Homeಮುಖಪುಟ'ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ' ಆಚರಣೆಗೆ ವಿವಿಗಳಿಗೆ ಕೇರಳ ರಾಜ್ಯಪಾಲರ ಸೂಚನೆ: ಹೊಸ ವಿವಾದ ಸೃಷ್ಟಿ

‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಣೆಗೆ ವಿವಿಗಳಿಗೆ ಕೇರಳ ರಾಜ್ಯಪಾಲರ ಸೂಚನೆ: ಹೊಸ ವಿವಾದ ಸೃಷ್ಟಿ

- Advertisement -
- Advertisement -

ಆಗಸ್ಟ್ 14ರಂದು ‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಿಸಲು ಎಲ್ಲಾ ವಿಶ್ವ ವಿದ್ಯಾಲಯಗಳ ಉಪ ಕುಲಪತಿಗಳಿಗೆ ನಿರ್ದೇಶಿಸುವ ಮೂಲಕ ಕೇರಳದ ರಾಜ್ಯಪಾಲ ಹಾಗೂ ವಿಶ್ವ ವಿದ್ಯಾಲಯಗಳ ಕುಲಪತಿ ರಾಜೇಂದ್ರ ಅರ್ಲೇಕರ್ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಅವರು, ಇಂತಹ ಸೂಚನೆ ನೀಡುವ ರಾಜ್ಯಪಾಲರ ಅಧಿಕಾರವನ್ನು ಪ್ರಶ್ನಿಸಿದ್ದಾರೆ.

ರಾಜಭವನದಿಂದ ವಿಶ್ವವಿದ್ಯಾಲಯಗಳಿಗೆ ನೀಡಲಾಗಿರುವ ಸುತ್ತೋಲೆಯಲ್ಲಿ, ಕ್ಯಾಂಪಸ್‌ಗಳಲ್ಲಿ ವಿಭಜನೆಯ ಭಯಾನಕತೆಯನ್ನು ಸ್ಮರಿಸುವ ಸೆಮಿನಾರ್, ನಾಟಕಗಳನ್ನು ಆಯೋಜಿಸುವಂತೆ ಮತ್ತು ಉಪಕುಲಪತಿಗಳು ಆ ದಿನವನ್ನು ಸೂಕ್ತ ರೀತಿಯಲ್ಲಿ ಆಚರಿಸಲು ಕ್ರಿಯಾ ಯೋಜನೆಗಳನ್ನು ರೂಪಿಸುವಂತೆ ಸೂಚಿಸಲಾಗಿದೆ

ರಾಜಭವನದ ಸುತ್ತೋಲೆಯು ಉಪಕುಲಪತಿಗಳು ಆ ದಿನವನ್ನು ಸೂಕ್ತ ರೀತಿಯಲ್ಲಿ ಆಚರಿಸಲು ಕ್ರಿಯಾ ಯೋಜನೆಗಳನ್ನು ರೂಪಿಸುವಂತೆ ನಿರ್ದೇಶಿಸಿದೆ.

ಇಂತಹ ಆಚರಣೆಯ ಚರ್ಚೆಯನ್ನು 2021ರಲ್ಲಿ ಮೊದಲು ಹುಟ್ಟು ಹಾಕಿದ್ದು ಪ್ರಧಾನಿ ನರೇಂದ್ರ ಮೋದಿ, ಆ ಬಳಿಕ ಕೇಂದ್ರ ಸರ್ಕಾರ ಈ ದಿನವನ್ನು ಆಚರಿಸಿಕೊಂಡು ಬರುತ್ತಿದೆ.

ರಾಜ್ಯಪಾಲರ ನಿರ್ದೇಶನದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಸಂಘ ಪರಿವಾರದ ವಿಭಜನಕಾರಿ ರಾಜಕೀಯ ಕಾರ್ಯಸೂಚಿಗಳಿಗೆ ಹೊಂದಿಕೆಯಾಗುವಂತೆ ರಾಜಭವನದಿಂದ ಬರುತ್ತಿರುವ ಆದೇಶಗಳು ಸಂವಿಧಾನಬಾಹಿರ” ಎಂದು ಹೇಳಿದ್ದಾರೆ.

