Homeಮುಖಪುಟಕೇರಳ: ವಿವಿ ಸೆನೆಟ್‌ಗೆ ಗವರ್ನರ್ ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನ ರದ್ದುಗೊಳಿಸಿದ ಹೈಕೋರ್ಟ್‌

ಕೇರಳ: ವಿವಿ ಸೆನೆಟ್‌ಗೆ ಗವರ್ನರ್ ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನ ರದ್ದುಗೊಳಿಸಿದ ಹೈಕೋರ್ಟ್‌

- Advertisement -
- Advertisement -

ಕೇರಳ ಗವರ್ನರ್ ಆರಿಫ್ ಮೊಹಮ್ಮದ್ ಖಾನ್‌ಗೆ ಭಾರೀ ಹಿನ್ನಡೆಯಾಗಿದ್ದು, ಕೇರಳ ವಿಶ್ವವಿದ್ಯಾಲಯದ ಸೆನೆಟ್‌ಗೆ ಮಾಡಿದ್ದ ನಾಲ್ವರು ಸದಸ್ಯರ ನಾಮನಿರ್ದೇಶನಗಳನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ.

ರಾಜ್ಯಪಾಲರು ಎಬಿವಿಪಿ ಜೊತೆ ನಂಟಿನ ವಿದ್ಯಾರ್ಥಿಯನ್ನು ವಿಶ್ವವಿದ್ಯಾಲಯದ ಸೆನೆಟ್‌ಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ವಿವಾದ ಭಗಿಲೆದ್ದಿತ್ತು. ಕುಲಪತಿಯಾಗಿ, ಸೆನೆಟ್‌ಗೆ ನೇಮಕಾತಿಗಳನ್ನು ಮಾಡುವುದು ಅವರ ವಿವೇಚನೆಯಾಗಿದೆ ಎಂಬ ರಾಜ್ಯಪಾಲರ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ಅಧಿಕಾರದ ಯಾವುದೇ ಅನಿಯಂತ್ರಿತ ಬಳಕೆಯು ಭಾರತದ ಸಂವಿಧಾನದ 14ನೇ ಪರಿಚ್ಛೇದದಲ್ಲಿ ಪ್ರತಿಪಾದಿಸಲಾದ ‘ಸಮಾನತೆ’ ನಿಯಮವನ್ನು ಮಾತ್ರವಲ್ಲದೆ 16ನೇ ವಿಧಿಯಲ್ಲಿ ಅಂತರ್ಗತವಾಗಿರುವ ‘ತಾರತಮ್ಯ’ ನಿಯಮವನ್ನೂ ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಗವರ್ನರ್ ಸೆನೆಟ್‌ನಿಂದ ತೆಗೆದುಹಾಕಿರುವ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ಜೊತೆ ನಂಟಿನ ನಾಲ್ವರು ವಿದ್ಯಾರ್ಥಿಗಳು ‘1974ರ ಕೇರಳ ವಿಶ್ವವಿದ್ಯಾಲಯ ಕಾಯ್ದೆಯ ಸೆಕ್ಷನ್ 17ರ’ ಅಡಿಯಲ್ಲಿ ಸಲ್ಲಿಸಿದ ಎರಡು ರಿಟ್ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಆರಿಫ್ ಮೊಹಮ್ಮದ್ ಖಾನ್ ಅವರು ನಾಮನಿರ್ದೇಶನಕ್ಕೆ ಸಾಮಾನ್ಯ ವಿಧಾನವನ್ನು ಅನುಸರಿಸಿಲ್ಲ ಮತ್ತು ಯಾವುದೇ ಅರ್ಹತೆ ಇಲ್ಲದ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕೇರಳ ವಿಶ್ವವಿದ್ಯಾನಿಲಯ ಕಾಯಿದೆಯ ಸೆಕ್ಷನ್ 17ರ ಪ್ರಕಾರ ಕುಲಪತಿಗಳು ನಾಲ್ವರು ವಿದ್ಯಾರ್ಥಿಗಳನ್ನು ಸೆನೆಟ್‌ಗೆ ನಾಮನಿರ್ದೇಶನ ಮಾಡುವ ಅಧಿಕಾರವನ್ನು ಹೊಂದಿದ್ದಾರೆ, ಮಾನವಿಕ, ವಿಜ್ಞಾನ, ಕ್ರೀಡೆ ಮತ್ತು ಲಲಿತಕಲೆಗಳಲ್ಲಿ ಅವರ ಅಸಾಧಾರಣ ಶೈಕ್ಷಣಿಕ ಸಾಮರ್ಥ್ಯಗಳಿಂದ ಗುರುತಿಸಿ ಅವರನ್ನು ಸೆನೆಟ್‌ಗೆ ನೇಮಕ ಮಾಡಲಾಗುತ್ತದೆ.

