Homeಮುಖಪುಟಮುಸ್ಲಿಮರನ್ನು ಭಯೋತ್ಪಾದಕರಂತೆ ಚಿತ್ರಿಸಿದ ಕಲಾ ತಂಡ ಬ್ಯಾನ್ : ಕೇರಳ ಸರ್ಕಾರ ನಿರ್ಧಾರ

ಮುಸ್ಲಿಮರನ್ನು ಭಯೋತ್ಪಾದಕರಂತೆ ಚಿತ್ರಿಸಿದ ಕಲಾ ತಂಡ ಬ್ಯಾನ್ : ಕೇರಳ ಸರ್ಕಾರ ನಿರ್ಧಾರ

- Advertisement -
- Advertisement -

ಇತ್ತೀಚೆಗೆ ನಡೆದ ಶಾಲಾ ಕಲಾ ಉತ್ಸವದಲ್ಲಿ ಇಸ್ಲಾಮಿಕ್ ಪೋಷಾಕಿನಲ್ಲಿದ್ದ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಬಿಂಬಿಸಿದ ನಂತರ ಇದೀಗ ಮತ್ತೆ ಕೇರಳದ ಕೋಝಿಕ್ಕೋಡ್‌ ವಿವಾದದ ಕೇಂದ್ರಬಿಂದುವಾಗಿದೆ. ಸರ್ಕಾರ ಮುಂದಿನ ಆವೃತ್ತಿಗಳ ಕುರಿತು ಎಚ್ಚರಿಕೆ ವಹಿಸಿದ್ದು, ಈ ಕಲಾಸಂಘವನ್ನು ಸರ್ಕಾರ ನಿಷೇಧಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಪ್ರತಿಕ್ರಿಯಿಸಿದ್ದು, “ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಕ್ಷಮೆಯಾಚಿಸಬೇಕು” ಎಂದು ಮಂಗಳವಾರ ಒತ್ತಾಯಿಸಿತ್ತು.

ಈ ಬಗ್ಗೆ ಶಿಕ್ಷಣ ಸಚಿವ ಮತ್ತು ಸಿಪಿಐ(ಎಂ) ಮುಖಂಡ ವಿ ಶಿವನ್‌ಕುಟ್ಟಿ ಮಾತನಾಡಿ, “ಮುಸ್ಲಿಂ ವ್ಯಕ್ತಿಯನ್ನು ಭಯೋತ್ಪಾದಕನಂತೆ ಚಿತ್ರಿಸಿರುವುದು ಎಲ್‌ಡಿಎಫ್ ನಿಲುವಿಗೆ ವಿರುದ್ಧವಾಗಿದೆ. ಉತ್ಸವದ ಉದ್ಘಾಟನೆಯ ಸಂದರ್ಭದಲ್ಲಿ ಸ್ವಾಗತ ಗೀತೆಯ ಭಾಗವಾಗಿ ಪ್ರದರ್ಶನವನ್ನು ಏರ್ಪಡಿಸಿದ MATHA ಅಥವಾ ಮಲಯಾಳಂ ಥಿಯೇಟ್ರಿಕಲ್ ಹೆರಿಟೇಜ್ ಮತ್ತು ಆರ್ಟ್ಸ್ ಸಂಸ್ಥೆಗೆ ಮುಂದಿನ ಬಾರಿ ಯಾವುದೇ ಅವಕಾಶವನ್ನು ನೀಡಲಾಗುವುದಿಲ್ಲ. ವಿವಾದದ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಉದ್ಘಾಟನೆಯ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ ಮೊದಲು ಸ್ವಾಗತ ಸಮಿತಿಯು ಕಾರ್ಯಕ್ರಮವನ್ನು ವೀಕ್ಷಿಸಿತ್ತು. ಆದರೆ ಇದು ಕಾರ್ಯಕ್ರಮದ ಅಂತಿಮ ಡ್ರೆಸ್ ರಿಹರ್ಸಲ್ ಆಗಿರಲಿಲ್ಲ” ಎಂದು ತಿಳಿಸಿದ್ದಾರೆ.