ರಾಜ್ಯಪಾಲರು ಉಪಕುಲಪತಿಗಳಿಗೆ ಹೊರಡಿಸಿರುವ ಸುತ್ತೋಲೆ ಆಕ್ಷೇಪಾರ್ಹ. ನಮ್ಮ ವಿಶ್ವವಿದ್ಯಾಲಯಗಳು ಅಂತಹ ಕಾರ್ಯಸೂಚಿಯನ್ನು ಜಾರಿಗೆ ತರುವ ವೇದಿಕೆಗಳಾಗಲು ನಾವು ಅನುಮತಿಸುವುದಿಲ್ಲ” ಎಂದಿದ್ದಾರೆ.

“ರಾಜ್ಯ ಸರ್ಕಾರವನ್ನು ಬದಿಗಿಟ್ಟು ‘ವಿಭಜನಾ ಭಯಾನಕ ದಿನ’ವನ್ನು ಆಚರಿಸಲು ಉಪಕುಲಪತಿಗಳಿಗೆ ಸೂಚಿಸಲು ರಾಜ್ಯಪಾಲರಿಗೆ ಯಾವ ಅಧಿಕಾರವಿದೆ? ರಾಜ್ಯ ಸರ್ಕಾರಕ್ಕೆ ಸಮಾನಾಂತರವಾಗಿ ರಾಜ್ಯಪಾಲರು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಮತ್ತು ಕಾರ್ಯನಿರ್ವಹಿಸುವುದು ಅಸಂವಿಧಾನಿಕವಾಗಿದೆ” ಎಂದು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ರೀತಿಯ ಆದೇಶಗಳನ್ನು ನೀಡುವ ಮೂಲಕ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಮೂಲಭೂತವಾಗಿ ತಮ್ಮನ್ನು ಆರೆಸ್ಸೆಸ್‌ನ ವಿಭಜಕ ರಾಜಕೀಯದ ವಕ್ತಾರರೆಂದು ಘೋಷಿಸಿಕೊಂಡಿದ್ದಾರೆ ಎಂದು ಸತೀಶನ್ ಹೇಳಿದ್ದಾರೆ.

ಜನರಿಂದ ಆಯ್ಕೆಯಾದ ಸಚಿವ ಸಂಪುಟದ ಅನುಮೋದನೆಯಿಲ್ಲದೆ ರಾಜ್ಯಪಾಲರು ಸಮಾನಾಂತರ ಆಡಳಿತ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವಂತೆ ವರ್ತಿಸುತ್ತಿದ್ದಾರೆ ಎಂದು ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹೇಳಿದ್ದಾರೆ.

“ಅವರು ಯಾವ ಅಧಿಕಾರದ ಅಡಿಯಲ್ಲಿ ಅಂತಹ ಸೂಚನೆ ನೀಡಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ. ಅವರಿಗೆ ಅಂತಹ ಅಧಿಕಾರವಿಲ್ಲ. ರಾಜ್ಯಪಾಲರ ಅಧಿಕಾರಗಳು ಸೀಮಿತವಾಗಿವೆ. ನ್ಯಾಯಾಲಯಗಳು ಈಗಾಗಲೇ ಸ್ಪಷ್ಟಪಡಿಸಿದಂತೆ ಇದು ದೈನಂದಿನ ಆಡಳಿತಕ್ಕೆ ಸಂಬಂಧಿಸಿದ ವಿಷಯವಲ್ಲ” ಎಂದು ಶಿವನ್‌ಕುಟ್ಟಿ ಕಿಡಿಕಾರಿದ್ದಾರೆ.

