Homeಮುಖಪುಟಕೇರಳ ವಿಧಾನಸಭೆ ವಿಶೇಷ ಅಧಿವೇಶನ ಕರೆಯಲು ರಾಜ್ಯಪಾಲರ ನಕಾರ: ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಆಕ್ರೋಶ

ಕೇರಳ ವಿಧಾನಸಭೆ ವಿಶೇಷ ಅಧಿವೇಶನ ಕರೆಯಲು ರಾಜ್ಯಪಾಲರ ನಕಾರ: ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಆಕ್ರೋಶ

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಮಂಡಿಸಲು ವಿಶೇಷ ಅಧಿವೇಶನ ನಡೆಸುವಂತೆ ಕೋರಲಾಗಿತ್ತು.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಕೈಗೊಳ್ಳಲು ಕೇರಳ ವಿಧಾನಸಭೆಯ ವಿಶೇಷ ಅಧಿವೇಶನವನ್ನು ತುರ್ತಾಗಿ ಕರೆಯಬೇಕೆಂದು ಮಾಡಿರುವ ಮನವಿಯನ್ನು ನಿರಾಕರಿಸಿರುವ ರಾಜ್ಯಪಾಲ ಆರೀಫ್ ಮೊಹಮದ್ ಖಾನ್ ತೀರ್ಮಾನಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪ್ರತಿ ಪಕ್ಷ ನಾಯಕ ರಮೇಶ್ ಚನ್ನಿತಾಲ್ ಹಾಗೂ ಕಾನೂನುತಜ್ಞರು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಅಂಗೀಕರಿಸಿರುವ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ಕೇರಳ ವಿಧಾನಸಭೆಯ ಅಧಿವೇಶನದಲ್ಲಿ ಚರ್ಚಿಸಲು ಮತ್ತು ನಿರ್ಣಯ ಕೈಗೊಳ್ಳಲು ರಾಜ್ಯಪಾಲರು ಅವಕಾಶ ನೀಡದೇ ಇರಲು ನಿರ್ಧರಿಸಿದ್ದಾರೆ ಎಂದು ದಿವೈರ್.ಇನ್ ವರದಿ ಮಾಡಿದೆ.

ವಿಶೇಷ ಅಧಿವೇಶನ ಕರೆಯುವಂತೆ ಕೇರಳ ಸಚಿವ ಸಂಪುಟವು ಮಾಡಿದ ಮನವಿಯನ್ನು ರಾಜ್ಯಪಾಲರು ಇದೇ ಮೊದಲ ಬಾರಿಗೆ ನಿರಾಕರಿಸಿದ್ದಾರೆ. ಸರ್ಕಾರ ಅಧಿವೇಶನ ಕರೆಯುವ ಮೊದಲು 15 ದಿನಗಳ ನೋಟೀಸ್ ಅವಧಿ ನೀಡುವ ಸಂಬಂಧದ ನಿಯಮಗಳನ್ನು ಪಾಲಿಸಿಲ್ಲ. ನೋಟಿಸ್ ಅವಧಿಯ ನಿಯಮಗಳನ್ನು ಅನುಸರಿಸಿಲ್ಲ. ವಿಶೇಷ ಅಧಿವೇಶನ ಕರೆದಿರುವ ತುರ್ತು ಕಾರಣ ತೃಪ್ತಿಕರವಾಗಿಲ್ಲ. ಜೊತೆಗೆ ಜನವರಿ 8ರಂದು ಬಜೆಟ್ ಅಧಿವೇಶನ ಕರೆಯಲು ಸಮ್ಮತಿ ನೀಡಲಾಗಿದೆ. ಹಾಗಾಗಿ ಈ ವಿಶೇಷ ಅಧಿವೇಶನಕ್ಕೆ ಅವಕಾಶವಿಲ್ಲ ಎಂದು ರಾಜ್ಯಪಾಲರು ತಿಳಿಸಿದ್ದಾರೆ.

ಉದ್ದೇಶಿತ ಕೇರಳ ಸರ್ಕಾರದ ನಿರ್ಣಯವು ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳಿಗೆ ವಿರುದ್ಧವಾಗಿದೆ. ಬಿಜೆಪಿಯ ಒಬ್ಬ ಸದಸ್ಯರನ್ನು ಹೊರತುಪಡಿಸಿ 140 ಸದಸ್ಯ ಬಲದ ವಿಧಾನಸಭೆಯಲ್ಲಿ 139 ಮಂದಿ ಸದಸ್ಯರು ಕೃಷಿ ಕಾಯ್ದೆಗಳ ವಿರುದ್ಧವಾಗಿದ್ದಾರೆ. ಹೀಗಾಗಿ ರಾಜ್ಯಪಾಲರು ವಿಶೇಷ ಅಧಿವೇಶನ ಕರೆಯದಿರಲು ತೀರ್ಮಾನಿಸಿರಬಹುದು ಎಂದು ಟೀಕಿಸಲಾಗಿದೆ.

