Homeಮುಖಪುಟಕೇರಳ: ವಿವಿ ಸೆನೆಟ್‌ಗೆ ಗವರ್ನರ್ ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನ ರದ್ದುಗೊಳಿಸಿದ ಹೈಕೋರ್ಟ್‌

ಕೇರಳ: ವಿವಿ ಸೆನೆಟ್‌ಗೆ ಗವರ್ನರ್ ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನ ರದ್ದುಗೊಳಿಸಿದ ಹೈಕೋರ್ಟ್‌

- Advertisement -
- Advertisement -

ಕೇರಳ ಗವರ್ನರ್ ಆರಿಫ್ ಮೊಹಮ್ಮದ್ ಖಾನ್‌ಗೆ ಭಾರೀ ಹಿನ್ನಡೆಯಾಗಿದ್ದು, ಕೇರಳ ವಿಶ್ವವಿದ್ಯಾಲಯದ ಸೆನೆಟ್‌ಗೆ ಮಾಡಿದ್ದ ನಾಲ್ವರು ಸದಸ್ಯರ ನಾಮನಿರ್ದೇಶನಗಳನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ.

ರಾಜ್ಯಪಾಲರು ಎಬಿವಿಪಿ ಜೊತೆ ನಂಟಿನ ವಿದ್ಯಾರ್ಥಿಯನ್ನು ವಿಶ್ವವಿದ್ಯಾಲಯದ ಸೆನೆಟ್‌ಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ವಿವಾದ ಭಗಿಲೆದ್ದಿತ್ತು. ಕುಲಪತಿಯಾಗಿ, ಸೆನೆಟ್‌ಗೆ ನೇಮಕಾತಿಗಳನ್ನು ಮಾಡುವುದು ಅವರ ವಿವೇಚನೆಯಾಗಿದೆ ಎಂಬ ರಾಜ್ಯಪಾಲರ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ಅಧಿಕಾರದ ಯಾವುದೇ ಅನಿಯಂತ್ರಿತ ಬಳಕೆಯು ಭಾರತದ ಸಂವಿಧಾನದ 14ನೇ ಪರಿಚ್ಛೇದದಲ್ಲಿ ಪ್ರತಿಪಾದಿಸಲಾದ ‘ಸಮಾನತೆ’ ನಿಯಮವನ್ನು ಮಾತ್ರವಲ್ಲದೆ 16ನೇ ವಿಧಿಯಲ್ಲಿ ಅಂತರ್ಗತವಾಗಿರುವ ‘ತಾರತಮ್ಯ’ ನಿಯಮವನ್ನೂ ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಗವರ್ನರ್ ಸೆನೆಟ್‌ನಿಂದ ತೆಗೆದುಹಾಕಿರುವ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ಜೊತೆ ನಂಟಿನ ನಾಲ್ವರು ವಿದ್ಯಾರ್ಥಿಗಳು ‘1974ರ ಕೇರಳ ವಿಶ್ವವಿದ್ಯಾಲಯ ಕಾಯ್ದೆಯ ಸೆಕ್ಷನ್ 17ರ’ ಅಡಿಯಲ್ಲಿ ಸಲ್ಲಿಸಿದ ಎರಡು ರಿಟ್ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಆರಿಫ್ ಮೊಹಮ್ಮದ್ ಖಾನ್ ಅವರು ನಾಮನಿರ್ದೇಶನಕ್ಕೆ ಸಾಮಾನ್ಯ ವಿಧಾನವನ್ನು ಅನುಸರಿಸಿಲ್ಲ ಮತ್ತು ಯಾವುದೇ ಅರ್ಹತೆ ಇಲ್ಲದ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕೇರಳ ವಿಶ್ವವಿದ್ಯಾನಿಲಯ ಕಾಯಿದೆಯ ಸೆಕ್ಷನ್ 17ರ ಪ್ರಕಾರ ಕುಲಪತಿಗಳು ನಾಲ್ವರು ವಿದ್ಯಾರ್ಥಿಗಳನ್ನು ಸೆನೆಟ್‌ಗೆ ನಾಮನಿರ್ದೇಶನ ಮಾಡುವ ಅಧಿಕಾರವನ್ನು ಹೊಂದಿದ್ದಾರೆ, ಮಾನವಿಕ, ವಿಜ್ಞಾನ, ಕ್ರೀಡೆ ಮತ್ತು ಲಲಿತಕಲೆಗಳಲ್ಲಿ ಅವರ ಅಸಾಧಾರಣ ಶೈಕ್ಷಣಿಕ ಸಾಮರ್ಥ್ಯಗಳಿಂದ ಗುರುತಿಸಿ ಅವರನ್ನು ಸೆನೆಟ್‌ಗೆ ನೇಮಕ ಮಾಡಲಾಗುತ್ತದೆ.

