Homeಮುಖಪುಟಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

- Advertisement -
- Advertisement -

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ರಾಜ್ಯದ ಮಾಜಿ ಹಣಕಾಸು ಸಚಿವ ಟಿಎಂ ಥಾಮಸ್ ಐಸಾಕ್ ಅವರೊಂದಿಗೆ ಹಸ್ತಲಾಘವ ಮಾಡಿದ ವಿದ್ಯಾರ್ಥಿನಿಯನ್ನು ಟೀಕಿಸಿದ್ದ ವ್ಯಕ್ತಿ ವಿರುದ್ದದ ಕ್ರಿಮಿನಲ್‌ ಮೊಕದ್ದಮೆ ರದ್ದತಿಗೆ ಕೇರಳ ಹೈಕೋರ್ಟ್‌ ನಿರಾಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಮುಸ್ಲಿಂ ಸಮುದಾಯದ ಕಾನೂನು ವಿದ್ಯಾರ್ಥಿನಿ ವೇದಿಕೆ ಮೇಲೆ ಸಚಿವರಿಗೆ ಹಸ್ತಲಾಘವ ಮಾಡಿದ್ದರು. ಅದನ್ನು ಟೀಕಿಸಿದ್ದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ವರ್ತನೆ ವ್ಯಭಿಚಾರವಾಗಿದ್ದು, ಶರಿಯತ್‌ ಕಾನೂನಿನ ಉಲ್ಲಂಘನೆ ಎಂದಿದ್ದ ಎಂದು ವರದಿ ತಿಳಿಸಿದೆ.

ಕೋಝಿಕ್ಕೋಡ್‌ ಜಿಲ್ಲೆಯ ಮರ್ಕಝ್ ಕಾನೂನು ಕಾಲೇಜು ಆಯೋಜಿಸಿದ್ದ ಡಾ. ಐಸಾಕ್ ಅವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಬಹುಮಾನ ಸ್ವೀಕರಿಸುವಾಗ ವಿದ್ಯಾರ್ಥಿನಿ ಐಸಾಕ್‌ ಅವರ ಕೈ ಕುಲುಕಿದ್ದರು. ಅದಕ್ಕೆ ಅಬ್ದುಲ್‌ ನೌಷಾದ್‌ ಎಂಬಾತ ಆಕ್ಷೇಪ ವ್ಯಕ್ತಪಡಿಸಿದ್ದ.

ತನಗೆ ಹಾಗೂ ತನ್ನ ಕುಟುಂಬಕ್ಕೆ ಅವಮಾನ ಮಾಡುವ ಸಲುವಾಗಿ ನೌಷಾದ್ ಆರೋಪ ಮಾಡಿರುವುದಾಗಿ ಆತನ ವಿರುದ್ಧ ಕಾನೂನು ವಿದ್ಯಾರ್ಥಿನಿ ಐಪಿಸಿ ಸೆಕ್ಷನ್‌ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಹಾಗೂ ಕೇರಳ ಪೊಲೀಸ್‌ ಕಾಯ್ದೆಯ ಸೆಕ್ಷನ್ 119 (ಎ) (ಮಹಿಳೆಯರ ಘನತೆಗೆ ಚ್ಯುತಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಸಚಿವರೊಂದಿಗೆ ಹಸ್ತಲಾಘವ ಮಾಡುವುದು ವಿದ್ಯಾರ್ಥಿನಿಯ ವೈಯಕ್ತಿಕ ಆಯ್ಕೆಯಾಗಿದ್ದು, ತನ್ನ ಇಚ್ಛೆಗೆ ವಿರುದ್ಧವಾಗಿ ಯಾವುದೇ ಧಾರ್ಮಿಕ ಆಚರಣೆ ಪಾಲಿಸುವಂತೆ ಆಕೆಯನ್ನು ಒತ್ತಾಯಿಸಲಾಗದು ಎಂದು ಅಕ್ಟೋಬರ್ 1 ರಂದು ನೀಡಿದ ಆದೇಶದಲ್ಲಿ, ನ್ಯಾಯಮೂರ್ತಿ ಪಿ ವಿ ಕುಂಞಿಕೃಷ್ಣನ್ ಅವರು ತಿಳಿಸಿದ್ದಾರೆ.

