Homeಮುಖಪುಟ'ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ' ಆಚರಣೆಗೆ ವಿವಿಗಳಿಗೆ ಕೇರಳ ರಾಜ್ಯಪಾಲರ ಸೂಚನೆ: ಹೊಸ ವಿವಾದ ಸೃಷ್ಟಿ

‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಣೆಗೆ ವಿವಿಗಳಿಗೆ ಕೇರಳ ರಾಜ್ಯಪಾಲರ ಸೂಚನೆ: ಹೊಸ ವಿವಾದ ಸೃಷ್ಟಿ

- Advertisement -
- Advertisement -

ಆಗಸ್ಟ್ 14ರಂದು ‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಿಸಲು ಎಲ್ಲಾ ವಿಶ್ವ ವಿದ್ಯಾಲಯಗಳ ಉಪ ಕುಲಪತಿಗಳಿಗೆ ನಿರ್ದೇಶಿಸುವ ಮೂಲಕ ಕೇರಳದ ರಾಜ್ಯಪಾಲ ಹಾಗೂ ವಿಶ್ವ ವಿದ್ಯಾಲಯಗಳ ಕುಲಪತಿ ರಾಜೇಂದ್ರ ಅರ್ಲೇಕರ್ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಅವರು, ಇಂತಹ ಸೂಚನೆ ನೀಡುವ ರಾಜ್ಯಪಾಲರ ಅಧಿಕಾರವನ್ನು ಪ್ರಶ್ನಿಸಿದ್ದಾರೆ.

ರಾಜಭವನದಿಂದ ವಿಶ್ವವಿದ್ಯಾಲಯಗಳಿಗೆ ನೀಡಲಾಗಿರುವ ಸುತ್ತೋಲೆಯಲ್ಲಿ, ಕ್ಯಾಂಪಸ್‌ಗಳಲ್ಲಿ ವಿಭಜನೆಯ ಭಯಾನಕತೆಯನ್ನು ಸ್ಮರಿಸುವ ಸೆಮಿನಾರ್, ನಾಟಕಗಳನ್ನು ಆಯೋಜಿಸುವಂತೆ ಮತ್ತು ಉಪಕುಲಪತಿಗಳು ಆ ದಿನವನ್ನು ಸೂಕ್ತ ರೀತಿಯಲ್ಲಿ ಆಚರಿಸಲು ಕ್ರಿಯಾ ಯೋಜನೆಗಳನ್ನು ರೂಪಿಸುವಂತೆ ಸೂಚಿಸಲಾಗಿದೆ

ರಾಜಭವನದ ಸುತ್ತೋಲೆಯು ಉಪಕುಲಪತಿಗಳು ಆ ದಿನವನ್ನು ಸೂಕ್ತ ರೀತಿಯಲ್ಲಿ ಆಚರಿಸಲು ಕ್ರಿಯಾ ಯೋಜನೆಗಳನ್ನು ರೂಪಿಸುವಂತೆ ನಿರ್ದೇಶಿಸಿದೆ.

ಇಂತಹ ಆಚರಣೆಯ ಚರ್ಚೆಯನ್ನು 2021ರಲ್ಲಿ ಮೊದಲು ಹುಟ್ಟು ಹಾಕಿದ್ದು ಪ್ರಧಾನಿ ನರೇಂದ್ರ ಮೋದಿ, ಆ ಬಳಿಕ ಕೇಂದ್ರ ಸರ್ಕಾರ ಈ ದಿನವನ್ನು ಆಚರಿಸಿಕೊಂಡು ಬರುತ್ತಿದೆ.

ರಾಜ್ಯಪಾಲರ ನಿರ್ದೇಶನದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಸಂಘ ಪರಿವಾರದ ವಿಭಜನಕಾರಿ ರಾಜಕೀಯ ಕಾರ್ಯಸೂಚಿಗಳಿಗೆ ಹೊಂದಿಕೆಯಾಗುವಂತೆ ರಾಜಭವನದಿಂದ ಬರುತ್ತಿರುವ ಆದೇಶಗಳು ಸಂವಿಧಾನಬಾಹಿರ” ಎಂದು ಹೇಳಿದ್ದಾರೆ.

