Homeಮುಖಪುಟಆರೋಗ್ಯ ಕೇಂದ್ರಗಳ ಹೆಸರು ಬದಲಿಸಲು ನಿರಾಕರಿಸಿದ ಕೇರಳ ಸರ್ಕಾರ: ಅನುದಾನ ತಡೆ ಹಿಡಿದ ಕೇಂದ್ರ

ಆರೋಗ್ಯ ಕೇಂದ್ರಗಳ ಹೆಸರು ಬದಲಿಸಲು ನಿರಾಕರಿಸಿದ ಕೇರಳ ಸರ್ಕಾರ: ಅನುದಾನ ತಡೆ ಹಿಡಿದ ಕೇಂದ್ರ

- Advertisement -
- Advertisement -

ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಹೆಚ್‌ಎಂ) ಕೇಂದ್ರಗಳಿಗೆ ‘ಆಯುಷ್ಮಾನ್ ಆರೋಗ್ಯ ಮಂದಿರಗಳು’ ಎಂದು ಮರುನಾಮಕರಣ ಮಾಡಬೇಕೆಂಬ ಕೇಂದ್ರದ ಆದೇಶವನ್ನು ಅನುಸರಿಸಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರ ಮಂಗಳವಾರ ಹೇಳಿದೆ.

