Homeಮುಖಪುಟಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

- Advertisement -
- Advertisement -

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ರಾಜ್ಯದ ಮಾಜಿ ಹಣಕಾಸು ಸಚಿವ ಟಿಎಂ ಥಾಮಸ್ ಐಸಾಕ್ ಅವರೊಂದಿಗೆ ಹಸ್ತಲಾಘವ ಮಾಡಿದ ವಿದ್ಯಾರ್ಥಿನಿಯನ್ನು ಟೀಕಿಸಿದ್ದ ವ್ಯಕ್ತಿ ವಿರುದ್ದದ ಕ್ರಿಮಿನಲ್‌ ಮೊಕದ್ದಮೆ ರದ್ದತಿಗೆ ಕೇರಳ ಹೈಕೋರ್ಟ್‌ ನಿರಾಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಮುಸ್ಲಿಂ ಸಮುದಾಯದ ಕಾನೂನು ವಿದ್ಯಾರ್ಥಿನಿ ವೇದಿಕೆ ಮೇಲೆ ಸಚಿವರಿಗೆ ಹಸ್ತಲಾಘವ ಮಾಡಿದ್ದರು. ಅದನ್ನು ಟೀಕಿಸಿದ್ದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ವರ್ತನೆ ವ್ಯಭಿಚಾರವಾಗಿದ್ದು, ಶರಿಯತ್‌ ಕಾನೂನಿನ ಉಲ್ಲಂಘನೆ ಎಂದಿದ್ದ ಎಂದು ವರದಿ ತಿಳಿಸಿದೆ.

ಕೋಝಿಕ್ಕೋಡ್‌ ಜಿಲ್ಲೆಯ ಮರ್ಕಝ್ ಕಾನೂನು ಕಾಲೇಜು ಆಯೋಜಿಸಿದ್ದ ಡಾ. ಐಸಾಕ್ ಅವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಬಹುಮಾನ ಸ್ವೀಕರಿಸುವಾಗ ವಿದ್ಯಾರ್ಥಿನಿ ಐಸಾಕ್‌ ಅವರ ಕೈ ಕುಲುಕಿದ್ದರು. ಅದಕ್ಕೆ ಅಬ್ದುಲ್‌ ನೌಷಾದ್‌ ಎಂಬಾತ ಆಕ್ಷೇಪ ವ್ಯಕ್ತಪಡಿಸಿದ್ದ.

ತನಗೆ ಹಾಗೂ ತನ್ನ ಕುಟುಂಬಕ್ಕೆ ಅವಮಾನ ಮಾಡುವ ಸಲುವಾಗಿ ನೌಷಾದ್ ಆರೋಪ ಮಾಡಿರುವುದಾಗಿ ಆತನ ವಿರುದ್ಧ ಕಾನೂನು ವಿದ್ಯಾರ್ಥಿನಿ ಐಪಿಸಿ ಸೆಕ್ಷನ್‌ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಹಾಗೂ ಕೇರಳ ಪೊಲೀಸ್‌ ಕಾಯ್ದೆಯ ಸೆಕ್ಷನ್ 119 (ಎ) (ಮಹಿಳೆಯರ ಘನತೆಗೆ ಚ್ಯುತಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಸಚಿವರೊಂದಿಗೆ ಹಸ್ತಲಾಘವ ಮಾಡುವುದು ವಿದ್ಯಾರ್ಥಿನಿಯ ವೈಯಕ್ತಿಕ ಆಯ್ಕೆಯಾಗಿದ್ದು, ತನ್ನ ಇಚ್ಛೆಗೆ ವಿರುದ್ಧವಾಗಿ ಯಾವುದೇ ಧಾರ್ಮಿಕ ಆಚರಣೆ ಪಾಲಿಸುವಂತೆ ಆಕೆಯನ್ನು ಒತ್ತಾಯಿಸಲಾಗದು ಎಂದು ಅಕ್ಟೋಬರ್ 1 ರಂದು ನೀಡಿದ ಆದೇಶದಲ್ಲಿ, ನ್ಯಾಯಮೂರ್ತಿ ಪಿ ವಿ ಕುಂಞಿಕೃಷ್ಣನ್ ಅವರು ತಿಳಿಸಿದ್ದಾರೆ.

