Homeಮುಖಪುಟಕೇರಳ ವಿಧಾನಸಭೆ ವಿಶೇಷ ಅಧಿವೇಶನ ಕರೆಯಲು ರಾಜ್ಯಪಾಲರ ನಕಾರ: ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಆಕ್ರೋಶ

ಕೇರಳ ವಿಧಾನಸಭೆ ವಿಶೇಷ ಅಧಿವೇಶನ ಕರೆಯಲು ರಾಜ್ಯಪಾಲರ ನಕಾರ: ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಆಕ್ರೋಶ

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಮಂಡಿಸಲು ವಿಶೇಷ ಅಧಿವೇಶನ ನಡೆಸುವಂತೆ ಕೋರಲಾಗಿತ್ತು.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಕೈಗೊಳ್ಳಲು ಕೇರಳ ವಿಧಾನಸಭೆಯ ವಿಶೇಷ ಅಧಿವೇಶನವನ್ನು ತುರ್ತಾಗಿ ಕರೆಯಬೇಕೆಂದು ಮಾಡಿರುವ ಮನವಿಯನ್ನು ನಿರಾಕರಿಸಿರುವ ರಾಜ್ಯಪಾಲ ಆರೀಫ್ ಮೊಹಮದ್ ಖಾನ್ ತೀರ್ಮಾನಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪ್ರತಿ ಪಕ್ಷ ನಾಯಕ ರಮೇಶ್ ಚನ್ನಿತಾಲ್ ಹಾಗೂ ಕಾನೂನುತಜ್ಞರು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಅಂಗೀಕರಿಸಿರುವ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ಕೇರಳ ವಿಧಾನಸಭೆಯ ಅಧಿವೇಶನದಲ್ಲಿ ಚರ್ಚಿಸಲು ಮತ್ತು ನಿರ್ಣಯ ಕೈಗೊಳ್ಳಲು ರಾಜ್ಯಪಾಲರು ಅವಕಾಶ ನೀಡದೇ ಇರಲು ನಿರ್ಧರಿಸಿದ್ದಾರೆ ಎಂದು ದಿವೈರ್.ಇನ್ ವರದಿ ಮಾಡಿದೆ.

ವಿಶೇಷ ಅಧಿವೇಶನ ಕರೆಯುವಂತೆ ಕೇರಳ ಸಚಿವ ಸಂಪುಟವು ಮಾಡಿದ ಮನವಿಯನ್ನು ರಾಜ್ಯಪಾಲರು ಇದೇ ಮೊದಲ ಬಾರಿಗೆ ನಿರಾಕರಿಸಿದ್ದಾರೆ. ಸರ್ಕಾರ ಅಧಿವೇಶನ ಕರೆಯುವ ಮೊದಲು 15 ದಿನಗಳ ನೋಟೀಸ್ ಅವಧಿ ನೀಡುವ ಸಂಬಂಧದ ನಿಯಮಗಳನ್ನು ಪಾಲಿಸಿಲ್ಲ. ನೋಟಿಸ್ ಅವಧಿಯ ನಿಯಮಗಳನ್ನು ಅನುಸರಿಸಿಲ್ಲ. ವಿಶೇಷ ಅಧಿವೇಶನ ಕರೆದಿರುವ ತುರ್ತು ಕಾರಣ ತೃಪ್ತಿಕರವಾಗಿಲ್ಲ. ಜೊತೆಗೆ ಜನವರಿ 8ರಂದು ಬಜೆಟ್ ಅಧಿವೇಶನ ಕರೆಯಲು ಸಮ್ಮತಿ ನೀಡಲಾಗಿದೆ. ಹಾಗಾಗಿ ಈ ವಿಶೇಷ ಅಧಿವೇಶನಕ್ಕೆ ಅವಕಾಶವಿಲ್ಲ ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಉದ್ದೇಶಿತ ಕೇರಳ ಸರ್ಕಾರದ ನಿರ್ಣಯವು ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳಿಗೆ ವಿರುದ್ಧವಾಗಿದೆ. ಬಿಜೆಪಿಯ ಒಬ್ಬ ಸದಸ್ಯರನ್ನು ಹೊರತುಪಡಿಸಿ 140 ಸದಸ್ಯ ಬಲದ ವಿಧಾನಸಭೆಯಲ್ಲಿ 139 ಮಂದಿ ಸದಸ್ಯರು ಕೃಷಿ ಕಾಯ್ದೆಗಳ ವಿರುದ್ಧವಾಗಿದ್ದಾರೆ. ಹೀಗಾಗಿ ರಾಜ್ಯಪಾಲರು ವಿಶೇಷ ಅಧಿವೇಶನ ಕರೆಯದಿರಲು ತೀರ್ಮಾನಿಸಿರಬಹುದು ಎಂದು ಟೀಕಿಸಲಾಗಿದೆ.

