Homeಮುಖಪುಟಆರೋಗ್ಯ ಕೇಂದ್ರಗಳ ಹೆಸರು ಬದಲಿಸಲು ನಿರಾಕರಿಸಿದ ಕೇರಳ ಸರ್ಕಾರ: ಅನುದಾನ ತಡೆ ಹಿಡಿದ ಕೇಂದ್ರ

ಆರೋಗ್ಯ ಕೇಂದ್ರಗಳ ಹೆಸರು ಬದಲಿಸಲು ನಿರಾಕರಿಸಿದ ಕೇರಳ ಸರ್ಕಾರ: ಅನುದಾನ ತಡೆ ಹಿಡಿದ ಕೇಂದ್ರ

- Advertisement -
- Advertisement -

ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಹೆಚ್‌ಎಂ) ಕೇಂದ್ರಗಳಿಗೆ ‘ಆಯುಷ್ಮಾನ್ ಆರೋಗ್ಯ ಮಂದಿರಗಳು’ ಎಂದು ಮರುನಾಮಕರಣ ಮಾಡಬೇಕೆಂಬ ಕೇಂದ್ರದ ಆದೇಶವನ್ನು ಅನುಸರಿಸಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರ ಮಂಗಳವಾರ ಹೇಳಿದೆ.

