Homeಮುಖಪುಟಕೇರಳ: ವಿವಿ ಸೆನೆಟ್‌ಗೆ ಗವರ್ನರ್ ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನ ರದ್ದುಗೊಳಿಸಿದ ಹೈಕೋರ್ಟ್‌

ಕೇರಳ: ವಿವಿ ಸೆನೆಟ್‌ಗೆ ಗವರ್ನರ್ ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನ ರದ್ದುಗೊಳಿಸಿದ ಹೈಕೋರ್ಟ್‌

- Advertisement -
- Advertisement -

ಕೇರಳ ಗವರ್ನರ್ ಆರಿಫ್ ಮೊಹಮ್ಮದ್ ಖಾನ್‌ಗೆ ಭಾರೀ ಹಿನ್ನಡೆಯಾಗಿದ್ದು, ಕೇರಳ ವಿಶ್ವವಿದ್ಯಾಲಯದ ಸೆನೆಟ್‌ಗೆ ಮಾಡಿದ್ದ ನಾಲ್ವರು ಸದಸ್ಯರ ನಾಮನಿರ್ದೇಶನಗಳನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ.

ರಾಜ್ಯಪಾಲರು ಎಬಿವಿಪಿ ಜೊತೆ ನಂಟಿನ ವಿದ್ಯಾರ್ಥಿಯನ್ನು ವಿಶ್ವವಿದ್ಯಾಲಯದ ಸೆನೆಟ್‌ಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ವಿವಾದ ಭಗಿಲೆದ್ದಿತ್ತು. ಕುಲಪತಿಯಾಗಿ, ಸೆನೆಟ್‌ಗೆ ನೇಮಕಾತಿಗಳನ್ನು ಮಾಡುವುದು ಅವರ ವಿವೇಚನೆಯಾಗಿದೆ ಎಂಬ ರಾಜ್ಯಪಾಲರ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ಅಧಿಕಾರದ ಯಾವುದೇ ಅನಿಯಂತ್ರಿತ ಬಳಕೆಯು ಭಾರತದ ಸಂವಿಧಾನದ 14ನೇ ಪರಿಚ್ಛೇದದಲ್ಲಿ ಪ್ರತಿಪಾದಿಸಲಾದ ‘ಸಮಾನತೆ’ ನಿಯಮವನ್ನು ಮಾತ್ರವಲ್ಲದೆ 16ನೇ ವಿಧಿಯಲ್ಲಿ ಅಂತರ್ಗತವಾಗಿರುವ ‘ತಾರತಮ್ಯ’ ನಿಯಮವನ್ನೂ ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಗವರ್ನರ್ ಸೆನೆಟ್‌ನಿಂದ ತೆಗೆದುಹಾಕಿರುವ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ಜೊತೆ ನಂಟಿನ ನಾಲ್ವರು ವಿದ್ಯಾರ್ಥಿಗಳು ‘1974ರ ಕೇರಳ ವಿಶ್ವವಿದ್ಯಾಲಯ ಕಾಯ್ದೆಯ ಸೆಕ್ಷನ್ 17ರ’ ಅಡಿಯಲ್ಲಿ ಸಲ್ಲಿಸಿದ ಎರಡು ರಿಟ್ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಆರಿಫ್ ಮೊಹಮ್ಮದ್ ಖಾನ್ ಅವರು ನಾಮನಿರ್ದೇಶನಕ್ಕೆ ಸಾಮಾನ್ಯ ವಿಧಾನವನ್ನು ಅನುಸರಿಸಿಲ್ಲ ಮತ್ತು ಯಾವುದೇ ಅರ್ಹತೆ ಇಲ್ಲದ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕೇರಳ ವಿಶ್ವವಿದ್ಯಾನಿಲಯ ಕಾಯಿದೆಯ ಸೆಕ್ಷನ್ 17ರ ಪ್ರಕಾರ ಕುಲಪತಿಗಳು ನಾಲ್ವರು ವಿದ್ಯಾರ್ಥಿಗಳನ್ನು ಸೆನೆಟ್‌ಗೆ ನಾಮನಿರ್ದೇಶನ ಮಾಡುವ ಅಧಿಕಾರವನ್ನು ಹೊಂದಿದ್ದಾರೆ, ಮಾನವಿಕ, ವಿಜ್ಞಾನ, ಕ್ರೀಡೆ ಮತ್ತು ಲಲಿತಕಲೆಗಳಲ್ಲಿ ಅವರ ಅಸಾಧಾರಣ ಶೈಕ್ಷಣಿಕ ಸಾಮರ್ಥ್ಯಗಳಿಂದ ಗುರುತಿಸಿ ಅವರನ್ನು ಸೆನೆಟ್‌ಗೆ ನೇಮಕ ಮಾಡಲಾಗುತ್ತದೆ.

