Homeಮುಖಪುಟ'ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ' ಆಚರಣೆಗೆ ವಿವಿಗಳಿಗೆ ಕೇರಳ ರಾಜ್ಯಪಾಲರ ಸೂಚನೆ: ಹೊಸ ವಿವಾದ ಸೃಷ್ಟಿ

‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಣೆಗೆ ವಿವಿಗಳಿಗೆ ಕೇರಳ ರಾಜ್ಯಪಾಲರ ಸೂಚನೆ: ಹೊಸ ವಿವಾದ ಸೃಷ್ಟಿ

- Advertisement -
- Advertisement -

ಆಗಸ್ಟ್ 14ರಂದು ‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಿಸಲು ಎಲ್ಲಾ ವಿಶ್ವ ವಿದ್ಯಾಲಯಗಳ ಉಪ ಕುಲಪತಿಗಳಿಗೆ ನಿರ್ದೇಶಿಸುವ ಮೂಲಕ ಕೇರಳದ ರಾಜ್ಯಪಾಲ ಹಾಗೂ ವಿಶ್ವ ವಿದ್ಯಾಲಯಗಳ ಕುಲಪತಿ ರಾಜೇಂದ್ರ ಅರ್ಲೇಕರ್ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಅವರು, ಇಂತಹ ಸೂಚನೆ ನೀಡುವ ರಾಜ್ಯಪಾಲರ ಅಧಿಕಾರವನ್ನು ಪ್ರಶ್ನಿಸಿದ್ದಾರೆ.

ರಾಜಭವನದಿಂದ ವಿಶ್ವವಿದ್ಯಾಲಯಗಳಿಗೆ ನೀಡಲಾಗಿರುವ ಸುತ್ತೋಲೆಯಲ್ಲಿ, ಕ್ಯಾಂಪಸ್‌ಗಳಲ್ಲಿ ವಿಭಜನೆಯ ಭಯಾನಕತೆಯನ್ನು ಸ್ಮರಿಸುವ ಸೆಮಿನಾರ್, ನಾಟಕಗಳನ್ನು ಆಯೋಜಿಸುವಂತೆ ಮತ್ತು ಉಪಕುಲಪತಿಗಳು ಆ ದಿನವನ್ನು ಸೂಕ್ತ ರೀತಿಯಲ್ಲಿ ಆಚರಿಸಲು ಕ್ರಿಯಾ ಯೋಜನೆಗಳನ್ನು ರೂಪಿಸುವಂತೆ ಸೂಚಿಸಲಾಗಿದೆ

ರಾಜಭವನದ ಸುತ್ತೋಲೆಯು ಉಪಕುಲಪತಿಗಳು ಆ ದಿನವನ್ನು ಸೂಕ್ತ ರೀತಿಯಲ್ಲಿ ಆಚರಿಸಲು ಕ್ರಿಯಾ ಯೋಜನೆಗಳನ್ನು ರೂಪಿಸುವಂತೆ ನಿರ್ದೇಶಿಸಿದೆ.

ಇಂತಹ ಆಚರಣೆಯ ಚರ್ಚೆಯನ್ನು 2021ರಲ್ಲಿ ಮೊದಲು ಹುಟ್ಟು ಹಾಕಿದ್ದು ಪ್ರಧಾನಿ ನರೇಂದ್ರ ಮೋದಿ, ಆ ಬಳಿಕ ಕೇಂದ್ರ ಸರ್ಕಾರ ಈ ದಿನವನ್ನು ಆಚರಿಸಿಕೊಂಡು ಬರುತ್ತಿದೆ.

ರಾಜ್ಯಪಾಲರ ನಿರ್ದೇಶನದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಸಂಘ ಪರಿವಾರದ ವಿಭಜನಕಾರಿ ರಾಜಕೀಯ ಕಾರ್ಯಸೂಚಿಗಳಿಗೆ ಹೊಂದಿಕೆಯಾಗುವಂತೆ ರಾಜಭವನದಿಂದ ಬರುತ್ತಿರುವ ಆದೇಶಗಳು ಸಂವಿಧಾನಬಾಹಿರ” ಎಂದು ಹೇಳಿದ್ದಾರೆ.

