Homeಮುಖಪುಟ'ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ' ಆಚರಣೆಗೆ ವಿವಿಗಳಿಗೆ ಕೇರಳ ರಾಜ್ಯಪಾಲರ ಸೂಚನೆ: ಹೊಸ ವಿವಾದ ಸೃಷ್ಟಿ

‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಣೆಗೆ ವಿವಿಗಳಿಗೆ ಕೇರಳ ರಾಜ್ಯಪಾಲರ ಸೂಚನೆ: ಹೊಸ ವಿವಾದ ಸೃಷ್ಟಿ

- Advertisement -
- Advertisement -

ಆಗಸ್ಟ್ 14ರಂದು ‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಿಸಲು ಎಲ್ಲಾ ವಿಶ್ವ ವಿದ್ಯಾಲಯಗಳ ಉಪ ಕುಲಪತಿಗಳಿಗೆ ನಿರ್ದೇಶಿಸುವ ಮೂಲಕ ಕೇರಳದ ರಾಜ್ಯಪಾಲ ಹಾಗೂ ವಿಶ್ವ ವಿದ್ಯಾಲಯಗಳ ಕುಲಪತಿ ರಾಜೇಂದ್ರ ಅರ್ಲೇಕರ್ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಅವರು, ಇಂತಹ ಸೂಚನೆ ನೀಡುವ ರಾಜ್ಯಪಾಲರ ಅಧಿಕಾರವನ್ನು ಪ್ರಶ್ನಿಸಿದ್ದಾರೆ.

ರಾಜಭವನದಿಂದ ವಿಶ್ವವಿದ್ಯಾಲಯಗಳಿಗೆ ನೀಡಲಾಗಿರುವ ಸುತ್ತೋಲೆಯಲ್ಲಿ, ಕ್ಯಾಂಪಸ್‌ಗಳಲ್ಲಿ ವಿಭಜನೆಯ ಭಯಾನಕತೆಯನ್ನು ಸ್ಮರಿಸುವ ಸೆಮಿನಾರ್, ನಾಟಕಗಳನ್ನು ಆಯೋಜಿಸುವಂತೆ ಮತ್ತು ಉಪಕುಲಪತಿಗಳು ಆ ದಿನವನ್ನು ಸೂಕ್ತ ರೀತಿಯಲ್ಲಿ ಆಚರಿಸಲು ಕ್ರಿಯಾ ಯೋಜನೆಗಳನ್ನು ರೂಪಿಸುವಂತೆ ಸೂಚಿಸಲಾಗಿದೆ

ರಾಜಭವನದ ಸುತ್ತೋಲೆಯು ಉಪಕುಲಪತಿಗಳು ಆ ದಿನವನ್ನು ಸೂಕ್ತ ರೀತಿಯಲ್ಲಿ ಆಚರಿಸಲು ಕ್ರಿಯಾ ಯೋಜನೆಗಳನ್ನು ರೂಪಿಸುವಂತೆ ನಿರ್ದೇಶಿಸಿದೆ.

ಇಂತಹ ಆಚರಣೆಯ ಚರ್ಚೆಯನ್ನು 2021ರಲ್ಲಿ ಮೊದಲು ಹುಟ್ಟು ಹಾಕಿದ್ದು ಪ್ರಧಾನಿ ನರೇಂದ್ರ ಮೋದಿ, ಆ ಬಳಿಕ ಕೇಂದ್ರ ಸರ್ಕಾರ ಈ ದಿನವನ್ನು ಆಚರಿಸಿಕೊಂಡು ಬರುತ್ತಿದೆ.

ರಾಜ್ಯಪಾಲರ ನಿರ್ದೇಶನದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಸಂಘ ಪರಿವಾರದ ವಿಭಜನಕಾರಿ ರಾಜಕೀಯ ಕಾರ್ಯಸೂಚಿಗಳಿಗೆ ಹೊಂದಿಕೆಯಾಗುವಂತೆ ರಾಜಭವನದಿಂದ ಬರುತ್ತಿರುವ ಆದೇಶಗಳು ಸಂವಿಧಾನಬಾಹಿರ” ಎಂದು ಹೇಳಿದ್ದಾರೆ.

