Homeಮುಖಪುಟಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

- Advertisement -
- Advertisement -

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ರಾಜ್ಯದ ಮಾಜಿ ಹಣಕಾಸು ಸಚಿವ ಟಿಎಂ ಥಾಮಸ್ ಐಸಾಕ್ ಅವರೊಂದಿಗೆ ಹಸ್ತಲಾಘವ ಮಾಡಿದ ವಿದ್ಯಾರ್ಥಿನಿಯನ್ನು ಟೀಕಿಸಿದ್ದ ವ್ಯಕ್ತಿ ವಿರುದ್ದದ ಕ್ರಿಮಿನಲ್‌ ಮೊಕದ್ದಮೆ ರದ್ದತಿಗೆ ಕೇರಳ ಹೈಕೋರ್ಟ್‌ ನಿರಾಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಮುಸ್ಲಿಂ ಸಮುದಾಯದ ಕಾನೂನು ವಿದ್ಯಾರ್ಥಿನಿ ವೇದಿಕೆ ಮೇಲೆ ಸಚಿವರಿಗೆ ಹಸ್ತಲಾಘವ ಮಾಡಿದ್ದರು. ಅದನ್ನು ಟೀಕಿಸಿದ್ದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ವರ್ತನೆ ವ್ಯಭಿಚಾರವಾಗಿದ್ದು, ಶರಿಯತ್‌ ಕಾನೂನಿನ ಉಲ್ಲಂಘನೆ ಎಂದಿದ್ದ ಎಂದು ವರದಿ ತಿಳಿಸಿದೆ.

ಕೋಝಿಕ್ಕೋಡ್‌ ಜಿಲ್ಲೆಯ ಮರ್ಕಝ್ ಕಾನೂನು ಕಾಲೇಜು ಆಯೋಜಿಸಿದ್ದ ಡಾ. ಐಸಾಕ್ ಅವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಬಹುಮಾನ ಸ್ವೀಕರಿಸುವಾಗ ವಿದ್ಯಾರ್ಥಿನಿ ಐಸಾಕ್‌ ಅವರ ಕೈ ಕುಲುಕಿದ್ದರು. ಅದಕ್ಕೆ ಅಬ್ದುಲ್‌ ನೌಷಾದ್‌ ಎಂಬಾತ ಆಕ್ಷೇಪ ವ್ಯಕ್ತಪಡಿಸಿದ್ದ.

ತನಗೆ ಹಾಗೂ ತನ್ನ ಕುಟುಂಬಕ್ಕೆ ಅವಮಾನ ಮಾಡುವ ಸಲುವಾಗಿ ನೌಷಾದ್ ಆರೋಪ ಮಾಡಿರುವುದಾಗಿ ಆತನ ವಿರುದ್ಧ ಕಾನೂನು ವಿದ್ಯಾರ್ಥಿನಿ ಐಪಿಸಿ ಸೆಕ್ಷನ್‌ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಹಾಗೂ ಕೇರಳ ಪೊಲೀಸ್‌ ಕಾಯ್ದೆಯ ಸೆಕ್ಷನ್ 119 (ಎ) (ಮಹಿಳೆಯರ ಘನತೆಗೆ ಚ್ಯುತಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಸಚಿವರೊಂದಿಗೆ ಹಸ್ತಲಾಘವ ಮಾಡುವುದು ವಿದ್ಯಾರ್ಥಿನಿಯ ವೈಯಕ್ತಿಕ ಆಯ್ಕೆಯಾಗಿದ್ದು, ತನ್ನ ಇಚ್ಛೆಗೆ ವಿರುದ್ಧವಾಗಿ ಯಾವುದೇ ಧಾರ್ಮಿಕ ಆಚರಣೆ ಪಾಲಿಸುವಂತೆ ಆಕೆಯನ್ನು ಒತ್ತಾಯಿಸಲಾಗದು ಎಂದು ಅಕ್ಟೋಬರ್ 1 ರಂದು ನೀಡಿದ ಆದೇಶದಲ್ಲಿ, ನ್ಯಾಯಮೂರ್ತಿ ಪಿ ವಿ ಕುಂಞಿಕೃಷ್ಣನ್ ಅವರು ತಿಳಿಸಿದ್ದಾರೆ.

