Homeಮುಖಪುಟಆರೋಗ್ಯ ಕೇಂದ್ರಗಳ ಹೆಸರು ಬದಲಿಸಲು ನಿರಾಕರಿಸಿದ ಕೇರಳ ಸರ್ಕಾರ: ಅನುದಾನ ತಡೆ ಹಿಡಿದ ಕೇಂದ್ರ

ಆರೋಗ್ಯ ಕೇಂದ್ರಗಳ ಹೆಸರು ಬದಲಿಸಲು ನಿರಾಕರಿಸಿದ ಕೇರಳ ಸರ್ಕಾರ: ಅನುದಾನ ತಡೆ ಹಿಡಿದ ಕೇಂದ್ರ

- Advertisement -
- Advertisement -

ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಹೆಚ್‌ಎಂ) ಕೇಂದ್ರಗಳಿಗೆ ‘ಆಯುಷ್ಮಾನ್ ಆರೋಗ್ಯ ಮಂದಿರಗಳು’ ಎಂದು ಮರುನಾಮಕರಣ ಮಾಡಬೇಕೆಂಬ ಕೇಂದ್ರದ ಆದೇಶವನ್ನು ಅನುಸರಿಸಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರ ಮಂಗಳವಾರ ಹೇಳಿದೆ.