ರಾಜ್ಯಪಾಲರು ಉಪಕುಲಪತಿಗಳಿಗೆ ಹೊರಡಿಸಿರುವ ಸುತ್ತೋಲೆ ಆಕ್ಷೇಪಾರ್ಹ. ನಮ್ಮ ವಿಶ್ವವಿದ್ಯಾಲಯಗಳು ಅಂತಹ ಕಾರ್ಯಸೂಚಿಯನ್ನು ಜಾರಿಗೆ ತರುವ ವೇದಿಕೆಗಳಾಗಲು ನಾವು ಅನುಮತಿಸುವುದಿಲ್ಲ” ಎಂದಿದ್ದಾರೆ.

“ರಾಜ್ಯ ಸರ್ಕಾರವನ್ನು ಬದಿಗಿಟ್ಟು ‘ವಿಭಜನಾ ಭಯಾನಕ ದಿನ’ವನ್ನು ಆಚರಿಸಲು ಉಪಕುಲಪತಿಗಳಿಗೆ ಸೂಚಿಸಲು ರಾಜ್ಯಪಾಲರಿಗೆ ಯಾವ ಅಧಿಕಾರವಿದೆ? ರಾಜ್ಯ ಸರ್ಕಾರಕ್ಕೆ ಸಮಾನಾಂತರವಾಗಿ ರಾಜ್ಯಪಾಲರು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಮತ್ತು ಕಾರ್ಯನಿರ್ವಹಿಸುವುದು ಅಸಂವಿಧಾನಿಕವಾಗಿದೆ” ಎಂದು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ರೀತಿಯ ಆದೇಶಗಳನ್ನು ನೀಡುವ ಮೂಲಕ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಮೂಲಭೂತವಾಗಿ ತಮ್ಮನ್ನು ಆರೆಸ್ಸೆಸ್‌ನ ವಿಭಜಕ ರಾಜಕೀಯದ ವಕ್ತಾರರೆಂದು ಘೋಷಿಸಿಕೊಂಡಿದ್ದಾರೆ ಎಂದು ಸತೀಶನ್ ಹೇಳಿದ್ದಾರೆ.

ಜನರಿಂದ ಆಯ್ಕೆಯಾದ ಸಚಿವ ಸಂಪುಟದ ಅನುಮೋದನೆಯಿಲ್ಲದೆ ರಾಜ್ಯಪಾಲರು ಸಮಾನಾಂತರ ಆಡಳಿತ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವಂತೆ ವರ್ತಿಸುತ್ತಿದ್ದಾರೆ ಎಂದು ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹೇಳಿದ್ದಾರೆ.

“ಅವರು ಯಾವ ಅಧಿಕಾರದ ಅಡಿಯಲ್ಲಿ ಅಂತಹ ಸೂಚನೆ ನೀಡಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ. ಅವರಿಗೆ ಅಂತಹ ಅಧಿಕಾರವಿಲ್ಲ. ರಾಜ್ಯಪಾಲರ ಅಧಿಕಾರಗಳು ಸೀಮಿತವಾಗಿವೆ. ನ್ಯಾಯಾಲಯಗಳು ಈಗಾಗಲೇ ಸ್ಪಷ್ಟಪಡಿಸಿದಂತೆ ಇದು ದೈನಂದಿನ ಆಡಳಿತಕ್ಕೆ ಸಂಬಂಧಿಸಿದ ವಿಷಯವಲ್ಲ” ಎಂದು ಶಿವನ್‌ಕುಟ್ಟಿ ಕಿಡಿಕಾರಿದ್ದಾರೆ.