ಮೊದಲ ದಿನದಂದು MATHA ತಂಡ ಪ್ರದರ್ಶಿಸಿದ ಪ್ರದರ್ಶನದಲ್ಲಿ, ಸಮವಸ್ತ್ರಧಾರಿ ರಕ್ಷಣಾ ಅಧಿಕಾರಿಯನ್ನು ಕೊಂದ ಭಯೋತ್ಪಾದಕನನ್ನು ಭಾರತೀಯ ಸೇನೆಯ ವ್ಯಕ್ತಿಯೊಬ್ಬರು ಬಂಧಿಸಿರುವುದನ್ನು ತೋರಿಸಲಾಯಿತು. ಪ್ರದರ್ಶನದ ವೇಳೆ ಭಯೋತ್ಪಾದಕ ಪಾತ್ರಧಾರಿಗಳು ಅರಬ್ ಪುರುಷರ ಸಾಂಪ್ರದಾಯಿಕ ಶಿರಸ್ತ್ರಾಣವಾದ ಕೆಫಿಯೆಹ್ ಅನ್ನು ಧರಿಸಿದ್ದರು. ಆದರೆ ಇದೀಗ ಮುಸ್ಲಿಮರನ್ನು ಭಯೋತ್ಪಾದಕ ಎಂದು ಬಿಂಬಿಸುವುದನ್ನು ವಿರೋಧಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ ನಂತರ ಈ ಘಟನೆ ವಿವಾದಕ್ಕೆ ಕಾರಣವಾಗಿದೆ.

ಇನ್ನು ಈ ಉತ್ಸವ ಮುಗಿದ ಬಳಿಕ ಮಾತನಾಡಿದ ಸಿಪಿಐ(ಎಂ) ಮುಖಂಡ ಮತ್ತು ಲೋಕೋಪಯೋಗಿ ಸಚಿವ ಮಹಮ್ಮದ್ ರಿಯಾಸ್, “ಈ ಕಾರ್ಯಕ್ರಮದ ಹಿಂದೆ ಸಂಘಪರಿವಾರದ ಅಜೆಂಡಾ ಇದೆ” ಎಂದು ಆರೋಪಿಸಿದ್ದಾರೆ. ಮಂಗಳವಾರ ಕೋಝಿಕ್ಕೋಡ್‌ನಲ್ಲಿ ಸಿಪಿಐ(ಎಂ) ಜಿಲ್ಲಾ ಸಮಿತಿಯು ಪ್ರತಿಕ್ರಿಯಿಸಿದ್ದು, ವೇದಿಕೆ ಕಾರ್ಯಕ್ರಮದ ವಿರುದ್ಧದ ಟೀಕೆ ಅತ್ಯಂತ ಗಂಭೀರವಾಗಿದೆ. ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ” ಎಂದಿದೆ.

“ಮುಸ್ಲಿಂ ವೇಷಭೂಷಣದಲ್ಲಿ ಭಯೋತ್ಪಾದಕನನ್ನು ಪ್ರಸ್ತುತಪಡಿಸುವುದು ಎಲ್‌ಡಿಎಫ್ ಸರ್ಕಾರದ ನಿಲುವಿಗೆ ವಿರುದ್ಧವಾಗಿದೆ. ಭಯೋತ್ಪಾದನೆ ಮತ್ತು ಉಗ್ರವಾದವು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸಂಬಂಧಿಸಿಲ್ಲ. ಇಂತಹ ಕಾರ್ಯಕ್ರಮವನ್ನು ಹೇಗೆ ನಡೆಸಲಾಯಿತು ಎಂಬುದನ್ನು ಪರಿಶೀಲಿಸಬೇಕು’’ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಜಿಲ್ಲಾ ಸಮಿತಿಯ ಮಧ್ಯಪ್ರವೇಶದ ನಂತರ, ರಾಜ್ಯ ಶಿಕ್ಷಣ ಇಲಾಖೆಯು ಈ ಕಲಾ ತಂಡವನ್ನು ಉತ್ಸವದ ಮುಂದಿನ ಆವೃತ್ತಿಗಳಲ್ಲಿ ಭಾಗವಹಿಸದಂತೆ ನಿಷೇಧಿಸಿದೆ. ಆದರೆ ಸಿಪಿಐ(ಎಂ) ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಸಿಎಂ ಮುಸ್ಲಿಮರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

