Homeಮುಖಪುಟಮೋದಿ, ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶನ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್‌

ಮೋದಿ, ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶನ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್‌

- Advertisement -
- Advertisement -

ಗಣರಾಜ್ಯೋತ್ಸವದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶಿಸಿದ ಸಹಾಯಕ ರಿಜಿಸ್ಟ್ರಾರ್ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಕೇರಳ ಹೈಕೋರ್ಟ್ ಅಮಾನತು ಮಾಡಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಶಿಶ್ ಜಿತೇಂದ್ರ ದೇಸಾಯಿ ಅವರು ಘಟನೆಯ ಬಗ್ಗೆ ತನಿಖೆ ನಡೆಸುವಂತೆ ರಿಜಿಸ್ಟ್ರಾರ್ (ವಿಜಿಲೆನ್ಸ್) ಗೆ ನಿರ್ದೇಶನ ನೀಡಿದ್ದಾರೆ ಮತ್ತು ಹೈಕೋರ್ಟ್ ಸಭಾಂಗಣದಲ್ಲಿ ವಿವಾದಾತ್ಮಕ ಕಿರುನಾಟಕ ಪ್ರದರ್ಶನವನ್ನು ಯಾವ ಸಂದರ್ಭಗಳಲ್ಲಿ ನಡೆಸಲಾಯಿತು ಎಂಬುದರ ಕುರಿತು ಆಡಳಿತ ವಿಭಾಗದ ರಿಜಿಸ್ಟ್ರಾರ್  ಅವರಿಂದ ವಿವರಣೆಯನ್ನು ಕೇಳಿದ್ದಾರೆ.

ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರ ನಿರ್ದೇಶನದ ಮೇರೆಗೆ ಸಹಾಯಕ ರಿಜಿಸ್ಟ್ರಾರ್ ಸುಧೀಶ್ ಟಿ ಎ ಮತ್ತು ಕೋರ್ಟ್ ಕೀಪರ್ ಸುಧೀಶ್ ಪಿ ಎಂ ಅವರನ್ನು ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಪಿ ಕೃಷ್ಣ ಕುಮಾರ್ ಅವರು ಅಮಾನತುಗೊಳಿಸಿದ್ದಾರೆ.

‘ಯಾವುದೋ ಒಂದು ವಸ್ತುವಿಗೆ ಔಷಧೀಯ ಗುಣವಿದೆ ಎಂದು ನಾನು ಹೇಳಿದರೆ, ಈ ಮೂರ್ಖರು ಗೋವಿನ ಸಗಣಿ ತಿನ್ನಲು ಸಹ ಹಿಂಜರಿಯುವುದಿಲ್ಲ ಎಂದು ಕಿರುನಾಟಕದಲ್ಲಿ ಒಂದು ಡೈಲಾಗ್ ಹೇಳುತ್ತದೆ. ‘ಅದು ನನ್ನ ಶಕ್ತಿ’ ಎಂದು ಪ್ರಧಾನಿ ಮೋದಿಯ ಪಾತ್ರದಲ್ಲಿ ನಟಿಸಿರುವ ವ್ಯಕ್ತಿಯೊಬ್ಬರು ಹೇಳುತ್ತಿರುವುದು ಕೂಡ ನಾಟಕದಲ್ಲಿದೆ.

ಹೈಕೋರ್ಟ್ ನೌಕರರ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಪ್ರದರ್ಶಿಸಲಾದ ನಾಟಕದಲ್ಲಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ವಿರುದ್ಧ ಅವಹೇಳನಕಾರಿ ಸಂಗತಿಗಳಿವೆ ಎಂದು ಆರೋಪಿಸಿ ಬಿಜೆಪಿ ಕಾನೂನು ಘಟಕವು ಮುಖ್ಯ ನ್ಯಾಯಮೂರ್ತಿಗೆ ದೂರು ನೀಡಿತ್ತು. ಈ ಕಿರುನಾಟಕದಲ್ಲಿ ಕೇಂದ್ರ ಸರ್ಕಾರದ ಪ್ರಮುಖ ಕಾರ್ಯಕ್ರಮಗಳಾದ ಜಲ ಜೀವನ್ ಮಿಷನ್ ಮತ್ತು ಭಾರತ್ ಕಿ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಅವಮಾನಿಸಲಾಗಿದೆ ಎಂದು ಆರೋಪಿಸಲಾಗಿದೆ.