ವಿದ್ಯಾರ್ಥಿಗಳಾದ ಮಾಳವಿಕಾ ಉದಯನ್(ಲಲಿತಕಲೆ), ಸುಧಿ ಸದನ್(ಕ್ರೀಡೆ), ಧ್ರುವಿನ್ ಎಸ್‌ಎಲ್(ವಿಜ್ಞಾನ), ಮತ್ತು ಅಭಿಷೇಕ್ ಡಿ ನಾಯರ್(ಮಾನವೀಯ) ವಿಭಾಗದಿಂದ ರಾಜ್ಯಪಾಲರು ವಿವಿ ಸೆನೆಟ್‌ಗೆ ನಾಮನಿರ್ದೇಶನ ಮಾಡಿದ್ದಾರೆ. ಈ ಎಲ್ಲರೂ ಎಬಿವಿಪಿಯ ಸದಸ್ಯರಾಗಿದ್ದರು.

ನ್ಯಾಯಮೂರ್ತಿ ಸಿ.ಪಿ.ಮುಹಮ್ಮದ್ ನಿಯಾಸ್ ಅವರಿದ್ದ ಏಕಸದಸ್ಯ ಪೀಠ, ನಾಲ್ವರು ನಾಮನಿರ್ದೇಶಿತರ ನಾಮನಿರ್ದೇಶನವನ್ನು ಅನೂರ್ಜಿತಗೊಳಿಸಿದ್ದು, ಆರು ವಾರಗಳಲ್ಲಿ ಹೊಸ ಪಟ್ಟಿಯನ್ನು ಸಲ್ಲಿಸುವಂತೆ ರಾಜ್ಯಪಾಲರಿಗೆ ಸೂಚಿಸಿದೆ.

ಈ ಬಗ್ಗೆ ಎಸ್‌ಎಫ್‌ಐನ ಕೇರಳ ರಾಜ್ಯ ಕಾರ್ಯದರ್ಶಿ ಪಿಎಂ ಅರ್ಶೋ ಮಾತನಾಡಿದ್ದು, ನಾವು ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇವೆ, ಇದು ಕಾನೂನು ಮಾತ್ರವಲ್ಲದೆ ರಾಜ್ಯಪಾಲರಿಗೆ ರಾಜಕೀಯ ಹಿನ್ನಡೆಯೂ ಆಗಿದೆ. ಅವರು ತಮ್ಮ ಸಾಂವಿಧಾನಿಕ ಸ್ಥಾನವನ್ನು ರಾಜಕೀಯವಾಗಿ ಬಳಸಿಕೊಂಡರು ಮತ್ತು ಕೇರಳದ ಕ್ಯಾಂಪಸ್‌ಗಳಲ್ಲಿ ಆರೆಸ್ಸೆಸ್ ಅಜೆಂಡಾವನ್ನು ಜಾರಿಗೆ ತರಲು ಪ್ರಯತ್ನಿಸಿದ್ದರು, ಆದರೆ ಇದೀಗ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...