Homeಮುಖಪುಟಮಗುವಿನ ಜನನ ಪ್ರಮಾಣಪತ್ರದಲ್ಲಿ 'ಪೋಷಕರು' ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಅನುಮತಿ

ಮಗುವಿನ ಜನನ ಪ್ರಮಾಣಪತ್ರದಲ್ಲಿ ‘ಪೋಷಕರು’ ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಅನುಮತಿ

- Advertisement -
- Advertisement -

ಮಗುವಿನ ಜನನ ಪ್ರಮಾಣಪತ್ರದಲ್ಲಿ ತಮ್ಮ ಹೆಸರನ್ನು ತಂದೆ-ತಾಯಿ ಬದಲಿಗೆ ‘ಪೋಷಕರು’ ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಸೋಮವಾರ (ಜೂನ್ 2) ಅವಕಾಶ ನೀಡಿದೆ.

ಕೇರಳದಲ್ಲಿ ಮೊದಲ ಬಹಿರಂಗವಾಗಿ ಟ್ರಾನ್ಸ್‌ಜೆಂಡರ್ ದಂಪತಿಗಳಾದ ಟ್ರಾನ್ಸ್‌ಮ್ಯಾನ್ ಝಹಾದ್ (ಹುಟ್ಟಿನಲ್ಲೇ ಹೆಣ್ಣು ಎಂದು ಗೊತ್ತುಪಡಿಸಲಾಗಿದೆ ಆದರೆ ಪುರುಷ ಎಂದು ಗುರುತಿಸಲಾಗಿದೆ) ಮತ್ತು ಟ್ರಾನ್ಸ್‌ವುಮನ್ ಝಿಯಾ ಪಾವಲ್ (ಹುಟ್ಟಿನಲ್ಲೇ ಗಂಡು ಎಂದು ಗೊತ್ತುಪಡಿಸಲಾಗಿದೆ ಆದರೆ ಮಹಿಳೆ ಎಂದು ಗುರುತಿಸಲಾಗಿದೆ) ಅವರ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಝಿಯಾದ್ ರೆಹಮಾನ್ ಎಎ ಆದೇಶ ನೀಡಿದ್ದಾರೆ.

ಫೆಬ್ರವರಿ 2023ರಲ್ಲಿ ಝಹಾದ್ ತಮ್ಮ ಮಗುವಿಗೆ ಜನ್ಮ ನೀಡಿದಾಗ, ಈ ಟ್ರಾನ್ಸ್‌ಜೆಂಡರ್ ಜೋಡಿ ಮಾಧ್ಯಮಗಳ ಗಮನ ಸೆಳೆದಿದ್ದರು.

ಕೋಝಿಕ್ಕೋಡ್ ಪಾಲಿಕೆ ನೋಂದಾಯಿಸಿದ ಮಗುವಿನ ಜನನ ಪ್ರಮಾಣಪತ್ರದಲ್ಲಿ ತಾಯಿಯ ಹೆಸರನ್ನು ಝಹಾದ್ (ಟ್ರಾನ್ಸ್‌ಜೆಂಡರ್) ಮತ್ತು ತಂದೆಯ ಹೆಸರನ್ನು ಝಿಯಾ (ಟ್ರಾನ್ಸ್‌ಜೆಂಡರ್) ಎಂದು ದಾಖಲಿಸಲಾಗಿದೆ.

ಝಹಾದ್ ಮತ್ತು ಝಿಯಾ ತಮ್ಮ ಮಗುವಿನ ಜನನ ಪ್ರಮಾಣಪತ್ರದಲ್ಲಿನ ವಿವರಗಳನ್ನು ಬದಲಾಯಿಸಲು ಮತ್ತು ಅವರಿಬ್ಬರನ್ನೂ ತಾಯಿ ಮತ್ತು ತಂದೆಯ ಬದಲು ಕೇವಲ ‘ಪೋಷಕರು’ ಎಂದು ನಮೋದಿಸಲು ಪಾಲಿಕೆಗೆ ಮನವಿ ಮಾಡಿದ್ದರು.

ಪಾಲಿಕೆ ಅಧಿಕಾರಿಗಳು ಅವರ ಮನವಿಯನ್ನು ತಿರಸ್ಕರಿಸಿದ್ದರು. ಹಾಗಾಗಿ, ಜೋಡಿ ಹೈಕೋರ್ಟ್ ಮೊರೆ ಹೋಗಿದ್ದರು.

ತಮ್ಮ ಮನವಿಯನ್ನು ತಿರಸ್ಕರಿಸಿರುವುದು ನಮ್ಮ ಮಗುವಿನ ಮೂಲಭೂತ ಹಕ್ಕಿನ ನಿರಾಕರಣೆಯಾಗಿದೆ ಎಂದು ಜೋಡಿ ತಮ್ಮ ಅರ್ಜಿಯಲ್ಲಿ ಹೇಳಿದ್ದರು. ಅಲ್ಲದೆ, ಹೊಸ ಪ್ರಮಾಣಪತ್ರದ ನಿರಾಕರಣೆಯು ಮಹತ್ವದ NALSA ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ವಿರುದ್ಧವಾಗಿದೆ ಎಂದಿದ್ದರು.

ಇತರ ಹಲವು ದೇಶಗಳು ದಂಪತಿಗಳಿಗೆ ವಿಶೇಷವಾಗಿ ಸಲಿಂಗ ದಂಪತಿಗಳಿಗೆ ತಮ್ಮ ಮಗುವಿನ ಜನನ ಪ್ರಮಾಣಪತ್ರದಲ್ಲಿ ‘ತಾಯಿ, ತಂದೆ ಮತ್ತು ಪೋಷಕರ’ ನಡುವೆ ತಮ್ಮ ಶೀರ್ಷಿಕೆಯನ್ನು ಆಯ್ಕೆ ಮಾಡಲು ಅವಕಾಶ ನೀಡುತ್ತವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಅರ್ಜಿದಾರರ ಪರ ವಕೀಲರಾದ ಪದ್ಮಾ ಲಕ್ಷ್ಮಿ, ಮರಿಯಮ್ಮ ಎಕೆ, ಇಪ್ಸಿತಾ ಓಜಾಲ್, ಪ್ರಶಾಂತ್ ಪದ್ಮನಾಭನ್, ​​ಮೀನಾಕ್ಷಿ ಕೆಬಿ ಮತ್ತು ಪೂಜಾ ಉನ್ನಿಕೃಷ್ಣನ್ ಅವರು ವಾದ ಮಂಡಿಸಿದ್ದರು.

ಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...