Homeಮುಖಪುಟ'ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ' ಆಚರಣೆಗೆ ವಿವಿಗಳಿಗೆ ಕೇರಳ ರಾಜ್ಯಪಾಲರ ಸೂಚನೆ: ಹೊಸ ವಿವಾದ ಸೃಷ್ಟಿ

‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಣೆಗೆ ವಿವಿಗಳಿಗೆ ಕೇರಳ ರಾಜ್ಯಪಾಲರ ಸೂಚನೆ: ಹೊಸ ವಿವಾದ ಸೃಷ್ಟಿ

- Advertisement -
- Advertisement -

ಆಗಸ್ಟ್ 14ರಂದು ‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಿಸಲು ಎಲ್ಲಾ ವಿಶ್ವ ವಿದ್ಯಾಲಯಗಳ ಉಪ ಕುಲಪತಿಗಳಿಗೆ ನಿರ್ದೇಶಿಸುವ ಮೂಲಕ ಕೇರಳದ ರಾಜ್ಯಪಾಲ ಹಾಗೂ ವಿಶ್ವ ವಿದ್ಯಾಲಯಗಳ ಕುಲಪತಿ ರಾಜೇಂದ್ರ ಅರ್ಲೇಕರ್ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಅವರು, ಇಂತಹ ಸೂಚನೆ ನೀಡುವ ರಾಜ್ಯಪಾಲರ ಅಧಿಕಾರವನ್ನು ಪ್ರಶ್ನಿಸಿದ್ದಾರೆ.

ರಾಜಭವನದಿಂದ ವಿಶ್ವವಿದ್ಯಾಲಯಗಳಿಗೆ ನೀಡಲಾಗಿರುವ ಸುತ್ತೋಲೆಯಲ್ಲಿ, ಕ್ಯಾಂಪಸ್‌ಗಳಲ್ಲಿ ವಿಭಜನೆಯ ಭಯಾನಕತೆಯನ್ನು ಸ್ಮರಿಸುವ ಸೆಮಿನಾರ್, ನಾಟಕಗಳನ್ನು ಆಯೋಜಿಸುವಂತೆ ಮತ್ತು ಉಪಕುಲಪತಿಗಳು ಆ ದಿನವನ್ನು ಸೂಕ್ತ ರೀತಿಯಲ್ಲಿ ಆಚರಿಸಲು ಕ್ರಿಯಾ ಯೋಜನೆಗಳನ್ನು ರೂಪಿಸುವಂತೆ ಸೂಚಿಸಲಾಗಿದೆ

ರಾಜಭವನದ ಸುತ್ತೋಲೆಯು ಉಪಕುಲಪತಿಗಳು ಆ ದಿನವನ್ನು ಸೂಕ್ತ ರೀತಿಯಲ್ಲಿ ಆಚರಿಸಲು ಕ್ರಿಯಾ ಯೋಜನೆಗಳನ್ನು ರೂಪಿಸುವಂತೆ ನಿರ್ದೇಶಿಸಿದೆ.

ಇಂತಹ ಆಚರಣೆಯ ಚರ್ಚೆಯನ್ನು 2021ರಲ್ಲಿ ಮೊದಲು ಹುಟ್ಟು ಹಾಕಿದ್ದು ಪ್ರಧಾನಿ ನರೇಂದ್ರ ಮೋದಿ, ಆ ಬಳಿಕ ಕೇಂದ್ರ ಸರ್ಕಾರ ಈ ದಿನವನ್ನು ಆಚರಿಸಿಕೊಂಡು ಬರುತ್ತಿದೆ.

ರಾಜ್ಯಪಾಲರ ನಿರ್ದೇಶನದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಸಂಘ ಪರಿವಾರದ ವಿಭಜನಕಾರಿ ರಾಜಕೀಯ ಕಾರ್ಯಸೂಚಿಗಳಿಗೆ ಹೊಂದಿಕೆಯಾಗುವಂತೆ ರಾಜಭವನದಿಂದ ಬರುತ್ತಿರುವ ಆದೇಶಗಳು ಸಂವಿಧಾನಬಾಹಿರ” ಎಂದು ಹೇಳಿದ್ದಾರೆ.

