Homeಮುಖಪುಟಒಂದೇ ದಿನ 61 ಜನ ಗುಣಮುಖ: ಕೇರಳದಲ್ಲೀಗ ಕೇವಲ 34 ಪ್ರಕರಣಗಳು!

ಒಂದೇ ದಿನ 61 ಜನ ಗುಣಮುಖ: ಕೇರಳದಲ್ಲೀಗ ಕೇವಲ 34 ಪ್ರಕರಣಗಳು!

ಸತತ ಮೂರು ದಿನಗಳಿಂದ ಶೂನ್ಯ ಕೊರೊನಾ ಪ್ರಕರಣಗಳನ್ನು ದಾಖಲಿಸುವ ಮೂಲಕ ಕೇರಳ ಹೊಸ ದಾಖಲೆ ಸೃಷ್ಟಿಸಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮಾದರಿ ರಾಜ್ಯವಾಗಿದೆ.

- Advertisement -
- Advertisement -

ದೇಶದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣಗಳಿದ್ದ ಕೇರಳದಲ್ಲಿ ಸತತ ಮೂರನೇ ದಿನ ಯಾವುದೇ ಕೊರೊನಾ ಪಾಸಿಟಿವ್‌ ಪ್ರಕರಣ ದಾಖಲಾಗಿಲ್ಲ. ಅಷ್ಟು ಮಾತ್ರವಲ್ಲದೇ ಇಂದು 61 ಜನರು ಕೊರೊನಾದಿಂದ ಗುಣಮುಖ ಹೊಂದಿ ಡಿಸ್ಚಾರ್ಜ್‌ ಆಗಿದ್ದಾರೆ. ಈಗ ಸದ್ಯಕ್ಕೆ ಅಲ್ಲಿರುವ ಸಕ್ರಿಯ ಸೋಂಕಿತರು ಕೇವಲ 34 ಜನ.

ಸೋಮವಾರ ಕೇರಳದಲ್ಲಿ ಸಂಗ್ರಹಿಸಿದ ಶಂಕಿತರ ಎಲ್ಲಾ ಮಾದರಿಗಳು ಪರೀಕ್ಷೆಯಲ್ಲಿ ಋಣಾತ್ಮಕವಾಗಿ ವರದಿಯಾಗುವ ಮೂಲಕ ಕೊರೊನಾ ವಿರುದ್ದ ಹೋರಾಟದಲ್ಲಿ ಕೇರಳ ಮಹತ್ತರವಾದ ಮೈಲಿಗಲ್ಲು ಸಾಧಿಸಿದೆ.

ತಿರುವನಂತಪುರದಲ್ಲಿ ಪತ್ರಿಕಾಗೋಷ್ಠಿ ಮಾತನಾಡಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 61 ಮಂದಿ ಸೋಮವಾರ ರೋಗದಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೇವಲ 34 ಜನರು ಮಾತ್ರ ಉಳಿದಿದ್ದಾರೆ ಎಂದು ಹೇಳಿದ್ದಾರೆ.

ಈವರೆಗೆ ಕೇರಳದಲ್ಲಿ 499 ಕೊರೊನಾ ಪ್ರಕರಣಗಳು ವರದಿಯಾಗಿದ್ದವು. ಈ ಪೈಕಿ 462 ಜನರು ಗುಣಮುಖರಾಗಿದ್ದಾರೆ. ಮೂವರು ಮರಣ ಹೊಂದಿದ್ದಾರೆ. ಒಟ್ಟು ವೀಕ್ಷಣೆಯಲ್ಲಿರುವ 21,724 ಜನರಲ್ಲಿ, 213,52 ಜನರನ್ನು ಮನೆ ಸಂಪರ್ಕತಡೆಯಲ್ಲಿ ಇಡಲಾಗಿದ್ದು ಉಳಿದ 372 ಜನರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕೊರೊನಾ ಪರೀಕ್ಷೆಗಳಿಗೆ ಕಳುಹಿಸಲಾದ ಒಟ್ಟು 33,010 ಮಾದರಿಗಳಲ್ಲಿ 32,315 ಋಣಾತ್ಮಕವಾಗಿವೆ.

ಕೇರಳ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ಪ್ರಕರಣಗಳು ವರದಿಯಾಗಿದ್ದವು, ಆದರೆ ಇತ್ತೀಚಿನ ಸುದ್ದಿಯಂತೆ ತಿರುವನಂತಪುರಂ, ಕೋಳಿಕೋಡ್, ಮಲಪ್ಪುರಂ ಮೂರು ಜಿಲ್ಲೆಗಳು ಕೊರೊನಾ ಮುಕ್ತ ಜಿಲ್ಲೆಗಳಾಗಿ ಘೋಣೆಯಾಗಿವೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇರಳದಲ್ಲಿ 84 ಹಾಟ್‌ಸ್ಪಾಟ್‌ಗಳಿದ್ದು, ಸೋಮವಾರ ಹಾಟ್‌ಸ್ಪಾಟ್ ಪಟ್ಟಿಗೆ ಯಾವುದೇ ಹೊಸ ಸೇರ್ಪಡೆ ಮಾಡಲಿಲ್ಲ ಎಂದಿರುವ ಅವರು, ಭಾರತದಾದ್ಯಂತ 1.65 ಲಕ್ಷಕ್ಕೂ ಹೆಚ್ಚು ಜನರು ಕೇರಳಕ್ಕೆ ಮರಳಲು ಬಯಸುತ್ತಿದ್ದು, ಇದರಲ್ಲಿ ಕರ್ನಾಟಕವೂ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.

ಇದುವರೆಗೆ 28,272 ಜನರು ಪಾಸ್‌ಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈವರೆಗೆ 5,470 ಪಾಸ್‌ಗಳನ್ನು ವಿತರಿಸಲಾಗಿದೆ ಎನ್ನಲಾಗಿದೆ. ಅಲ್ಲದೆ ಸೋಮವಾರ ಮಧ್ಯಾಹ್ನದವರೆಗೆ 515 ಜನರು ಕೇರಳ ತಲುಪಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಕೇರಳ ಅಂತರರಾಜ್ಯ ವಲಸೆ ಕಾರ್ಮಿಕರಿಗಾಗಿ ವಿಶೇಷ ರೈಲುಗಳನ್ನು ವ್ಯವಸ್ಥೆಗೊಳಿಸಿದ್ದು ಅದರಲ್ಲೆ, ಭಾರತದ ಇತರ ಭಾಗಗಳಲ್ಲಿ ಸಿಲುಕಿರುವ ಕೇರಳಿಗರನ್ನು ಮರಳಿ ತರಲು ಈ ರೈಲುಗಳನ್ನು ಬಳಸಬೇಕು ಎಂದು ಪಣರಾಯಿ ತಿಳಿಸಿದ್ದಾರೆ.

ಕೇರಳದಿಂದ ಸೋಮವಾರ 13,518 ಅಂತರರಾಜ್ಯ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಮರಳಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇರಳ ಸರ್ಕಾರ ಮತ್ತು ಜನತೆಯ ಪ್ರಬುದ್ಧತೆ


ವಿಡಿಯೊ ನೋಡಿ: ಸದ್ದು , ಈ ಸುದ್ದಿಗಳೇನಾಗಿದೆ ??


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...