Homeಮುಖಪುಟಕೇರಳ ರಾಜ್ಯಪಾಲರು ನೇರವಾಗಿ ರಾಜಕೀಯಕ್ಕೆ ಬರುವುದು ಸೂಕ್ತ: ಬೃಂದಾ ಕಾರಟ್

ಕೇರಳ ರಾಜ್ಯಪಾಲರು ನೇರವಾಗಿ ರಾಜಕೀಯಕ್ಕೆ ಬರುವುದು ಸೂಕ್ತ: ಬೃಂದಾ ಕಾರಟ್

- Advertisement -
- Advertisement -

‘ಅವರು 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಸ್ಪರ್ಧಿಸುವುದಕ್ಕೆ ಇಷ್ಟೆಲ್ಲಾ ಮಾಡುತ್ತಿದ್ದಾರೆ’ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಸಿಪಿಐ(ಎಂ) ಪಾಲಿಟ್ ಬ್ಯೂರೋ ಸದಸ್ಯೆ ಬೃಂದಾ ಕಾರಟ್ ಮಂಗಳವಾರ ವ್ಯಂಗ್ಯವಾಡಿದ್ದಾರೆ.

‘ಬಿಜೆಪಿಯ ಆಜ್ಞೆಯ ಮೇರೆಗೆ ರಾಜ್ಯಪಾಲರು ಪಿಣರಾಯಿ ವಿಜಯನ್ ಸರ್ಕಾರದ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುತ್ತಿದ್ದಾರೆ. ಖಾನ್ ಅವರು ಚುನಾವಣೆ ಮೂಲಕ ನೇರವಾಗಿ ರಾಜಕೀಯಕ್ಕೆ ಬರಬೇಕು’ ಎಂದು ಹೇಳಿದರು.

ವಿಶ್ವವಿದ್ಯಾಲಯದ ಮಸೂದೆಗಳು ಬಾಕಿ ಉಳಿದಿರುವ ಕುರಿತು ರಾಜ್ಯ ಸರ್ಕಾರದೊಂದಿಗೆ ದೀರ್ಘ ಕಾಲದಿಂದ ತಿಕ್ಕಾಟ ನಡೆಸುತ್ತಿರುವ ರಾಜ್ಯಪಾಲರ ವಿರುದ್ಧ ಸಿಪಿಐ (ಎಂ) ಮತ್ತು ಎಸ್ಎಫ್ಐ ವಾಗ್ದಾಳಿ ನಡೆಸಿವೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಅವರ ಸರ್ಕಾರವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿರುವ ಆರಿಫ್ ಮೊಹಮ್ಮದ್ ಖಾನ್, ‘ಎಡ ಸಂಘಟನೆಗಳ ಕಾರ್ಯಕರ್ತರಿಂದ ಬೆದರಿಕೆ ಇದೆ’ ಎಂದು ಹೇಳಿದ್ದಾರೆ.

‘ಗೌರವಾನ್ವಿತ ರಾಜ್ಯಪಾಲರು ನೇರವಾಗಿ ರಾಜಕೀಯಕ್ಕೆ ಬರಲು ತುಂಬಾ ಆಸಕ್ತಿ ಹೊಂದಿದ್ದರೆ, ಅವರು ಹಾಗೆ ಮಾಡಬೇಕು. ಏಕೆಂದರೆ, 2024 ರ ಲೋಕಸಭೆ ಚುನಾವಣೆಯನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಅದು ಅವರ ರಾಜಕೀಯ ತಿಳುವಳಿಕೆಯ ಭಾಗವಾಗಿರುತ್ತದೆ’ ಎಂದು ಕಾರಟ್ ಹೇಳಿದ್ದಾರೆ.

‘ಕೇರಳ ರಾಜ್ಯಪಾಲರು ನೇರವಾಗಿ ಚುನಾವಣಾ ರಾಜಕೀಯಕ್ಕೆ ಬರುವುದು ಹೆಚ್ಚು ಸೂಕ್ತವೆನಿಸುತ್ತದೆ. ಬಿಜೆಪಿಯಿಂದ ಟಿಕೆಟ್ ತೆಗೆದುಕೊಂಡು ಕೇರಳದ ಯಾವುದೇ ಕ್ಷೇತ್ರದಿಂದ ಹೋರಾಡಿ. ದೂಧ್ ಕಾ ದೂಧ್ ಪಾನಿ ಕಾ ಪಾನಿ ಹೋ ಜಾಯೇಗಾ’ (ಹಾಲಿಂದು ಹಾಲಿಗೆ, ನೀರಿಂದು ನೀರಿಗೆ ಆಗಿ ಹೋಗಲಿ) ಎಂದು ಅವರು ವ್ಯಂಗ್ಯವಾಡಿದರು.