ಭಾರತದ ಸ್ವಾತಂತ್ರ್ಯ ದಿನವು ಸಾಮ್ರಾಜ್ಯಶಾಹಿ ವಿರೋಧಿ ಹೋರಾಟ ಮತ್ತು ಬ್ರಿಟಿಷರು ನಡೆಸಿದ ಕ್ರೌರ್ಯಗಳನ್ನು ನೆನಪಿಸುತ್ತದೆ ಎಂದು ಎಂದಿರುವ ಸಿಎಂ, ಪಿಣರಾಯಿ ವಿಜಯನ್, “ನಾವು ಸ್ವಾತಂತ್ರ್ಯದ 78ನೇ ವರ್ಷವನ್ನು ಆಚರಿಸುತ್ತಿರುವಾಗ, ಆಗಸ್ಟ್ 15ರ ಹೊರತಾಗಿ ಮತ್ತೊಂದು ದಿನವನ್ನು ಆಚರಿಸುವ ಕಲ್ಪನೆಯು ಸಂಘ ಪರಿವಾರದ ಮನಸ್ಸಿನಿಂದ ಹುಟ್ಟಿಕೊಂಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸದೆ ಬ್ರಿಟಿಷ್ ರಾಜ್‌ಗೆ ಸೇವೆ ಸಲ್ಲಿಸಿದವರು ಸ್ವಾತಂತ್ರ್ಯ ದಿನವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ವಿದೇಶಿ ಶಕ್ತಿಗಳಿಗಿಂತ ಆಂತರಿಕ ಶತ್ರುಗಳ ವಿರುದ್ಧ ಹೋರಾಡಲು ಶಕ್ತಿಯನ್ನು ವ್ಯಯಿಸಿದವರು, ಈಗ ವಿಭಜನೆಯ ಭಯಾನಕತೆಯನ್ನು ಸ್ಮರಿಸುವ ದಿನವನ್ನು ಆಚರಿಸಲು ಮುಂದಾಗಿದ್ದಾರೆ. ಇದರಿಂದಾಗಿ ಸ್ವಾತಂತ್ರ್ಯ ದಿನದ ಮಹತ್ವ ಕಡಿಮೆಯಾಗುತ್ತದೆ” ಎಂದು ಹೇಳಿದ್ದಾರೆ.

ಬ್ರಿಟಿಷ್ ವೈಸ್ರಾಯ್ ಅವರನ್ನು ಭೇಟಿಯಾಗಿ ತಾವು ಬ್ರಿಟಿಷ್ ರಾಜ್ ವಿರುದ್ಧ ಇಲ್ಲ ಎಂದು ಬೆಂಬಲ ವ್ಯಕ್ತಪಡಿಸಿದವರಂತೆಯೇ ಸಂಘ ಪರಿವಾರವೂ ಕಾರ್ಯನಿರ್ವಹಿಸುತ್ತಿದೆ. ಭಾರತದ ವೈವಿಧ್ಯಮಯ ಸಮುದಾಯಗಳ ಸಂಯುಕ್ತ ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದಿಂದ ದೂರ ಸರಿದವರೇ ಈಗ ವಿಭಜನೆಯ ಭಯದ ಬಗ್ಗೆ ಚರ್ಚಿಸುತ್ತಿದ್ದಾರೆ. ಭಾರತದ ವಿಭಜನೆ ಮತ್ತು ನಂತರದ ಹಿಂಸಾಚಾರವು ಬ್ರಿಟಿಷರ ಒಡೆದು ಆಳುವ ನೀತಿಯ ಪರಿಣಾಮಗಳಾಗಿದ್ದು, ಹಿಂದಿನ ಬ್ರಿಟಿಷ್ ನಿಷ್ಠಾವಂತರು ಇದನ್ನು ಮರೆತಿದ್ದಾರೆ ಎಂದು ತೋರುತ್ತದೆ. ವಿಭಜನೆಯ ಸಮಯದಲ್ಲಿ ಹಿಂಸಾಚಾರವನ್ನು ಹತ್ತಿಕ್ಕಲು ಪ್ರಯತ್ನಿಸಿದ ಮಹಾತ್ಮ ಗಾಂಧಿಯವರಂತಹ ನಾಯಕರನ್ನು ಸಂಘ ಪರಿವಾರವು ಅಪಹಾಸ್ಯ ಮಾಡಿತು ಎಂದು ವಿಜಯನ್ ಕಿಡಿಕಾರಿದ್ದಾರೆ.

ಹಣ ಪತ್ತೆ ಪ್ರಕರಣ: ನ್ಯಾ.ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಲೋಕಸಭೆ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...