Homeಮುಖಪುಟಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

- Advertisement -
- Advertisement -

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ರಾಜ್ಯದ ಮಾಜಿ ಹಣಕಾಸು ಸಚಿವ ಟಿಎಂ ಥಾಮಸ್ ಐಸಾಕ್ ಅವರೊಂದಿಗೆ ಹಸ್ತಲಾಘವ ಮಾಡಿದ ವಿದ್ಯಾರ್ಥಿನಿಯನ್ನು ಟೀಕಿಸಿದ್ದ ವ್ಯಕ್ತಿ ವಿರುದ್ದದ ಕ್ರಿಮಿನಲ್‌ ಮೊಕದ್ದಮೆ ರದ್ದತಿಗೆ ಕೇರಳ ಹೈಕೋರ್ಟ್‌ ನಿರಾಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಮುಸ್ಲಿಂ ಸಮುದಾಯದ ಕಾನೂನು ವಿದ್ಯಾರ್ಥಿನಿ ವೇದಿಕೆ ಮೇಲೆ ಸಚಿವರಿಗೆ ಹಸ್ತಲಾಘವ ಮಾಡಿದ್ದರು. ಅದನ್ನು ಟೀಕಿಸಿದ್ದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ವರ್ತನೆ ವ್ಯಭಿಚಾರವಾಗಿದ್ದು, ಶರಿಯತ್‌ ಕಾನೂನಿನ ಉಲ್ಲಂಘನೆ ಎಂದಿದ್ದ ಎಂದು ವರದಿ ತಿಳಿಸಿದೆ.

ಕೋಝಿಕ್ಕೋಡ್‌ ಜಿಲ್ಲೆಯ ಮರ್ಕಝ್ ಕಾನೂನು ಕಾಲೇಜು ಆಯೋಜಿಸಿದ್ದ ಡಾ. ಐಸಾಕ್ ಅವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಬಹುಮಾನ ಸ್ವೀಕರಿಸುವಾಗ ವಿದ್ಯಾರ್ಥಿನಿ ಐಸಾಕ್‌ ಅವರ ಕೈ ಕುಲುಕಿದ್ದರು. ಅದಕ್ಕೆ ಅಬ್ದುಲ್‌ ನೌಷಾದ್‌ ಎಂಬಾತ ಆಕ್ಷೇಪ ವ್ಯಕ್ತಪಡಿಸಿದ್ದ.

ತನಗೆ ಹಾಗೂ ತನ್ನ ಕುಟುಂಬಕ್ಕೆ ಅವಮಾನ ಮಾಡುವ ಸಲುವಾಗಿ ನೌಷಾದ್ ಆರೋಪ ಮಾಡಿರುವುದಾಗಿ ಆತನ ವಿರುದ್ಧ ಕಾನೂನು ವಿದ್ಯಾರ್ಥಿನಿ ಐಪಿಸಿ ಸೆಕ್ಷನ್‌ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಹಾಗೂ ಕೇರಳ ಪೊಲೀಸ್‌ ಕಾಯ್ದೆಯ ಸೆಕ್ಷನ್ 119 (ಎ) (ಮಹಿಳೆಯರ ಘನತೆಗೆ ಚ್ಯುತಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಸಚಿವರೊಂದಿಗೆ ಹಸ್ತಲಾಘವ ಮಾಡುವುದು ವಿದ್ಯಾರ್ಥಿನಿಯ ವೈಯಕ್ತಿಕ ಆಯ್ಕೆಯಾಗಿದ್ದು, ತನ್ನ ಇಚ್ಛೆಗೆ ವಿರುದ್ಧವಾಗಿ ಯಾವುದೇ ಧಾರ್ಮಿಕ ಆಚರಣೆ ಪಾಲಿಸುವಂತೆ ಆಕೆಯನ್ನು ಒತ್ತಾಯಿಸಲಾಗದು ಎಂದು ಅಕ್ಟೋಬರ್ 1 ರಂದು ನೀಡಿದ ಆದೇಶದಲ್ಲಿ, ನ್ಯಾಯಮೂರ್ತಿ ಪಿ ವಿ ಕುಂಞಿಕೃಷ್ಣನ್ ಅವರು ತಿಳಿಸಿದ್ದಾರೆ.