ಶಿಕ್ಷಣ ಸಚಿವರು ಉತ್ಸವದಲ್ಲಿ ಉಪಸ್ಥಿತರಿದ್ದು, ಪ್ರವಾಸೋದ್ಯಮ ಸಚಿವರು ಎಲ್ಲದಕ್ಕೂ ಕಾರಣವಾಗಿದ್ದಾರೆ ನೀಡಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಸಂಸದ ಕೆ.ಮುರಳೀಧರನ್ ಆರೋಪಿಸಿದ್ದಾರೆ. “ಹಾಗಾದರೆ, ಸರ್ಕಾರ ನಡೆಸುವ ಉತ್ಸವದ ಸಮಯದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂತಹ ಚಿತ್ರಣ ಹೇಗೆ ಸಂಭವಿಸಿತು? ಸರ್ಕಾರ ಮತ್ತು ಸಿಎಂಗೆ ನೈತಿಕ ಹೊಣೆಗಾರಿಕೆ ಇದೆ. ಮುಖ್ಯಮಂತ್ರಿಗಳು ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಮತ್ತೊಂದೆಡೆ ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಆಡಳಿತ ಪಕ್ಷವು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ನಿಲ್ಲುವುದಾಗಿ ಹೇಳುತ್ತದೆ. ಆದರೆ ಧಾರ್ಮಿಕ ಉಗ್ರಗಾಮಿಗಳಿಗೆ ಮಣಿದಿದೆ. ಸರಕಾರ ಮೂಲಭೂತವಾದಿಗಳ ಜೊತೆಗಿದೆ ಎಂಬುದನ್ನು ಸಾಬೀತುಪಡಿಸಿದೆ” ಎಂದಿದ್ದಾರೆ.

ವೇದಿಕೆ ಕಾರ್ಯಕ್ರಮವು ಭಾರತೀಯ ರಕ್ಷಣಾ ಪಡೆಗಳ ನಿಸ್ವಾರ್ಥ ಸೇವೆಯನ್ನು ಬಿಂಬಿಸುತ್ತದೆ. ಈಗ, ವಿ ಶಿವನ್‌ಕುಟ್ಟಿ ಮತ್ತು ಮೊಹಮ್ಮದ್ ರಿಯಾಸ್ ಭಾರತೀಯ ಸೇನೆಯ ಸೇವೆಯನ್ನು ಬಿಂಬಿಸುವುದು ಅಪರಾಧ ಎಂದು ಹೇಳುತ್ತಾರೆ. ಇದು ಸಂಪೂರ್ಣ ದೇಶ ವಿರೋಧಿ ವಿಧಾನವಾಗಿದೆ ಎಂದು ಟೀಕಿಸಿದ್ದಾರೆ.

ಈ ವಿವಾದ ಬಗ್ಗೆ ಪ್ರತಿಕ್ರಿಯಿಸಿರುವ ಕಲಾ ನಿರ್ದೇಶಕ ಕನಕದಾಸ್ ಅವರು, “ಇದು ದುರದೃಷ್ಟಕರ” ಎಂದಿದ್ದು, “ಪ್ರದರ್ಶನದ ಹಿಂದೆ ಯಾವುದೇ ರಾಜಕೀಯವಿಲ್ಲ ಮತ್ತು ನಮ್ಮ ಕಲಾವಿದರು ಎಲ್ಲಾ ರಾಜಕೀಯ ಪಕ್ಷಗಳಿಗೆ ಸೇರಿದವರು. ನಾವು ಹಲವಾರು ಸರ್ಕಾರಿ ಕಾರ್ಯಕ್ರಮಗಳಿಗೆ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದ್ದೇವೆ. ಶಾಲಾ ಉತ್ಸವದಲ್ಲಿ ವೇದಿಕೆ ಕಾರ್ಯಕ್ರಮದ ನಂತರ ಸಚಿವ ರಿಯಾಸ್ ನಮ್ಮನ್ನು ಅಭಿನಂದಿಸಿದರು. ನಂತರ, ಯಾರೂ ಕಾರ್ಯಕ್ರಮದ ವಿರುದ್ಧ ಯಾವುದೇ ದೂರು ನೀಡಲಿಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...