Homeಮುಖಪುಟಸರಕಾರ ಅಂಗೀಕರಿಸಿದ 8 ಮಸೂದೆಗಳಿಗೆ ಅಂಕಿತ ಹಾಕದ ರಾಜ್ಯಪಾಲರು: ಸುಪ್ರೀಂ ಕದ ತಟ್ಟಿದ ಕೇರಳ ಸರಕಾರ

ಸರಕಾರ ಅಂಗೀಕರಿಸಿದ 8 ಮಸೂದೆಗಳಿಗೆ ಅಂಕಿತ ಹಾಕದ ರಾಜ್ಯಪಾಲರು: ಸುಪ್ರೀಂ ಕದ ತಟ್ಟಿದ ಕೇರಳ ಸರಕಾರ

- Advertisement -
- Advertisement -

ರಾಜ್ಯ ಸರಕಾರವು ಅಂಗೀಕರಿಸಿದ 8 ಮಸೂದೆಗಳಿಗೆ ಅಂಕಿತ ಹಾಕದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಕೇರಳ ಸರ್ಕಾರ ಸುಪ್ರೀಂಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ.

ಎಂಟು ಮಸೂದೆಗಳ ಪೈಕಿ ಮೂರು ವಿಧೇಯಕಗಳು ಎರಡು ವರ್ಷಗಳಿಂದ ರಾಜ್ಯಪಾಲರ ಮುಂದೆ ಬಾಕಿ ಉಳಿದಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅರ್ಜಿಯಲ್ಲಿ ರಾಜ್ಯಪಾಲರ ನಡವಳಿಕೆಯು ಕಾನೂನು ಮತ್ತು ಪ್ರಜಾಪ್ರಭುತ್ವಕ್ಕೆ ಮತ್ತು ನಮ್ಮ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ. ಈ ನಡವಳಿಕೆಯು ಜನರ ಹಕ್ಕುಗಳ ಉಲ್ಲಂಘನೆಯಾಗಿದೆ. ಮಸೂದೆಗಳ ಮೂಲಕ ಅನುಷ್ಠಾನಗೊಳಿಸುವ ಗುರಿಯನ್ನು ಹೊಂದಿರುವ ಕಲ್ಯಾಣ ಕ್ರಮಗಳಿಗೆ ಇದು ಅಡ್ಡಿಯಾಗುತ್ತದೆ ಎಂದು ಉಲ್ಲೇಖಿಸಲಾಗಿದೆ.

ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರ ಅನುಮೋದನೆಗಾಗಿ ಎಂಟು ಬಾಕಿ ಇರುವ ಮಸೂದೆಗಳಲ್ಲಿ ಎರಡು 2021ರ ವಿಶ್ವವಿದ್ಯಾಲಯ ಕಾನೂನುಗಳ ತಿದ್ದುಪಡಿ ಮಸೂದೆಗಳು (1 ನೇ ತಿದ್ದುಪಡಿ) ಮತ್ತು ವಿಶ್ವವಿದ್ಯಾಲಯ ಕಾನೂನುಗಳ ತಿದ್ದುಪಡಿ ಮಸೂದೆ (2 ನೇ ತಿದ್ದುಪಡಿ) ಇದೆ. ಇದಲ್ಲದೆ ಕೇರಳ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ 2022, 2022ರ ವಿಶ್ವವಿದ್ಯಾನಿಲಯ ಕಾನೂನುಗಳ ತಿದ್ದುಪಡಿ ಮಸೂದೆ, 2022ರ ಕೇರಳ ಲೋಕಾಯುಕ್ತ ತಿದ್ದುಪಡಿ ಮಸೂದೆ, 2022ರ ವಿಶ್ವವಿದ್ಯಾನಿಲಯ ಕಾನೂನುಗಳ ತಿದ್ದುಪಡಿ ಮಸೂದೆ ಮತ್ತು 2021ರ ಸಾರ್ವಜನಿಕ ಆರೋಗ್ಯ ಮಸೂದೆ ಸೇರಿದೆ.

ಕೇರಳ, ರಾಜ್ಯಪಾಲರು ಮಸೂದೆಗಳಿಗೆ ಒಪ್ಪಿಗೆ ನೀಡಲು ನಿರಾಕರಿಸಿರುವುದರ ವಿರುದ್ಧ ನ್ಯಾಯಾಲಯದ ಮೊರೆ ಹೋದ ಮೂರನೇ ರಾಜ್ಯವಾಗಿದೆ. ಈ ಮೊದಲು ಪಂಜಾಬ್ ಮತ್ತು ತೆಲಂಗಾಣ ರಾಜ್ಯಗಳು ರಾಜ್ಯಪಾಲರ ವಿರುದ್ಧ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು.

ಈ ಹಿಂದೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯ ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲ ಆರಿಫ್ ಖಾನ್ ನಿರಾಕರಿಸಿದ್ದರಿಂದ ಸುಪ್ರೀಂಕೋರ್ಟ್‌ ಮೊರೆ ಹೋಗುವ ಇಂಗಿತವನ್ನು ವ್ಯಕ್ತಪಡಿಸಿದ್ದರು.

ಇದೀಗ ಕೇರಳ ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಸಮಯಕ್ಕೆ ಸರಿಯಾಗಿ ಅನುಮೋದನೆ ನೀಡುವಂತೆ ರಾಜ್ಯಪಾಲ ಆರಿಫ್‌ ಮುಹಮ್ಮದ್‌ ಖಾನ್‌ ಅವರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ ಕದ ತಟ್ಟಿದೆ.

ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಸಮಯ ಮಿತಿಯೊಳಗೆ ಅಂಕಿತ ನೀಡುವುದು ರಾಜ್ಯಪಾಲರ ಕರ್ತವ್ಯ, ಪ್ರಜಾಸತ್ತಾತ್ಮಕ ಪ್ರಕ್ರಿಯೆ ಮತ್ತು ಜನರ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿ ಅವರು ಅಂಕಿತ ನೀಡಬೇಕಿದ್ದರೂ ರಾಜ್ಯಪಾಲರು ತಮ್ಮ ಸಂವಿಧಾನಿಕ ಹಕ್ಕುಗಳನ್ನು ಚಲಾಯಿಸಲು ಮತ್ತು ಕರ್ತವ್ಯಗಳನ್ನು ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಕೇರಳ ಸರ್ಕಾರ ತನ್ನ ಅರ್ಜಿಯಲ್ಲಿ ತಿಳಿಸಿದೆ.

ಇದನ್ನು ಓದಿ: ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...