Homeಮುಖಪುಟಕೇರಳ ವಿಧಾನಸಭೆ ವಿಶೇಷ ಅಧಿವೇಶನ ಕರೆಯಲು ರಾಜ್ಯಪಾಲರ ನಕಾರ: ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಆಕ್ರೋಶ

ಕೇರಳ ವಿಧಾನಸಭೆ ವಿಶೇಷ ಅಧಿವೇಶನ ಕರೆಯಲು ರಾಜ್ಯಪಾಲರ ನಕಾರ: ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಆಕ್ರೋಶ

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಮಂಡಿಸಲು ವಿಶೇಷ ಅಧಿವೇಶನ ನಡೆಸುವಂತೆ ಕೋರಲಾಗಿತ್ತು.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಕೈಗೊಳ್ಳಲು ಕೇರಳ ವಿಧಾನಸಭೆಯ ವಿಶೇಷ ಅಧಿವೇಶನವನ್ನು ತುರ್ತಾಗಿ ಕರೆಯಬೇಕೆಂದು ಮಾಡಿರುವ ಮನವಿಯನ್ನು ನಿರಾಕರಿಸಿರುವ ರಾಜ್ಯಪಾಲ ಆರೀಫ್ ಮೊಹಮದ್ ಖಾನ್ ತೀರ್ಮಾನಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪ್ರತಿ ಪಕ್ಷ ನಾಯಕ ರಮೇಶ್ ಚನ್ನಿತಾಲ್ ಹಾಗೂ ಕಾನೂನುತಜ್ಞರು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಅಂಗೀಕರಿಸಿರುವ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ಕೇರಳ ವಿಧಾನಸಭೆಯ ಅಧಿವೇಶನದಲ್ಲಿ ಚರ್ಚಿಸಲು ಮತ್ತು ನಿರ್ಣಯ ಕೈಗೊಳ್ಳಲು ರಾಜ್ಯಪಾಲರು ಅವಕಾಶ ನೀಡದೇ ಇರಲು ನಿರ್ಧರಿಸಿದ್ದಾರೆ ಎಂದು ದಿವೈರ್.ಇನ್ ವರದಿ ಮಾಡಿದೆ.

ವಿಶೇಷ ಅಧಿವೇಶನ ಕರೆಯುವಂತೆ ಕೇರಳ ಸಚಿವ ಸಂಪುಟವು ಮಾಡಿದ ಮನವಿಯನ್ನು ರಾಜ್ಯಪಾಲರು ಇದೇ ಮೊದಲ ಬಾರಿಗೆ ನಿರಾಕರಿಸಿದ್ದಾರೆ. ಸರ್ಕಾರ ಅಧಿವೇಶನ ಕರೆಯುವ ಮೊದಲು 15 ದಿನಗಳ ನೋಟೀಸ್ ಅವಧಿ ನೀಡುವ ಸಂಬಂಧದ ನಿಯಮಗಳನ್ನು ಪಾಲಿಸಿಲ್ಲ. ನೋಟಿಸ್ ಅವಧಿಯ ನಿಯಮಗಳನ್ನು ಅನುಸರಿಸಿಲ್ಲ. ವಿಶೇಷ ಅಧಿವೇಶನ ಕರೆದಿರುವ ತುರ್ತು ಕಾರಣ ತೃಪ್ತಿಕರವಾಗಿಲ್ಲ. ಜೊತೆಗೆ ಜನವರಿ 8ರಂದು ಬಜೆಟ್ ಅಧಿವೇಶನ ಕರೆಯಲು ಸಮ್ಮತಿ ನೀಡಲಾಗಿದೆ. ಹಾಗಾಗಿ ಈ ವಿಶೇಷ ಅಧಿವೇಶನಕ್ಕೆ ಅವಕಾಶವಿಲ್ಲ ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಉದ್ದೇಶಿತ ಕೇರಳ ಸರ್ಕಾರದ ನಿರ್ಣಯವು ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳಿಗೆ ವಿರುದ್ಧವಾಗಿದೆ. ಬಿಜೆಪಿಯ ಒಬ್ಬ ಸದಸ್ಯರನ್ನು ಹೊರತುಪಡಿಸಿ 140 ಸದಸ್ಯ ಬಲದ ವಿಧಾನಸಭೆಯಲ್ಲಿ 139 ಮಂದಿ ಸದಸ್ಯರು ಕೃಷಿ ಕಾಯ್ದೆಗಳ ವಿರುದ್ಧವಾಗಿದ್ದಾರೆ. ಹೀಗಾಗಿ ರಾಜ್ಯಪಾಲರು ವಿಶೇಷ ಅಧಿವೇಶನ ಕರೆಯದಿರಲು ತೀರ್ಮಾನಿಸಿರಬಹುದು ಎಂದು ಟೀಕಿಸಲಾಗಿದೆ.

