Homeಮುಖಪುಟಕೇರಳ: ದೇವಸ್ಥಾನದ ಆವರಣದಲ್ಲಿ ಆರೆಸ್ಸೆಸ್ಸ್‌ಗೆ ಶಸ್ತ್ರಾಸ್ತ್ರ ತರಬೇತಿಗೆ ನಿಷೇಧಿಸಿದ ಹೈಕೋರ್ಟ್

ಕೇರಳ: ದೇವಸ್ಥಾನದ ಆವರಣದಲ್ಲಿ ಆರೆಸ್ಸೆಸ್ಸ್‌ಗೆ ಶಸ್ತ್ರಾಸ್ತ್ರ ತರಬೇತಿಗೆ ನಿಷೇಧಿಸಿದ ಹೈಕೋರ್ಟ್

- Advertisement -
- Advertisement -

ತಿರುವನಂತಪುರಂ ಜಿಲ್ಲೆಯ ದೇವಿ ದೇವಸ್ಥಾನದ ಆವರಣದಲ್ಲಿ ಆರೆಸ್ಸೆಸ್ಸ್‌ಗೆ ಶಸ್ತ್ರಾಸ್ತ್ರ ತರಬೇತಿಗೆ ಅವಕಾಶ ನೀಡುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ನಿರ್ವಹಣೆಯಲ್ಲಿಈ ದೇವಸ್ಥಾನವಿದೆ.

ಆರ್‌ಎಸ್‌ಎಸ್ ಮತ್ತು ಅದರ ಸದಸ್ಯರು ದೇವಾಲಯದ ಆವರಣವನ್ನು ಅಕ್ರಮವಾಗಿ ಬಳಕೆ ಮಾಡುತ್ತಾರೆಂದು ಆರೋಪಿಸಿ ಅದನ್ನು ತಡೆಯುವಂತೆ ಕೋರಿ ಇಬ್ಬರು ಭಕ್ತರು ನ್ಯಾಯಾಲಯದ ಮೊರೆ ಹೋಗಿದ್ದರು.

ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತಿರುವಾಂಕೂರು ದೇವಸ್ವಂ ಮಂಡಳಿಯ ಅದೀನದ ದೇಗುಲಗಳಲ್ಲಿ ಆರ್‌ಎಸ್‌ಎಸ್ ಶಾಖೆಗಳು ನಡೆಸುವುದು ಮತ್ತು ಸಾಮೂಹಿಕ  ಶಸ್ತ್ರಾಸ್ತ್ರ ತರಬೇತಿಗೆ ಅವಕಾಶವಿಲ್ಲ ಎಂಬ ಟಿಡಿಬಿ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ನೆರವು ನೀಡುವಂತೆ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ.

ತಿರುವಾಂಕೂರು ದೇವಸ್ವಂ ಮಂಡಳಿಯ ನಿರ್ವಹಣೆಯಲ್ಲಿರುವ ಈ ದೇವಾಲಯದ ಆವರಣದಲ್ಲಿ ಯಾವುದೇ ಸಾಮೂಹಿಕ  ಆಯುಧ ಅಭ್ಯಾಸಗಳನ್ನು ಅನುಮತಿಸಲಾಗುವುದಿಲ್ಲ. ಪೊಲೀಸರು ಆಡಳಿತ ಅಧಿಕಾರಿಗಳಿಗೆ ಅಗತ್ಯ ಸಹಾಯವನ್ನು ಒದಗಿಸಬೇಕು ಎಂದು ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಪಿಜಿ ಅಜಿತ್‌ಕುಮಾರ್  ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ತಿರುವಾಂಕೂರು ದೇವಸ್ವಂ ಮಂಡಳಿ ಮೇ 18 ರಂದು ಹೊಸ ಸುತ್ತೋಲೆಯನ್ನು ಹೊರಡಿಸಿತ್ತು. ಅದರ  ಪ್ರಕಾರ ದೇವಾಲಯಗಳಲ್ಲಿ ಆರ್‌ಎಸ್‌ಎಸ್‌ನ ಶಸ್ತ್ರಾಸ್ತ್ರ ತರಭೇತಿಗೆ ನಿಷೇಧ ವಿಧಿಸಲಾಗಿದೆ. ಅಲ್ಲದೆ ಆದೇಶ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿತ್ತು.

ಆರ್‌ಎಸ್‌ಎಸ್‌ನಿಂದ ದೇವಾಲಯದ ಸಂಕೀರ್ಣಗಳಲ್ಲಿ ಎಲ್ಲಾ ರೀತಿಯ ಶಸ್ತ್ರಾಸ್ತ್ರ ತರಬೇತಿಯನ್ನು ನಿಷೇಧಿಸಿ ಟಿಡಿಬಿ 2016 ರಲ್ಲಿ ಸುತ್ತೋಲೆ ಹೊರಡಿಸಿತ್ತು. 2016ರಲ್ಲಿ ಅಂದಿನ ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರು ಕೇರಳದಲ್ಲಿ ದೇವಾಲಯಗಳನ್ನು ಶಸ್ತ್ರಾಸ್ತ್ರಗಳ ಉಗ್ರಾಣವನ್ನಾಗಿ ಮಾಡಲು ಆರ್‌ಎಸ್‌ಎಸ್ ಪ್ರಯತ್ನಿಸುತ್ತಿದೆ ಮತ್ತು ಈ ಬಗ್ಗೆ ಸರ್ಕಾರಕ್ಕೆ ಹೆಚ್ಚು ದೂರುಗಳು ಬರುತ್ತಿವೆ ಎಂದು ಹೇಳಿದ್ದರು.

ಇದನ್ನು ಓದಿ: ರಾಮಮಂದಿರ ಉದ್ಘಾಟನೆಯ ನಂತರ ಗೋಧ್ರಾ ರೀತಿಯ ಘಟನೆ ಸಂಭವಿಸಬಹುದು: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...