ವಿದ್ಯಾರ್ಥಿಗಳಾದ ಮಾಳವಿಕಾ ಉದಯನ್(ಲಲಿತಕಲೆ), ಸುಧಿ ಸದನ್(ಕ್ರೀಡೆ), ಧ್ರುವಿನ್ ಎಸ್‌ಎಲ್(ವಿಜ್ಞಾನ), ಮತ್ತು ಅಭಿಷೇಕ್ ಡಿ ನಾಯರ್(ಮಾನವೀಯ) ವಿಭಾಗದಿಂದ ರಾಜ್ಯಪಾಲರು ವಿವಿ ಸೆನೆಟ್‌ಗೆ ನಾಮನಿರ್ದೇಶನ ಮಾಡಿದ್ದಾರೆ. ಈ ಎಲ್ಲರೂ ಎಬಿವಿಪಿಯ ಸದಸ್ಯರಾಗಿದ್ದರು.

ನ್ಯಾಯಮೂರ್ತಿ ಸಿ.ಪಿ.ಮುಹಮ್ಮದ್ ನಿಯಾಸ್ ಅವರಿದ್ದ ಏಕಸದಸ್ಯ ಪೀಠ, ನಾಲ್ವರು ನಾಮನಿರ್ದೇಶಿತರ ನಾಮನಿರ್ದೇಶನವನ್ನು ಅನೂರ್ಜಿತಗೊಳಿಸಿದ್ದು, ಆರು ವಾರಗಳಲ್ಲಿ ಹೊಸ ಪಟ್ಟಿಯನ್ನು ಸಲ್ಲಿಸುವಂತೆ ರಾಜ್ಯಪಾಲರಿಗೆ ಸೂಚಿಸಿದೆ.

ಈ ಬಗ್ಗೆ ಎಸ್‌ಎಫ್‌ಐನ ಕೇರಳ ರಾಜ್ಯ ಕಾರ್ಯದರ್ಶಿ ಪಿಎಂ ಅರ್ಶೋ ಮಾತನಾಡಿದ್ದು, ನಾವು ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇವೆ, ಇದು ಕಾನೂನು ಮಾತ್ರವಲ್ಲದೆ ರಾಜ್ಯಪಾಲರಿಗೆ ರಾಜಕೀಯ ಹಿನ್ನಡೆಯೂ ಆಗಿದೆ. ಅವರು ತಮ್ಮ ಸಾಂವಿಧಾನಿಕ ಸ್ಥಾನವನ್ನು ರಾಜಕೀಯವಾಗಿ ಬಳಸಿಕೊಂಡರು ಮತ್ತು ಕೇರಳದ ಕ್ಯಾಂಪಸ್‌ಗಳಲ್ಲಿ ಆರೆಸ್ಸೆಸ್ ಅಜೆಂಡಾವನ್ನು ಜಾರಿಗೆ ತರಲು ಪ್ರಯತ್ನಿಸಿದ್ದರು, ಆದರೆ ಇದೀಗ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...