ಧರ್ಮಗಳಲ್ಲಿ, ಅದರಲ್ಲಿಯೂ ಇಸ್ಲಾಂನಲ್ಲಿ ಯಾವುದೇ ಬಲವಂತದ ಹೇರಿಕೆ ಇಲ್ಲ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಧಾರ್ಮಿಕ ನಂಬಿಕೆಗಳು ವೈಯಕ್ತಿಕವಾದವು. ಧರ್ಮದಲ್ಲಿ, ವಿಶೇಷವಾಗಿ ಇಸ್ಲಾಂನಲ್ಲಿ ಯಾವುದೇ ಬಲವಂತದ ಹೇರಿಕೆ ಇಲ್ಲ. ಒಬ್ಬರು ಧಾರ್ಮಿಕ ಆಚರಣೆ ಪಾಲಿಸುವಂತೆ ಇನ್ನೊಬ್ಬರನ್ನು ಒತ್ತಾಯಿಸುವಂತಿಲ್ಲ. ಧಾರ್ಮಿಕ ಆಚರಣೆ ಈ ದೇಶದ ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಆಯ್ಕೆಯಾಗಿದೆ. ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ, ಆರೋಗ್ಯ ಮತ್ತು ಸಂವಿಧಾನದ ಸಂಬಂಧಿತ ನಿಯಮಾವಳಿಗಳಿಗೆ ಒಳಪಟ್ಟು ಎಲ್ಲಾ ವ್ಯಕ್ತಿಗಳು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಸಮಾನವಾಗಿ ಅರ್ಹರಾಗಿದ್ದು, ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಭಾರತದ ಸಂವಿಧಾನದ 25 ನೇ ವಿಧಿ ಹೇಳುತ್ತದೆ” ಎಂಬುದಾಗಿ ನ್ಯಾಯಾಲಯ ತಿಳಿಸಿದೆ.

ಧರ್ಮವನ್ನು ಪ್ರಚಾರ ಮಾಡುವ ಹಕ್ಕು ಎಂದರೆ ಧಾರ್ಮಿಕ ಆಚರಣೆಗಳನ್ನು ಉಳಿದವರ ಮೇಲೆ ಹೇರಬಹುದು ಎಂದರ್ಥವಲ್ಲ. ಸಂವಿಧಾನದ 25 ರಿಂದ 28 ನೇ ವಿಧಿಯು ಒಬ್ಬ ವ್ಯಕ್ತಿ ತನ್ನ ಧಾರ್ಮಿಕ ನಂಬಿಕೆಗಳನ್ನು ಇನ್ನೊಬ್ಬರ ಮೇಲೆ ಹೇರಲು ಅನುಮತಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಧರ್ಮ ಗ್ರಂಥಗಳು ಕೂಡ ವೈಯಕ್ತಿಕ ಸ್ವಾತಂತ್ರ್ಯವನ್ನು ಉತ್ತೇಜಿಸುತ್ತವೆ ಮತ್ತು ಇನ್ನೊಬ್ಬ ವ್ಯಕ್ತಿಯ ಮೇಲೆ ಧಾರ್ಮಿಕ ನಂಬಿಕೆಗಳು ಅಥವಾ ಆಚರಣೆ ಹೇರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಖುರಾನ್‌ ಸಾಲುಗಳನ್ನು ಉಲ್ಲೇಖಿಸಿದೆ ಎಂದು ಬಾರ್ & ಬೆಂಚ್ ವಿವರಿಸಿದೆ.

ಪ್ರಕರಣದ ಸತ್ಯಾಸತ್ಯತೆ ಪರಿಗಣಿಸಿ ತನ್ನ ವಿರುದ್ಧದ ಆರೋಪಗಳು ಈ ಸೆಕ್ಷನ್‌ಗಳಡಿ ಬರುವುದಿಲ್ಲ. ಹೀಗಾಗಿ ತನ್ನ ವಿರುದ್ಧದ ವಿಚಾರಣೆ ರದ್ದುಗೊಳಿಸಬೇಕು ಎನ್ನುವುದು ಆರೋಪಿ ನೌಷಾದ್‌ ಕೋರಿದ್ದರು.

ಸೌಜನ್ಯ : ಬಾರ್ & ಬೆಂಚ್

ಇದನ್ನೂ ಓದಿ : Jammu and Kashmir Assembly Elections 2024 | ‘ಜಮ್ಮು-ಕಾಶ್ಮೀರ ಮುಂದಿನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ..’; ಫಾರೂಕ್ ಅಬ್ದುಲ್ಲಾ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...