Homeಮುಖಪುಟಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

- Advertisement -
- Advertisement -

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ರಾಜ್ಯದ ಮಾಜಿ ಹಣಕಾಸು ಸಚಿವ ಟಿಎಂ ಥಾಮಸ್ ಐಸಾಕ್ ಅವರೊಂದಿಗೆ ಹಸ್ತಲಾಘವ ಮಾಡಿದ ವಿದ್ಯಾರ್ಥಿನಿಯನ್ನು ಟೀಕಿಸಿದ್ದ ವ್ಯಕ್ತಿ ವಿರುದ್ದದ ಕ್ರಿಮಿನಲ್‌ ಮೊಕದ್ದಮೆ ರದ್ದತಿಗೆ ಕೇರಳ ಹೈಕೋರ್ಟ್‌ ನಿರಾಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಮುಸ್ಲಿಂ ಸಮುದಾಯದ ಕಾನೂನು ವಿದ್ಯಾರ್ಥಿನಿ ವೇದಿಕೆ ಮೇಲೆ ಸಚಿವರಿಗೆ ಹಸ್ತಲಾಘವ ಮಾಡಿದ್ದರು. ಅದನ್ನು ಟೀಕಿಸಿದ್ದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ವರ್ತನೆ ವ್ಯಭಿಚಾರವಾಗಿದ್ದು, ಶರಿಯತ್‌ ಕಾನೂನಿನ ಉಲ್ಲಂಘನೆ ಎಂದಿದ್ದ ಎಂದು ವರದಿ ತಿಳಿಸಿದೆ.

ಕೋಝಿಕ್ಕೋಡ್‌ ಜಿಲ್ಲೆಯ ಮರ್ಕಝ್ ಕಾನೂನು ಕಾಲೇಜು ಆಯೋಜಿಸಿದ್ದ ಡಾ. ಐಸಾಕ್ ಅವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಬಹುಮಾನ ಸ್ವೀಕರಿಸುವಾಗ ವಿದ್ಯಾರ್ಥಿನಿ ಐಸಾಕ್‌ ಅವರ ಕೈ ಕುಲುಕಿದ್ದರು. ಅದಕ್ಕೆ ಅಬ್ದುಲ್‌ ನೌಷಾದ್‌ ಎಂಬಾತ ಆಕ್ಷೇಪ ವ್ಯಕ್ತಪಡಿಸಿದ್ದ.

ತನಗೆ ಹಾಗೂ ತನ್ನ ಕುಟುಂಬಕ್ಕೆ ಅವಮಾನ ಮಾಡುವ ಸಲುವಾಗಿ ನೌಷಾದ್ ಆರೋಪ ಮಾಡಿರುವುದಾಗಿ ಆತನ ವಿರುದ್ಧ ಕಾನೂನು ವಿದ್ಯಾರ್ಥಿನಿ ಐಪಿಸಿ ಸೆಕ್ಷನ್‌ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಹಾಗೂ ಕೇರಳ ಪೊಲೀಸ್‌ ಕಾಯ್ದೆಯ ಸೆಕ್ಷನ್ 119 (ಎ) (ಮಹಿಳೆಯರ ಘನತೆಗೆ ಚ್ಯುತಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಸಚಿವರೊಂದಿಗೆ ಹಸ್ತಲಾಘವ ಮಾಡುವುದು ವಿದ್ಯಾರ್ಥಿನಿಯ ವೈಯಕ್ತಿಕ ಆಯ್ಕೆಯಾಗಿದ್ದು, ತನ್ನ ಇಚ್ಛೆಗೆ ವಿರುದ್ಧವಾಗಿ ಯಾವುದೇ ಧಾರ್ಮಿಕ ಆಚರಣೆ ಪಾಲಿಸುವಂತೆ ಆಕೆಯನ್ನು ಒತ್ತಾಯಿಸಲಾಗದು ಎಂದು ಅಕ್ಟೋಬರ್ 1 ರಂದು ನೀಡಿದ ಆದೇಶದಲ್ಲಿ, ನ್ಯಾಯಮೂರ್ತಿ ಪಿ ವಿ ಕುಂಞಿಕೃಷ್ಣನ್ ಅವರು ತಿಳಿಸಿದ್ದಾರೆ.