‘ರಾಜ್ಯಪಾಲರು ದಿನನಿತ್ಯದ ಸಾರ್ವಜನಿಕ ಹೇಳಿಕೆಗಳನ್ನು ನೀಡುವ ಮೂಲಕ ತಮ್ಮದೇ ಹುದ್ದೆಗೆ ಅವಮಾನ ಮಾಡುವ ಬದಲು ಮುಖ್ಯಮಂತ್ರಿಯೊಂದಿಗಿನ ಭಿನ್ನಾಭಿಪ್ರಾಯವನ್ನು ನಿವಾರಿಸಬೇಕು. ಎಲ್ಲವೂ ಹಣಕಾಸಿನ ಮಸೂದೆಗಳಾಗಿರುವುದರಿಂದ ರಾಜ್ಯಪಾಲರ ಒಪ್ಪಿಗೆಯಿಲ್ಲದೆ ವಿಧಾನಸಭೆಯಲ್ಲಿ ಅಂಗೀಕರಿಸಲು ಸಾಧ್ಯವಿಲ್ಲ’ ಎಂದು ಅವರು ಪ್ರತಿಪಾದಿಸಿದರು.

ಕೇರಳ ವಿಧಾನಸಭೆ ಅಂಗೀಕರಿಸಿರುವ ಮಸೂದೆಗಳನ್ನು ತೆರವುಗೊಳಿಸದಿರುವುದು ಸೇರಿದಂತೆ ಹಲವು ವಿಷಯಗಳ ಕುರಿತು ರಾಜ್ಯಪಾಲ ಖಾನ್ ಅವರು ರಾಜ್ಯ ಸರ್ಕಾರದೊಂದಿಗೆ ಸಂಘರ್ಷ ನಡೆಸುತ್ತಿದ್ದಾರೆ.

ರಾಜ್ಯಪಾಲರ ಪ್ರತಿಕೃತಿ ದಹಿಸಿದ್ದ ಎಸ್ಎಫ್ಐ ಕಾರ್ಯಕರ್ತರು:

ರಾಜ್ಯಪಾಲರು ರಾಜ್ಯದ ಶೈಕ್ಷಣಿಕ ಕ್ಷೇತ್ರವನ್ನು ಕೇಸರೀಕರಣ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಎಸ್ಎಫ್ಐ, ಹೊಸ ವರ್ಷದ ಮುನ್ನಾದಿನದಂದು ಅವರ 30 ಅಡಿ ಎತ್ತರದ ಪ್ರತಿಕೃತಿಯನ್ನು ಕಡಲತೀರದಲ್ಲಿ ದಹಿಸಿದ್ದಾರೆ. ಘಟನೆ ನಂತರ ಕಣ್ಣೂರು ಪಟ್ಟಣ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಯ್ಯಂಬಲಂ ಬೀಚಿನಲ್ಲಿ ಭಾನುವಾರ ಸಂಜೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಬೃಹತ್ ಪ್ರತಿಕೃತಿಯನ್ನು ಪೆಟ್ರೋಲ್ ಬಳಸಿ ದಹಿಸಿದ ಅಪಾಯಕಾರಿ ಕೃತ್ಯಕ್ಕಾಗಿ, ಎಸ್ಎಫ್ಐ ರಾಜ್ಯ ಅಧ್ಯಕ್ಷೆ ಕೆ. ಅನುಶ್ರೀ ಮತ್ತು ಇತರ ಎಂಟು ಜನರ ವಿರುದ್ಧ ಕೇರಳ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

143 (ಕಾನೂನುಬಾಹಿರ ಸಭೆ), 147 (ಗಲಭೆ), ಮತ್ತು 285 (ಬೆಂಕಿ ಅಥವಾ ದಹನಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ನಡವಳಿಕೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಸ್ಎಫ್ಐ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಇದನ್ನೂ ಓದಿ; ಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...