ಇದೇ ಮೊದಲ ಬಾರಿಗೆ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರಕ್ಕೆ ರಾಜ್ಯಪಾಲರು ಸಮ್ಮತಿ ನೀಡಿಲ್ಲ. ರಾಜ್ಯಪಾಲರ ಈ ತೀರ್ಮಾನಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಆಡಳಿತಾರೂಢ ಎಲ್.ಡಿ.ಎಫ್ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿವೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾತನಾಡಿ, “ಕೇಂದ್ರ ಕೃಷಿ ಕಾಯ್ದೆಗಳು ಸಂವಿಧಾನ, ಸುಪ್ರೀಂ ಕೋರ್ಟ್ ತೀರ್ಪು ಮತ್ತು ಪ್ರಜಾಪ್ರಭುತ್ವದ ಪದ್ದತಿಯ ವಿಸ್ತರಣೆಗೆ ವಿರುದ್ಧವಾಗಿದೆ” ಎಂದು ಹೇಳಿದರೆ, ಪ್ರತಿಪಕ್ಷ ನಾಯಕ ರಮೇಶ್ ಚನ್ನಿತಾಲ್ “ರಾಜ್ಯಪಾಲರ ನಿರ್ಧಾರ ಅಪ್ರಜಾಸತ್ತಾತ್ಮಕವಾಗಿದೆ” ಎಂದು ಟೀಕಿಸಿದ್ದಾರೆ.

ವಿಶೇಷ ಅಧಿವೇಶನ ನಡೆಸಲು ರಾಜ್ಯಪಾಲರು ನಿರಾಕರಿಸಿದ ಬೆನ್ನಲ್ಲೇ ಎಲ್.ಡಿ.ಎಫ್ ನೇತೃತ್ವದಲ್ಲಿ ಸಭೆ ಸೇರಿದ ಮುಖ್ಯಮಂತ್ರಿ, ಸಂಪುಟದ ಸಹದ್ಯೋಗಿಗಳು ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ರೈತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

“ರೈತರು ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿರುವುದನ್ನು ಎಂದೂ ನೋಡಿಲ್ಲ. ರೈತರು ನಡೆಸುತ್ತಿರುವ ಪ್ರತಿಭಟನೆ ಸರಿಯಾಗಿದೆ. ರೈತರ ಬೇಡಿಕೆಗಳು ದೇಶದ ಬೇಡಿಕೆಗಳಾಗಿವೆ. ರೈತರ ಪ್ರತಿಭಟನೆ ಸಾಮೂಹಿಕ ಚಳವಳಿಯಾಗಿದೆ. ಇಂತಹ ಸಾಮೂಹಿಕ ಚಳವಳಿಯನ್ನು ಪ್ರಧಾನಿ ನರೇಂದ್ರ ಮೋದಿಯಿಂದ ಸೋಲಿಸಲು ಸಾಧ್ಯವಿಲ್ಲ. ರೈತರ ಪ್ರತಿಭಟನೆಯಿಂದ ಸರ್ಕಾರದ ಅಹಂ ಕೊಂಚೆ ಕಡಿಮೆ ಆಗಿದೆ. ಆದರೂ ಜನಪರ ಪ್ರತಿಭಟನೆಯನ್ನು ನಾಶ ಮಾಡಲು ಮತ್ತು ಛಿದ್ರಗೊಳಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟೀಕಾಪ್ರಹಾರ ನಡೆಸಿದ್ದಾರೆ.

ಕಾಂಗ್ರೆಸ್ ಮುಖಂಡ ಹಾಗೂ ಪ್ರತಿಪಕ್ಷ ನಾಯಕ ರಮೇಶ್ ಚನ್ನಿತಾಲ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು ವಿವಾದಾತ್ಮಕ ಕೃಷಿ ಕಾಯ್ದೆಗಳಿಗೆ ಪರ್ಯಾಯವಾಗಿ ಕಾನೂನುಗಳನ್ನು ರಾಜ್ಯದಲ್ಲಿ ತರಬೇಕು ಎಂದು ಒತ್ತಾಯಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಒಮನ್ ಚಾಂಡಿಯೂ ಕೂಡ ಒತ್ತಾಯಿಸಿದ್ದು ಕಾಂಗ್ರೆಸ್ ನೇತೃತ್ವದ ಪಂಜಾಬ್, ರಾಜಸ್ಥಾನ ಮತ್ತು ಛತ್ತೀಸ್ ಘಡ ಸರ್ಕಾರಗಳು ರೈತಪರ ಕಾನೂನುಗಳನ್ನು ಜಾರಿಗೊಳಿಸಿವೆ. ಅದೇ ರೀತಿ ಕೇರಳ ಸರ್ಕಾರವೂ ಮುಂದುವರಿಯಬೇಕು ಎಂದು ಸಲಹೆ ನೀಡಿದ್ದಾರೆ.

ರಾಜ್ಯಪಾಲರು ವಿಶೇಷ ಅಧಿವೇಶನ ಕರೆಯಲು ನಿರಾಕರಿಸಿ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದು ಟೀಕೆಗೂ ಗುರಿಯಾಗಿದೆ.


ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...