Homeಮುಖಪುಟಕೇರಳ: ದೇವಸ್ಥಾನದ ಆವರಣದಲ್ಲಿ ಆರೆಸ್ಸೆಸ್ಸ್‌ಗೆ ಶಸ್ತ್ರಾಸ್ತ್ರ ತರಬೇತಿಗೆ ನಿಷೇಧಿಸಿದ ಹೈಕೋರ್ಟ್

ಕೇರಳ: ದೇವಸ್ಥಾನದ ಆವರಣದಲ್ಲಿ ಆರೆಸ್ಸೆಸ್ಸ್‌ಗೆ ಶಸ್ತ್ರಾಸ್ತ್ರ ತರಬೇತಿಗೆ ನಿಷೇಧಿಸಿದ ಹೈಕೋರ್ಟ್

- Advertisement -
- Advertisement -

ತಿರುವನಂತಪುರಂ ಜಿಲ್ಲೆಯ ದೇವಿ ದೇವಸ್ಥಾನದ ಆವರಣದಲ್ಲಿ ಆರೆಸ್ಸೆಸ್ಸ್‌ಗೆ ಶಸ್ತ್ರಾಸ್ತ್ರ ತರಬೇತಿಗೆ ಅವಕಾಶ ನೀಡುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ನಿರ್ವಹಣೆಯಲ್ಲಿಈ ದೇವಸ್ಥಾನವಿದೆ.

ಆರ್‌ಎಸ್‌ಎಸ್ ಮತ್ತು ಅದರ ಸದಸ್ಯರು ದೇವಾಲಯದ ಆವರಣವನ್ನು ಅಕ್ರಮವಾಗಿ ಬಳಕೆ ಮಾಡುತ್ತಾರೆಂದು ಆರೋಪಿಸಿ ಅದನ್ನು ತಡೆಯುವಂತೆ ಕೋರಿ ಇಬ್ಬರು ಭಕ್ತರು ನ್ಯಾಯಾಲಯದ ಮೊರೆ ಹೋಗಿದ್ದರು.

ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತಿರುವಾಂಕೂರು ದೇವಸ್ವಂ ಮಂಡಳಿಯ ಅದೀನದ ದೇಗುಲಗಳಲ್ಲಿ ಆರ್‌ಎಸ್‌ಎಸ್ ಶಾಖೆಗಳು ನಡೆಸುವುದು ಮತ್ತು ಸಾಮೂಹಿಕ  ಶಸ್ತ್ರಾಸ್ತ್ರ ತರಬೇತಿಗೆ ಅವಕಾಶವಿಲ್ಲ ಎಂಬ ಟಿಡಿಬಿ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ನೆರವು ನೀಡುವಂತೆ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ.

ತಿರುವಾಂಕೂರು ದೇವಸ್ವಂ ಮಂಡಳಿಯ ನಿರ್ವಹಣೆಯಲ್ಲಿರುವ ಈ ದೇವಾಲಯದ ಆವರಣದಲ್ಲಿ ಯಾವುದೇ ಸಾಮೂಹಿಕ  ಆಯುಧ ಅಭ್ಯಾಸಗಳನ್ನು ಅನುಮತಿಸಲಾಗುವುದಿಲ್ಲ. ಪೊಲೀಸರು ಆಡಳಿತ ಅಧಿಕಾರಿಗಳಿಗೆ ಅಗತ್ಯ ಸಹಾಯವನ್ನು ಒದಗಿಸಬೇಕು ಎಂದು ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಪಿಜಿ ಅಜಿತ್‌ಕುಮಾರ್  ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ತಿರುವಾಂಕೂರು ದೇವಸ್ವಂ ಮಂಡಳಿ ಮೇ 18 ರಂದು ಹೊಸ ಸುತ್ತೋಲೆಯನ್ನು ಹೊರಡಿಸಿತ್ತು. ಅದರ  ಪ್ರಕಾರ ದೇವಾಲಯಗಳಲ್ಲಿ ಆರ್‌ಎಸ್‌ಎಸ್‌ನ ಶಸ್ತ್ರಾಸ್ತ್ರ ತರಭೇತಿಗೆ ನಿಷೇಧ ವಿಧಿಸಲಾಗಿದೆ. ಅಲ್ಲದೆ ಆದೇಶ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿತ್ತು.

ಆರ್‌ಎಸ್‌ಎಸ್‌ನಿಂದ ದೇವಾಲಯದ ಸಂಕೀರ್ಣಗಳಲ್ಲಿ ಎಲ್ಲಾ ರೀತಿಯ ಶಸ್ತ್ರಾಸ್ತ್ರ ತರಬೇತಿಯನ್ನು ನಿಷೇಧಿಸಿ ಟಿಡಿಬಿ 2016 ರಲ್ಲಿ ಸುತ್ತೋಲೆ ಹೊರಡಿಸಿತ್ತು. 2016ರಲ್ಲಿ ಅಂದಿನ ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರು ಕೇರಳದಲ್ಲಿ ದೇವಾಲಯಗಳನ್ನು ಶಸ್ತ್ರಾಸ್ತ್ರಗಳ ಉಗ್ರಾಣವನ್ನಾಗಿ ಮಾಡಲು ಆರ್‌ಎಸ್‌ಎಸ್ ಪ್ರಯತ್ನಿಸುತ್ತಿದೆ ಮತ್ತು ಈ ಬಗ್ಗೆ ಸರ್ಕಾರಕ್ಕೆ ಹೆಚ್ಚು ದೂರುಗಳು ಬರುತ್ತಿವೆ ಎಂದು ಹೇಳಿದ್ದರು.

ಇದನ್ನು ಓದಿ: ರಾಮಮಂದಿರ ಉದ್ಘಾಟನೆಯ ನಂತರ ಗೋಧ್ರಾ ರೀತಿಯ ಘಟನೆ ಸಂಭವಿಸಬಹುದು: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...