ಭಾರತದ ಸ್ವಾತಂತ್ರ್ಯ ದಿನವು ಸಾಮ್ರಾಜ್ಯಶಾಹಿ ವಿರೋಧಿ ಹೋರಾಟ ಮತ್ತು ಬ್ರಿಟಿಷರು ನಡೆಸಿದ ಕ್ರೌರ್ಯಗಳನ್ನು ನೆನಪಿಸುತ್ತದೆ ಎಂದು ಎಂದಿರುವ ಸಿಎಂ, ಪಿಣರಾಯಿ ವಿಜಯನ್, “ನಾವು ಸ್ವಾತಂತ್ರ್ಯದ 78ನೇ ವರ್ಷವನ್ನು ಆಚರಿಸುತ್ತಿರುವಾಗ, ಆಗಸ್ಟ್ 15ರ ಹೊರತಾಗಿ ಮತ್ತೊಂದು ದಿನವನ್ನು ಆಚರಿಸುವ ಕಲ್ಪನೆಯು ಸಂಘ ಪರಿವಾರದ ಮನಸ್ಸಿನಿಂದ ಹುಟ್ಟಿಕೊಂಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸದೆ ಬ್ರಿಟಿಷ್ ರಾಜ್‌ಗೆ ಸೇವೆ ಸಲ್ಲಿಸಿದವರು ಸ್ವಾತಂತ್ರ್ಯ ದಿನವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ವಿದೇಶಿ ಶಕ್ತಿಗಳಿಗಿಂತ ಆಂತರಿಕ ಶತ್ರುಗಳ ವಿರುದ್ಧ ಹೋರಾಡಲು ಶಕ್ತಿಯನ್ನು ವ್ಯಯಿಸಿದವರು, ಈಗ ವಿಭಜನೆಯ ಭಯಾನಕತೆಯನ್ನು ಸ್ಮರಿಸುವ ದಿನವನ್ನು ಆಚರಿಸಲು ಮುಂದಾಗಿದ್ದಾರೆ. ಇದರಿಂದಾಗಿ ಸ್ವಾತಂತ್ರ್ಯ ದಿನದ ಮಹತ್ವ ಕಡಿಮೆಯಾಗುತ್ತದೆ” ಎಂದು ಹೇಳಿದ್ದಾರೆ.

ಬ್ರಿಟಿಷ್ ವೈಸ್ರಾಯ್ ಅವರನ್ನು ಭೇಟಿಯಾಗಿ ತಾವು ಬ್ರಿಟಿಷ್ ರಾಜ್ ವಿರುದ್ಧ ಇಲ್ಲ ಎಂದು ಬೆಂಬಲ ವ್ಯಕ್ತಪಡಿಸಿದವರಂತೆಯೇ ಸಂಘ ಪರಿವಾರವೂ ಕಾರ್ಯನಿರ್ವಹಿಸುತ್ತಿದೆ. ಭಾರತದ ವೈವಿಧ್ಯಮಯ ಸಮುದಾಯಗಳ ಸಂಯುಕ್ತ ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದಿಂದ ದೂರ ಸರಿದವರೇ ಈಗ ವಿಭಜನೆಯ ಭಯದ ಬಗ್ಗೆ ಚರ್ಚಿಸುತ್ತಿದ್ದಾರೆ. ಭಾರತದ ವಿಭಜನೆ ಮತ್ತು ನಂತರದ ಹಿಂಸಾಚಾರವು ಬ್ರಿಟಿಷರ ಒಡೆದು ಆಳುವ ನೀತಿಯ ಪರಿಣಾಮಗಳಾಗಿದ್ದು, ಹಿಂದಿನ ಬ್ರಿಟಿಷ್ ನಿಷ್ಠಾವಂತರು ಇದನ್ನು ಮರೆತಿದ್ದಾರೆ ಎಂದು ತೋರುತ್ತದೆ. ವಿಭಜನೆಯ ಸಮಯದಲ್ಲಿ ಹಿಂಸಾಚಾರವನ್ನು ಹತ್ತಿಕ್ಕಲು ಪ್ರಯತ್ನಿಸಿದ ಮಹಾತ್ಮ ಗಾಂಧಿಯವರಂತಹ ನಾಯಕರನ್ನು ಸಂಘ ಪರಿವಾರವು ಅಪಹಾಸ್ಯ ಮಾಡಿತು ಎಂದು ವಿಜಯನ್ ಕಿಡಿಕಾರಿದ್ದಾರೆ.

ಹಣ ಪತ್ತೆ ಪ್ರಕರಣ: ನ್ಯಾ.ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಲೋಕಸಭೆ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...