ಇದೇ ಮೊದಲ ಬಾರಿಗೆ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರಕ್ಕೆ ರಾಜ್ಯಪಾಲರು ಸಮ್ಮತಿ ನೀಡಿಲ್ಲ. ರಾಜ್ಯಪಾಲರ ಈ ತೀರ್ಮಾನಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಆಡಳಿತಾರೂಢ ಎಲ್.ಡಿ.ಎಫ್ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿವೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾತನಾಡಿ, “ಕೇಂದ್ರ ಕೃಷಿ ಕಾಯ್ದೆಗಳು ಸಂವಿಧಾನ, ಸುಪ್ರೀಂ ಕೋರ್ಟ್ ತೀರ್ಪು ಮತ್ತು ಪ್ರಜಾಪ್ರಭುತ್ವದ ಪದ್ದತಿಯ ವಿಸ್ತರಣೆಗೆ ವಿರುದ್ಧವಾಗಿದೆ” ಎಂದು ಹೇಳಿದರೆ, ಪ್ರತಿಪಕ್ಷ ನಾಯಕ ರಮೇಶ್ ಚನ್ನಿತಾಲ್ “ರಾಜ್ಯಪಾಲರ ನಿರ್ಧಾರ ಅಪ್ರಜಾಸತ್ತಾತ್ಮಕವಾಗಿದೆ” ಎಂದು ಟೀಕಿಸಿದ್ದಾರೆ.

ವಿಶೇಷ ಅಧಿವೇಶನ ನಡೆಸಲು ರಾಜ್ಯಪಾಲರು ನಿರಾಕರಿಸಿದ ಬೆನ್ನಲ್ಲೇ ಎಲ್.ಡಿ.ಎಫ್ ನೇತೃತ್ವದಲ್ಲಿ ಸಭೆ ಸೇರಿದ ಮುಖ್ಯಮಂತ್ರಿ, ಸಂಪುಟದ ಸಹದ್ಯೋಗಿಗಳು ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ರೈತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

“ರೈತರು ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿರುವುದನ್ನು ಎಂದೂ ನೋಡಿಲ್ಲ. ರೈತರು ನಡೆಸುತ್ತಿರುವ ಪ್ರತಿಭಟನೆ ಸರಿಯಾಗಿದೆ. ರೈತರ ಬೇಡಿಕೆಗಳು ದೇಶದ ಬೇಡಿಕೆಗಳಾಗಿವೆ. ರೈತರ ಪ್ರತಿಭಟನೆ ಸಾಮೂಹಿಕ ಚಳವಳಿಯಾಗಿದೆ. ಇಂತಹ ಸಾಮೂಹಿಕ ಚಳವಳಿಯನ್ನು ಪ್ರಧಾನಿ ನರೇಂದ್ರ ಮೋದಿಯಿಂದ ಸೋಲಿಸಲು ಸಾಧ್ಯವಿಲ್ಲ. ರೈತರ ಪ್ರತಿಭಟನೆಯಿಂದ ಸರ್ಕಾರದ ಅಹಂ ಕೊಂಚೆ ಕಡಿಮೆ ಆಗಿದೆ. ಆದರೂ ಜನಪರ ಪ್ರತಿಭಟನೆಯನ್ನು ನಾಶ ಮಾಡಲು ಮತ್ತು ಛಿದ್ರಗೊಳಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟೀಕಾಪ್ರಹಾರ ನಡೆಸಿದ್ದಾರೆ.

ಕಾಂಗ್ರೆಸ್ ಮುಖಂಡ ಹಾಗೂ ಪ್ರತಿಪಕ್ಷ ನಾಯಕ ರಮೇಶ್ ಚನ್ನಿತಾಲ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು ವಿವಾದಾತ್ಮಕ ಕೃಷಿ ಕಾಯ್ದೆಗಳಿಗೆ ಪರ್ಯಾಯವಾಗಿ ಕಾನೂನುಗಳನ್ನು ರಾಜ್ಯದಲ್ಲಿ ತರಬೇಕು ಎಂದು ಒತ್ತಾಯಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಒಮನ್ ಚಾಂಡಿಯೂ ಕೂಡ ಒತ್ತಾಯಿಸಿದ್ದು ಕಾಂಗ್ರೆಸ್ ನೇತೃತ್ವದ ಪಂಜಾಬ್, ರಾಜಸ್ಥಾನ ಮತ್ತು ಛತ್ತೀಸ್ ಘಡ ಸರ್ಕಾರಗಳು ರೈತಪರ ಕಾನೂನುಗಳನ್ನು ಜಾರಿಗೊಳಿಸಿವೆ. ಅದೇ ರೀತಿ ಕೇರಳ ಸರ್ಕಾರವೂ ಮುಂದುವರಿಯಬೇಕು ಎಂದು ಸಲಹೆ ನೀಡಿದ್ದಾರೆ.

ರಾಜ್ಯಪಾಲರು ವಿಶೇಷ ಅಧಿವೇಶನ ಕರೆಯಲು ನಿರಾಕರಿಸಿ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದು ಟೀಕೆಗೂ ಗುರಿಯಾಗಿದೆ.


ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...