ಆಯುಷ್ಮಾನ್ ಆರೋಗ್ಯ ಮಂದಿರಗಳು ಎಂಬ ಹೆಸರು ರಾಜ್ಯದ ಗ್ರಾಮೀಣ ಜನರ ಭಾಷೆ ಮತ್ತು ಸಂಸ್ಕೃತಿಗೆ ಹೊಂದಿಕೆಯಾಗುವುದಿಲ್ಲ. ಇದು ಅವರಿಗೆ ವಿದೇಶಿ ಹೆಸರಿನಂತೆ ತೋರುತ್ತದೆ. ಕೇಂದ್ರದ ಹಿಂದಿ ಹೇರಿಕೆಯನ್ನು ನಾವು ಒಪ್ಪುವುದಿಲ್ಲ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಬುಧವಾರ ತಿರುವನಂತಪುರಂನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಆರೋಗ್ಯ ಕೇಂದ್ರಗಳಿಗೆ ಮರುನಾಮಕರಣ ಮಾಡದ ಹೊರತು ಅನುದಾನ ನೀಡಲು ಕೇಂದ್ರ ನಿರಾಕರಿಸಿದೆ. ಕೇಂದ್ರ ಮೊದಲು ಕೋ-ಬ್ರಾಂಡಿಂಗ್‌ಗೆ ಒತ್ತಡ ಹೇರಿತ್ತು. ಅದರಂತೆ ನಾವು ಆರೋಗ್ಯ ಕೇಂದ್ರಗಳ ನಾಮಫಲಕಗಳಲ್ಲಿ ಕೇಂದ್ರ ಸರ್ಕಾರ ನೀಡಿದ ಆರು ಚಿಹ್ನೆಗಳನ್ನು ಸೇರಿಸಿದೆವು. ಕೇಂದ್ರ ನಿರ್ದೇಶನ ನೀಡುವುದಕ್ಕಿಂತ ಒಂದೆರಡು ವರ್ಷಗಳ ಮೊದಲು ನಿರ್ಮಿಸಿದ್ದ ಆರೋಗ್ಯ ಕೇಂದ್ರಗಳ ನಾಮಫಲಕಗಳಲ್ಲಿ ನಾವು ಈ ಬದಲಾವಣೆ ಮಾಡಿದ್ದೆವು. ಆದರೆ, ಈಗ ಅವರು ಸಂಪೂರ್ಣ ಮರುನಾಮಕರಣಕ್ಕೆ ಒತ್ತಾಯಿಸುತ್ತಿದ್ದಾರೆ. ಮರುನಾಮಕರಣದ ಬಳಿಕವಷ್ಟೇ ಅನುದಾನ ನೀಡುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಅನುದಾನ ನೀಡಿದ ಕಾರಣ ಆರೋಗ್ಯ ಕೇಂದ್ರಗಳ ನಿರ್ವಹಣೆ ಕಷ್ಟವಾಗುತ್ತಿದೆ. ಪ್ರಸ್ತುತ, ರಾಜ್ಯ ಸರ್ಕಾರ ಮೀಸಲಿಟ್ಟ ಹಣದಲ್ಲಿ ಆರೋಗ್ಯ ಕೇಂದ್ರಗಳನ್ನು ನಿರ್ವಹಣೆ ಮಾಡಲಾಗ್ತಿದೆ. ಆಶಾ ಕಾರ್ಯಕರ್ತೆಯಿರಿಗೆ ವೇತನ ನೀಡಲು ಸಮಸ್ಯೆಯಾಗಿದೆ. ರೋಗಿಗಳಿಗೆ ಪೆರಿಟೋನಿಯಲ್ ಡಯಾಲಿಸಿಸ್‌ಗೆ ಕೊಡು ಹಣವನ್ನು ಕೇಂದ್ರದಿಂದ ನೀಡಲಾಗಿಲ್ಲ. ಇದಕ್ಕಾಗಿ ಕೇಂದ್ರದಿಂದ ರಾಜ್ಯಕ್ಕೆ ಸುಮಾರು 7 ಕೋಟಿ ರೂ. ಬರಲು ಬಾಕಿಯಿದೆ ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಅನುದಾನ ಬಾರದ ಹಿನ್ನೆಲೆ ಬಡ ರೋಗಿಗಳಿಗೆ ಸಮಸ್ಯೆಯಾಗ್ತಿದೆ. ಡಯಾಲಿಸಿಸ್ ವ್ಯವಸ್ಥೆಗಾಗಿ ರಾಜ್ಯ ಸರ್ಕಾರ ವೆಚ್ಚ ಭರಿಸುತ್ತಿದೆ. ಹಣಕಾಸು ವರ್ಷ ನಾಲ್ಕನೇ ಮತ್ತು ಅಂತಿಮ ತ್ರೈಮಾಸಿಕಕ್ಕೆ ತಲುಪಿದರೂ, ಕೇಂದ್ರ ಸರ್ಕಾರದ ಹಂಚಿಕೆಯ ಭಾಗವಾಗಿ ರಾಜ್ಯಕ್ಕೆ ಬರಬೇಕಾದ 826.02 ಕೋಟಿ ರೂ.ಗಳಲ್ಲಿ ಒಂದು ಕಂತನ್ನೂ ಕೇಂದ್ರ ಬಿಡುಗಡೆ ಮಾಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಎನ್‌ಹೆಚ್‌ಎಂನ ಭಾಗವಾಗಿ ನೇಮಕಗೊಂಡಿರುವ ವೈದ್ಯರಿಗೆ ವೇತನ ಪಾವತಿಸಲು ರಾಜ್ಯ ಭಾರೀ ಸಮಸ್ಯೆ ಎದುರಿಸುತ್ತಿದೆ. ಈ ಕುರಿತು ಹಲವು ಬಾರಿ ಕೇಂದ್ರ ಆರೋಗ್ಯ ಸಚಿವರ ಗಮನಕ್ಕೆ ತಂದರೂ, ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಇದು ನಮ್ಮ ಸಂವಿಧಾನದ ಫೆಡರಲ್ ಸ್ವರೂಪಕ್ಕೆ ವಿರುದ್ಧವಾಗಿ. ನಾವು ಅನುದಾನ ಬಿಡುಗಡೆಗೆ ಕೋರಿ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಸಚಿವೆ ದೂರಿದ್ದಾರೆ.

ಇದನ್ನೂ ಓದಿ : ‘ಭಾರತ್ ಜೋಡೋ ನ್ಯಾಯ್‌ ಯಾತ್ರೆ’ಗೆ ಶರತ್ತುಬದ್ಧ ಅನುಮತಿ ನೀಡಿದ ಮಣಿಪುರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...