Homeಮುಖಪುಟಒಂದೇ ದಿನ 61 ಜನ ಗುಣಮುಖ: ಕೇರಳದಲ್ಲೀಗ ಕೇವಲ 34 ಪ್ರಕರಣಗಳು!

ಒಂದೇ ದಿನ 61 ಜನ ಗುಣಮುಖ: ಕೇರಳದಲ್ಲೀಗ ಕೇವಲ 34 ಪ್ರಕರಣಗಳು!

ಸತತ ಮೂರು ದಿನಗಳಿಂದ ಶೂನ್ಯ ಕೊರೊನಾ ಪ್ರಕರಣಗಳನ್ನು ದಾಖಲಿಸುವ ಮೂಲಕ ಕೇರಳ ಹೊಸ ದಾಖಲೆ ಸೃಷ್ಟಿಸಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮಾದರಿ ರಾಜ್ಯವಾಗಿದೆ.

- Advertisement -
- Advertisement -

ದೇಶದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣಗಳಿದ್ದ ಕೇರಳದಲ್ಲಿ ಸತತ ಮೂರನೇ ದಿನ ಯಾವುದೇ ಕೊರೊನಾ ಪಾಸಿಟಿವ್‌ ಪ್ರಕರಣ ದಾಖಲಾಗಿಲ್ಲ. ಅಷ್ಟು ಮಾತ್ರವಲ್ಲದೇ ಇಂದು 61 ಜನರು ಕೊರೊನಾದಿಂದ ಗುಣಮುಖ ಹೊಂದಿ ಡಿಸ್ಚಾರ್ಜ್‌ ಆಗಿದ್ದಾರೆ. ಈಗ ಸದ್ಯಕ್ಕೆ ಅಲ್ಲಿರುವ ಸಕ್ರಿಯ ಸೋಂಕಿತರು ಕೇವಲ 34 ಜನ.

ಸೋಮವಾರ ಕೇರಳದಲ್ಲಿ ಸಂಗ್ರಹಿಸಿದ ಶಂಕಿತರ ಎಲ್ಲಾ ಮಾದರಿಗಳು ಪರೀಕ್ಷೆಯಲ್ಲಿ ಋಣಾತ್ಮಕವಾಗಿ ವರದಿಯಾಗುವ ಮೂಲಕ ಕೊರೊನಾ ವಿರುದ್ದ ಹೋರಾಟದಲ್ಲಿ ಕೇರಳ ಮಹತ್ತರವಾದ ಮೈಲಿಗಲ್ಲು ಸಾಧಿಸಿದೆ.

ತಿರುವನಂತಪುರದಲ್ಲಿ ಪತ್ರಿಕಾಗೋಷ್ಠಿ ಮಾತನಾಡಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 61 ಮಂದಿ ಸೋಮವಾರ ರೋಗದಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೇವಲ 34 ಜನರು ಮಾತ್ರ ಉಳಿದಿದ್ದಾರೆ ಎಂದು ಹೇಳಿದ್ದಾರೆ.

ಈವರೆಗೆ ಕೇರಳದಲ್ಲಿ 499 ಕೊರೊನಾ ಪ್ರಕರಣಗಳು ವರದಿಯಾಗಿದ್ದವು. ಈ ಪೈಕಿ 462 ಜನರು ಗುಣಮುಖರಾಗಿದ್ದಾರೆ. ಮೂವರು ಮರಣ ಹೊಂದಿದ್ದಾರೆ. ಒಟ್ಟು ವೀಕ್ಷಣೆಯಲ್ಲಿರುವ 21,724 ಜನರಲ್ಲಿ, 213,52 ಜನರನ್ನು ಮನೆ ಸಂಪರ್ಕತಡೆಯಲ್ಲಿ ಇಡಲಾಗಿದ್ದು ಉಳಿದ 372 ಜನರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕೊರೊನಾ ಪರೀಕ್ಷೆಗಳಿಗೆ ಕಳುಹಿಸಲಾದ ಒಟ್ಟು 33,010 ಮಾದರಿಗಳಲ್ಲಿ 32,315 ಋಣಾತ್ಮಕವಾಗಿವೆ.

ಕೇರಳ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ಪ್ರಕರಣಗಳು ವರದಿಯಾಗಿದ್ದವು, ಆದರೆ ಇತ್ತೀಚಿನ ಸುದ್ದಿಯಂತೆ ತಿರುವನಂತಪುರಂ, ಕೋಳಿಕೋಡ್, ಮಲಪ್ಪುರಂ ಮೂರು ಜಿಲ್ಲೆಗಳು ಕೊರೊನಾ ಮುಕ್ತ ಜಿಲ್ಲೆಗಳಾಗಿ ಘೋಣೆಯಾಗಿವೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇರಳದಲ್ಲಿ 84 ಹಾಟ್‌ಸ್ಪಾಟ್‌ಗಳಿದ್ದು, ಸೋಮವಾರ ಹಾಟ್‌ಸ್ಪಾಟ್ ಪಟ್ಟಿಗೆ ಯಾವುದೇ ಹೊಸ ಸೇರ್ಪಡೆ ಮಾಡಲಿಲ್ಲ ಎಂದಿರುವ ಅವರು, ಭಾರತದಾದ್ಯಂತ 1.65 ಲಕ್ಷಕ್ಕೂ ಹೆಚ್ಚು ಜನರು ಕೇರಳಕ್ಕೆ ಮರಳಲು ಬಯಸುತ್ತಿದ್ದು, ಇದರಲ್ಲಿ ಕರ್ನಾಟಕವೂ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.

ಇದುವರೆಗೆ 28,272 ಜನರು ಪಾಸ್‌ಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈವರೆಗೆ 5,470 ಪಾಸ್‌ಗಳನ್ನು ವಿತರಿಸಲಾಗಿದೆ ಎನ್ನಲಾಗಿದೆ. ಅಲ್ಲದೆ ಸೋಮವಾರ ಮಧ್ಯಾಹ್ನದವರೆಗೆ 515 ಜನರು ಕೇರಳ ತಲುಪಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಕೇರಳ ಅಂತರರಾಜ್ಯ ವಲಸೆ ಕಾರ್ಮಿಕರಿಗಾಗಿ ವಿಶೇಷ ರೈಲುಗಳನ್ನು ವ್ಯವಸ್ಥೆಗೊಳಿಸಿದ್ದು ಅದರಲ್ಲೆ, ಭಾರತದ ಇತರ ಭಾಗಗಳಲ್ಲಿ ಸಿಲುಕಿರುವ ಕೇರಳಿಗರನ್ನು ಮರಳಿ ತರಲು ಈ ರೈಲುಗಳನ್ನು ಬಳಸಬೇಕು ಎಂದು ಪಣರಾಯಿ ತಿಳಿಸಿದ್ದಾರೆ.

ಕೇರಳದಿಂದ ಸೋಮವಾರ 13,518 ಅಂತರರಾಜ್ಯ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಮರಳಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇರಳ ಸರ್ಕಾರ ಮತ್ತು ಜನತೆಯ ಪ್ರಬುದ್ಧತೆ


ವಿಡಿಯೊ ನೋಡಿ: ಸದ್ದು , ಈ ಸುದ್ದಿಗಳೇನಾಗಿದೆ ??


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...