Homeಮುಖಪುಟಆರೋಗ್ಯ ಕೇಂದ್ರಗಳ ಹೆಸರು ಬದಲಿಸಲು ನಿರಾಕರಿಸಿದ ಕೇರಳ ಸರ್ಕಾರ: ಅನುದಾನ ತಡೆ ಹಿಡಿದ ಕೇಂದ್ರ

ಆರೋಗ್ಯ ಕೇಂದ್ರಗಳ ಹೆಸರು ಬದಲಿಸಲು ನಿರಾಕರಿಸಿದ ಕೇರಳ ಸರ್ಕಾರ: ಅನುದಾನ ತಡೆ ಹಿಡಿದ ಕೇಂದ್ರ

- Advertisement -
- Advertisement -

ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಹೆಚ್‌ಎಂ) ಕೇಂದ್ರಗಳಿಗೆ ‘ಆಯುಷ್ಮಾನ್ ಆರೋಗ್ಯ ಮಂದಿರಗಳು’ ಎಂದು ಮರುನಾಮಕರಣ ಮಾಡಬೇಕೆಂಬ ಕೇಂದ್ರದ ಆದೇಶವನ್ನು ಅನುಸರಿಸಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರ ಮಂಗಳವಾರ ಹೇಳಿದೆ.