ರಾಜ್ಯಪಾಲರು ಉಪಕುಲಪತಿಗಳಿಗೆ ಹೊರಡಿಸಿರುವ ಸುತ್ತೋಲೆ ಆಕ್ಷೇಪಾರ್ಹ. ನಮ್ಮ ವಿಶ್ವವಿದ್ಯಾಲಯಗಳು ಅಂತಹ ಕಾರ್ಯಸೂಚಿಯನ್ನು ಜಾರಿಗೆ ತರುವ ವೇದಿಕೆಗಳಾಗಲು ನಾವು ಅನುಮತಿಸುವುದಿಲ್ಲ” ಎಂದಿದ್ದಾರೆ.

“ರಾಜ್ಯ ಸರ್ಕಾರವನ್ನು ಬದಿಗಿಟ್ಟು ‘ವಿಭಜನಾ ಭಯಾನಕ ದಿನ’ವನ್ನು ಆಚರಿಸಲು ಉಪಕುಲಪತಿಗಳಿಗೆ ಸೂಚಿಸಲು ರಾಜ್ಯಪಾಲರಿಗೆ ಯಾವ ಅಧಿಕಾರವಿದೆ? ರಾಜ್ಯ ಸರ್ಕಾರಕ್ಕೆ ಸಮಾನಾಂತರವಾಗಿ ರಾಜ್ಯಪಾಲರು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಮತ್ತು ಕಾರ್ಯನಿರ್ವಹಿಸುವುದು ಅಸಂವಿಧಾನಿಕವಾಗಿದೆ” ಎಂದು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ರೀತಿಯ ಆದೇಶಗಳನ್ನು ನೀಡುವ ಮೂಲಕ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಮೂಲಭೂತವಾಗಿ ತಮ್ಮನ್ನು ಆರೆಸ್ಸೆಸ್‌ನ ವಿಭಜಕ ರಾಜಕೀಯದ ವಕ್ತಾರರೆಂದು ಘೋಷಿಸಿಕೊಂಡಿದ್ದಾರೆ ಎಂದು ಸತೀಶನ್ ಹೇಳಿದ್ದಾರೆ.

ಜನರಿಂದ ಆಯ್ಕೆಯಾದ ಸಚಿವ ಸಂಪುಟದ ಅನುಮೋದನೆಯಿಲ್ಲದೆ ರಾಜ್ಯಪಾಲರು ಸಮಾನಾಂತರ ಆಡಳಿತ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವಂತೆ ವರ್ತಿಸುತ್ತಿದ್ದಾರೆ ಎಂದು ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹೇಳಿದ್ದಾರೆ.

“ಅವರು ಯಾವ ಅಧಿಕಾರದ ಅಡಿಯಲ್ಲಿ ಅಂತಹ ಸೂಚನೆ ನೀಡಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ. ಅವರಿಗೆ ಅಂತಹ ಅಧಿಕಾರವಿಲ್ಲ. ರಾಜ್ಯಪಾಲರ ಅಧಿಕಾರಗಳು ಸೀಮಿತವಾಗಿವೆ. ನ್ಯಾಯಾಲಯಗಳು ಈಗಾಗಲೇ ಸ್ಪಷ್ಟಪಡಿಸಿದಂತೆ ಇದು ದೈನಂದಿನ ಆಡಳಿತಕ್ಕೆ ಸಂಬಂಧಿಸಿದ ವಿಷಯವಲ್ಲ” ಎಂದು ಶಿವನ್‌ಕುಟ್ಟಿ ಕಿಡಿಕಾರಿದ್ದಾರೆ.

