Homeಮುಖಪುಟವಿವಾದಾತ್ಮಕ ಪೋಸ್ಟ್‌: ರಾಜೀವ್ ಚಂದ್ರಶೇಖರ್ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್

ವಿವಾದಾತ್ಮಕ ಪೋಸ್ಟ್‌: ರಾಜೀವ್ ಚಂದ್ರಶೇಖರ್ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್

- Advertisement -
- Advertisement -

ಕೊಚ್ಚಿ ಸ್ಪೋಟಕ್ಕೆ ಸಂಬಂಧಿಸಿದ ಪೋಸ್ಟ್‌ ಕುರಿತು ದಾಖಲಾದ ಎರಡು ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಡಿ.14 ರವರೆಗೆ ಯಾವುದೇ ಬಲವಂತದ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಕೇರಳ ಹೈಕೋರ್ಟ್ ಬುಧವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.

ಕ್ರಿಶ್ಚಿಯನ್ ಧಾರ್ಮಿಕ ಗುಂಪು ಯೆಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಕೊಚ್ಚಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿ ಸಚಿವ ರಾಜೀವ್ ಚಂದ್ರಶೇಖರ್ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್‌ಗಳನ್ನು ಹಾಕಿದ್ದರು. ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿತ್ತು.

ನ್ಯಾಯಮೂರ್ತಿ ಸಿ ಎಸ್ ಡಯಾಸ್ ಅವರು ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಚಂದ್ರಶೇಖರ್ ಸಲ್ಲಿಸಿದ ಅರ್ಜಿಯನ್ನು ಸ್ವೀಕರಿಸಿದ್ದಾರೆ.  ಎರಡೂ ಪ್ರಕರಣಗಳ ಬಗ್ಗೆ ತನ್ನ ನಿಲುವನ್ನು ಕೋರಿ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಡಿ.14 ರಂದು ಎರಡು ಪ್ರಕರಣಗಳನ್ನು ಹೆಚ್ಚಿನ ವಿಚಾರಣೆಗೆ ದಿನ ನಿಗದಿಗೊಳಿಸಿದ್ದು, ಅಲ್ಲಿಯವರೆಗೆ ಚಂದ್ರಶೇಖರ್ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.

ಯೆಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸ್ಪೋಟಕ್ಕೆ ಸಂಬಂಧಿಸಿ ಸಚಿವ ರಾಜೀವ್ ಚಂದ್ರಶೇಖರ್ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಪೋಸ್ಟ್‌ನ್ನು ಮಾಡಿದ ಆರೋಪದ ಮೇಲೆ ಕೇರಳ ಪೊಲೀಸರು ಮೊದಲು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿದ್ದರು. ಆ ಬಳಿಕ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಡಿಜಿಟಲ್ ಮೀಡಿಯಾ ಕನ್ವೀನರ್ ಪಿ ಸರಿನ್ ಅವರ ದೂರಿನ ಮೇರೆಗೆ ರಾಜೀವ್ ಚಂದ್ರಶೇಖರ್ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿತ್ತು. ಐಪಿಸಿ 153 ಮತ್ತು 153 ಎ ಮತ್ತು ಸೆಕ್ಷನ್ 120 (ಒ) ಅಡಿಯಲ್ಲಿ ರಾಜೀವ್ ಚಂದ್ರಶೇಖರ್‌ ವಿರುದ್ಧ ಎರಡು ಪ್ರಕರಣವನ್ನು ದಾಖಲಿಸಲಾಗಿತ್ತು.

ರಾಜೀವ್ ಚಂದ್ರಶೇಖರ್ ಪೋಸ್ಟ್‌ನಲ್ಲಿ ಏನಿತ್ತು?

ಭ್ರಷ್ಟಾಚಾರದ ಆರೋಪದ ಮೂಲಕ ಅಪಖ್ಯಾತಿ ಪಡೆದ ಸಿಎಂ ಪಿಣರಾಯಿ ವಿಜಯನ್‌  ನಾಚಿಕೆಯಿಲ್ಲದೆ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ ಕೇರಳದಲ್ಲಿ ಜಿಹಾದ್‌ಗಾಗಿ ಹಮಾಸ್‌ನ ಮುಕ್ತ ಕರೆಗಳು ಅಮಾಯಕ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳಿಗೆ ಕಾರಣವಾಗುತ್ತಿವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ರಾಜ್ಯದಲ್ಲಿ ದ್ವೇಷ ಮತ್ತು ಜಿಹಾದ್‌ನ್ನು ಮುಕ್ತವಾಗಿ ಬೋಧಿಸಲು INDIA ಮೈತ್ರಿಕೂಟದ ಎರಡು ರಾಜಕೀಯ ಪಕ್ಷಗಳು ಭಯೋತ್ಪಾದಕ ಸಂಘಟನೆ ಹಮಾಸ್‌ನ ಮುಖ್ಯಸ್ಥರಿಗೆ ಅವಕಾಶ ನೀಡಿರುವುದು ಮಾತ್ರ ಕಷ್ಟ ಎಂದು ಹೇಳಿದ್ದರು.

ಏನಿದು ಘಟನೆ?

ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ  ಯೆಹೋವನ ಸಾಕ್ಷಿಗಳ ಸಮಾವೇಶ ನಡೆಯುತ್ತಿದ್ದ ಜಮ್ರಾ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಮತ್ತು ಎಕ್ಸಿಬಿಷನ್ ಸೆಂಟರ್‌ನಲ್ಲಿ ಅ.29ರಂದು ಪ್ರಾರ್ಥನಾ ಅಧಿವೇಶನಕ್ಕಾಗಿ  ಸುಮಾರು 2,500 ಯೆಹೋವನ ಸಾಕ್ಷಿಗಳು ಸೇರಿದ್ದರು. ಈ ವೇಳೆ ಕನ್ವೆನ್ಷನ್ ಸೆಂಟರ್‌ನಲ್ಲಿ ಸರಣಿ ಸ್ಪೋಟ ಸಂಭವಿಸಿತ್ತು. ಘಟನೆಯಲ್ಲಿ 6 ಮಂದಿ ಮೃತಪಟ್ಟು 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಘಟನೆಯ ಬೆನ್ನಲ್ಲೇ  ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳ ನಂತರ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಗಾಗಿದ್ದ. ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು. ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಇದ್ದೆ. ಅವರ ಸಿದ್ದಾಂತಗಳ ಕುರಿತ ಅಭಿಪ್ರಾಯಗಳ ವ್ಯತ್ಯಾಸದಿಂದ ಕೃತ್ಯ ಎಸಗಿರುವುದಾಗಿ ಆತ ಬಂಧನಕ್ಕೆ ಮೊದಲು ತಾನು ಮಾಡಿದ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...