ನಾಟಕವನ್ನು ಸ್ಪಷ್ಟ ರಾಜಕೀಯ ಅಜೆಂಡಾದೊಂದಿಗೆ ಪ್ರದರ್ಶನ ಮಾಡಲಾಗಿದೆ ಮತ್ತು ವಿಷಯಗಳು, ಚಿತ್ರಕಥೆ, ಸಂಭಾಷಣೆಗಳು ಮತ್ತು ಪಾತ್ರಗಳು ಕೇಂದ್ರ ಸರ್ಕಾರ ಮತ್ತು ನಿರ್ದಿಷ್ಟವಾಗಿ ಪ್ರಧಾನ ಮಂತ್ರಿಯ ನೀತಿಗಳನ್ನು ಟೀಕಿಸುತ್ತಿವೆ ಎಂದು ಹೈಕೋರ್ಟ್‌ಗೆ ದೂರು ನೀಡಲಾಗಿತ್ತು. ಹೈಕೋರ್ಟ್ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆದ ನಂತರ ಕಿರುನಾಟಕವನ್ನು ಪ್ರದರ್ಶಿಸಲಾಗಿದೆ ಎಂದು ಕೂಡ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಮಲಯಾಳಂ ಭಾಷೆಯ ನಾಟಕದಲ್ಲಿ ಚಿತ್ರಕಥೆಗಾರ ಮತ್ತು ಪ್ರದರ್ಶಕರು ಪ್ರಧಾನ ಮಂತ್ರಿಯನ್ನು ಲೇವಡಿ ಮಾಡಿದರು ಮತ್ತು ಕೇಂದ್ರ ಸರ್ಕಾರದ ನೀತಿಗಳನ್ನು ಟೀಕಿಸಿದ್ದಾರೆ. ಆಜಾದಿ ಕಾ ಅಮೃತ್ ಮಹೋತ್ಸವವನ್ನು ಸೂಕ್ಷ್ಮವಾಗಿ ಅಪಹಾಸ್ಯ ಮಾಡಲಾಗಿದೆ. ಕಿರುನಾಟಕದಲ್ಲಿ ದೇಶಕ್ಕೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಹೇಳಲಾಗಿತ್ತು. ‘ಆಜಾದಿ ಕಾ ಅಮೃತ್ ಮಹೋತ್ಸವ”ದ ಅಂಗವಾಗಿ ಕೇರಳದ ಹೈಕೋರ್ಟ್ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಬಡತನ ನಿರ್ಮೂಲನೆಯಲ್ಲಿ ವಿಫಲತೆ, ಜಲ್ ಜೀವನ್ ಮಿಷನ್ ಮತ್ತು ಇತರ ಯೋಜನೆಗಳ ವೈಫಲ್ಯಕ್ಕಾಗಿ ಕೇಂದ್ರ ಸರ್ಕಾರವನ್ನು  ಕಿರುನಾಟಕದಲ್ಲಿ ಲೇವಡಿ ಮಾಡಲಾಗಿತ್ತು. ರಾಜಕೀಯ ಉದ್ದೇಶದಿಂದ ದೇಶಕ್ಕೆ ಮಾನಹಾನಿ ಮಾಡುವ ಉದ್ದೇಶದಿಂದ ಈ ಕಿರುನಾಟಕ ಪ್ರದರ್ಶಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಇದನ್ನು ಓದಿ: ‘ಸಂಘಿ’ ಅಲ್ಲ ‘ರಜನಿಕಾಂತ್‌’ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...