ರಾಜ್ಯಪಾಲರು ಉಪಕುಲಪತಿಗಳಿಗೆ ಹೊರಡಿಸಿರುವ ಸುತ್ತೋಲೆ ಆಕ್ಷೇಪಾರ್ಹ. ನಮ್ಮ ವಿಶ್ವವಿದ್ಯಾಲಯಗಳು ಅಂತಹ ಕಾರ್ಯಸೂಚಿಯನ್ನು ಜಾರಿಗೆ ತರುವ ವೇದಿಕೆಗಳಾಗಲು ನಾವು ಅನುಮತಿಸುವುದಿಲ್ಲ” ಎಂದಿದ್ದಾರೆ.

“ರಾಜ್ಯ ಸರ್ಕಾರವನ್ನು ಬದಿಗಿಟ್ಟು ‘ವಿಭಜನಾ ಭಯಾನಕ ದಿನ’ವನ್ನು ಆಚರಿಸಲು ಉಪಕುಲಪತಿಗಳಿಗೆ ಸೂಚಿಸಲು ರಾಜ್ಯಪಾಲರಿಗೆ ಯಾವ ಅಧಿಕಾರವಿದೆ? ರಾಜ್ಯ ಸರ್ಕಾರಕ್ಕೆ ಸಮಾನಾಂತರವಾಗಿ ರಾಜ್ಯಪಾಲರು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಮತ್ತು ಕಾರ್ಯನಿರ್ವಹಿಸುವುದು ಅಸಂವಿಧಾನಿಕವಾಗಿದೆ” ಎಂದು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ರೀತಿಯ ಆದೇಶಗಳನ್ನು ನೀಡುವ ಮೂಲಕ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಮೂಲಭೂತವಾಗಿ ತಮ್ಮನ್ನು ಆರೆಸ್ಸೆಸ್‌ನ ವಿಭಜಕ ರಾಜಕೀಯದ ವಕ್ತಾರರೆಂದು ಘೋಷಿಸಿಕೊಂಡಿದ್ದಾರೆ ಎಂದು ಸತೀಶನ್ ಹೇಳಿದ್ದಾರೆ.

ಜನರಿಂದ ಆಯ್ಕೆಯಾದ ಸಚಿವ ಸಂಪುಟದ ಅನುಮೋದನೆಯಿಲ್ಲದೆ ರಾಜ್ಯಪಾಲರು ಸಮಾನಾಂತರ ಆಡಳಿತ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವಂತೆ ವರ್ತಿಸುತ್ತಿದ್ದಾರೆ ಎಂದು ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹೇಳಿದ್ದಾರೆ.

“ಅವರು ಯಾವ ಅಧಿಕಾರದ ಅಡಿಯಲ್ಲಿ ಅಂತಹ ಸೂಚನೆ ನೀಡಿದ್ದಾರೆಂದು ನನಗೆ ಅರ್ಥವಾಗುತ್ತಿಲ್ಲ. ಅವರಿಗೆ ಅಂತಹ ಅಧಿಕಾರವಿಲ್ಲ. ರಾಜ್ಯಪಾಲರ ಅಧಿಕಾರಗಳು ಸೀಮಿತವಾಗಿವೆ. ನ್ಯಾಯಾಲಯಗಳು ಈಗಾಗಲೇ ಸ್ಪಷ್ಟಪಡಿಸಿದಂತೆ ಇದು ದೈನಂದಿನ ಆಡಳಿತಕ್ಕೆ ಸಂಬಂಧಿಸಿದ ವಿಷಯವಲ್ಲ” ಎಂದು ಶಿವನ್‌ಕುಟ್ಟಿ ಕಿಡಿಕಾರಿದ್ದಾರೆ.

