Homeಮುಖಪುಟಸರಕಾರ ಅಂಗೀಕರಿಸಿದ 8 ಮಸೂದೆಗಳಿಗೆ ಅಂಕಿತ ಹಾಕದ ರಾಜ್ಯಪಾಲರು: ಸುಪ್ರೀಂ ಕದ ತಟ್ಟಿದ ಕೇರಳ ಸರಕಾರ

ಸರಕಾರ ಅಂಗೀಕರಿಸಿದ 8 ಮಸೂದೆಗಳಿಗೆ ಅಂಕಿತ ಹಾಕದ ರಾಜ್ಯಪಾಲರು: ಸುಪ್ರೀಂ ಕದ ತಟ್ಟಿದ ಕೇರಳ ಸರಕಾರ

- Advertisement -
- Advertisement -

ರಾಜ್ಯ ಸರಕಾರವು ಅಂಗೀಕರಿಸಿದ 8 ಮಸೂದೆಗಳಿಗೆ ಅಂಕಿತ ಹಾಕದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಕೇರಳ ಸರ್ಕಾರ ಸುಪ್ರೀಂಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ.

ಎಂಟು ಮಸೂದೆಗಳ ಪೈಕಿ ಮೂರು ವಿಧೇಯಕಗಳು ಎರಡು ವರ್ಷಗಳಿಂದ ರಾಜ್ಯಪಾಲರ ಮುಂದೆ ಬಾಕಿ ಉಳಿದಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅರ್ಜಿಯಲ್ಲಿ ರಾಜ್ಯಪಾಲರ ನಡವಳಿಕೆಯು ಕಾನೂನು ಮತ್ತು ಪ್ರಜಾಪ್ರಭುತ್ವಕ್ಕೆ ಮತ್ತು ನಮ್ಮ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ. ಈ ನಡವಳಿಕೆಯು ಜನರ ಹಕ್ಕುಗಳ ಉಲ್ಲಂಘನೆಯಾಗಿದೆ. ಮಸೂದೆಗಳ ಮೂಲಕ ಅನುಷ್ಠಾನಗೊಳಿಸುವ ಗುರಿಯನ್ನು ಹೊಂದಿರುವ ಕಲ್ಯಾಣ ಕ್ರಮಗಳಿಗೆ ಇದು ಅಡ್ಡಿಯಾಗುತ್ತದೆ ಎಂದು ಉಲ್ಲೇಖಿಸಲಾಗಿದೆ.

ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರ ಅನುಮೋದನೆಗಾಗಿ ಎಂಟು ಬಾಕಿ ಇರುವ ಮಸೂದೆಗಳಲ್ಲಿ ಎರಡು 2021ರ ವಿಶ್ವವಿದ್ಯಾಲಯ ಕಾನೂನುಗಳ ತಿದ್ದುಪಡಿ ಮಸೂದೆಗಳು (1 ನೇ ತಿದ್ದುಪಡಿ) ಮತ್ತು ವಿಶ್ವವಿದ್ಯಾಲಯ ಕಾನೂನುಗಳ ತಿದ್ದುಪಡಿ ಮಸೂದೆ (2 ನೇ ತಿದ್ದುಪಡಿ) ಇದೆ. ಇದಲ್ಲದೆ ಕೇರಳ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ 2022, 2022ರ ವಿಶ್ವವಿದ್ಯಾನಿಲಯ ಕಾನೂನುಗಳ ತಿದ್ದುಪಡಿ ಮಸೂದೆ, 2022ರ ಕೇರಳ ಲೋಕಾಯುಕ್ತ ತಿದ್ದುಪಡಿ ಮಸೂದೆ, 2022ರ ವಿಶ್ವವಿದ್ಯಾನಿಲಯ ಕಾನೂನುಗಳ ತಿದ್ದುಪಡಿ ಮಸೂದೆ ಮತ್ತು 2021ರ ಸಾರ್ವಜನಿಕ ಆರೋಗ್ಯ ಮಸೂದೆ ಸೇರಿದೆ.

ಕೇರಳ, ರಾಜ್ಯಪಾಲರು ಮಸೂದೆಗಳಿಗೆ ಒಪ್ಪಿಗೆ ನೀಡಲು ನಿರಾಕರಿಸಿರುವುದರ ವಿರುದ್ಧ ನ್ಯಾಯಾಲಯದ ಮೊರೆ ಹೋದ ಮೂರನೇ ರಾಜ್ಯವಾಗಿದೆ. ಈ ಮೊದಲು ಪಂಜಾಬ್ ಮತ್ತು ತೆಲಂಗಾಣ ರಾಜ್ಯಗಳು ರಾಜ್ಯಪಾಲರ ವಿರುದ್ಧ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು.

ಈ ಹಿಂದೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯ ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಸಹಿ ಹಾಕಲು ರಾಜ್ಯಪಾಲ ಆರಿಫ್ ಖಾನ್ ನಿರಾಕರಿಸಿದ್ದರಿಂದ ಸುಪ್ರೀಂಕೋರ್ಟ್‌ ಮೊರೆ ಹೋಗುವ ಇಂಗಿತವನ್ನು ವ್ಯಕ್ತಪಡಿಸಿದ್ದರು.

ಇದೀಗ ಕೇರಳ ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಸಮಯಕ್ಕೆ ಸರಿಯಾಗಿ ಅನುಮೋದನೆ ನೀಡುವಂತೆ ರಾಜ್ಯಪಾಲ ಆರಿಫ್‌ ಮುಹಮ್ಮದ್‌ ಖಾನ್‌ ಅವರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ ಕದ ತಟ್ಟಿದೆ.

ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಸಮಯ ಮಿತಿಯೊಳಗೆ ಅಂಕಿತ ನೀಡುವುದು ರಾಜ್ಯಪಾಲರ ಕರ್ತವ್ಯ, ಪ್ರಜಾಸತ್ತಾತ್ಮಕ ಪ್ರಕ್ರಿಯೆ ಮತ್ತು ಜನರ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿ ಅವರು ಅಂಕಿತ ನೀಡಬೇಕಿದ್ದರೂ ರಾಜ್ಯಪಾಲರು ತಮ್ಮ ಸಂವಿಧಾನಿಕ ಹಕ್ಕುಗಳನ್ನು ಚಲಾಯಿಸಲು ಮತ್ತು ಕರ್ತವ್ಯಗಳನ್ನು ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಕೇರಳ ಸರ್ಕಾರ ತನ್ನ ಅರ್ಜಿಯಲ್ಲಿ ತಿಳಿಸಿದೆ.

ಇದನ್ನು ಓದಿ: ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...