Homeಮುಖಪುಟಮಗುವಿನ ಜನನ ಪ್ರಮಾಣಪತ್ರದಲ್ಲಿ 'ಪೋಷಕರು' ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಅನುಮತಿ

ಮಗುವಿನ ಜನನ ಪ್ರಮಾಣಪತ್ರದಲ್ಲಿ ‘ಪೋಷಕರು’ ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಅನುಮತಿ

- Advertisement -
- Advertisement -

ಮಗುವಿನ ಜನನ ಪ್ರಮಾಣಪತ್ರದಲ್ಲಿ ತಮ್ಮ ಹೆಸರನ್ನು ತಂದೆ-ತಾಯಿ ಬದಲಿಗೆ ‘ಪೋಷಕರು’ ಎಂದು ನಮೋದಿಸಲು ಟ್ರಾನ್ಸ್‌ಜೆಂಡರ್ ಜೋಡಿಗೆ ಕೇರಳ ಹೈಕೋರ್ಟ್ ಸೋಮವಾರ (ಜೂನ್ 2) ಅವಕಾಶ ನೀಡಿದೆ.

ಕೇರಳದಲ್ಲಿ ಮೊದಲ ಬಹಿರಂಗವಾಗಿ ಟ್ರಾನ್ಸ್‌ಜೆಂಡರ್ ದಂಪತಿಗಳಾದ ಟ್ರಾನ್ಸ್‌ಮ್ಯಾನ್ ಝಹಾದ್ (ಹುಟ್ಟಿನಲ್ಲೇ ಹೆಣ್ಣು ಎಂದು ಗೊತ್ತುಪಡಿಸಲಾಗಿದೆ ಆದರೆ ಪುರುಷ ಎಂದು ಗುರುತಿಸಲಾಗಿದೆ) ಮತ್ತು ಟ್ರಾನ್ಸ್‌ವುಮನ್ ಝಿಯಾ ಪಾವಲ್ (ಹುಟ್ಟಿನಲ್ಲೇ ಗಂಡು ಎಂದು ಗೊತ್ತುಪಡಿಸಲಾಗಿದೆ ಆದರೆ ಮಹಿಳೆ ಎಂದು ಗುರುತಿಸಲಾಗಿದೆ) ಅವರ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಝಿಯಾದ್ ರೆಹಮಾನ್ ಎಎ ಆದೇಶ ನೀಡಿದ್ದಾರೆ.

ಫೆಬ್ರವರಿ 2023ರಲ್ಲಿ ಝಹಾದ್ ತಮ್ಮ ಮಗುವಿಗೆ ಜನ್ಮ ನೀಡಿದಾಗ, ಈ ಟ್ರಾನ್ಸ್‌ಜೆಂಡರ್ ಜೋಡಿ ಮಾಧ್ಯಮಗಳ ಗಮನ ಸೆಳೆದಿದ್ದರು.

ಕೋಝಿಕ್ಕೋಡ್ ಪಾಲಿಕೆ ನೋಂದಾಯಿಸಿದ ಮಗುವಿನ ಜನನ ಪ್ರಮಾಣಪತ್ರದಲ್ಲಿ ತಾಯಿಯ ಹೆಸರನ್ನು ಝಹಾದ್ (ಟ್ರಾನ್ಸ್‌ಜೆಂಡರ್) ಮತ್ತು ತಂದೆಯ ಹೆಸರನ್ನು ಝಿಯಾ (ಟ್ರಾನ್ಸ್‌ಜೆಂಡರ್) ಎಂದು ದಾಖಲಿಸಲಾಗಿದೆ.

ಝಹಾದ್ ಮತ್ತು ಝಿಯಾ ತಮ್ಮ ಮಗುವಿನ ಜನನ ಪ್ರಮಾಣಪತ್ರದಲ್ಲಿನ ವಿವರಗಳನ್ನು ಬದಲಾಯಿಸಲು ಮತ್ತು ಅವರಿಬ್ಬರನ್ನೂ ತಾಯಿ ಮತ್ತು ತಂದೆಯ ಬದಲು ಕೇವಲ ‘ಪೋಷಕರು’ ಎಂದು ನಮೋದಿಸಲು ಪಾಲಿಕೆಗೆ ಮನವಿ ಮಾಡಿದ್ದರು.

ಪಾಲಿಕೆ ಅಧಿಕಾರಿಗಳು ಅವರ ಮನವಿಯನ್ನು ತಿರಸ್ಕರಿಸಿದ್ದರು. ಹಾಗಾಗಿ, ಜೋಡಿ ಹೈಕೋರ್ಟ್ ಮೊರೆ ಹೋಗಿದ್ದರು.

ತಮ್ಮ ಮನವಿಯನ್ನು ತಿರಸ್ಕರಿಸಿರುವುದು ನಮ್ಮ ಮಗುವಿನ ಮೂಲಭೂತ ಹಕ್ಕಿನ ನಿರಾಕರಣೆಯಾಗಿದೆ ಎಂದು ಜೋಡಿ ತಮ್ಮ ಅರ್ಜಿಯಲ್ಲಿ ಹೇಳಿದ್ದರು. ಅಲ್ಲದೆ, ಹೊಸ ಪ್ರಮಾಣಪತ್ರದ ನಿರಾಕರಣೆಯು ಮಹತ್ವದ NALSA ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ವಿರುದ್ಧವಾಗಿದೆ ಎಂದಿದ್ದರು.

ಇತರ ಹಲವು ದೇಶಗಳು ದಂಪತಿಗಳಿಗೆ ವಿಶೇಷವಾಗಿ ಸಲಿಂಗ ದಂಪತಿಗಳಿಗೆ ತಮ್ಮ ಮಗುವಿನ ಜನನ ಪ್ರಮಾಣಪತ್ರದಲ್ಲಿ ‘ತಾಯಿ, ತಂದೆ ಮತ್ತು ಪೋಷಕರ’ ನಡುವೆ ತಮ್ಮ ಶೀರ್ಷಿಕೆಯನ್ನು ಆಯ್ಕೆ ಮಾಡಲು ಅವಕಾಶ ನೀಡುತ್ತವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಅರ್ಜಿದಾರರ ಪರ ವಕೀಲರಾದ ಪದ್ಮಾ ಲಕ್ಷ್ಮಿ, ಮರಿಯಮ್ಮ ಎಕೆ, ಇಪ್ಸಿತಾ ಓಜಾಲ್, ಪ್ರಶಾಂತ್ ಪದ್ಮನಾಭನ್, ​​ಮೀನಾಕ್ಷಿ ಕೆಬಿ ಮತ್ತು ಪೂಜಾ ಉನ್ನಿಕೃಷ್ಣನ್ ಅವರು ವಾದ ಮಂಡಿಸಿದ್ದರು.

ಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...