Homeಮುಖಪುಟಒಂದೇ ದಿನ 61 ಜನ ಗುಣಮುಖ: ಕೇರಳದಲ್ಲೀಗ ಕೇವಲ 34 ಪ್ರಕರಣಗಳು!

ಒಂದೇ ದಿನ 61 ಜನ ಗುಣಮುಖ: ಕೇರಳದಲ್ಲೀಗ ಕೇವಲ 34 ಪ್ರಕರಣಗಳು!

ಸತತ ಮೂರು ದಿನಗಳಿಂದ ಶೂನ್ಯ ಕೊರೊನಾ ಪ್ರಕರಣಗಳನ್ನು ದಾಖಲಿಸುವ ಮೂಲಕ ಕೇರಳ ಹೊಸ ದಾಖಲೆ ಸೃಷ್ಟಿಸಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮಾದರಿ ರಾಜ್ಯವಾಗಿದೆ.

- Advertisement -
- Advertisement -

ದೇಶದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣಗಳಿದ್ದ ಕೇರಳದಲ್ಲಿ ಸತತ ಮೂರನೇ ದಿನ ಯಾವುದೇ ಕೊರೊನಾ ಪಾಸಿಟಿವ್‌ ಪ್ರಕರಣ ದಾಖಲಾಗಿಲ್ಲ. ಅಷ್ಟು ಮಾತ್ರವಲ್ಲದೇ ಇಂದು 61 ಜನರು ಕೊರೊನಾದಿಂದ ಗುಣಮುಖ ಹೊಂದಿ ಡಿಸ್ಚಾರ್ಜ್‌ ಆಗಿದ್ದಾರೆ. ಈಗ ಸದ್ಯಕ್ಕೆ ಅಲ್ಲಿರುವ ಸಕ್ರಿಯ ಸೋಂಕಿತರು ಕೇವಲ 34 ಜನ.

ಸೋಮವಾರ ಕೇರಳದಲ್ಲಿ ಸಂಗ್ರಹಿಸಿದ ಶಂಕಿತರ ಎಲ್ಲಾ ಮಾದರಿಗಳು ಪರೀಕ್ಷೆಯಲ್ಲಿ ಋಣಾತ್ಮಕವಾಗಿ ವರದಿಯಾಗುವ ಮೂಲಕ ಕೊರೊನಾ ವಿರುದ್ದ ಹೋರಾಟದಲ್ಲಿ ಕೇರಳ ಮಹತ್ತರವಾದ ಮೈಲಿಗಲ್ಲು ಸಾಧಿಸಿದೆ.

ತಿರುವನಂತಪುರದಲ್ಲಿ ಪತ್ರಿಕಾಗೋಷ್ಠಿ ಮಾತನಾಡಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 61 ಮಂದಿ ಸೋಮವಾರ ರೋಗದಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೇವಲ 34 ಜನರು ಮಾತ್ರ ಉಳಿದಿದ್ದಾರೆ ಎಂದು ಹೇಳಿದ್ದಾರೆ.

ಈವರೆಗೆ ಕೇರಳದಲ್ಲಿ 499 ಕೊರೊನಾ ಪ್ರಕರಣಗಳು ವರದಿಯಾಗಿದ್ದವು. ಈ ಪೈಕಿ 462 ಜನರು ಗುಣಮುಖರಾಗಿದ್ದಾರೆ. ಮೂವರು ಮರಣ ಹೊಂದಿದ್ದಾರೆ. ಒಟ್ಟು ವೀಕ್ಷಣೆಯಲ್ಲಿರುವ 21,724 ಜನರಲ್ಲಿ, 213,52 ಜನರನ್ನು ಮನೆ ಸಂಪರ್ಕತಡೆಯಲ್ಲಿ ಇಡಲಾಗಿದ್ದು ಉಳಿದ 372 ಜನರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕೊರೊನಾ ಪರೀಕ್ಷೆಗಳಿಗೆ ಕಳುಹಿಸಲಾದ ಒಟ್ಟು 33,010 ಮಾದರಿಗಳಲ್ಲಿ 32,315 ಋಣಾತ್ಮಕವಾಗಿವೆ.

ಕೇರಳ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ಪ್ರಕರಣಗಳು ವರದಿಯಾಗಿದ್ದವು, ಆದರೆ ಇತ್ತೀಚಿನ ಸುದ್ದಿಯಂತೆ ತಿರುವನಂತಪುರಂ, ಕೋಳಿಕೋಡ್, ಮಲಪ್ಪುರಂ ಮೂರು ಜಿಲ್ಲೆಗಳು ಕೊರೊನಾ ಮುಕ್ತ ಜಿಲ್ಲೆಗಳಾಗಿ ಘೋಣೆಯಾಗಿವೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇರಳದಲ್ಲಿ 84 ಹಾಟ್‌ಸ್ಪಾಟ್‌ಗಳಿದ್ದು, ಸೋಮವಾರ ಹಾಟ್‌ಸ್ಪಾಟ್ ಪಟ್ಟಿಗೆ ಯಾವುದೇ ಹೊಸ ಸೇರ್ಪಡೆ ಮಾಡಲಿಲ್ಲ ಎಂದಿರುವ ಅವರು, ಭಾರತದಾದ್ಯಂತ 1.65 ಲಕ್ಷಕ್ಕೂ ಹೆಚ್ಚು ಜನರು ಕೇರಳಕ್ಕೆ ಮರಳಲು ಬಯಸುತ್ತಿದ್ದು, ಇದರಲ್ಲಿ ಕರ್ನಾಟಕವೂ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.

ಇದುವರೆಗೆ 28,272 ಜನರು ಪಾಸ್‌ಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈವರೆಗೆ 5,470 ಪಾಸ್‌ಗಳನ್ನು ವಿತರಿಸಲಾಗಿದೆ ಎನ್ನಲಾಗಿದೆ. ಅಲ್ಲದೆ ಸೋಮವಾರ ಮಧ್ಯಾಹ್ನದವರೆಗೆ 515 ಜನರು ಕೇರಳ ತಲುಪಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಕೇರಳ ಅಂತರರಾಜ್ಯ ವಲಸೆ ಕಾರ್ಮಿಕರಿಗಾಗಿ ವಿಶೇಷ ರೈಲುಗಳನ್ನು ವ್ಯವಸ್ಥೆಗೊಳಿಸಿದ್ದು ಅದರಲ್ಲೆ, ಭಾರತದ ಇತರ ಭಾಗಗಳಲ್ಲಿ ಸಿಲುಕಿರುವ ಕೇರಳಿಗರನ್ನು ಮರಳಿ ತರಲು ಈ ರೈಲುಗಳನ್ನು ಬಳಸಬೇಕು ಎಂದು ಪಣರಾಯಿ ತಿಳಿಸಿದ್ದಾರೆ.

ಕೇರಳದಿಂದ ಸೋಮವಾರ 13,518 ಅಂತರರಾಜ್ಯ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಮರಳಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇರಳ ಸರ್ಕಾರ ಮತ್ತು ಜನತೆಯ ಪ್ರಬುದ್ಧತೆ


ವಿಡಿಯೊ ನೋಡಿ: ಸದ್ದು , ಈ ಸುದ್ದಿಗಳೇನಾಗಿದೆ ??


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...