ರಾಜ್ಯಪಾಲರು ಉಪಕುಲಪತಿಗಳಿಗೆ ಹೊರಡಿಸಿರುವ ಸುತ್ತೋಲೆ ಆಕ್ಷೇಪಾರ್ಹ. ನಮ್ಮ ವಿಶ್ವವಿದ್ಯಾಲಯಗಳು ಅಂತಹ ಕಾರ್ಯಸೂಚಿಯನ್ನು ಜಾರಿಗೆ ತರುವ ವೇದಿಕೆಗಳಾಗಲು ನಾವು ಅನುಮತಿಸುವುದಿಲ್ಲ” ಎಂದಿದ್ದಾರೆ.

“ರಾಜ್ಯ ಸರ್ಕಾರವನ್ನು ಬದಿಗಿಟ್ಟು ‘ವಿಭಜನಾ ಭಯಾನಕ ದಿನ’ವನ್ನು ಆಚರಿಸಲು ಉಪಕುಲಪತಿಗಳಿಗೆ ಸೂಚಿಸಲು ರಾಜ್ಯಪಾಲರಿಗೆ ಯಾವ ಅಧಿಕಾರವಿದೆ? ರಾಜ್ಯ ಸರ್ಕಾರಕ್ಕೆ ಸಮಾನಾಂತರವಾಗಿ ರಾಜ್ಯಪಾಲರು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಮತ್ತು ಕಾರ್ಯನಿರ್ವಹಿಸುವುದು ಅಸಂವಿಧಾನಿಕವಾಗಿದೆ” ಎಂದು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ರೀತಿಯ ಆದೇಶಗಳನ್ನು ನೀಡುವ ಮೂಲಕ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಮೂಲಭೂತವಾಗಿ ತಮ್ಮನ್ನು ಆರೆಸ್ಸೆಸ್‌ನ ವಿಭಜಕ ರಾಜಕೀಯದ ವಕ್ತಾರರೆಂದು ಘೋಷಿಸಿಕೊಂಡಿದ್ದಾರೆ ಎಂದು ಸತೀಶನ್ ಹೇಳಿದ್ದಾರೆ.

ಜನರಿಂದ ಆಯ್ಕೆಯಾದ ಸಚಿವ ಸಂಪುಟದ ಅನುಮೋದನೆಯಿಲ್ಲದೆ ರಾಜ್ಯಪಾಲರು ಸಮಾನಾಂತರ ಆಡಳಿತ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವಂತೆ ವರ್ತಿಸುತ್ತಿದ್ದಾರೆ ಎಂದು ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹೇಳಿದ್ದಾರೆ.

“ಅವರು ಯಾವ ಅಧಿಕಾರದ ಅಡಿಯಲ್ಲಿ ಅಂತಹ ಸೂಚನೆ ನೀಡಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ. ಅವರಿಗೆ ಅಂತಹ ಅಧಿಕಾರವಿಲ್ಲ. ರಾಜ್ಯಪಾಲರ ಅಧಿಕಾರಗಳು ಸೀಮಿತವಾಗಿವೆ. ನ್ಯಾಯಾಲಯಗಳು ಈಗಾಗಲೇ ಸ್ಪಷ್ಟಪಡಿಸಿದಂತೆ ಇದು ದೈನಂದಿನ ಆಡಳಿತಕ್ಕೆ ಸಂಬಂಧಿಸಿದ ವಿಷಯವಲ್ಲ” ಎಂದು ಶಿವನ್‌ಕುಟ್ಟಿ ಕಿಡಿಕಾರಿದ್ದಾರೆ.

