Homeಮುಖಪುಟಮುಸ್ಲಿಮರನ್ನು ಭಯೋತ್ಪಾದಕರಂತೆ ಚಿತ್ರಿಸಿದ ಕಲಾ ತಂಡ ಬ್ಯಾನ್ : ಕೇರಳ ಸರ್ಕಾರ ನಿರ್ಧಾರ

ಮುಸ್ಲಿಮರನ್ನು ಭಯೋತ್ಪಾದಕರಂತೆ ಚಿತ್ರಿಸಿದ ಕಲಾ ತಂಡ ಬ್ಯಾನ್ : ಕೇರಳ ಸರ್ಕಾರ ನಿರ್ಧಾರ

- Advertisement -
- Advertisement -

ಇತ್ತೀಚೆಗೆ ನಡೆದ ಶಾಲಾ ಕಲಾ ಉತ್ಸವದಲ್ಲಿ ಇಸ್ಲಾಮಿಕ್ ಪೋಷಾಕಿನಲ್ಲಿದ್ದ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಬಿಂಬಿಸಿದ ನಂತರ ಇದೀಗ ಮತ್ತೆ ಕೇರಳದ ಕೋಝಿಕ್ಕೋಡ್‌ ವಿವಾದದ ಕೇಂದ್ರಬಿಂದುವಾಗಿದೆ. ಸರ್ಕಾರ ಮುಂದಿನ ಆವೃತ್ತಿಗಳ ಕುರಿತು ಎಚ್ಚರಿಕೆ ವಹಿಸಿದ್ದು, ಈ ಕಲಾಸಂಘವನ್ನು ಸರ್ಕಾರ ನಿಷೇಧಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಪ್ರತಿಕ್ರಿಯಿಸಿದ್ದು, “ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಕ್ಷಮೆಯಾಚಿಸಬೇಕು” ಎಂದು ಮಂಗಳವಾರ ಒತ್ತಾಯಿಸಿತ್ತು.

ಈ ಬಗ್ಗೆ ಶಿಕ್ಷಣ ಸಚಿವ ಮತ್ತು ಸಿಪಿಐ(ಎಂ) ಮುಖಂಡ ವಿ ಶಿವನ್‌ಕುಟ್ಟಿ ಮಾತನಾಡಿ, “ಮುಸ್ಲಿಂ ವ್ಯಕ್ತಿಯನ್ನು ಭಯೋತ್ಪಾದಕನಂತೆ ಚಿತ್ರಿಸಿರುವುದು ಎಲ್‌ಡಿಎಫ್ ನಿಲುವಿಗೆ ವಿರುದ್ಧವಾಗಿದೆ. ಉತ್ಸವದ ಉದ್ಘಾಟನೆಯ ಸಂದರ್ಭದಲ್ಲಿ ಸ್ವಾಗತ ಗೀತೆಯ ಭಾಗವಾಗಿ ಪ್ರದರ್ಶನವನ್ನು ಏರ್ಪಡಿಸಿದ MATHA ಅಥವಾ ಮಲಯಾಳಂ ಥಿಯೇಟ್ರಿಕಲ್ ಹೆರಿಟೇಜ್ ಮತ್ತು ಆರ್ಟ್ಸ್ ಸಂಸ್ಥೆಗೆ ಮುಂದಿನ ಬಾರಿ ಯಾವುದೇ ಅವಕಾಶವನ್ನು ನೀಡಲಾಗುವುದಿಲ್ಲ. ವಿವಾದದ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಉದ್ಘಾಟನೆಯ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ ಮೊದಲು ಸ್ವಾಗತ ಸಮಿತಿಯು ಕಾರ್ಯಕ್ರಮವನ್ನು ವೀಕ್ಷಿಸಿತ್ತು. ಆದರೆ ಇದು ಕಾರ್ಯಕ್ರಮದ ಅಂತಿಮ ಡ್ರೆಸ್ ರಿಹರ್ಸಲ್ ಆಗಿರಲಿಲ್ಲ” ಎಂದು ತಿಳಿಸಿದ್ದಾರೆ.