ಇದೇ ಮೊದಲ ಬಾರಿಗೆ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರಕ್ಕೆ ರಾಜ್ಯಪಾಲರು ಸಮ್ಮತಿ ನೀಡಿಲ್ಲ. ರಾಜ್ಯಪಾಲರ ಈ ತೀರ್ಮಾನಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಆಡಳಿತಾರೂಢ ಎಲ್.ಡಿ.ಎಫ್ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿವೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾತನಾಡಿ, “ಕೇಂದ್ರ ಕೃಷಿ ಕಾಯ್ದೆಗಳು ಸಂವಿಧಾನ, ಸುಪ್ರೀಂ ಕೋರ್ಟ್ ತೀರ್ಪು ಮತ್ತು ಪ್ರಜಾಪ್ರಭುತ್ವದ ಪದ್ದತಿಯ ವಿಸ್ತರಣೆಗೆ ವಿರುದ್ಧವಾಗಿದೆ” ಎಂದು ಹೇಳಿದರೆ, ಪ್ರತಿಪಕ್ಷ ನಾಯಕ ರಮೇಶ್ ಚನ್ನಿತಾಲ್ “ರಾಜ್ಯಪಾಲರ ನಿರ್ಧಾರ ಅಪ್ರಜಾಸತ್ತಾತ್ಮಕವಾಗಿದೆ” ಎಂದು ಟೀಕಿಸಿದ್ದಾರೆ.

ವಿಶೇಷ ಅಧಿವೇಶನ ನಡೆಸಲು ರಾಜ್ಯಪಾಲರು ನಿರಾಕರಿಸಿದ ಬೆನ್ನಲ್ಲೇ ಎಲ್.ಡಿ.ಎಫ್ ನೇತೃತ್ವದಲ್ಲಿ ಸಭೆ ಸೇರಿದ ಮುಖ್ಯಮಂತ್ರಿ, ಸಂಪುಟದ ಸಹದ್ಯೋಗಿಗಳು ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ರೈತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

“ರೈತರು ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿರುವುದನ್ನು ಎಂದೂ ನೋಡಿಲ್ಲ. ರೈತರು ನಡೆಸುತ್ತಿರುವ ಪ್ರತಿಭಟನೆ ಸರಿಯಾಗಿದೆ. ರೈತರ ಬೇಡಿಕೆಗಳು ದೇಶದ ಬೇಡಿಕೆಗಳಾಗಿವೆ. ರೈತರ ಪ್ರತಿಭಟನೆ ಸಾಮೂಹಿಕ ಚಳವಳಿಯಾಗಿದೆ. ಇಂತಹ ಸಾಮೂಹಿಕ ಚಳವಳಿಯನ್ನು ಪ್ರಧಾನಿ ನರೇಂದ್ರ ಮೋದಿಯಿಂದ ಸೋಲಿಸಲು ಸಾಧ್ಯವಿಲ್ಲ. ರೈತರ ಪ್ರತಿಭಟನೆಯಿಂದ ಸರ್ಕಾರದ ಅಹಂ ಕೊಂಚೆ ಕಡಿಮೆ ಆಗಿದೆ. ಆದರೂ ಜನಪರ ಪ್ರತಿಭಟನೆಯನ್ನು ನಾಶ ಮಾಡಲು ಮತ್ತು ಛಿದ್ರಗೊಳಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟೀಕಾಪ್ರಹಾರ ನಡೆಸಿದ್ದಾರೆ.

ಕಾಂಗ್ರೆಸ್ ಮುಖಂಡ ಹಾಗೂ ಪ್ರತಿಪಕ್ಷ ನಾಯಕ ರಮೇಶ್ ಚನ್ನಿತಾಲ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು ವಿವಾದಾತ್ಮಕ ಕೃಷಿ ಕಾಯ್ದೆಗಳಿಗೆ ಪರ್ಯಾಯವಾಗಿ ಕಾನೂನುಗಳನ್ನು ರಾಜ್ಯದಲ್ಲಿ ತರಬೇಕು ಎಂದು ಒತ್ತಾಯಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಒಮನ್ ಚಾಂಡಿಯೂ ಕೂಡ ಒತ್ತಾಯಿಸಿದ್ದು ಕಾಂಗ್ರೆಸ್ ನೇತೃತ್ವದ ಪಂಜಾಬ್, ರಾಜಸ್ಥಾನ ಮತ್ತು ಛತ್ತೀಸ್ ಘಡ ಸರ್ಕಾರಗಳು ರೈತಪರ ಕಾನೂನುಗಳನ್ನು ಜಾರಿಗೊಳಿಸಿವೆ. ಅದೇ ರೀತಿ ಕೇರಳ ಸರ್ಕಾರವೂ ಮುಂದುವರಿಯಬೇಕು ಎಂದು ಸಲಹೆ ನೀಡಿದ್ದಾರೆ.

ರಾಜ್ಯಪಾಲರು ವಿಶೇಷ ಅಧಿವೇಶನ ಕರೆಯಲು ನಿರಾಕರಿಸಿ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದು ಟೀಕೆಗೂ ಗುರಿಯಾಗಿದೆ.


ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...