ಧರ್ಮಗಳಲ್ಲಿ, ಅದರಲ್ಲಿಯೂ ಇಸ್ಲಾಂನಲ್ಲಿ ಯಾವುದೇ ಬಲವಂತದ ಹೇರಿಕೆ ಇಲ್ಲ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಧಾರ್ಮಿಕ ನಂಬಿಕೆಗಳು ವೈಯಕ್ತಿಕವಾದವು. ಧರ್ಮದಲ್ಲಿ, ವಿಶೇಷವಾಗಿ ಇಸ್ಲಾಂನಲ್ಲಿ ಯಾವುದೇ ಬಲವಂತದ ಹೇರಿಕೆ ಇಲ್ಲ. ಒಬ್ಬರು ಧಾರ್ಮಿಕ ಆಚರಣೆ ಪಾಲಿಸುವಂತೆ ಇನ್ನೊಬ್ಬರನ್ನು ಒತ್ತಾಯಿಸುವಂತಿಲ್ಲ. ಧಾರ್ಮಿಕ ಆಚರಣೆ ಈ ದೇಶದ ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಆಯ್ಕೆಯಾಗಿದೆ. ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ, ಆರೋಗ್ಯ ಮತ್ತು ಸಂವಿಧಾನದ ಸಂಬಂಧಿತ ನಿಯಮಾವಳಿಗಳಿಗೆ ಒಳಪಟ್ಟು ಎಲ್ಲಾ ವ್ಯಕ್ತಿಗಳು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಸಮಾನವಾಗಿ ಅರ್ಹರಾಗಿದ್ದು, ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಭಾರತದ ಸಂವಿಧಾನದ 25 ನೇ ವಿಧಿ ಹೇಳುತ್ತದೆ” ಎಂಬುದಾಗಿ ನ್ಯಾಯಾಲಯ ತಿಳಿಸಿದೆ.

ಧರ್ಮವನ್ನು ಪ್ರಚಾರ ಮಾಡುವ ಹಕ್ಕು ಎಂದರೆ ಧಾರ್ಮಿಕ ಆಚರಣೆಗಳನ್ನು ಉಳಿದವರ ಮೇಲೆ ಹೇರಬಹುದು ಎಂದರ್ಥವಲ್ಲ. ಸಂವಿಧಾನದ 25 ರಿಂದ 28 ನೇ ವಿಧಿಯು ಒಬ್ಬ ವ್ಯಕ್ತಿ ತನ್ನ ಧಾರ್ಮಿಕ ನಂಬಿಕೆಗಳನ್ನು ಇನ್ನೊಬ್ಬರ ಮೇಲೆ ಹೇರಲು ಅನುಮತಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಧರ್ಮ ಗ್ರಂಥಗಳು ಕೂಡ ವೈಯಕ್ತಿಕ ಸ್ವಾತಂತ್ರ್ಯವನ್ನು ಉತ್ತೇಜಿಸುತ್ತವೆ ಮತ್ತು ಇನ್ನೊಬ್ಬ ವ್ಯಕ್ತಿಯ ಮೇಲೆ ಧಾರ್ಮಿಕ ನಂಬಿಕೆಗಳು ಅಥವಾ ಆಚರಣೆ ಹೇರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಖುರಾನ್‌ ಸಾಲುಗಳನ್ನು ಉಲ್ಲೇಖಿಸಿದೆ ಎಂದು ಬಾರ್ & ಬೆಂಚ್ ವಿವರಿಸಿದೆ.

ಪ್ರಕರಣದ ಸತ್ಯಾಸತ್ಯತೆ ಪರಿಗಣಿಸಿ ತನ್ನ ವಿರುದ್ಧದ ಆರೋಪಗಳು ಈ ಸೆಕ್ಷನ್‌ಗಳಡಿ ಬರುವುದಿಲ್ಲ. ಹೀಗಾಗಿ ತನ್ನ ವಿರುದ್ಧದ ವಿಚಾರಣೆ ರದ್ದುಗೊಳಿಸಬೇಕು ಎನ್ನುವುದು ಆರೋಪಿ ನೌಷಾದ್‌ ಕೋರಿದ್ದರು.

ಸೌಜನ್ಯ : ಬಾರ್ & ಬೆಂಚ್

ಇದನ್ನೂ ಓದಿ : Jammu and Kashmir Assembly Elections 2024 | ‘ಜಮ್ಮು-ಕಾಶ್ಮೀರ ಮುಂದಿನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ..’; ಫಾರೂಕ್ ಅಬ್ದುಲ್ಲಾ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...