ವಿದ್ಯಾರ್ಥಿಗಳಾದ ಮಾಳವಿಕಾ ಉದಯನ್(ಲಲಿತಕಲೆ), ಸುಧಿ ಸದನ್(ಕ್ರೀಡೆ), ಧ್ರುವಿನ್ ಎಸ್‌ಎಲ್(ವಿಜ್ಞಾನ), ಮತ್ತು ಅಭಿಷೇಕ್ ಡಿ ನಾಯರ್(ಮಾನವೀಯ) ವಿಭಾಗದಿಂದ ರಾಜ್ಯಪಾಲರು ವಿವಿ ಸೆನೆಟ್‌ಗೆ ನಾಮನಿರ್ದೇಶನ ಮಾಡಿದ್ದಾರೆ. ಈ ಎಲ್ಲರೂ ಎಬಿವಿಪಿಯ ಸದಸ್ಯರಾಗಿದ್ದರು.

ನ್ಯಾಯಮೂರ್ತಿ ಸಿ.ಪಿ.ಮುಹಮ್ಮದ್ ನಿಯಾಸ್ ಅವರಿದ್ದ ಏಕಸದಸ್ಯ ಪೀಠ, ನಾಲ್ವರು ನಾಮನಿರ್ದೇಶಿತರ ನಾಮನಿರ್ದೇಶನವನ್ನು ಅನೂರ್ಜಿತಗೊಳಿಸಿದ್ದು, ಆರು ವಾರಗಳಲ್ಲಿ ಹೊಸ ಪಟ್ಟಿಯನ್ನು ಸಲ್ಲಿಸುವಂತೆ ರಾಜ್ಯಪಾಲರಿಗೆ ಸೂಚಿಸಿದೆ.

ಈ ಬಗ್ಗೆ ಎಸ್‌ಎಫ್‌ಐನ ಕೇರಳ ರಾಜ್ಯ ಕಾರ್ಯದರ್ಶಿ ಪಿಎಂ ಅರ್ಶೋ ಮಾತನಾಡಿದ್ದು, ನಾವು ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇವೆ, ಇದು ಕಾನೂನು ಮಾತ್ರವಲ್ಲದೆ ರಾಜ್ಯಪಾಲರಿಗೆ ರಾಜಕೀಯ ಹಿನ್ನಡೆಯೂ ಆಗಿದೆ. ಅವರು ತಮ್ಮ ಸಾಂವಿಧಾನಿಕ ಸ್ಥಾನವನ್ನು ರಾಜಕೀಯವಾಗಿ ಬಳಸಿಕೊಂಡರು ಮತ್ತು ಕೇರಳದ ಕ್ಯಾಂಪಸ್‌ಗಳಲ್ಲಿ ಆರೆಸ್ಸೆಸ್ ಅಜೆಂಡಾವನ್ನು ಜಾರಿಗೆ ತರಲು ಪ್ರಯತ್ನಿಸಿದ್ದರು, ಆದರೆ ಇದೀಗ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...