Homeಮುಖಪುಟಮಗುವಿನ ಜನನ ಪ್ರಮಾಣಪತ್ರದಲ್ಲಿ 'ಪೋಷಕರು' ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಅನುಮತಿ

ಮಗುವಿನ ಜನನ ಪ್ರಮಾಣಪತ್ರದಲ್ಲಿ ‘ಪೋಷಕರು’ ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಅನುಮತಿ

- Advertisement -
- Advertisement -

ಮಗುವಿನ ಜನನ ಪ್ರಮಾಣಪತ್ರದಲ್ಲಿ ತಮ್ಮ ಹೆಸರನ್ನು ತಂದೆ-ತಾಯಿ ಬದಲಿಗೆ ‘ಪೋಷಕರು’ ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಸೋಮವಾರ (ಜೂನ್ 2) ಅವಕಾಶ ನೀಡಿದೆ.

ಕೇರಳದಲ್ಲಿ ಮೊದಲ ಬಹಿರಂಗವಾಗಿ ಟ್ರಾನ್ಸ್‌ಜೆಂಡರ್ ದಂಪತಿಗಳಾದ ಟ್ರಾನ್ಸ್‌ಮ್ಯಾನ್ ಝಹಾದ್ (ಹುಟ್ಟಿನಲ್ಲೇ ಹೆಣ್ಣು ಎಂದು ಗೊತ್ತುಪಡಿಸಲಾಗಿದೆ ಆದರೆ ಪುರುಷ ಎಂದು ಗುರುತಿಸಲಾಗಿದೆ) ಮತ್ತು ಟ್ರಾನ್ಸ್‌ವುಮನ್ ಝಿಯಾ ಪಾವಲ್ (ಹುಟ್ಟಿನಲ್ಲೇ ಗಂಡು ಎಂದು ಗೊತ್ತುಪಡಿಸಲಾಗಿದೆ ಆದರೆ ಮಹಿಳೆ ಎಂದು ಗುರುತಿಸಲಾಗಿದೆ) ಅವರ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಝಿಯಾದ್ ರೆಹಮಾನ್ ಎಎ ಆದೇಶ ನೀಡಿದ್ದಾರೆ.

ಫೆಬ್ರವರಿ 2023ರಲ್ಲಿ ಝಹಾದ್ ತಮ್ಮ ಮಗುವಿಗೆ ಜನ್ಮ ನೀಡಿದಾಗ, ಈ ಟ್ರಾನ್ಸ್‌ಜೆಂಡರ್ ಜೋಡಿ ಮಾಧ್ಯಮಗಳ ಗಮನ ಸೆಳೆದಿದ್ದರು.

ಕೋಝಿಕ್ಕೋಡ್ ಪಾಲಿಕೆ ನೋಂದಾಯಿಸಿದ ಮಗುವಿನ ಜನನ ಪ್ರಮಾಣಪತ್ರದಲ್ಲಿ ತಾಯಿಯ ಹೆಸರನ್ನು ಝಹಾದ್ (ಟ್ರಾನ್ಸ್‌ಜೆಂಡರ್) ಮತ್ತು ತಂದೆಯ ಹೆಸರನ್ನು ಝಿಯಾ (ಟ್ರಾನ್ಸ್‌ಜೆಂಡರ್) ಎಂದು ದಾಖಲಿಸಲಾಗಿದೆ.

ಝಹಾದ್ ಮತ್ತು ಝಿಯಾ ತಮ್ಮ ಮಗುವಿನ ಜನನ ಪ್ರಮಾಣಪತ್ರದಲ್ಲಿನ ವಿವರಗಳನ್ನು ಬದಲಾಯಿಸಲು ಮತ್ತು ಅವರಿಬ್ಬರನ್ನೂ ತಾಯಿ ಮತ್ತು ತಂದೆಯ ಬದಲು ಕೇವಲ ‘ಪೋಷಕರು’ ಎಂದು ನಮೋದಿಸಲು ಪಾಲಿಕೆಗೆ ಮನವಿ ಮಾಡಿದ್ದರು.

ಪಾಲಿಕೆ ಅಧಿಕಾರಿಗಳು ಅವರ ಮನವಿಯನ್ನು ತಿರಸ್ಕರಿಸಿದ್ದರು. ಹಾಗಾಗಿ, ಜೋಡಿ ಹೈಕೋರ್ಟ್ ಮೊರೆ ಹೋಗಿದ್ದರು.

ತಮ್ಮ ಮನವಿಯನ್ನು ತಿರಸ್ಕರಿಸಿರುವುದು ನಮ್ಮ ಮಗುವಿನ ಮೂಲಭೂತ ಹಕ್ಕಿನ ನಿರಾಕರಣೆಯಾಗಿದೆ ಎಂದು ಜೋಡಿ ತಮ್ಮ ಅರ್ಜಿಯಲ್ಲಿ ಹೇಳಿದ್ದರು. ಅಲ್ಲದೆ, ಹೊಸ ಪ್ರಮಾಣಪತ್ರದ ನಿರಾಕರಣೆಯು ಮಹತ್ವದ NALSA ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ವಿರುದ್ಧವಾಗಿದೆ ಎಂದಿದ್ದರು.

ಇತರ ಹಲವು ದೇಶಗಳು ದಂಪತಿಗಳಿಗೆ ವಿಶೇಷವಾಗಿ ಸಲಿಂಗ ದಂಪತಿಗಳಿಗೆ ತಮ್ಮ ಮಗುವಿನ ಜನನ ಪ್ರಮಾಣಪತ್ರದಲ್ಲಿ ‘ತಾಯಿ, ತಂದೆ ಮತ್ತು ಪೋಷಕರ’ ನಡುವೆ ತಮ್ಮ ಶೀರ್ಷಿಕೆಯನ್ನು ಆಯ್ಕೆ ಮಾಡಲು ಅವಕಾಶ ನೀಡುತ್ತವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಅರ್ಜಿದಾರರ ಪರ ವಕೀಲರಾದ ಪದ್ಮಾ ಲಕ್ಷ್ಮಿ, ಮರಿಯಮ್ಮ ಎಕೆ, ಇಪ್ಸಿತಾ ಓಜಾಲ್, ಪ್ರಶಾಂತ್ ಪದ್ಮನಾಭನ್, ​​ಮೀನಾಕ್ಷಿ ಕೆಬಿ ಮತ್ತು ಪೂಜಾ ಉನ್ನಿಕೃಷ್ಣನ್ ಅವರು ವಾದ ಮಂಡಿಸಿದ್ದರು.

ಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...