Homeಮುಖಪುಟಮುಸ್ಲಿಮರನ್ನು ಭಯೋತ್ಪಾದಕರಂತೆ ಚಿತ್ರಿಸಿದ ಕಲಾ ತಂಡ ಬ್ಯಾನ್ : ಕೇರಳ ಸರ್ಕಾರ ನಿರ್ಧಾರ

ಮುಸ್ಲಿಮರನ್ನು ಭಯೋತ್ಪಾದಕರಂತೆ ಚಿತ್ರಿಸಿದ ಕಲಾ ತಂಡ ಬ್ಯಾನ್ : ಕೇರಳ ಸರ್ಕಾರ ನಿರ್ಧಾರ

- Advertisement -
- Advertisement -

ಇತ್ತೀಚೆಗೆ ನಡೆದ ಶಾಲಾ ಕಲಾ ಉತ್ಸವದಲ್ಲಿ ಇಸ್ಲಾಮಿಕ್ ಪೋಷಾಕಿನಲ್ಲಿದ್ದ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಬಿಂಬಿಸಿದ ನಂತರ ಇದೀಗ ಮತ್ತೆ ಕೇರಳದ ಕೋಝಿಕ್ಕೋಡ್‌ ವಿವಾದದ ಕೇಂದ್ರಬಿಂದುವಾಗಿದೆ. ಸರ್ಕಾರ ಮುಂದಿನ ಆವೃತ್ತಿಗಳ ಕುರಿತು ಎಚ್ಚರಿಕೆ ವಹಿಸಿದ್ದು, ಈ ಕಲಾಸಂಘವನ್ನು ಸರ್ಕಾರ ನಿಷೇಧಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಪ್ರತಿಕ್ರಿಯಿಸಿದ್ದು, “ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಕ್ಷಮೆಯಾಚಿಸಬೇಕು” ಎಂದು ಮಂಗಳವಾರ ಒತ್ತಾಯಿಸಿತ್ತು.

ಈ ಬಗ್ಗೆ ಶಿಕ್ಷಣ ಸಚಿವ ಮತ್ತು ಸಿಪಿಐ(ಎಂ) ಮುಖಂಡ ವಿ ಶಿವನ್‌ಕುಟ್ಟಿ ಮಾತನಾಡಿ, “ಮುಸ್ಲಿಂ ವ್ಯಕ್ತಿಯನ್ನು ಭಯೋತ್ಪಾದಕನಂತೆ ಚಿತ್ರಿಸಿರುವುದು ಎಲ್‌ಡಿಎಫ್ ನಿಲುವಿಗೆ ವಿರುದ್ಧವಾಗಿದೆ. ಉತ್ಸವದ ಉದ್ಘಾಟನೆಯ ಸಂದರ್ಭದಲ್ಲಿ ಸ್ವಾಗತ ಗೀತೆಯ ಭಾಗವಾಗಿ ಪ್ರದರ್ಶನವನ್ನು ಏರ್ಪಡಿಸಿದ MATHA ಅಥವಾ ಮಲಯಾಳಂ ಥಿಯೇಟ್ರಿಕಲ್ ಹೆರಿಟೇಜ್ ಮತ್ತು ಆರ್ಟ್ಸ್ ಸಂಸ್ಥೆಗೆ ಮುಂದಿನ ಬಾರಿ ಯಾವುದೇ ಅವಕಾಶವನ್ನು ನೀಡಲಾಗುವುದಿಲ್ಲ. ವಿವಾದದ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಉದ್ಘಾಟನೆಯ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ ಮೊದಲು ಸ್ವಾಗತ ಸಮಿತಿಯು ಕಾರ್ಯಕ್ರಮವನ್ನು ವೀಕ್ಷಿಸಿತ್ತು. ಆದರೆ ಇದು ಕಾರ್ಯಕ್ರಮದ ಅಂತಿಮ ಡ್ರೆಸ್ ರಿಹರ್ಸಲ್ ಆಗಿರಲಿಲ್ಲ” ಎಂದು ತಿಳಿಸಿದ್ದಾರೆ.