ಆಯುಷ್ಮಾನ್ ಆರೋಗ್ಯ ಮಂದಿರಗಳು ಎಂಬ ಹೆಸರು ರಾಜ್ಯದ ಗ್ರಾಮೀಣ ಜನರ ಭಾಷೆ ಮತ್ತು ಸಂಸ್ಕೃತಿಗೆ ಹೊಂದಿಕೆಯಾಗುವುದಿಲ್ಲ. ಇದು ಅವರಿಗೆ ವಿದೇಶಿ ಹೆಸರಿನಂತೆ ತೋರುತ್ತದೆ. ಕೇಂದ್ರದ ಹಿಂದಿ ಹೇರಿಕೆಯನ್ನು ನಾವು ಒಪ್ಪುವುದಿಲ್ಲ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಬುಧವಾರ ತಿರುವನಂತಪುರಂನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಆರೋಗ್ಯ ಕೇಂದ್ರಗಳಿಗೆ ಮರುನಾಮಕರಣ ಮಾಡದ ಹೊರತು ಅನುದಾನ ನೀಡಲು ಕೇಂದ್ರ ನಿರಾಕರಿಸಿದೆ. ಕೇಂದ್ರ ಮೊದಲು ಕೋ-ಬ್ರಾಂಡಿಂಗ್‌ಗೆ ಒತ್ತಡ ಹೇರಿತ್ತು. ಅದರಂತೆ ನಾವು ಆರೋಗ್ಯ ಕೇಂದ್ರಗಳ ನಾಮಫಲಕಗಳಲ್ಲಿ ಕೇಂದ್ರ ಸರ್ಕಾರ ನೀಡಿದ ಆರು ಚಿಹ್ನೆಗಳನ್ನು ಸೇರಿಸಿದೆವು. ಕೇಂದ್ರ ನಿರ್ದೇಶನ ನೀಡುವುದಕ್ಕಿಂತ ಒಂದೆರಡು ವರ್ಷಗಳ ಮೊದಲು ನಿರ್ಮಿಸಿದ್ದ ಆರೋಗ್ಯ ಕೇಂದ್ರಗಳ ನಾಮಫಲಕಗಳಲ್ಲಿ ನಾವು ಈ ಬದಲಾವಣೆ ಮಾಡಿದ್ದೆವು. ಆದರೆ, ಈಗ ಅವರು ಸಂಪೂರ್ಣ ಮರುನಾಮಕರಣಕ್ಕೆ ಒತ್ತಾಯಿಸುತ್ತಿದ್ದಾರೆ. ಮರುನಾಮಕರಣದ ಬಳಿಕವಷ್ಟೇ ಅನುದಾನ ನೀಡುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಅನುದಾನ ನೀಡಿದ ಕಾರಣ ಆರೋಗ್ಯ ಕೇಂದ್ರಗಳ ನಿರ್ವಹಣೆ ಕಷ್ಟವಾಗುತ್ತಿದೆ. ಪ್ರಸ್ತುತ, ರಾಜ್ಯ ಸರ್ಕಾರ ಮೀಸಲಿಟ್ಟ ಹಣದಲ್ಲಿ ಆರೋಗ್ಯ ಕೇಂದ್ರಗಳನ್ನು ನಿರ್ವಹಣೆ ಮಾಡಲಾಗ್ತಿದೆ. ಆಶಾ ಕಾರ್ಯಕರ್ತೆಯಿರಿಗೆ ವೇತನ ನೀಡಲು ಸಮಸ್ಯೆಯಾಗಿದೆ. ರೋಗಿಗಳಿಗೆ ಪೆರಿಟೋನಿಯಲ್ ಡಯಾಲಿಸಿಸ್‌ಗೆ ಕೊಡು ಹಣವನ್ನು ಕೇಂದ್ರದಿಂದ ನೀಡಲಾಗಿಲ್ಲ. ಇದಕ್ಕಾಗಿ ಕೇಂದ್ರದಿಂದ ರಾಜ್ಯಕ್ಕೆ ಸುಮಾರು 7 ಕೋಟಿ ರೂ. ಬರಲು ಬಾಕಿಯಿದೆ ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಅನುದಾನ ಬಾರದ ಹಿನ್ನೆಲೆ ಬಡ ರೋಗಿಗಳಿಗೆ ಸಮಸ್ಯೆಯಾಗ್ತಿದೆ. ಡಯಾಲಿಸಿಸ್ ವ್ಯವಸ್ಥೆಗಾಗಿ ರಾಜ್ಯ ಸರ್ಕಾರ ವೆಚ್ಚ ಭರಿಸುತ್ತಿದೆ. ಹಣಕಾಸು ವರ್ಷ ನಾಲ್ಕನೇ ಮತ್ತು ಅಂತಿಮ ತ್ರೈಮಾಸಿಕಕ್ಕೆ ತಲುಪಿದರೂ, ಕೇಂದ್ರ ಸರ್ಕಾರದ ಹಂಚಿಕೆಯ ಭಾಗವಾಗಿ ರಾಜ್ಯಕ್ಕೆ ಬರಬೇಕಾದ 826.02 ಕೋಟಿ ರೂ.ಗಳಲ್ಲಿ ಒಂದು ಕಂತನ್ನೂ ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಎನ್‌ಹೆಚ್‌ಎಂನ ಭಾಗವಾಗಿ ನೇಮಕಗೊಂಡಿರುವ ವೈದ್ಯರಿಗೆ ವೇತನ ಪಾವತಿಸಲು ರಾಜ್ಯ ಭಾರೀ ಸಮಸ್ಯೆ ಎದುರಿಸುತ್ತಿದೆ. ಈ ಕುರಿತು ಹಲವು ಬಾರಿ ಕೇಂದ್ರ ಆರೋಗ್ಯ ಸಚಿವರ ಗಮನಕ್ಕೆ ತಂದರೂ, ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಇದು ನಮ್ಮ ಸಂವಿಧಾನದ ಫೆಡರಲ್ ಸ್ವರೂಪಕ್ಕೆ ವಿರುದ್ಧವಾಗಿ. ನಾವು ಅನುದಾನ ಬಿಡುಗಡೆಗೆ ಕೋರಿ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಸಚಿವೆ ದೂರಿದ್ದಾರೆ.

ಇದನ್ನೂ ಓದಿ : ‘ಭಾರತ್ ಜೋಡೋ ನ್ಯಾಯ್‌ ಯಾತ್ರೆ’ಗೆ ಶರತ್ತುಬದ್ಧ ಅನುಮತಿ ನೀಡಿದ ಮಣಿಪುರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...