Homeಮುಖಪುಟ'ಎಲ್ಲಾ ಮುಸ್ಲಿಮರು ಭಯೋತ್ಪಾದಕರು' ಎಂದ ಪ್ರಕರಣ : ಬಿಜೆಪಿ ನಾಯಕ ಪಿ.ಸಿ ಜಾರ್ಜ್‌ಗೆ ನಿರೀಕ್ಷಣಾ ಜಾಮೀನು...

‘ಎಲ್ಲಾ ಮುಸ್ಲಿಮರು ಭಯೋತ್ಪಾದಕರು’ ಎಂದ ಪ್ರಕರಣ : ಬಿಜೆಪಿ ನಾಯಕ ಪಿ.ಸಿ ಜಾರ್ಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

- Advertisement -
- Advertisement -

ಟಿವಿ ವಾಹಿನಿಯಲ್ಲಿ ಚರ್ಚೆಯ ಸಂದರ್ಭ ನೀಡಿದ ದ್ವೇಷದ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಪಿ.ಸಿ ಜಾರ್ಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಶುಕ್ರವಾರ (ಫೆ.21) ತಿರಸ್ಕರಿಸಿದ್ದು, “ಜಾಮೀನು ಕೊಟ್ಟರೆ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ” ಎಂದು ಹೇಳಿದೆ.

ಜನವರಿ 5, 2025ರಂದು ಟಿವಿ ವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ಪಿ.ಸಿ ಜಾರ್ಜ್, “ಭಾರತದಲ್ಲಿರುವ ಎಲ್ಲಾ ಮುಸ್ಲಿಮರು ಭಯೋತ್ಪಾದಕರು ಮತ್ತು ಕೋಮುವಾದಿಗಳು. ಭಾರತದಲ್ಲಿ ಭಯೋತ್ಪಾದಕರಲ್ಲದ ಒಬ್ಬನೇ ಒಬ್ಬ ಮುಸ್ಲಿಂ ಇಲ್ಲ. ಮುಸ್ಲಿಮರು ದೇಶದ ಸಂಪತ್ತನ್ನು ಲೂಟಿ ಮಾಡುವ ಲೂಟಿಕೋರರು. ಮುಸ್ಲಿಂ ರಾಷ್ಟ್ರವನ್ನು ರಚಿಸಲು ಮುಸ್ಲಿಮರು ಲಕ್ಷಾಂತರ ಹಿಂದೂಗಳು ಮತ್ತು ಕ್ರಿಶ್ಚಿಯನ್ನರನ್ನು ಹತ್ಯೆ ಮಾಡಿದ್ದಾರೆ. ಎಲ್ಲಾ ಭಾರತೀಯ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬೇಕು. ಎಲ್ಲಾ ಮುಸ್ಲಿಮರು ಕೋಮು ರಾಕ್ಷಸರು ಮತ್ತು ದುಷ್ಟರು” ಎಂದು ಹೇಳಿದ್ದರು.

“ರಾಜಕಾರಣಿಗಳು ಸಮಾಜಕ್ಕೆ ಮಾದರಿಯಾಗಿರಬೇಕು. ಧರ್ಮ, ಜಾತಿ ಇತ್ಯಾದಿಗಳನ್ನು ಆಧರಿಸಿ ಹೇಳಿಕೆಗಳನ್ನು ನೀಡುವ ಇಂದಿನ ಪ್ರವೃತ್ತಿಯನ್ನು ಚಿಗುರಿನಲ್ಲೇ ಕಿತ್ತೊಗೆಯಬೇಕು. ಏಕೆಂದರೆ ಅವು ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ” ಎಂದು ಜಾಮೀನು ನಿರಾಕರಿಸುವ ವೇಳೆ ನ್ಯಾಯಾಲಯ ಹೇಳಿದೆ.

“ಇಂತಹ (ದ್ವೇಷದ) ಹೇಳಿಕೆಗಳನ್ನು ನೀಡುವ ಅಪರಾಧಿಗೆ ಕೇವಲ ದಂಡ ವಿಧಿಸುವ ಮೂಲಕ ತಪ್ಪಿಸಿಕೊಳ್ಳಲು ಅವಕಾಶ ನೀಡಬೇಕೇ ಎಂಬುದರ ಬಗ್ಗೆ ಸಂಸತ್ತು ಮತ್ತು ಕಾನೂನು ಆಯೋಗ ತೀರ್ಮಾನಿಸಬೇಕು” ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.