ಮೊದಲ ದಿನದಂದು MATHA ತಂಡ ಪ್ರದರ್ಶಿಸಿದ ಪ್ರದರ್ಶನದಲ್ಲಿ, ಸಮವಸ್ತ್ರಧಾರಿ ರಕ್ಷಣಾ ಅಧಿಕಾರಿಯನ್ನು ಕೊಂದ ಭಯೋತ್ಪಾದಕನನ್ನು ಭಾರತೀಯ ಸೇನೆಯ ವ್ಯಕ್ತಿಯೊಬ್ಬರು ಬಂಧಿಸಿರುವುದನ್ನು ತೋರಿಸಲಾಯಿತು. ಪ್ರದರ್ಶನದ ವೇಳೆ ಭಯೋತ್ಪಾದಕ ಪಾತ್ರಧಾರಿಗಳು ಅರಬ್ ಪುರುಷರ ಸಾಂಪ್ರದಾಯಿಕ ಶಿರಸ್ತ್ರಾಣವಾದ ಕೆಫಿಯೆಹ್ ಅನ್ನು ಧರಿಸಿದ್ದರು. ಆದರೆ ಇದೀಗ ಮುಸ್ಲಿಮರನ್ನು ಭಯೋತ್ಪಾದಕ ಎಂದು ಬಿಂಬಿಸುವುದನ್ನು ವಿರೋಧಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ ನಂತರ ಈ ಘಟನೆ ವಿವಾದಕ್ಕೆ ಕಾರಣವಾಗಿದೆ.

ಇನ್ನು ಈ ಉತ್ಸವ ಮುಗಿದ ಬಳಿಕ ಮಾತನಾಡಿದ ಸಿಪಿಐ(ಎಂ) ಮುಖಂಡ ಮತ್ತು ಲೋಕೋಪಯೋಗಿ ಸಚಿವ ಮಹಮ್ಮದ್ ರಿಯಾಸ್, “ಈ ಕಾರ್ಯಕ್ರಮದ ಹಿಂದೆ ಸಂಘಪರಿವಾರದ ಅಜೆಂಡಾ ಇದೆ” ಎಂದು ಆರೋಪಿಸಿದ್ದಾರೆ. ಮಂಗಳವಾರ ಕೋಝಿಕ್ಕೋಡ್‌ನಲ್ಲಿ ಸಿಪಿಐ(ಎಂ) ಜಿಲ್ಲಾ ಸಮಿತಿಯು ಪ್ರತಿಕ್ರಿಯಿಸಿದ್ದು, ವೇದಿಕೆ ಕಾರ್ಯಕ್ರಮದ ವಿರುದ್ಧದ ಟೀಕೆ ಅತ್ಯಂತ ಗಂಭೀರವಾಗಿದೆ. ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ” ಎಂದಿದೆ.

“ಮುಸ್ಲಿಂ ವೇಷಭೂಷಣದಲ್ಲಿ ಭಯೋತ್ಪಾದಕನನ್ನು ಪ್ರಸ್ತುತಪಡಿಸುವುದು ಎಲ್‌ಡಿಎಫ್ ಸರ್ಕಾರದ ನಿಲುವಿಗೆ ವಿರುದ್ಧವಾಗಿದೆ. ಭಯೋತ್ಪಾದನೆ ಮತ್ತು ಉಗ್ರವಾದವು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸಂಬಂಧಿಸಿಲ್ಲ. ಇಂತಹ ಕಾರ್ಯಕ್ರಮವನ್ನು ಹೇಗೆ ನಡೆಸಲಾಯಿತು ಎಂಬುದನ್ನು ಪರಿಶೀಲಿಸಬೇಕು’’ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಜಿಲ್ಲಾ ಸಮಿತಿಯ ಮಧ್ಯಪ್ರವೇಶದ ನಂತರ, ರಾಜ್ಯ ಶಿಕ್ಷಣ ಇಲಾಖೆಯು ಈ ಕಲಾ ತಂಡವನ್ನು ಉತ್ಸವದ ಮುಂದಿನ ಆವೃತ್ತಿಗಳಲ್ಲಿ ಭಾಗವಹಿಸದಂತೆ ನಿಷೇಧಿಸಿದೆ. ಆದರೆ ಸಿಪಿಐ(ಎಂ) ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಸಿಎಂ ಮುಸ್ಲಿಮರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

