Homeಮುಖಪುಟರಾಷ್ಟ್ರಪತಿಗಳ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಕೇರಳ ಸರ್ಕಾರ

ರಾಷ್ಟ್ರಪತಿಗಳ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಕೇರಳ ಸರ್ಕಾರ

- Advertisement -
- Advertisement -

ಕೇರಳ ಸರ್ಕಾರವು ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ಒಪ್ಪಿಗೆಯನ್ನು ನೀಡಲು ಯಾವುದೇ ಕಾರಣವನ್ನು ನೀಡದೆ ತಡೆ ಹಿಡಿದಿದ್ದಕ್ಕಾಗಿ ಕೇರಳ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಸುಪ್ರೀಂಕೋರ್ಟ್‌ ಕದ ತಟ್ಟಿದೆ.

ಕೇರಳ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದ ಮಸೂದೆಗಳಿಗೆ ಅಂಕಿತ ನೀಡದೆ ಅನಿರ್ದಿಷ್ಟ ವಿಳಂಬ ಉಂಟು ಮಾಡಿ ನಂತರ ಅವುಗಳನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರ ವಿರುದ್ಧವೂ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ ಕದ ತಟ್ಟಿತ್ತು.

ಯಾವುದೇ ಕಾರಣ ನೀಡದೆ ನಾಲ್ಕು ವಿಧೇಯಕಗಳಿಗೆ ಒಪ್ಪಿಗೆಯನ್ನು ತಡೆಹಿಡಿಯುವ ರಾಷ್ಟ್ರಪತಿಗಳ ಕಾರ್ಯವು ಅತ್ಯಂತ ನಿರಂಕುಶವಾಗಿದೆ. ನಾಲ್ಕು ಮಸೂದೆಗಳಿಗೆ ಯಾವುದೇ ಕಾರಣ ನೀಡದೆ ಅಂಗೀಕಾರ ತಡೆಹಿಡಿದಿರುವುದು ಸಂವಿಧಾನದ ವಿಧಿ 14, 200 ಮತ್ತು 201ರ ಉಲ್ಲಂಘನೆಯಾಗಿದೆ. ಒಟ್ಟು 7 ಮಸೂದೆಗಳನ್ನು ರಾಷ್ಟ್ರಪತಿಗಳಿಗೆ ಅಂಕಿತ ಹಾಕಲು ಕಳುಹಿಸಿಕೊಡಲಾಗಿತ್ತು. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ರಾಷ್ಟ್ರಪತಿಗಳ ಕಾರ್ಯದರ್ಶಿ, ಕೇರಳ ರಾಜ್ಯಪಾಲ, ರಾಜ್ಯಪಾಲರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಕೇರಳ ಸರ್ಕಾರ ಪರವಾಗಿ ಹಿರಿಯ ವಕೀಲ ಸಿ ಕೆ ಶಶಿ ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಲಿದ್ದಾರೆ.

ಕೇರಳ ವಿಧಾನಸಭೆಯಲ್ಲಿ ಪಾಸ್‌ ಆದ ಬಿಲ್‌ಗಳಿಗೆ ಅಂಕಿತ ಹಾಕದೆ ರಾಜ್ಯಪಾಲರು ಬಾಕಿಯಿಟ್ಟಿದ್ದಾರೆ ಎಂದು ಈ ಮೊದಲು ಪಿಣರಾಯಿ ವಿಜಯನ್ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 8 ಮಸೂದೆಗಳನ್ನು ಅಂಗೀಕರಿಸದೆ ರಾಜ್ಯಪಾಲರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿತ್ತು. ಇದಲ್ಲದೆ ಮಸೂದೆಗಳನ್ನು ವಿಲೇವಾರಿಗೆ ರಾಜ್ಯಪಾಲರಿಗೆ ಕಾಲಮಿತಿಯನ್ನು ನಿಗದಿಪಡಿಸಲು ನಿರಾಕರಿಸಿದ ಕೇರಳ ಹೈಕೋರ್ಟ್ ತೀರ್ಪಿನ ವಿರುದ್ಧ ಕೂಡ ಮೇಲ್ಮನವಿ ಸಲ್ಲಿಸಲಾಗಿತ್ತು. ನವೆಂಬರ್ 2ರಂದು ಸಲ್ಲಿಸಲಾದ ಅರ್ಜಿಯಲ್ಲಿ ರಾಜ್ಯಪಾಲರು ಸಂವಿಧಾನವನ್ನು ಉಲ್ಲಂಘನೆ ಮಾಡಿದ್ದಾರೆ ಮತ್ತು ಅನಿರ್ದಿಷ್ಟ ಅವಧಿಗೆ ಮಸೂದೆಗಳಿಗೆ ಅಂಕಿತ ಹಾಕದೆ ನಿರಂಕುಶ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಕೇರಳ ಸರಕಾರ ಹೇಳಿತ್ತು.

