಿಕಾರವನ್ನು ಬಳಸುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದರು.

ಕೇರಳ ಸರ್ಕಾರದ ಅರ್ಜಿಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳುವ ಒಂದು ದಿನ ಮುಂಚಿತವಾಗಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು 8 ಬಾಕಿ ಉಳಿದಿರುವ ಮಸೂದೆಗಳಲ್ಲಿ 7ನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದ್ದರು. ಸುಮಾರು 3 ವರ್ಷಗಳಿಂದ ಮಸೂದೆಗಳು ಅಂಕಿತ ಹಾಕದೆ ಬಾಕಿ ಉಳಿದಿತ್ತು. ಲೋಕಾಯುಕ್ತ ತಿದ್ದುಪಡಿ ಮಸೂದೆ, ವಿಶ್ವವಿದ್ಯಾಲಯ ಕಾನೂನು ತಿದ್ದುಪಡಿಗಳ ಮಸೂದೆ-2022 ಮತ್ತು ಅಸ್ತಿತ್ವದಲ್ಲಿರುವ ವಿಶ್ವವಿದ್ಯಾನಿಲಯ ಕಾಯಿದೆಗೆ ತಿದ್ದುಪಡಿ ತರುವ ಕುರಿತ ಮಸೂದೆಯನ್ನು ರಾಷ್ಟ್ರಪತಿಗೆ ಕಳುಹಿಸಿದ್ದರು.

ಮಸೂದೆಗಳನ್ನು ಬಾಕಿ ಉಳಿಸಿಕೊಳ್ಳುವ ಬದಲು ಏನಾದರೂ ಆಕ್ಷೇಪಾರ್ಹವೆಂದು ಕಂಡು ಬಂದರೆ ಅವುಗಳನ್ನು ಹಿಂದಕ್ಕೆ ಕಳುಹಿಸಬೇಕು ಎಂದು ಈ ಮೊದಲು ಸುಪ್ರೀಂಕೋರ್ಟ್‌ ಹೇಳಿತ್ತು. ಪಂಜಾಬ್ ಸರ್ಕಾರವು  ರಾಜ್ಯಪಾಲರ ವಿರುದ್ಧ ಸಲ್ಲಿಸಿದ ಅರ್ಜಿ ವಿಚಾರಣೆಯ ವೇಳೆ ಕೇರಳ ರಾಜ್ಯಪಾಲರು ಕೂಡ ಈ ಕುರಿತ ತೀರ್ಪನ್ನು ಓದುವಂತೆ ಸೂಚಿಸಿದ್ದರು.

ಇದನ್ನು ಓದಿ: ಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...