ಧರ್ಮಗಳಲ್ಲಿ, ಅದರಲ್ಲಿಯೂ ಇಸ್ಲಾಂನಲ್ಲಿ ಯಾವುದೇ ಬಲವಂತದ ಹೇರಿಕೆ ಇಲ್ಲ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಧಾರ್ಮಿಕ ನಂಬಿಕೆಗಳು ವೈಯಕ್ತಿಕವಾದವು. ಧರ್ಮದಲ್ಲಿ, ವಿಶೇಷವಾಗಿ ಇಸ್ಲಾಂನಲ್ಲಿ ಯಾವುದೇ ಬಲವಂತದ ಹೇರಿಕೆ ಇಲ್ಲ. ಒಬ್ಬರು ಧಾರ್ಮಿಕ ಆಚರಣೆ ಪಾಲಿಸುವಂತೆ ಇನ್ನೊಬ್ಬರನ್ನು ಒತ್ತಾಯಿಸುವಂತಿಲ್ಲ. ಧಾರ್ಮಿಕ ಆಚರಣೆ ಈ ದೇಶದ ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಆಯ್ಕೆಯಾಗಿದೆ. ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ, ಆರೋಗ್ಯ ಮತ್ತು ಸಂವಿಧಾನದ ಸಂಬಂಧಿತ ನಿಯಮಾವಳಿಗಳಿಗೆ ಒಳಪಟ್ಟು ಎಲ್ಲಾ ವ್ಯಕ್ತಿಗಳು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಸಮಾನವಾಗಿ ಅರ್ಹರಾಗಿದ್ದು, ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಭಾರತದ ಸಂವಿಧಾನದ 25 ನೇ ವಿಧಿ ಹೇಳುತ್ತದೆ” ಎಂಬುದಾಗಿ ನ್ಯಾಯಾಲಯ ತಿಳಿಸಿದೆ.

ಧರ್ಮವನ್ನು ಪ್ರಚಾರ ಮಾಡುವ ಹಕ್ಕು ಎಂದರೆ ಧಾರ್ಮಿಕ ಆಚರಣೆಗಳನ್ನು ಉಳಿದವರ ಮೇಲೆ ಹೇರಬಹುದು ಎಂದರ್ಥವಲ್ಲ. ಸಂವಿಧಾನದ 25 ರಿಂದ 28 ನೇ ವಿಧಿಯು ಒಬ್ಬ ವ್ಯಕ್ತಿ ತನ್ನ ಧಾರ್ಮಿಕ ನಂಬಿಕೆಗಳನ್ನು ಇನ್ನೊಬ್ಬರ ಮೇಲೆ ಹೇರಲು ಅನುಮತಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಧರ್ಮ ಗ್ರಂಥಗಳು ಕೂಡ ವೈಯಕ್ತಿಕ ಸ್ವಾತಂತ್ರ್ಯವನ್ನು ಉತ್ತೇಜಿಸುತ್ತವೆ ಮತ್ತು ಇನ್ನೊಬ್ಬ ವ್ಯಕ್ತಿಯ ಮೇಲೆ ಧಾರ್ಮಿಕ ನಂಬಿಕೆಗಳು ಅಥವಾ ಆಚರಣೆ ಹೇರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಖುರಾನ್‌ ಸಾಲುಗಳನ್ನು ಉಲ್ಲೇಖಿಸಿದೆ ಎಂದು ಬಾರ್ & ಬೆಂಚ್ ವಿವರಿಸಿದೆ.

ಪ್ರಕರಣದ ಸತ್ಯಾಸತ್ಯತೆ ಪರಿಗಣಿಸಿ ತನ್ನ ವಿರುದ್ಧದ ಆರೋಪಗಳು ಈ ಸೆಕ್ಷನ್‌ಗಳಡಿ ಬರುವುದಿಲ್ಲ. ಹೀಗಾಗಿ ತನ್ನ ವಿರುದ್ಧದ ವಿಚಾರಣೆ ರದ್ದುಗೊಳಿಸಬೇಕು ಎನ್ನುವುದು ಆರೋಪಿ ನೌಷಾದ್‌ ಕೋರಿದ್ದರು.

ಸೌಜನ್ಯ : ಬಾರ್ & ಬೆಂಚ್

ಇದನ್ನೂ ಓದಿ : Jammu and Kashmir Assembly Elections 2024 | ‘ಜಮ್ಮು-ಕಾಶ್ಮೀರ ಮುಂದಿನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ..’; ಫಾರೂಕ್ ಅಬ್ದುಲ್ಲಾ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...