ಭಾರತದ ಸ್ವಾತಂತ್ರ್ಯ ದಿನವು ಸಾಮ್ರಾಜ್ಯಶಾಹಿ ವಿರೋಧಿ ಹೋರಾಟ ಮತ್ತು ಬ್ರಿಟಿಷರು ನಡೆಸಿದ ಕ್ರೌರ್ಯಗಳನ್ನು ನೆನಪಿಸುತ್ತದೆ ಎಂದು ಎಂದಿರುವ ಸಿಎಂ, ಪಿಣರಾಯಿ ವಿಜಯನ್, “ನಾವು ಸ್ವಾತಂತ್ರ್ಯದ 78ನೇ ವರ್ಷವನ್ನು ಆಚರಿಸುತ್ತಿರುವಾಗ, ಆಗಸ್ಟ್ 15ರ ಹೊರತಾಗಿ ಮತ್ತೊಂದು ದಿನವನ್ನು ಆಚರಿಸುವ ಕಲ್ಪನೆಯು ಸಂಘ ಪರಿವಾರದ ಮನಸ್ಸಿನಿಂದ ಹುಟ್ಟಿಕೊಂಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸದೆ ಬ್ರಿಟಿಷ್ ರಾಜ್‌ಗೆ ಸೇವೆ ಸಲ್ಲಿಸಿದವರು ಸ್ವಾತಂತ್ರ್ಯ ದಿನವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ವಿದೇಶಿ ಶಕ್ತಿಗಳಿಗಿಂತ ಆಂತರಿಕ ಶತ್ರುಗಳ ವಿರುದ್ಧ ಹೋರಾಡಲು ಶಕ್ತಿಯನ್ನು ವ್ಯಯಿಸಿದವರು, ಈಗ ವಿಭಜನೆಯ ಭಯಾನಕತೆಯನ್ನು ಸ್ಮರಿಸುವ ದಿನವನ್ನು ಆಚರಿಸಲು ಮುಂದಾಗಿದ್ದಾರೆ. ಇದರಿಂದಾಗಿ ಸ್ವಾತಂತ್ರ್ಯ ದಿನದ ಮಹತ್ವ ಕಡಿಮೆಯಾಗುತ್ತದೆ” ಎಂದು ಹೇಳಿದ್ದಾರೆ.

ಬ್ರಿಟಿಷ್ ವೈಸ್ರಾಯ್ ಅವರನ್ನು ಭೇಟಿಯಾಗಿ ತಾವು ಬ್ರಿಟಿಷ್ ರಾಜ್ ವಿರುದ್ಧ ಇಲ್ಲ ಎಂದು ಬೆಂಬಲ ವ್ಯಕ್ತಪಡಿಸಿದವರಂತೆಯೇ ಸಂಘ ಪರಿವಾರವೂ ಕಾರ್ಯನಿರ್ವಹಿಸುತ್ತಿದೆ. ಭಾರತದ ವೈವಿಧ್ಯಮಯ ಸಮುದಾಯಗಳ ಸಂಯುಕ್ತ ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದಿಂದ ದೂರ ಸರಿದವರೇ ಈಗ ವಿಭಜನೆಯ ಭಯದ ಬಗ್ಗೆ ಚರ್ಚಿಸುತ್ತಿದ್ದಾರೆ. ಭಾರತದ ವಿಭಜನೆ ಮತ್ತು ನಂತರದ ಹಿಂಸಾಚಾರವು ಬ್ರಿಟಿಷರ ಒಡೆದು ಆಳುವ ನೀತಿಯ ಪರಿಣಾಮಗಳಾಗಿದ್ದು, ಹಿಂದಿನ ಬ್ರಿಟಿಷ್ ನಿಷ್ಠಾವಂತರು ಇದನ್ನು ಮರೆತಿದ್ದಾರೆ ಎಂದು ತೋರುತ್ತದೆ. ವಿಭಜನೆಯ ಸಮಯದಲ್ಲಿ ಹಿಂಸಾಚಾರವನ್ನು ಹತ್ತಿಕ್ಕಲು ಪ್ರಯತ್ನಿಸಿದ ಮಹಾತ್ಮ ಗಾಂಧಿಯವರಂತಹ ನಾಯಕರನ್ನು ಸಂಘ ಪರಿವಾರವು ಅಪಹಾಸ್ಯ ಮಾಡಿತು ಎಂದು ವಿಜಯನ್ ಕಿಡಿಕಾರಿದ್ದಾರೆ.

ಹಣ ಪತ್ತೆ ಪ್ರಕರಣ: ನ್ಯಾ.ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಲೋಕಸಭೆ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...