ಆಯುಷ್ಮಾನ್ ಆರೋಗ್ಯ ಮಂದಿರಗಳು ಎಂಬ ಹೆಸರು ರಾಜ್ಯದ ಗ್ರಾಮೀಣ ಜನರ ಭಾಷೆ ಮತ್ತು ಸಂಸ್ಕೃತಿಗೆ ಹೊಂದಿಕೆಯಾಗುವುದಿಲ್ಲ. ಇದು ಅವರಿಗೆ ವಿದೇಶಿ ಹೆಸರಿನಂತೆ ತೋರುತ್ತದೆ. ಕೇಂದ್ರದ ಹಿಂದಿ ಹೇರಿಕೆಯನ್ನು ನಾವು ಒಪ್ಪುವುದಿಲ್ಲ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಬುಧವಾರ ತಿರುವನಂತಪುರಂನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಆರೋಗ್ಯ ಕೇಂದ್ರಗಳಿಗೆ ಮರುನಾಮಕರಣ ಮಾಡದ ಹೊರತು ಅನುದಾನ ನೀಡಲು ಕೇಂದ್ರ ನಿರಾಕರಿಸಿದೆ. ಕೇಂದ್ರ ಮೊದಲು ಕೋ-ಬ್ರಾಂಡಿಂಗ್‌ಗೆ ಒತ್ತಡ ಹೇರಿತ್ತು. ಅದರಂತೆ ನಾವು ಆರೋಗ್ಯ ಕೇಂದ್ರಗಳ ನಾಮಫಲಕಗಳಲ್ಲಿ ಕೇಂದ್ರ ಸರ್ಕಾರ ನೀಡಿದ ಆರು ಚಿಹ್ನೆಗಳನ್ನು ಸೇರಿಸಿದೆವು. ಕೇಂದ್ರ ನಿರ್ದೇಶನ ನೀಡುವುದಕ್ಕಿಂತ ಒಂದೆರಡು ವರ್ಷಗಳ ಮೊದಲು ನಿರ್ಮಿಸಿದ್ದ ಆರೋಗ್ಯ ಕೇಂದ್ರಗಳ ನಾಮಫಲಕಗಳಲ್ಲಿ ನಾವು ಈ ಬದಲಾವಣೆ ಮಾಡಿದ್ದೆವು. ಆದರೆ, ಈಗ ಅವರು ಸಂಪೂರ್ಣ ಮರುನಾಮಕರಣಕ್ಕೆ ಒತ್ತಾಯಿಸುತ್ತಿದ್ದಾರೆ. ಮರುನಾಮಕರಣದ ಬಳಿಕವಷ್ಟೇ ಅನುದಾನ ನೀಡುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಅನುದಾನ ನೀಡಿದ ಕಾರಣ ಆರೋಗ್ಯ ಕೇಂದ್ರಗಳ ನಿರ್ವಹಣೆ ಕಷ್ಟವಾಗುತ್ತಿದೆ. ಪ್ರಸ್ತುತ, ರಾಜ್ಯ ಸರ್ಕಾರ ಮೀಸಲಿಟ್ಟ ಹಣದಲ್ಲಿ ಆರೋಗ್ಯ ಕೇಂದ್ರಗಳನ್ನು ನಿರ್ವಹಣೆ ಮಾಡಲಾಗ್ತಿದೆ. ಆಶಾ ಕಾರ್ಯಕರ್ತೆಯಿರಿಗೆ ವೇತನ ನೀಡಲು ಸಮಸ್ಯೆಯಾಗಿದೆ. ರೋಗಿಗಳಿಗೆ ಪೆರಿಟೋನಿಯಲ್ ಡಯಾಲಿಸಿಸ್‌ಗೆ ಕೊಡು ಹಣವನ್ನು ಕೇಂದ್ರದಿಂದ ನೀಡಲಾಗಿಲ್ಲ. ಇದಕ್ಕಾಗಿ ಕೇಂದ್ರದಿಂದ ರಾಜ್ಯಕ್ಕೆ ಸುಮಾರು 7 ಕೋಟಿ ರೂ. ಬರಲು ಬಾಕಿಯಿದೆ ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಅನುದಾನ ಬಾರದ ಹಿನ್ನೆಲೆ ಬಡ ರೋಗಿಗಳಿಗೆ ಸಮಸ್ಯೆಯಾಗ್ತಿದೆ. ಡಯಾಲಿಸಿಸ್ ವ್ಯವಸ್ಥೆಗಾಗಿ ರಾಜ್ಯ ಸರ್ಕಾರ ವೆಚ್ಚ ಭರಿಸುತ್ತಿದೆ. ಹಣಕಾಸು ವರ್ಷ ನಾಲ್ಕನೇ ಮತ್ತು ಅಂತಿಮ ತ್ರೈಮಾಸಿಕಕ್ಕೆ ತಲುಪಿದರೂ, ಕೇಂದ್ರ ಸರ್ಕಾರದ ಹಂಚಿಕೆಯ ಭಾಗವಾಗಿ ರಾಜ್ಯಕ್ಕೆ ಬರಬೇಕಾದ 826.02 ಕೋಟಿ ರೂ.ಗಳಲ್ಲಿ ಒಂದು ಕಂತನ್ನೂ ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಎನ್‌ಹೆಚ್‌ಎಂನ ಭಾಗವಾಗಿ ನೇಮಕಗೊಂಡಿರುವ ವೈದ್ಯರಿಗೆ ವೇತನ ಪಾವತಿಸಲು ರಾಜ್ಯ ಭಾರೀ ಸಮಸ್ಯೆ ಎದುರಿಸುತ್ತಿದೆ. ಈ ಕುರಿತು ಹಲವು ಬಾರಿ ಕೇಂದ್ರ ಆರೋಗ್ಯ ಸಚಿವರ ಗಮನಕ್ಕೆ ತಂದರೂ, ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಇದು ನಮ್ಮ ಸಂವಿಧಾನದ ಫೆಡರಲ್ ಸ್ವರೂಪಕ್ಕೆ ವಿರುದ್ಧವಾಗಿ. ನಾವು ಅನುದಾನ ಬಿಡುಗಡೆಗೆ ಕೋರಿ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಸಚಿವೆ ದೂರಿದ್ದಾರೆ.

ಇದನ್ನೂ ಓದಿ : ‘ಭಾರತ್ ಜೋಡೋ ನ್ಯಾಯ್‌ ಯಾತ್ರೆ’ಗೆ ಶರತ್ತುಬದ್ಧ ಅನುಮತಿ ನೀಡಿದ ಮಣಿಪುರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...