Homeಮುಖಪುಟಮಗುವಿನ ಜನನ ಪ್ರಮಾಣಪತ್ರದಲ್ಲಿ 'ಪೋಷಕರು' ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಅನುಮತಿ

ಮಗುವಿನ ಜನನ ಪ್ರಮಾಣಪತ್ರದಲ್ಲಿ ‘ಪೋಷಕರು’ ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಅನುಮತಿ

- Advertisement -
- Advertisement -

ಮಗುವಿನ ಜನನ ಪ್ರಮಾಣಪತ್ರದಲ್ಲಿ ತಮ್ಮ ಹೆಸರನ್ನು ತಂದೆ-ತಾಯಿ ಬದಲಿಗೆ ‘ಪೋಷಕರು’ ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಸೋಮವಾರ (ಜೂನ್ 2) ಅವಕಾಶ ನೀಡಿದೆ.

ಕೇರಳದಲ್ಲಿ ಮೊದಲ ಬಹಿರಂಗವಾಗಿ ಟ್ರಾನ್ಸ್‌ಜೆಂಡರ್ ದಂಪತಿಗಳಾದ ಟ್ರಾನ್ಸ್‌ಮ್ಯಾನ್ ಝಹಾದ್ (ಹುಟ್ಟಿನಲ್ಲೇ ಹೆಣ್ಣು ಎಂದು ಗೊತ್ತುಪಡಿಸಲಾಗಿದೆ ಆದರೆ ಪುರುಷ ಎಂದು ಗುರುತಿಸಲಾಗಿದೆ) ಮತ್ತು ಟ್ರಾನ್ಸ್‌ವುಮನ್ ಝಿಯಾ ಪಾವಲ್ (ಹುಟ್ಟಿನಲ್ಲೇ ಗಂಡು ಎಂದು ಗೊತ್ತುಪಡಿಸಲಾಗಿದೆ ಆದರೆ ಮಹಿಳೆ ಎಂದು ಗುರುತಿಸಲಾಗಿದೆ) ಅವರ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಝಿಯಾದ್ ರೆಹಮಾನ್ ಎಎ ಆದೇಶ ನೀಡಿದ್ದಾರೆ.

ಫೆಬ್ರವರಿ 2023ರಲ್ಲಿ ಝಹಾದ್ ತಮ್ಮ ಮಗುವಿಗೆ ಜನ್ಮ ನೀಡಿದಾಗ, ಈ ಟ್ರಾನ್ಸ್‌ಜೆಂಡರ್ ಜೋಡಿ ಮಾಧ್ಯಮಗಳ ಗಮನ ಸೆಳೆದಿದ್ದರು.

ಕೋಝಿಕ್ಕೋಡ್ ಪಾಲಿಕೆ ನೋಂದಾಯಿಸಿದ ಮಗುವಿನ ಜನನ ಪ್ರಮಾಣಪತ್ರದಲ್ಲಿ ತಾಯಿಯ ಹೆಸರನ್ನು ಝಹಾದ್ (ಟ್ರಾನ್ಸ್‌ಜೆಂಡರ್) ಮತ್ತು ತಂದೆಯ ಹೆಸರನ್ನು ಝಿಯಾ (ಟ್ರಾನ್ಸ್‌ಜೆಂಡರ್) ಎಂದು ದಾಖಲಿಸಲಾಗಿದೆ.

ಝಹಾದ್ ಮತ್ತು ಝಿಯಾ ತಮ್ಮ ಮಗುವಿನ ಜನನ ಪ್ರಮಾಣಪತ್ರದಲ್ಲಿನ ವಿವರಗಳನ್ನು ಬದಲಾಯಿಸಲು ಮತ್ತು ಅವರಿಬ್ಬರನ್ನೂ ತಾಯಿ ಮತ್ತು ತಂದೆಯ ಬದಲು ಕೇವಲ ‘ಪೋಷಕರು’ ಎಂದು ನಮೋದಿಸಲು ಪಾಲಿಕೆಗೆ ಮನವಿ ಮಾಡಿದ್ದರು.

ಪಾಲಿಕೆ ಅಧಿಕಾರಿಗಳು ಅವರ ಮನವಿಯನ್ನು ತಿರಸ್ಕರಿಸಿದ್ದರು. ಹಾಗಾಗಿ, ಜೋಡಿ ಹೈಕೋರ್ಟ್ ಮೊರೆ ಹೋಗಿದ್ದರು.

ತಮ್ಮ ಮನವಿಯನ್ನು ತಿರಸ್ಕರಿಸಿರುವುದು ನಮ್ಮ ಮಗುವಿನ ಮೂಲಭೂತ ಹಕ್ಕಿನ ನಿರಾಕರಣೆಯಾಗಿದೆ ಎಂದು ಜೋಡಿ ತಮ್ಮ ಅರ್ಜಿಯಲ್ಲಿ ಹೇಳಿದ್ದರು. ಅಲ್ಲದೆ, ಹೊಸ ಪ್ರಮಾಣಪತ್ರದ ನಿರಾಕರಣೆಯು ಮಹತ್ವದ NALSA ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ವಿರುದ್ಧವಾಗಿದೆ ಎಂದಿದ್ದರು.

ಇತರ ಹಲವು ದೇಶಗಳು ದಂಪತಿಗಳಿಗೆ ವಿಶೇಷವಾಗಿ ಸಲಿಂಗ ದಂಪತಿಗಳಿಗೆ ತಮ್ಮ ಮಗುವಿನ ಜನನ ಪ್ರಮಾಣಪತ್ರದಲ್ಲಿ ‘ತಾಯಿ, ತಂದೆ ಮತ್ತು ಪೋಷಕರ’ ನಡುವೆ ತಮ್ಮ ಶೀರ್ಷಿಕೆಯನ್ನು ಆಯ್ಕೆ ಮಾಡಲು ಅವಕಾಶ ನೀಡುತ್ತವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಅರ್ಜಿದಾರರ ಪರ ವಕೀಲರಾದ ಪದ್ಮಾ ಲಕ್ಷ್ಮಿ, ಮರಿಯಮ್ಮ ಎಕೆ, ಇಪ್ಸಿತಾ ಓಜಾಲ್, ಪ್ರಶಾಂತ್ ಪದ್ಮನಾಭನ್, ​​ಮೀನಾಕ್ಷಿ ಕೆಬಿ ಮತ್ತು ಪೂಜಾ ಉನ್ನಿಕೃಷ್ಣನ್ ಅವರು ವಾದ ಮಂಡಿಸಿದ್ದರು.

ಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...