Homeಮುಖಪುಟವಿಧಾನಸಭೆ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಲುಗಳು ಕೈಬಿಟ್ಟ ಕೇರಳ ರಾಜ್ಯಪಾಲ : ಸಿಎಂ ಪಿಣರಾಯಿ...

ವಿಧಾನಸಭೆ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಲುಗಳು ಕೈಬಿಟ್ಟ ಕೇರಳ ರಾಜ್ಯಪಾಲ : ಸಿಎಂ ಪಿಣರಾಯಿ ವಿಜಯನ್ ಆರೋಪ

- Advertisement -
- Advertisement -

ತಮಿಳುನಾಡಿನ ಬಳಿಕ ಕೇರಳ ವಿಧಾನಸಭೆಯಲ್ಲೂ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮಂಗಳವಾರ (ಜ.20) ಜಟಾಪಟಿ ನಡೆದಿದೆ. ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣದಲ್ಲಿನ ಕೇಂದ್ರ ಸರ್ಕಾರವನ್ನು ಟೀಕಿಸುವ ಕೆಲ ಸಾಲುಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಉದ್ದೇಶಪೂರ್ವಕವಾಗಿ ಓದದೆ ಬಿಟ್ಟಿದ್ದಾರೆ. ಇನ್ನೂ ಕೆಲ ಸಾಲುಗಳನ್ನು ಮಾರ್ಪಡಿಸಿದ್ದಾರೆ ಎಂದು ಸಿಎಂ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.

112 ನಿಮಿಷಗಳ ಸುದೀರ್ಘ ಭಾಷಣ ಮಾಡಿ ರಾಜ್ಯಪಾಲರು ನಿರ್ಗಮಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ, ಸಚಿವ ಸಂಪುಟ ಅನುಮೋದಿಸಿದ ಭಾಷಣದಲ್ಲಿನ ಕೆಲವು ಸಾಲುಗಳನ್ನು ರಾಜ್ಯಪಾಲರು ಕೈಬಿಟ್ಟಿದ್ದಾರೆ ಅಥವಾ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಂತ್ರಿ ಮಂಡಲ ಅನುಮೋದಿಸಿದ ಅಧಿಕೃತ ನೀತಿ ಭಾಷಣವು ಹಾಗೆಯೇ ಉಳಿಯಬೇಕು ಎಂದು ಒತ್ತಿ ಹೇಳಿದ್ದಾರೆ.

ಒಕ್ಕೂಟ ವ್ಯವಸ್ಥೆಯ ತತ್ವಗಳಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರವು ರಾಜ್ಯದ ಮೇಲೆ ಆರ್ಥಿಕ ಒತ್ತಡ ಹೇರುತ್ತಿದೆ ಎಂದು ಹೇಳಲಾಗಿದ್ದ ಭಾಷಣದ 12ನೇ ಪ್ಯಾರಾವನ್ನು ರಾಜ್ಯಪಾಲರು ಓದಿಲ್ಲ. ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳನ್ನು ರಾಜ್ಯಪಾಲರು ದೀರ್ಘಕಾಲ ತಡೆಹಿಡಿದಿರುವ ಬಗ್ಗೆ ಮತ್ತು ಈ ವಿಷಯದಲ್ಲಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಕುರಿತಾದ 15ನೇ ಪ್ಯಾರಾವನ್ನು ಕೈಬಿಟ್ಟಿದ್ದಾರೆ ಮತ್ತು ತೆರಿಗೆ ಹಂಚಿಕೆಗೆ ಸಂಬಂಧಿಸಿದ ಭಾಗದಲ್ಲಿ “ಇದು ನನ್ನ ಸರ್ಕಾರದ ನಂಬಿಕೆ” ಎಂಬ ಸಾಲನ್ನು ರಾಜ್ಯಪಾಲರು ಸ್ವತಃ ಸೇರಿಸಿ ಓದಿದ್ದಾರೆ ಎಂದು ಸಿಎಂ ಆರೋಪ ಮಾಡಿದ್ದಾರೆ.

ರಾಜ್ಯಪಾಲರು ತೆರಳಿದ ನಂತರ, ಸಿಎಂ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರು ಕೈಬಿಟ್ಟ ಭಾಗಗಳನ್ನು ಸದನದಲ್ಲಿ ಓದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂವಿಧಾನದ ವಿಧಿ 176ರ ಪ್ರಕಾರ, ರಾಜ್ಯ ಸಚಿವ ಸಂಪುಟ ಅನುಮೋದಿಸಿದ ಭಾಷಣವನ್ನು ರಾಜ್ಯಪಾಲರು ಹಾಗೆಯೇ ಓದಬೇಕು ಎಂದು ಸಿಎಂ ಪ್ರತಿಪಾದಿಸಿದ್ದಾರೆ.

“ಮುಖ್ಯಮಂತ್ರಿ ಸೂಚಿಸಿರುವ ವಿಷಯವು ಬಹಳ ನಿರ್ಣಾಯಕವಾಗಿದೆ. ಸಂಪುಟ ಅನುಮೋದಿಸಿರುವ ವಿಷಯದಲ್ಲಿ ಬದಲಾವಣೆ ಮಾಡುವುದು ಮತ್ತು ಕೈಬಿಡುವುದು ಸಂಪ್ರದಾಯಕ್ಕೆ ವಿರುದ್ಧವಾಗಿದೆ. ಸಂಪುಟ ಅನುಮೋದಿತ ಭಾಷಣವನ್ನೇ ಸದನದ ಸದಸ್ಯರು ಮತ್ತು ಮಾಧ್ಯಮಗಳಿಗೆ ನೀಡಲಾಗುತ್ತದೆ” ಎಂದು ಹೇಳುವ ಮೂಲಕ ಸ್ಪೀಕರ್ ಎ.ಎನ್. ಶಂಸೀರ್ ಮುಖ್ಯಮಂತ್ರಿಯ ಮಾತನ್ನು ಬೆಂಬಲಿಸಿದ್ದಾರೆ.

“ಈ ರೀತಿಯ ಸಂದರ್ಭಗಳಲ್ಲಿ ರಾಜ್ಯಪಾಲರನ್ನು ಅವಮಾನಿಸುವ ರೀತಿಯೇ ತಮಿಳುನಾಡು ಮತ್ತು ಕೇರಳದಲ್ಲೂ ನಡೆಯುತ್ತಿದೆ” ಎಂದು ಗೋವಾ ಮಾಜಿ ರಾಜ್ಯಪಾಲ ಮತ್ತು ಹಿರಿಯ ಬಿಜೆಪಿ ನಾಯಕ ಪಿ.ಎಸ್. ಶ್ರೀಧರನ್ ಪಿಳ್ಳೈ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಘಟನೆಯು ಕೇಂದ್ರ-ರಾಜ್ಯ ಸಂಬಂಧಗಳು, ರಾಜ್ಯಪಾಲರ ಸಾಂವಿಧಾನಿಕ ಪಾತ್ರ ಮತ್ತು ಶಾಸಕಾಂಗ ಸಂಪ್ರದಾಯಗಳ ಕುರಿತು ಚರ್ಚೆಯನ್ನು ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....