ಆಯುಷ್ಮಾನ್ ಆರೋಗ್ಯ ಮಂದಿರಗಳು ಎಂಬ ಹೆಸರು ರಾಜ್ಯದ ಗ್ರಾಮೀಣ ಜನರ ಭಾಷೆ ಮತ್ತು ಸಂಸ್ಕೃತಿಗೆ ಹೊಂದಿಕೆಯಾಗುವುದಿಲ್ಲ. ಇದು ಅವರಿಗೆ ವಿದೇಶಿ ಹೆಸರಿನಂತೆ ತೋರುತ್ತದೆ. ಕೇಂದ್ರದ ಹಿಂದಿ ಹೇರಿಕೆಯನ್ನು ನಾವು ಒಪ್ಪುವುದಿಲ್ಲ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಬುಧವಾರ ತಿರುವನಂತಪುರಂನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಆರೋಗ್ಯ ಕೇಂದ್ರಗಳಿಗೆ ಮರುನಾಮಕರಣ ಮಾಡದ ಹೊರತು ಅನುದಾನ ನೀಡಲು ಕೇಂದ್ರ ನಿರಾಕರಿಸಿದೆ. ಕೇಂದ್ರ ಮೊದಲು ಕೋ-ಬ್ರಾಂಡಿಂಗ್‌ಗೆ ಒತ್ತಡ ಹೇರಿತ್ತು. ಅದರಂತೆ ನಾವು ಆರೋಗ್ಯ ಕೇಂದ್ರಗಳ ನಾಮಫಲಕಗಳಲ್ಲಿ ಕೇಂದ್ರ ಸರ್ಕಾರ ನೀಡಿದ ಆರು ಚಿಹ್ನೆಗಳನ್ನು ಸೇರಿಸಿದೆವು. ಕೇಂದ್ರ ನಿರ್ದೇಶನ ನೀಡುವುದಕ್ಕಿಂತ ಒಂದೆರಡು ವರ್ಷಗಳ ಮೊದಲು ನಿರ್ಮಿಸಿದ್ದ ಆರೋಗ್ಯ ಕೇಂದ್ರಗಳ ನಾಮಫಲಕಗಳಲ್ಲಿ ನಾವು ಈ ಬದಲಾವಣೆ ಮಾಡಿದ್ದೆವು. ಆದರೆ, ಈಗ ಅವರು ಸಂಪೂರ್ಣ ಮರುನಾಮಕರಣಕ್ಕೆ ಒತ್ತಾಯಿಸುತ್ತಿದ್ದಾರೆ. ಮರುನಾಮಕರಣದ ಬಳಿಕವಷ್ಟೇ ಅನುದಾನ ನೀಡುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಅನುದಾನ ನೀಡಿದ ಕಾರಣ ಆರೋಗ್ಯ ಕೇಂದ್ರಗಳ ನಿರ್ವಹಣೆ ಕಷ್ಟವಾಗುತ್ತಿದೆ. ಪ್ರಸ್ತುತ, ರಾಜ್ಯ ಸರ್ಕಾರ ಮೀಸಲಿಟ್ಟ ಹಣದಲ್ಲಿ ಆರೋಗ್ಯ ಕೇಂದ್ರಗಳನ್ನು ನಿರ್ವಹಣೆ ಮಾಡಲಾಗ್ತಿದೆ. ಆಶಾ ಕಾರ್ಯಕರ್ತೆಯಿರಿಗೆ ವೇತನ ನೀಡಲು ಸಮಸ್ಯೆಯಾಗಿದೆ. ರೋಗಿಗಳಿಗೆ ಪೆರಿಟೋನಿಯಲ್ ಡಯಾಲಿಸಿಸ್‌ಗೆ ಕೊಡು ಹಣವನ್ನು ಕೇಂದ್ರದಿಂದ ನೀಡಲಾಗಿಲ್ಲ. ಇದಕ್ಕಾಗಿ ಕೇಂದ್ರದಿಂದ ರಾಜ್ಯಕ್ಕೆ ಸುಮಾರು 7 ಕೋಟಿ ರೂ. ಬರಲು ಬಾಕಿಯಿದೆ ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಅನುದಾನ ಬಾರದ ಹಿನ್ನೆಲೆ ಬಡ ರೋಗಿಗಳಿಗೆ ಸಮಸ್ಯೆಯಾಗ್ತಿದೆ. ಡಯಾಲಿಸಿಸ್ ವ್ಯವಸ್ಥೆಗಾಗಿ ರಾಜ್ಯ ಸರ್ಕಾರ ವೆಚ್ಚ ಭರಿಸುತ್ತಿದೆ. ಹಣಕಾಸು ವರ್ಷ ನಾಲ್ಕನೇ ಮತ್ತು ಅಂತಿಮ ತ್ರೈಮಾಸಿಕಕ್ಕೆ ತಲುಪಿದರೂ, ಕೇಂದ್ರ ಸರ್ಕಾರದ ಹಂಚಿಕೆಯ ಭಾಗವಾಗಿ ರಾಜ್ಯಕ್ಕೆ ಬರಬೇಕಾದ 826.02 ಕೋಟಿ ರೂ.ಗಳಲ್ಲಿ ಒಂದು ಕಂತನ್ನೂ ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಎನ್‌ಹೆಚ್‌ಎಂನ ಭಾಗವಾಗಿ ನೇಮಕಗೊಂಡಿರುವ ವೈದ್ಯರಿಗೆ ವೇತನ ಪಾವತಿಸಲು ರಾಜ್ಯ ಭಾರೀ ಸಮಸ್ಯೆ ಎದುರಿಸುತ್ತಿದೆ. ಈ ಕುರಿತು ಹಲವು ಬಾರಿ ಕೇಂದ್ರ ಆರೋಗ್ಯ ಸಚಿವರ ಗಮನಕ್ಕೆ ತಂದರೂ, ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಇದು ನಮ್ಮ ಸಂವಿಧಾನದ ಫೆಡರಲ್ ಸ್ವರೂಪಕ್ಕೆ ವಿರುದ್ಧವಾಗಿ. ನಾವು ಅನುದಾನ ಬಿಡುಗಡೆಗೆ ಕೋರಿ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಸಚಿವೆ ದೂರಿದ್ದಾರೆ.

ಇದನ್ನೂ ಓದಿ : ‘ಭಾರತ್ ಜೋಡೋ ನ್ಯಾಯ್‌ ಯಾತ್ರೆ’ಗೆ ಶರತ್ತುಬದ್ಧ ಅನುಮತಿ ನೀಡಿದ ಮಣಿಪುರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...