ಧರ್ಮಗಳಲ್ಲಿ, ಅದರಲ್ಲಿಯೂ ಇಸ್ಲಾಂನಲ್ಲಿ ಯಾವುದೇ ಬಲವಂತದ ಹೇರಿಕೆ ಇಲ್ಲ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಧಾರ್ಮಿಕ ನಂಬಿಕೆಗಳು ವೈಯಕ್ತಿಕವಾದವು. ಧರ್ಮದಲ್ಲಿ, ವಿಶೇಷವಾಗಿ ಇಸ್ಲಾಂನಲ್ಲಿ ಯಾವುದೇ ಬಲವಂತದ ಹೇರಿಕೆ ಇಲ್ಲ. ಒಬ್ಬರು ಧಾರ್ಮಿಕ ಆಚರಣೆ ಪಾಲಿಸುವಂತೆ ಇನ್ನೊಬ್ಬರನ್ನು ಒತ್ತಾಯಿಸುವಂತಿಲ್ಲ. ಧಾರ್ಮಿಕ ಆಚರಣೆ ಈ ದೇಶದ ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಆಯ್ಕೆಯಾಗಿದೆ. ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ, ಆರೋಗ್ಯ ಮತ್ತು ಸಂವಿಧಾನದ ಸಂಬಂಧಿತ ನಿಯಮಾವಳಿಗಳಿಗೆ ಒಳಪಟ್ಟು ಎಲ್ಲಾ ವ್ಯಕ್ತಿಗಳು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಸಮಾನವಾಗಿ ಅರ್ಹರಾಗಿದ್ದು, ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಭಾರತದ ಸಂವಿಧಾನದ 25 ನೇ ವಿಧಿ ಹೇಳುತ್ತದೆ” ಎಂಬುದಾಗಿ ನ್ಯಾಯಾಲಯ ತಿಳಿಸಿದೆ.

ಧರ್ಮವನ್ನು ಪ್ರಚಾರ ಮಾಡುವ ಹಕ್ಕು ಎಂದರೆ ಧಾರ್ಮಿಕ ಆಚರಣೆಗಳನ್ನು ಉಳಿದವರ ಮೇಲೆ ಹೇರಬಹುದು ಎಂದರ್ಥವಲ್ಲ. ಸಂವಿಧಾನದ 25 ರಿಂದ 28 ನೇ ವಿಧಿಯು ಒಬ್ಬ ವ್ಯಕ್ತಿ ತನ್ನ ಧಾರ್ಮಿಕ ನಂಬಿಕೆಗಳನ್ನು ಇನ್ನೊಬ್ಬರ ಮೇಲೆ ಹೇರಲು ಅನುಮತಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಧರ್ಮ ಗ್ರಂಥಗಳು ಕೂಡ ವೈಯಕ್ತಿಕ ಸ್ವಾತಂತ್ರ್ಯವನ್ನು ಉತ್ತೇಜಿಸುತ್ತವೆ ಮತ್ತು ಇನ್ನೊಬ್ಬ ವ್ಯಕ್ತಿಯ ಮೇಲೆ ಧಾರ್ಮಿಕ ನಂಬಿಕೆಗಳು ಅಥವಾ ಆಚರಣೆ ಹೇರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಖುರಾನ್‌ ಸಾಲುಗಳನ್ನು ಉಲ್ಲೇಖಿಸಿದೆ ಎಂದು ಬಾರ್ & ಬೆಂಚ್ ವಿವರಿಸಿದೆ.

ಪ್ರಕರಣದ ಸತ್ಯಾಸತ್ಯತೆ ಪರಿಗಣಿಸಿ ತನ್ನ ವಿರುದ್ಧದ ಆರೋಪಗಳು ಈ ಸೆಕ್ಷನ್‌ಗಳಡಿ ಬರುವುದಿಲ್ಲ. ಹೀಗಾಗಿ ತನ್ನ ವಿರುದ್ಧದ ವಿಚಾರಣೆ ರದ್ದುಗೊಳಿಸಬೇಕು ಎನ್ನುವುದು ಆರೋಪಿ ನೌಷಾದ್‌ ಕೋರಿದ್ದರು.

ಸೌಜನ್ಯ : ಬಾರ್ & ಬೆಂಚ್

ಇದನ್ನೂ ಓದಿ : Jammu and Kashmir Assembly Elections 2024 | ‘ಜಮ್ಮು-ಕಾಶ್ಮೀರ ಮುಂದಿನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ..’; ಫಾರೂಕ್ ಅಬ್ದುಲ್ಲಾ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...