Homeಮುಖಪುಟಪುಸ್ತಕ ಬಿಡುಗಡೆಯಲ್ಲಿ ಪಾಲ್ಗೊಳ್ಳಲು ಕೊಲೆ ಅಪರಾಧಿಗೆ ಪೆರೋಲ್: ಅಪ್ಪನ ಪರ ವಾದ ಮಂಡಿಸಿದ ನ್ಯಾಯವಾದಿ ಮಗಳು

ಪುಸ್ತಕ ಬಿಡುಗಡೆಯಲ್ಲಿ ಪಾಲ್ಗೊಳ್ಳಲು ಕೊಲೆ ಅಪರಾಧಿಗೆ ಪೆರೋಲ್: ಅಪ್ಪನ ಪರ ವಾದ ಮಂಡಿಸಿದ ನ್ಯಾಯವಾದಿ ಮಗಳು

- Advertisement -
- Advertisement -

ವಿಶೇಷ ಪ್ರಕರಣವೊಂದರಲ್ಲಿ, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸರಣಿ ಹಂತಕನಿಗೆ ತನ್ನ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇರಳ ಹೈಕೋರ್ಟ್ ಇತ್ತೀಚೆಗೆ ಪೆರೋಲ್ ನೀಡಿದೆ.

ರಿಪ್ಪರ್ ಜಯನಂದನ್‌ ಪೆರೋಲ್ ಪಡೆದ ಅಪರಾಧಿ. ತಾನು ರಚಿಸಿದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಜಯನಂದನ್ ಅವರಿಗೆ ಎರಡು ದಿನಗಳ ಬೆಂಗಾವಲು ಪೆರೋಲ್ ನೀಡಿ ನ್ಯಾಯಮೂರ್ತಿ ಪಿ.ವಿ.ಕುಂಞಿಕೃಷ್ಣನ್ ಆದೇಶಿಸಿದ್ದಾರೆ.

ಗಮನಾರ್ಹ ಸಂಗತಿಯೆಂದರೆ, ಜಯನಂದನ್ ಅವರ ಪತ್ನಿ ಪೆರೋಲ್‌ ಕೋರಿ ಅರ್ಜಿ ಸಲ್ಲಿಸಿದ್ದರು. ಅವರ ಮಗಳು, ವಕೀಲೆ ಕೀರ್ತಿ ಜಯನಂದನ್‌ ಅವರೇ ತನ್ನ ತಂದೆಯ ಬಿಡುಗಡೆಗಾಗಿ ವಾದ ಮಂಡಿಸಿದ್ದಾರೆ.

ಒಂಬತ್ತನೇ ತರಗತಿಯವರೆಗೆ ಮಾತ್ರ ಓದಿರುವ ಜಯನಂದನ್ ಅವರು ಕಳೆದ 17 ವರ್ಷಗಳಿಂದ ಜೈಲಿನಲ್ಲಿದ್ದು ಈ ಅವಧಿಯಲ್ಲಿ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ಈ ವಿಚಾರವನ್ನು ನ್ಯಾಯಾಧೀಶರು ಪೆರೋಲ್‌ ನೀಡುವ ವೇಳೆ ಗಮನಿಸಿದ್ದಾರೆ.

ಜಯನಂದನ್ ಸುಮಾರು 23 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಅವುಗಳಲ್ಲಿ 5 ಕೊಲೆ ಪ್ರಕರಣಗಳಾಗಿವೆ. 3 ಕೊಲೆ ಪ್ರಕರಣಗಳಲ್ಲಿ ಅವರನ್ನು ಖುಲಾಸೆಗೊಳಿಸಲಾಗಿದ್ದು ಎರಡರಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ತನ್ನ 17 ವರ್ಷಗಳ ಸೆರೆವಾಸದ ಅವಧಿಯಲ್ಲಿ ಜಯನಂದನ್ ಈವರೆಗೆ ಎರಡು ಬಾರಿ ಜೈಲಿನಿಂದ ತಪ್ಪಿಸಿಕೊಂಡಿದ್ದರು ಎಂದು ಬಾರ್‌ ಅಂಡ್ ಬೆಂಚ್ ವರದಿ ಮಾಡಿದೆ.

ಜಯನಂದನ್ ರಚಿಸಿದ ‘ಪುಲರಿ ವಿರಿಯುಂ ಮುಂಬೆ’ ಕೃತಿ ಡಿಸೆಂಬರ್ 23ರಂದು ಎರ್ನಾಕುಲಂ ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪೆರೋಲ್ ನೀಡಲಾಗಿದೆ. ಅರ್ಜಿದಾರರ ಪ್ರಕಾರ, ಜಯನಂದನ್ ತನ್ನ ಪುಸ್ತಕದಿಂದ ಬರುವ ಆದಾಯವನ್ನು ವಿಶೇಷ ಅಗತ್ಯತೆ ಇರುವ ಮಕ್ಕಳ ಕಲ್ಯಾಣಕ್ಕಾಗಿ ದಾನ ಮಾಡಲು ಬಯಸಿದ್ದಾರೆ.

ಪುಸ್ತಕ ಬಿಡುಗಡೆಗೆ ಪೆರೋಲ್‌ ನೀಡಲು ಕಾನೂನು ಪ್ರಕಾರ ಅವಕಾಶ ಇಲ್ಲ ಎಂದು ಜೈಲು ಅಧಿಕಾರಿಗಳು ನಿರಾಕರಿಸಿದ್ದರು. ಆದರೆ, ಇಂತಹ ಪ್ರಕರಣಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬಹುದು ಎಂದು ನ್ಯಾಯ ಪೀಠ ತಿಳಿಸಿದೆ.

ಜಯನಂದನ್‌ ಅವರಿಗೆ ನ್ಯಾಯಾಲಯ ಡಿಸೆಂಬರ್ 22ರಿಂದ 23ರವರೆಗೆ (ಇಂದು ಮತ್ತು ನಾಳೆ) ಬೆಂಗಾವಲು ಪೆರೋಲ್ ನೀಡಿದೆ.

ಇದನ್ನೂ ಓದಿ : “ಗೋಮಾಂಸ ಪ್ರಚಾರಕಿಯನ್ನು ದೇವಸ್ಥಾನಕ್ಕೆ ಹೇಗೆ ಬಿಟ್ರು”?..ಯೂಟ್ಯೂಬರ್ ವಿರುದ್ಧ ಧ್ವೇಷ ಹರಡಿದ ಬಲ ಪಂಥೀಯರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...