ಮೊದಲ ದಿನದಂದು MATHA ತಂಡ ಪ್ರದರ್ಶಿಸಿದ ಪ್ರದರ್ಶನದಲ್ಲಿ, ಸಮವಸ್ತ್ರಧಾರಿ ರಕ್ಷಣಾ ಅಧಿಕಾರಿಯನ್ನು ಕೊಂದ ಭಯೋತ್ಪಾದಕನನ್ನು ಭಾರತೀಯ ಸೇನೆಯ ವ್ಯಕ್ತಿಯೊಬ್ಬರು ಬಂಧಿಸಿರುವುದನ್ನು ತೋರಿಸಲಾಯಿತು. ಪ್ರದರ್ಶನದ ವೇಳೆ ಭಯೋತ್ಪಾದಕ ಪಾತ್ರಧಾರಿಗಳು ಅರಬ್ ಪುರುಷರ ಸಾಂಪ್ರದಾಯಿಕ ಶಿರಸ್ತ್ರಾಣವಾದ ಕೆಫಿಯೆಹ್ ಅನ್ನು ಧರಿಸಿದ್ದರು. ಆದರೆ ಇದೀಗ ಮುಸ್ಲಿಮರನ್ನು ಭಯೋತ್ಪಾದಕ ಎಂದು ಬಿಂಬಿಸುವುದನ್ನು ವಿರೋಧಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ ನಂತರ ಈ ಘಟನೆ ವಿವಾದಕ್ಕೆ ಕಾರಣವಾಗಿದೆ.

ಇನ್ನು ಈ ಉತ್ಸವ ಮುಗಿದ ಬಳಿಕ ಮಾತನಾಡಿದ ಸಿಪಿಐ(ಎಂ) ಮುಖಂಡ ಮತ್ತು ಲೋಕೋಪಯೋಗಿ ಸಚಿವ ಮಹಮ್ಮದ್ ರಿಯಾಸ್, “ಈ ಕಾರ್ಯಕ್ರಮದ ಹಿಂದೆ ಸಂಘಪರಿವಾರದ ಅಜೆಂಡಾ ಇದೆ” ಎಂದು ಆರೋಪಿಸಿದ್ದಾರೆ. ಮಂಗಳವಾರ ಕೋಝಿಕ್ಕೋಡ್‌ನಲ್ಲಿ ಸಿಪಿಐ(ಎಂ) ಜಿಲ್ಲಾ ಸಮಿತಿಯು ಪ್ರತಿಕ್ರಿಯಿಸಿದ್ದು, ವೇದಿಕೆ ಕಾರ್ಯಕ್ರಮದ ವಿರುದ್ಧದ ಟೀಕೆ ಅತ್ಯಂತ ಗಂಭೀರವಾಗಿದೆ. ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ” ಎಂದಿದೆ.

“ಮುಸ್ಲಿಂ ವೇಷಭೂಷಣದಲ್ಲಿ ಭಯೋತ್ಪಾದಕನನ್ನು ಪ್ರಸ್ತುತಪಡಿಸುವುದು ಎಲ್‌ಡಿಎಫ್ ಸರ್ಕಾರದ ನಿಲುವಿಗೆ ವಿರುದ್ಧವಾಗಿದೆ. ಭಯೋತ್ಪಾದನೆ ಮತ್ತು ಉಗ್ರವಾದವು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸಂಬಂಧಿಸಿಲ್ಲ. ಇಂತಹ ಕಾರ್ಯಕ್ರಮವನ್ನು ಹೇಗೆ ನಡೆಸಲಾಯಿತು ಎಂಬುದನ್ನು ಪರಿಶೀಲಿಸಬೇಕು’’ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಜಿಲ್ಲಾ ಸಮಿತಿಯ ಮಧ್ಯಪ್ರವೇಶದ ನಂತರ, ರಾಜ್ಯ ಶಿಕ್ಷಣ ಇಲಾಖೆಯು ಈ ಕಲಾ ತಂಡವನ್ನು ಉತ್ಸವದ ಮುಂದಿನ ಆವೃತ್ತಿಗಳಲ್ಲಿ ಭಾಗವಹಿಸದಂತೆ ನಿಷೇಧಿಸಿದೆ. ಆದರೆ ಸಿಪಿಐ(ಎಂ) ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಸಿಎಂ ಮುಸ್ಲಿಮರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