ಜಾರ್ಜ್ ಅವರಂತೆ ದ್ವೇಷದ ಹೇಳಿಕೆಗಳನ್ನು ನೀಡುವ ಪ್ರಕರಣಗಳಲ್ಲಿ ಕಡ್ಡಾಯವಾಗಿ ಜೈಲು ಶಿಕ್ಷೆ ವಿಧಿಸುವ ಅಗತ್ಯತೆಯ ಬಗ್ಗೆ ಹೈಕೋರ್ಟ್ ಸಂಸತ್ ಮತ್ತು ಕಾನೂನು ಆಯೋಗದ ಗಮನ ಸೆಳೆದಿದೆ.

ಐಪಿಸಿ ಸೆಕ್ಷನ್ 153 ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು) ಮತ್ತು 295 ಎ (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಅಪರಾಧಗಳಿಗೆ ಕಾರಣವಾಗುವ ಯಾವುದೇ ಹೇಳಿಕೆಯನ್ನು ನೀಡಬಾರದು ಎಂಬ ಷರತ್ತಿನ ಮೇಲೆ 2022ರಲ್ಲಿ ಪಿ.ಸಿ ಜಾರ್ಜ್ ಅವರಿಗೆ ಎರಡು ಪ್ರಕರಣಗಳಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು ಎಂದು ನ್ಯಾಯಮೂರ್ತಿ ಪಿ.ವಿ ಕುನ್ಹಿಕೃಷ್ಣನ್ ಹೇಳಿದ್ದಾರೆ.

ಐಪಿಸಿ ಸೆಕ್ಷನ್‌ಗಳಾದ 153 ಎ ಮತ್ತು 295ಎ ಹೊಸ ಕ್ರಿಮಿನಲ್ ಕಾನೂನು ಬಿಎನ್‌ಎಸ್ ಅಡಿ ಕ್ರಮವಾಗಿ ಸೆಕ್ಷನ್ 196 ಮತ್ತು 299 ಆಗಿದೆ. ಇದರಡಿ ಪಿ.ಸಿ ಜಾರ್ಜ್ ವಿರುದ್ದದ ಇತ್ತೀಚಿನ ಪ್ರಕರಣ ದಾಖಲಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಜಾರ್ಜ್ ಅವರು 2022ರಲ್ಲಿ ನೀಡಲಾದ ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ, ಈಗ ಜಾಮೀನು ಕೊಟ್ಟರೆ ‘ಸಮಾಜಕ್ಕೆ ತಪ್ಪು ಸಂದೇಶ’ ನೀಡಿದಂತಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.

“ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿದರೂ, ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಸಿಗುತ್ತದೆ ಎಂದು ಜನರು ಭಾವಿಸಬಹುದು. ಅಂತಹ ಸಂದೇಶ ಸಮಾಜಕ್ಕೆ ಹೋಗಬಾರದು. ಆದ್ದರಿಂದ, ಅರ್ಜಿದಾರರು (ಜಾರ್ಜ್) ನಿರೀಕ್ಷಣಾ ಜಾಮೀನಿಗೆ ಅರ್ಹರಲ್ಲ ಎಂದು ನಾನು ಪರಿಗಣಿಸುತ್ತೇನೆ. ಈ ಜಾಮೀನು ಅರ್ಜಿ ಸಲ್ಲಿಸಲು ಯಾವುದೇ ಅರ್ಹತೆ ಅವರಿಗೆ ಇಲ್ಲ. ಹಾಗಾಗಿ, ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು ನ್ಯಾಯಮೂರ್ತಿ ಕುನ್ಹಿಕೃಷ್ಣನ್ ತಿಳಿಸಿದ್ದಾರೆ.

“ಕೋಮು ಸೌಹಾರ್ದತೆಗೆ ದಕ್ಕೆ ತರುವಂತಹ ನಿಂದನಾತ್ಮಕ ಹೇಳಿಕೆಗಳನ್ನು ನೀಡಿದ ನಂತರ ಜಾರ್ಜ್ ಅವರು ಕ್ಷಮೆಯಾಚಿಸಿದರೆ, ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