ಧರ್ಮಗಳಲ್ಲಿ, ಅದರಲ್ಲಿಯೂ ಇಸ್ಲಾಂನಲ್ಲಿ ಯಾವುದೇ ಬಲವಂತದ ಹೇರಿಕೆ ಇಲ್ಲ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಧಾರ್ಮಿಕ ನಂಬಿಕೆಗಳು ವೈಯಕ್ತಿಕವಾದವು. ಧರ್ಮದಲ್ಲಿ, ವಿಶೇಷವಾಗಿ ಇಸ್ಲಾಂನಲ್ಲಿ ಯಾವುದೇ ಬಲವಂತದ ಹೇರಿಕೆ ಇಲ್ಲ. ಒಬ್ಬರು ಧಾರ್ಮಿಕ ಆಚರಣೆ ಪಾಲಿಸುವಂತೆ ಇನ್ನೊಬ್ಬರನ್ನು ಒತ್ತಾಯಿಸುವಂತಿಲ್ಲ. ಧಾರ್ಮಿಕ ಆಚರಣೆ ಈ ದೇಶದ ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಆಯ್ಕೆಯಾಗಿದೆ. ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ, ಆರೋಗ್ಯ ಮತ್ತು ಸಂವಿಧಾನದ ಸಂಬಂಧಿತ ನಿಯಮಾವಳಿಗಳಿಗೆ ಒಳಪಟ್ಟು ಎಲ್ಲಾ ವ್ಯಕ್ತಿಗಳು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಸಮಾನವಾಗಿ ಅರ್ಹರಾಗಿದ್ದು, ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಭಾರತದ ಸಂವಿಧಾನದ 25 ನೇ ವಿಧಿ ಹೇಳುತ್ತದೆ” ಎಂಬುದಾಗಿ ನ್ಯಾಯಾಲಯ ತಿಳಿಸಿದೆ.

ಧರ್ಮವನ್ನು ಪ್ರಚಾರ ಮಾಡುವ ಹಕ್ಕು ಎಂದರೆ ಧಾರ್ಮಿಕ ಆಚರಣೆಗಳನ್ನು ಉಳಿದವರ ಮೇಲೆ ಹೇರಬಹುದು ಎಂದರ್ಥವಲ್ಲ. ಸಂವಿಧಾನದ 25 ರಿಂದ 28 ನೇ ವಿಧಿಯು ಒಬ್ಬ ವ್ಯಕ್ತಿ ತನ್ನ ಧಾರ್ಮಿಕ ನಂಬಿಕೆಗಳನ್ನು ಇನ್ನೊಬ್ಬರ ಮೇಲೆ ಹೇರಲು ಅನುಮತಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಧರ್ಮ ಗ್ರಂಥಗಳು ಕೂಡ ವೈಯಕ್ತಿಕ ಸ್ವಾತಂತ್ರ್ಯವನ್ನು ಉತ್ತೇಜಿಸುತ್ತವೆ ಮತ್ತು ಇನ್ನೊಬ್ಬ ವ್ಯಕ್ತಿಯ ಮೇಲೆ ಧಾರ್ಮಿಕ ನಂಬಿಕೆಗಳು ಅಥವಾ ಆಚರಣೆ ಹೇರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಖುರಾನ್‌ ಸಾಲುಗಳನ್ನು ಉಲ್ಲೇಖಿಸಿದೆ ಎಂದು ಬಾರ್ & ಬೆಂಚ್ ವಿವರಿಸಿದೆ.

ಪ್ರಕರಣದ ಸತ್ಯಾಸತ್ಯತೆ ಪರಿಗಣಿಸಿ ತನ್ನ ವಿರುದ್ಧದ ಆರೋಪಗಳು ಈ ಸೆಕ್ಷನ್‌ಗಳಡಿ ಬರುವುದಿಲ್ಲ. ಹೀಗಾಗಿ ತನ್ನ ವಿರುದ್ಧದ ವಿಚಾರಣೆ ರದ್ದುಗೊಳಿಸಬೇಕು ಎನ್ನುವುದು ಆರೋಪಿ ನೌಷಾದ್‌ ಕೋರಿದ್ದರು.

ಸೌಜನ್ಯ : ಬಾರ್ & ಬೆಂಚ್

ಇದನ್ನೂ ಓದಿ : Jammu and Kashmir Assembly Elections 2024 | ‘ಜಮ್ಮು-ಕಾಶ್ಮೀರ ಮುಂದಿನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ..’; ಫಾರೂಕ್ ಅಬ್ದುಲ್ಲಾ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...