ಕೇರಳ ವಿಧಾನಸಭೆಯಲ್ಲಿ ಅಂಗೀಕಾರವಾದ ಬಿಲ್‌ಗಳನ್ನು ಅಂಕಿತ ಹಾಕದೆ ವಿಳಂಬ ಮಾಡಿರುವ ಬಗ್ಗೆ ಕೇರಳ  ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಮಸೂದೆಗಳನ್ನು ಬಾಕಿ ಇರಿಸಿಕೊಳ್ಳಲು ರಾಜ್ಯಪಾಲರು ಯಾವುದೇ ಕಾರಣವನ್ನು ನೀಡಿಲ್ಲ. ಶಾಸಕಾಂಗ ಅಂಗೀಕರಿಸಿದ ಬಿಲ್‌ಗಳನ್ನು ತಡೆಯಲು ರಾಜ್ಯಪಾಲರು ತಮ್ಮ ಅಧಿಕಾರವನ್ನು ಬಳಸುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದರು.

ಕೇರಳ ಸರ್ಕಾರದ ಅರ್ಜಿಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳುವ ಒಂದು ದಿನ ಮುಂಚಿತವಾಗಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು 8 ಬಾಕಿ ಉಳಿದಿರುವ ಮಸೂದೆಗಳಲ್ಲಿ 7ನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದ್ದರು. ಸುಮಾರು 3 ವರ್ಷಗಳಿಂದ ಮಸೂದೆಗಳು ಅಂಕಿತ ಹಾಕದೆ ಬಾಕಿ ಉಳಿದಿತ್ತು. ಲೋಕಾಯುಕ್ತ ತಿದ್ದುಪಡಿ ಮಸೂದೆ, ವಿಶ್ವವಿದ್ಯಾಲಯ ಕಾನೂನು ತಿದ್ದುಪಡಿಗಳ ಮಸೂದೆ-2022 ಮತ್ತು ಅಸ್ತಿತ್ವದಲ್ಲಿರುವ ವಿಶ್ವವಿದ್ಯಾನಿಲಯ ಕಾಯಿದೆಗೆ ತಿದ್ದುಪಡಿ ತರುವ ಕುರಿತ ಮಸೂದೆಯನ್ನು ರಾಷ್ಟ್ರಪತಿಗೆ ಕಳುಹಿಸಿದ್ದರು.

ಮಸೂದೆಗಳನ್ನು ಬಾಕಿ ಉಳಿಸಿಕೊಳ್ಳುವ ಬದಲು ಏನಾದರೂ ಆಕ್ಷೇಪಾರ್ಹವೆಂದು ಕಂಡು ಬಂದರೆ ಅವುಗಳನ್ನು ಹಿಂದಕ್ಕೆ ಕಳುಹಿಸಬೇಕು ಎಂದು ಈ ಮೊದಲು ಸುಪ್ರೀಂಕೋರ್ಟ್‌ ಹೇಳಿತ್ತು. ಪಂಜಾಬ್ ಸರ್ಕಾರವು  ರಾಜ್ಯಪಾಲರ ವಿರುದ್ಧ ಸಲ್ಲಿಸಿದ ಅರ್ಜಿ ವಿಚಾರಣೆಯ ವೇಳೆ ಕೇರಳ ರಾಜ್ಯಪಾಲರು ಕೂಡ ಈ ಕುರಿತ ತೀರ್ಪನ್ನು ಓದುವಂತೆ ಸೂಚಿಸಿದ್ದರು.

ಇದನ್ನು ಓದಿ: ಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...