ಭಾರತದ ಸ್ವಾತಂತ್ರ್ಯ ದಿನವು ಸಾಮ್ರಾಜ್ಯಶಾಹಿ ವಿರೋಧಿ ಹೋರಾಟ ಮತ್ತು ಬ್ರಿಟಿಷರು ನಡೆಸಿದ ಕ್ರೌರ್ಯಗಳನ್ನು ನೆನಪಿಸುತ್ತದೆ ಎಂದು ಎಂದಿರುವ ಸಿಎಂ, ಪಿಣರಾಯಿ ವಿಜಯನ್, “ನಾವು ಸ್ವಾತಂತ್ರ್ಯದ 78ನೇ ವರ್ಷವನ್ನು ಆಚರಿಸುತ್ತಿರುವಾಗ, ಆಗಸ್ಟ್ 15ರ ಹೊರತಾಗಿ ಮತ್ತೊಂದು ದಿನವನ್ನು ಆಚರಿಸುವ ಕಲ್ಪನೆಯು ಸಂಘ ಪರಿವಾರದ ಮನಸ್ಸಿನಿಂದ ಹುಟ್ಟಿಕೊಂಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸದೆ ಬ್ರಿಟಿಷ್ ರಾಜ್‌ಗೆ ಸೇವೆ ಸಲ್ಲಿಸಿದವರು ಸ್ವಾತಂತ್ರ್ಯ ದಿನವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ವಿದೇಶಿ ಶಕ್ತಿಗಳಿಗಿಂತ ಆಂತರಿಕ ಶತ್ರುಗಳ ವಿರುದ್ಧ ಹೋರಾಡಲು ಶಕ್ತಿಯನ್ನು ವ್ಯಯಿಸಿದವರು, ಈಗ ವಿಭಜನೆಯ ಭಯಾನಕತೆಯನ್ನು ಸ್ಮರಿಸುವ ದಿನವನ್ನು ಆಚರಿಸಲು ಮುಂದಾಗಿದ್ದಾರೆ. ಇದರಿಂದಾಗಿ ಸ್ವಾತಂತ್ರ್ಯ ದಿನದ ಮಹತ್ವ ಕಡಿಮೆಯಾಗುತ್ತದೆ” ಎಂದು ಹೇಳಿದ್ದಾರೆ.

ಬ್ರಿಟಿಷ್ ವೈಸ್ರಾಯ್ ಅವರನ್ನು ಭೇಟಿಯಾಗಿ ತಾವು ಬ್ರಿಟಿಷ್ ರಾಜ್ ವಿರುದ್ಧ ಇಲ್ಲ ಎಂದು ಬೆಂಬಲ ವ್ಯಕ್ತಪಡಿಸಿದವರಂತೆಯೇ ಸಂಘ ಪರಿವಾರವೂ ಕಾರ್ಯನಿರ್ವಹಿಸುತ್ತಿದೆ. ಭಾರತದ ವೈವಿಧ್ಯಮಯ ಸಮುದಾಯಗಳ ಸಂಯುಕ್ತ ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದಿಂದ ದೂರ ಸರಿದವರೇ ಈಗ ವಿಭಜನೆಯ ಭಯದ ಬಗ್ಗೆ ಚರ್ಚಿಸುತ್ತಿದ್ದಾರೆ. ಭಾರತದ ವಿಭಜನೆ ಮತ್ತು ನಂತರದ ಹಿಂಸಾಚಾರವು ಬ್ರಿಟಿಷರ ಒಡೆದು ಆಳುವ ನೀತಿಯ ಪರಿಣಾಮಗಳಾಗಿದ್ದು, ಹಿಂದಿನ ಬ್ರಿಟಿಷ್ ನಿಷ್ಠಾವಂತರು ಇದನ್ನು ಮರೆತಿದ್ದಾರೆ ಎಂದು ತೋರುತ್ತದೆ. ವಿಭಜನೆಯ ಸಮಯದಲ್ಲಿ ಹಿಂಸಾಚಾರವನ್ನು ಹತ್ತಿಕ್ಕಲು ಪ್ರಯತ್ನಿಸಿದ ಮಹಾತ್ಮ ಗಾಂಧಿಯವರಂತಹ ನಾಯಕರನ್ನು ಸಂಘ ಪರಿವಾರವು ಅಪಹಾಸ್ಯ ಮಾಡಿತು ಎಂದು ವಿಜಯನ್ ಕಿಡಿಕಾರಿದ್ದಾರೆ.

ಹಣ ಪತ್ತೆ ಪ್ರಕರಣ: ನ್ಯಾ.ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಲೋಕಸಭೆ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...