ಭಾರತದ ಸ್ವಾತಂತ್ರ್ಯ ದಿನವು ಸಾಮ್ರಾಜ್ಯಶಾಹಿ ವಿರೋಧಿ ಹೋರಾಟ ಮತ್ತು ಬ್ರಿಟಿಷರು ನಡೆಸಿದ ಕ್ರೌರ್ಯಗಳನ್ನು ನೆನಪಿಸುತ್ತದೆ ಎಂದು ಎಂದಿರುವ ಸಿಎಂ, ಪಿಣರಾಯಿ ವಿಜಯನ್, “ನಾವು ಸ್ವಾತಂತ್ರ್ಯದ 78ನೇ ವರ್ಷವನ್ನು ಆಚರಿಸುತ್ತಿರುವಾಗ, ಆಗಸ್ಟ್ 15ರ ಹೊರತಾಗಿ ಮತ್ತೊಂದು ದಿನವನ್ನು ಆಚರಿಸುವ ಕಲ್ಪನೆಯು ಸಂಘ ಪರಿವಾರದ ಮನಸ್ಸಿನಿಂದ ಹುಟ್ಟಿಕೊಂಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸದೆ ಬ್ರಿಟಿಷ್ ರಾಜ್‌ಗೆ ಸೇವೆ ಸಲ್ಲಿಸಿದವರು ಸ್ವಾತಂತ್ರ್ಯ ದಿನವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ವಿದೇಶಿ ಶಕ್ತಿಗಳಿಗಿಂತ ಆಂತರಿಕ ಶತ್ರುಗಳ ವಿರುದ್ಧ ಹೋರಾಡಲು ಶಕ್ತಿಯನ್ನು ವ್ಯಯಿಸಿದವರು, ಈಗ ವಿಭಜನೆಯ ಭಯಾನಕತೆಯನ್ನು ಸ್ಮರಿಸುವ ದಿನವನ್ನು ಆಚರಿಸಲು ಮುಂದಾಗಿದ್ದಾರೆ. ಇದರಿಂದಾಗಿ ಸ್ವಾತಂತ್ರ್ಯ ದಿನದ ಮಹತ್ವ ಕಡಿಮೆಯಾಗುತ್ತದೆ” ಎಂದು ಹೇಳಿದ್ದಾರೆ.

ಬ್ರಿಟಿಷ್ ವೈಸ್ರಾಯ್ ಅವರನ್ನು ಭೇಟಿಯಾಗಿ ತಾವು ಬ್ರಿಟಿಷ್ ರಾಜ್ ವಿರುದ್ಧ ಇಲ್ಲ ಎಂದು ಬೆಂಬಲ ವ್ಯಕ್ತಪಡಿಸಿದವರಂತೆಯೇ ಸಂಘ ಪರಿವಾರವೂ ಕಾರ್ಯನಿರ್ವಹಿಸುತ್ತಿದೆ. ಭಾರತದ ವೈವಿಧ್ಯಮಯ ಸಮುದಾಯಗಳ ಸಂಯುಕ್ತ ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದಿಂದ ದೂರ ಸರಿದವರೇ ಈಗ ವಿಭಜನೆಯ ಭಯದ ಬಗ್ಗೆ ಚರ್ಚಿಸುತ್ತಿದ್ದಾರೆ. ಭಾರತದ ವಿಭಜನೆ ಮತ್ತು ನಂತರದ ಹಿಂಸಾಚಾರವು ಬ್ರಿಟಿಷರ ಒಡೆದು ಆಳುವ ನೀತಿಯ ಪರಿಣಾಮಗಳಾಗಿದ್ದು, ಹಿಂದಿನ ಬ್ರಿಟಿಷ್ ನಿಷ್ಠಾವಂತರು ಇದನ್ನು ಮರೆತಿದ್ದಾರೆ ಎಂದು ತೋರುತ್ತದೆ. ವಿಭಜನೆಯ ಸಮಯದಲ್ಲಿ ಹಿಂಸಾಚಾರವನ್ನು ಹತ್ತಿಕ್ಕಲು ಪ್ರಯತ್ನಿಸಿದ ಮಹಾತ್ಮ ಗಾಂಧಿಯವರಂತಹ ನಾಯಕರನ್ನು ಸಂಘ ಪರಿವಾರವು ಅಪಹಾಸ್ಯ ಮಾಡಿತು ಎಂದು ವಿಜಯನ್ ಕಿಡಿಕಾರಿದ್ದಾರೆ.

ಹಣ ಪತ್ತೆ ಪ್ರಕರಣ: ನ್ಯಾ.ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಲೋಕಸಭೆ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...