“ಒಂದು ಚಾನೆಲ್‌ನ ನೇರ ಪ್ರಸಾರದ ಚರ್ಚೆಯಲ್ಲಿ ಭಾಗವಹಿಸಿದ್ದೇನೆ, ಲಕ್ಷಾಂತರ ಜನರು ಇದನ್ನು ವೀಕ್ಷಿಸುತ್ತಿದ್ದಾರೆ ಎಂಬ ಪರಿಜ್ಞಾನ ಅರ್ಜಿದಾರರಿಗೆ (ಜಾರ್ಜ್) ಇರಬೇಕಿತ್ತು. ಅಲ್ಲದೆ, ಮರುದಿನ ಫೇಸ್‌ಬುಕ್‌ನಲ್ಲಿ ಕ್ಷಮೆಯಾಚಿಸಿ ಪೋಸ್ಟ್ ಹಾಕುವುದು ಅಲ್ಲ. ಆದ್ದರಿಂದ, ಅರ್ಜಿದಾರರು ಕ್ಷಮೆಯಾಚಿಸಿದ ಮಾತ್ರಕ್ಕೆ ಅಪರಾಧ ಅಳಿಸಿಹೋಗುತ್ತದೆ ಎಂಬುದನ್ನು ನಾನು ಒಪ್ಪಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿ ಕುನ್ಹಿಕೃಷ್ಣನ್ ಹೇಳಿದ್ದಾರೆ.

ಜಾರ್ಜ್ ಪರ ವಕೀಲರು ವಾದ ಮಂಡಿಸಿ, ಕಸ್ಟಡಿ ವಿಚಾರಣೆ ಮಾಡುವ ಅಗತ್ಯವಿಲ್ಲ ಮತ್ತು ಅವರ ಮೇಲೆ ದಾಖಲಾಗಿರುವ ಅಪರಾಧಗಳಿಗೆ ಏಳು ವರ್ಷಗಳಿಗಿಂತ ಕಡಿಮೆ ಜೈಲು ಶಿಕ್ಷೆ ಇದೆ. ಆದ್ದರಿಂದ ಅವರಿಗೆ ನಿರೀಕ್ಷಣಾ ಜಾಮೀನು ನೀಡಬಹುದು” ಎಂದಿದ್ದಾರೆ.

ಆದರೆ, ಹೈಕೋರ್ಟ್ ಈ ವಾದವನ್ನು ತಿರಸ್ಕರಿಸಿದೆ. “ಏಳು ವರ್ಷಗಳಿಗಿಂತ ಕಡಿಮೆ ಜೈಲು ಶಿಕ್ಷೆ ಇರುವ ಪ್ರಕರಣದಲ್ಲಿ ಕಸ್ಟಡಿ ವಿಚಾರಣೆ ಅಥವಾ ಗರಿಷ್ಠ ಜೈಲು ಶಿಕ್ಷೆಯ ಅಗತ್ಯವಿಲ್ಲದಿದ್ದರೆ ನಿಯಮಿತ ರೀತಿಯಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಸಾಧ್ಯವಿಲ್ಲ” ಎಂದಿದೆ.

“ಆರೋಪಿಯ ಪೂರ್ವಾಪರ ಮತ್ತು ಆರೋಪದ ಗಂಭೀರತೆ ಕೂಡ ನ್ಯಾಯಾಲಯ ಪರಿಗಣಿಸಬೇಕಾದ ಪ್ರಮುಖ ಅಂಶಗಳಾಗಿವೆ” ಎಂದು ಹೇಳಿದೆ.

ಅರ್ಜಿದಾರ ( ಜಾರ್ಜ್) ನೀಡಿದ ಹೇಳಿಕೆಗಳ ವಿಡಿಯೋ ನೋಡಿದರೆ, ಪ್ರಾಥಮಿಕವಾಗಿ ಬಿಎನ್‌ಎಸ್‌ನ ಸೆಕ್ಷನ್ 196 ಮತ್ತು 299 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ” ಹೈಕೋರ್ಟ್ ತಿಳಿಸಿದೆ.

ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಪಿಸಿ ಜಾರ್ಜ್ ವಿರುದ್ದ ಮುಸ್ಲಿಂ ಯೂತ್ ಲೀಗ್ ನಾಯಕ ಮುಹಮ್ಮದ್ ಶಿಹಾಬ್ ಅವರು ಎರಟ್ಟುಪೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಕೊಟ್ಟಾಯಂ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಅರ್ಜಿಯನ್ನು ತಿರಸ್ಕರಿಸಿದ ನಂತರ ಪಿ.ಸಿ ಜಾರ್ಜ್ ಹೈಕೋರ್ಟ್‌ ಮೊರೆ ಹೋಗಿದ್ದರು.

ಜಾರ್ಜ್ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 196(1)(ಎ) ಮತ್ತು 299 ಹಾಗೂ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 120(ಒ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...