Homeಮುಖಪುಟವಿಧಾನಸಭೆ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಲುಗಳು ಕೈಬಿಟ್ಟ ಕೇರಳ ರಾಜ್ಯಪಾಲ : ಸಿಎಂ ಪಿಣರಾಯಿ...

ವಿಧಾನಸಭೆ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಲುಗಳು ಕೈಬಿಟ್ಟ ಕೇರಳ ರಾಜ್ಯಪಾಲ : ಸಿಎಂ ಪಿಣರಾಯಿ ವಿಜಯನ್ ಆರೋಪ

- Advertisement -
- Advertisement -

ತಮಿಳುನಾಡಿನ ಬಳಿಕ ಕೇರಳ ವಿಧಾನಸಭೆಯಲ್ಲೂ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮಂಗಳವಾರ (ಜ.20) ಜಟಾಪಟಿ ನಡೆದಿದೆ. ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣದಲ್ಲಿನ ಕೇಂದ್ರ ಸರ್ಕಾರವನ್ನು ಟೀಕಿಸುವ ಕೆಲ ಸಾಲುಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಉದ್ದೇಶಪೂರ್ವಕವಾಗಿ ಓದದೆ ಬಿಟ್ಟಿದ್ದಾರೆ. ಇನ್ನೂ ಕೆಲ ಸಾಲುಗಳನ್ನು ಮಾರ್ಪಡಿಸಿದ್ದಾರೆ ಎಂದು ಸಿಎಂ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.

112 ನಿಮಿಷಗಳ ಸುದೀರ್ಘ ಭಾಷಣ ಮಾಡಿ ರಾಜ್ಯಪಾಲರು ನಿರ್ಗಮಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ, ಸಚಿವ ಸಂಪುಟ ಅನುಮೋದಿಸಿದ ಭಾಷಣದಲ್ಲಿನ ಕೆಲವು ಸಾಲುಗಳನ್ನು ರಾಜ್ಯಪಾಲರು ಕೈಬಿಟ್ಟಿದ್ದಾರೆ ಅಥವಾ ಬದಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಂತ್ರಿ ಮಂಡಲ ಅನುಮೋದಿಸಿದ ಅಧಿಕೃತ ನೀತಿ ಭಾಷಣವು ಹಾಗೆಯೇ ಉಳಿಯಬೇಕು ಎಂದು ಒತ್ತಿ ಹೇಳಿದ್ದಾರೆ.

ಒಕ್ಕೂಟ ವ್ಯವಸ್ಥೆಯ ತತ್ವಗಳಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರವು ರಾಜ್ಯದ ಮೇಲೆ ಆರ್ಥಿಕ ಒತ್ತಡ ಹೇರುತ್ತಿದೆ ಎಂದು ಹೇಳಲಾಗಿದ್ದ ಭಾಷಣದ 12ನೇ ಪ್ಯಾರಾವನ್ನು ರಾಜ್ಯಪಾಲರು ಓದಿಲ್ಲ. ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳನ್ನು ರಾಜ್ಯಪಾಲರು ದೀರ್ಘಕಾಲ ತಡೆಹಿಡಿದಿರುವ ಬಗ್ಗೆ ಮತ್ತು ಈ ವಿಷಯದಲ್ಲಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಕುರಿತಾದ 15ನೇ ಪ್ಯಾರಾವನ್ನು ಕೈಬಿಟ್ಟಿದ್ದಾರೆ ಮತ್ತು ತೆರಿಗೆ ಹಂಚಿಕೆಗೆ ಸಂಬಂಧಿಸಿದ ಭಾಗದಲ್ಲಿ “ಇದು ನನ್ನ ಸರ್ಕಾರದ ನಂಬಿಕೆ” ಎಂಬ ಸಾಲನ್ನು ರಾಜ್ಯಪಾಲರು ಸ್ವತಃ ಸೇರಿಸಿ ಓದಿದ್ದಾರೆ ಎಂದು ಸಿಎಂ ಆರೋಪ ಮಾಡಿದ್ದಾರೆ.

ರಾಜ್ಯಪಾಲರು ತೆರಳಿದ ನಂತರ, ಸಿಎಂ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರು ಕೈಬಿಟ್ಟ ಭಾಗಗಳನ್ನು ಸದನದಲ್ಲಿ ಓದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂವಿಧಾನದ ವಿಧಿ 176ರ ಪ್ರಕಾರ, ರಾಜ್ಯ ಸಚಿವ ಸಂಪುಟ ಅನುಮೋದಿಸಿದ ಭಾಷಣವನ್ನು ರಾಜ್ಯಪಾಲರು ಹಾಗೆಯೇ ಓದಬೇಕು ಎಂದು ಸಿಎಂ ಪ್ರತಿಪಾದಿಸಿದ್ದಾರೆ.

“ಮುಖ್ಯಮಂತ್ರಿ ಸೂಚಿಸಿರುವ ವಿಷಯವು ಬಹಳ ನಿರ್ಣಾಯಕವಾಗಿದೆ. ಸಂಪುಟ ಅನುಮೋದಿಸಿರುವ ವಿಷಯದಲ್ಲಿ ಬದಲಾವಣೆ ಮಾಡುವುದು ಮತ್ತು ಕೈಬಿಡುವುದು ಸಂಪ್ರದಾಯಕ್ಕೆ ವಿರುದ್ಧವಾಗಿದೆ. ಸಂಪುಟ ಅನುಮೋದಿತ ಭಾಷಣವನ್ನೇ ಸದನದ ಸದಸ್ಯರು ಮತ್ತು ಮಾಧ್ಯಮಗಳಿಗೆ ನೀಡಲಾಗುತ್ತದೆ” ಎಂದು ಹೇಳುವ ಮೂಲಕ ಸ್ಪೀಕರ್ ಎ.ಎನ್. ಶಂಸೀರ್ ಮುಖ್ಯಮಂತ್ರಿಯ ಮಾತನ್ನು ಬೆಂಬಲಿಸಿದ್ದಾರೆ.

“ಈ ರೀತಿಯ ಸಂದರ್ಭಗಳಲ್ಲಿ ರಾಜ್ಯಪಾಲರನ್ನು ಅವಮಾನಿಸುವ ರೀತಿಯೇ ತಮಿಳುನಾಡು ಮತ್ತು ಕೇರಳದಲ್ಲೂ ನಡೆಯುತ್ತಿದೆ” ಎಂದು ಗೋವಾ ಮಾಜಿ ರಾಜ್ಯಪಾಲ ಮತ್ತು ಹಿರಿಯ ಬಿಜೆಪಿ ನಾಯಕ ಪಿ.ಎಸ್. ಶ್ರೀಧರನ್ ಪಿಳ್ಳೈ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಘಟನೆಯು ಕೇಂದ್ರ-ರಾಜ್ಯ ಸಂಬಂಧಗಳು, ರಾಜ್ಯಪಾಲರ ಸಾಂವಿಧಾನಿಕ ಪಾತ್ರ ಮತ್ತು ಶಾಸಕಾಂಗ ಸಂಪ್ರದಾಯಗಳ ಕುರಿತು ಚರ್ಚೆಯನ್ನು ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...