ಶಿಕ್ಷಣ ಸಚಿವರು ಉತ್ಸವದಲ್ಲಿ ಉಪಸ್ಥಿತರಿದ್ದು, ಪ್ರವಾಸೋದ್ಯಮ ಸಚಿವರು ಎಲ್ಲದಕ್ಕೂ ಕಾರಣವಾಗಿದ್ದಾರೆ ನೀಡಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಸಂಸದ ಕೆ.ಮುರಳೀಧರನ್ ಆರೋಪಿಸಿದ್ದಾರೆ. “ಹಾಗಾದರೆ, ಸರ್ಕಾರ ನಡೆಸುವ ಉತ್ಸವದ ಸಮಯದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂತಹ ಚಿತ್ರಣ ಹೇಗೆ ಸಂಭವಿಸಿತು? ಸರ್ಕಾರ ಮತ್ತು ಸಿಎಂಗೆ ನೈತಿಕ ಹೊಣೆಗಾರಿಕೆ ಇದೆ. ಮುಖ್ಯಮಂತ್ರಿಗಳು ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಮತ್ತೊಂದೆಡೆ ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಆಡಳಿತ ಪಕ್ಷವು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ನಿಲ್ಲುವುದಾಗಿ ಹೇಳುತ್ತದೆ. ಆದರೆ ಧಾರ್ಮಿಕ ಉಗ್ರಗಾಮಿಗಳಿಗೆ ಮಣಿದಿದೆ. ಸರಕಾರ ಮೂಲಭೂತವಾದಿಗಳ ಜೊತೆಗಿದೆ ಎಂಬುದನ್ನು ಸಾಬೀತುಪಡಿಸಿದೆ” ಎಂದಿದ್ದಾರೆ.

ವೇದಿಕೆ ಕಾರ್ಯಕ್ರಮವು ಭಾರತೀಯ ರಕ್ಷಣಾ ಪಡೆಗಳ ನಿಸ್ವಾರ್ಥ ಸೇವೆಯನ್ನು ಬಿಂಬಿಸುತ್ತದೆ. ಈಗ, ವಿ ಶಿವನ್‌ಕುಟ್ಟಿ ಮತ್ತು ಮೊಹಮ್ಮದ್ ರಿಯಾಸ್ ಭಾರತೀಯ ಸೇನೆಯ ಸೇವೆಯನ್ನು ಬಿಂಬಿಸುವುದು ಅಪರಾಧ ಎಂದು ಹೇಳುತ್ತಾರೆ. ಇದು ಸಂಪೂರ್ಣ ದೇಶ ವಿರೋಧಿ ವಿಧಾನವಾಗಿದೆ ಎಂದು ಟೀಕಿಸಿದ್ದಾರೆ.

ಈ ವಿವಾದ ಬಗ್ಗೆ ಪ್ರತಿಕ್ರಿಯಿಸಿರುವ ಕಲಾ ನಿರ್ದೇಶಕ ಕನಕದಾಸ್ ಅವರು, “ಇದು ದುರದೃಷ್ಟಕರ” ಎಂದಿದ್ದು, “ಪ್ರದರ್ಶನದ ಹಿಂದೆ ಯಾವುದೇ ರಾಜಕೀಯವಿಲ್ಲ ಮತ್ತು ನಮ್ಮ ಕಲಾವಿದರು ಎಲ್ಲಾ ರಾಜಕೀಯ ಪಕ್ಷಗಳಿಗೆ ಸೇರಿದವರು. ನಾವು ಹಲವಾರು ಸರ್ಕಾರಿ ಕಾರ್ಯಕ್ರಮಗಳಿಗೆ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದ್ದೇವೆ. ಶಾಲಾ ಉತ್ಸವದಲ್ಲಿ ವೇದಿಕೆ ಕಾರ್ಯಕ್ರಮದ ನಂತರ ಸಚಿವ ರಿಯಾಸ್ ನಮ್ಮನ್ನು ಅಭಿನಂದಿಸಿದರು. ನಂತರ, ಯಾರೂ ಕಾರ್ಯಕ್ರಮದ ವಿರುದ್ಧ ಯಾವುದೇ ದೂರು ನೀಡಲಿಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...