ಶಿಕ್ಷಣ ಸಚಿವರು ಉತ್ಸವದಲ್ಲಿ ಉಪಸ್ಥಿತರಿದ್ದು, ಪ್ರವಾಸೋದ್ಯಮ ಸಚಿವರು ಎಲ್ಲದಕ್ಕೂ ಕಾರಣವಾಗಿದ್ದಾರೆ ನೀಡಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಸಂಸದ ಕೆ.ಮುರಳೀಧರನ್ ಆರೋಪಿಸಿದ್ದಾರೆ. “ಹಾಗಾದರೆ, ಸರ್ಕಾರ ನಡೆಸುವ ಉತ್ಸವದ ಸಮಯದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂತಹ ಚಿತ್ರಣ ಹೇಗೆ ಸಂಭವಿಸಿತು? ಸರ್ಕಾರ ಮತ್ತು ಸಿಎಂಗೆ ನೈತಿಕ ಹೊಣೆಗಾರಿಕೆ ಇದೆ. ಮುಖ್ಯಮಂತ್ರಿಗಳು ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಮತ್ತೊಂದೆಡೆ ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಆಡಳಿತ ಪಕ್ಷವು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ನಿಲ್ಲುವುದಾಗಿ ಹೇಳುತ್ತದೆ. ಆದರೆ ಧಾರ್ಮಿಕ ಉಗ್ರಗಾಮಿಗಳಿಗೆ ಮಣಿದಿದೆ. ಸರಕಾರ ಮೂಲಭೂತವಾದಿಗಳ ಜೊತೆಗಿದೆ ಎಂಬುದನ್ನು ಸಾಬೀತುಪಡಿಸಿದೆ” ಎಂದಿದ್ದಾರೆ.

ವೇದಿಕೆ ಕಾರ್ಯಕ್ರಮವು ಭಾರತೀಯ ರಕ್ಷಣಾ ಪಡೆಗಳ ನಿಸ್ವಾರ್ಥ ಸೇವೆಯನ್ನು ಬಿಂಬಿಸುತ್ತದೆ. ಈಗ, ವಿ ಶಿವನ್‌ಕುಟ್ಟಿ ಮತ್ತು ಮೊಹಮ್ಮದ್ ರಿಯಾಸ್ ಭಾರತೀಯ ಸೇನೆಯ ಸೇವೆಯನ್ನು ಬಿಂಬಿಸುವುದು ಅಪರಾಧ ಎಂದು ಹೇಳುತ್ತಾರೆ. ಇದು ಸಂಪೂರ್ಣ ದೇಶ ವಿರೋಧಿ ವಿಧಾನವಾಗಿದೆ ಎಂದು ಟೀಕಿಸಿದ್ದಾರೆ.

ಈ ವಿವಾದ ಬಗ್ಗೆ ಪ್ರತಿಕ್ರಿಯಿಸಿರುವ ಕಲಾ ನಿರ್ದೇಶಕ ಕನಕದಾಸ್ ಅವರು, “ಇದು ದುರದೃಷ್ಟಕರ” ಎಂದಿದ್ದು, “ಪ್ರದರ್ಶನದ ಹಿಂದೆ ಯಾವುದೇ ರಾಜಕೀಯವಿಲ್ಲ ಮತ್ತು ನಮ್ಮ ಕಲಾವಿದರು ಎಲ್ಲಾ ರಾಜಕೀಯ ಪಕ್ಷಗಳಿಗೆ ಸೇರಿದವರು. ನಾವು ಹಲವಾರು ಸರ್ಕಾರಿ ಕಾರ್ಯಕ್ರಮಗಳಿಗೆ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದ್ದೇವೆ. ಶಾಲಾ ಉತ್ಸವದಲ್ಲಿ ವೇದಿಕೆ ಕಾರ್ಯಕ್ರಮದ ನಂತರ ಸಚಿವ ರಿಯಾಸ್ ನಮ್ಮನ್ನು ಅಭಿನಂದಿಸಿದರು. ನಂತರ, ಯಾರೂ ಕಾರ್ಯಕ್ರಮದ ವಿರುದ್ಧ ಯಾವುದೇ ದೂರು ನೀಡಲಿಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...