Homeಮುಖಪುಟ'ಎಂಪುರಾನ್‌' ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

- Advertisement -
- Advertisement -

ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮಲಯಾಳಂ ಚಿತ್ರ ‘ಎಲ್2 : ಎಂಪುರಾನ್’ ಅನ್ನು ತಕ್ಷಣ ನಿಷೇಧಿಸುವಂತೆ ಕೋರಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ವಿವಿ ವಿಜೀಶ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಆದೇಶ ನೀಡಲು ಕೇರಳ ಹೈಕೋರ್ಟ್ ಮಂಗಳವಾರ (ಏ.1) ನಿರಾಕರಿಸಿದೆ ಎಂದು barandbench.com ವರದಿ ಮಾಡಿದೆ.

ನ್ಯಾಯಮೂರ್ತಿ ಸಿ.ಎಸ್. ಡಯಾಸ್ ಅವರು ಅರ್ಜಿದಾರರ ಪ್ರಾಮಾಣಿಕತೆಯನ್ನು ಅನುಮಾನಿಸಿದ್ದು, ಈ ಅರ್ಜಿ ಪ್ರಚಾರಕ್ಕಾಗಿ ಸಲ್ಲಿಸಿದಂತೆ ತೋರುತ್ತಿದೆ ಎಂದು ಹೇಳಿದ್ದಾಗಿ ವರದಿ ತಿಳಿಸಿದೆ.

“ನೀವು ಈ ಎಂಪುರಾನ್ ಚಿತ್ರವನ್ನು ನೋಡಿದ್ದೀರಾ? ನಿಮ್ಮ ಆಕ್ಷೇಪಣೆ ಏನು? ಇದನ್ನು ಸೆನ್ಸಾರ್ ಮಂಡಳಿ ಪ್ರಮಾಣೀಕರಿಸಿದೆಯಲ್ವಾ? ನಿಮ್ಮ ಪ್ರಾಮಾಣಿಕತೆಯ ಬಗ್ಗೆ ನನಗೆ ಅನುಮಾನವಿದೆ. ಈ ಚಲನಚಿತ್ರದಿಂದಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಲಾಗಿದೆ ಎಂಬ ಒಂದು ದೂರನ್ನು ನನಗೆ ತೋರಿಸಿ. ಪೊಲೀಸರು ದಾಖಲಿಸಿರುವ ಎಫ್‌ಐಆರ್ ಅನ್ನು ನನಗೆ ತೋರಿಸಿ. ಇವೆಲ್ಲವೂ ಪ್ರಚಾರ ಆಧಾರಿತ ಅರ್ಜಿಗಳು, ಅಲ್ಲದೆ ಬೇರೇನೂ ಅಲ್ಲ” ಎಂದು ನ್ಯಾಯಾಲಯ ಹೇಳಿದೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಈಗಾಗಲೇ ಚಿತ್ರವನ್ನು ಪ್ರದರ್ಶನಕ್ಕೆ ಅನುಮತಿಸಿದೆ ಎಂಬ ರಾಜ್ಯ ಸರ್ಕಾರದ ಪರ ವಕೀಲರ ವಾದವನ್ನು ನ್ಯಾಯಾಲಯ ಗಮನಿಸಿದೆ.

ಮೇಲಿನ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಲಯ ಈ ವಿಷಯವನ್ನು ಆದ್ಯತೆಯ ಮೇರೆಗೆ ವಿಚಾರಣೆಗೆ ಪಟ್ಟಿ ಮಾಡಲು ಮತ್ತು ಯಾವುದೇ ಮಧ್ಯಂತರ ಪರಿಹಾರ ಅಥವಾ ಆದೇಶ ನೀಡಲು ನಿರಾಕರಿಸಿದೆ. ನ್ಯಾಯಾಲಯದ ಬೇಸಿಗೆ ರಜೆಯ ನಂತರ ಈ ಪ್ರಕರಣದ ವಿಚಾರಣೆ ಮುಂದುವರೆಸಲಿದೆ.

ಭಾರತದ ಉಪ ಸಾಲಿಸಿಟರ್ ಜನರಲ್ (ಡಿಎಸ್‌ಜಿಐ) ಅವರು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಪೊಲೀಸ್ ಮಹಾನಿರ್ದೇಶಕರ ರಾಜ್ಯ ಅಟಾರ್ನಿ ಪರವಾಗಿ ವಿಚಾರಣೆಗೆ ಹಾಜರಾಗಿದ್ದರು.

ನ್ಯಾಯಾಲಯ ನಟ ಮೋಹನ್ ಲಾಲ್, ಪೃಥ್ವಿರಾಜ್ ಮತ್ತು ಚಿತ್ರದ ನಿರ್ಮಾಪಕರು ಸೇರಿದಂತೆ ಪ್ರಕರಣದ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಎಂಪುರಾನ್ ಚಿತ್ರದಲ್ಲಿ 2002ರ ಗೋಧ್ರಾ ಗಲಭೆಯನ್ನು ಉಲ್ಲೇಖಿಸುವ ದೃಶ್ಯಗಳು ಇವೆ. ಭಾರತದ ರಕ್ಷಣಾ ಸಚಿವಾಲಯದ ಬಗ್ಗೆ ಅನಗತ್ಯ ಹೇಳಿಕೆಗಳು ನೀಡಲಾಗಿದೆ. ಕೇಂದ್ರ ತನಿಖಾ ಸಂಸ್ಥೆಗಳ ವಿಶ್ವಾಸಾರ್ಹತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸುವ ರೀತಿಯಲ್ಲಿ ಚಿತ್ರಿಸಲಾಗಿದೆ ಎಂದು ಅರ್ಜಿದಾರ ವಿಜೀಶ್ ಆರೋಪಿಸಿದ್ದರು.

ಈ ಚಿತ್ರ ಕೋಮು ಅಶಾಂತಿಗೆ ಕಾರಣವಾಗಬಹುದು. ಮತ್ತಷ್ಟು ವಿವಾದಗಳನ್ನು ತಡೆಗಟ್ಟಲು ಮತ್ತು ಯಾವುದೇ ಸಂಭಾವ್ಯ ಕೋಮು ಅಶಾಂತಿಯನ್ನು ತಪ್ಪಿಸಲು ಚಿತ್ರದ ಮುಂದಿನ ಪ್ರದರ್ಶನವನ್ನು ತಕ್ಷಣವೇ ಸ್ಥಗಿತಗೊಳಿಸಲು ನಿರ್ದೇಶನ ನೀಡಬೇಕು ಎಂದು ಕೋರಿದ್ದರು

‘ಎಂಪುರಾನ್’ ಚಿತ್ರದಲ್ಲಿ ನಟ ಮೋಹನ್ ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ನಟ ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿದ್ದು, ಅವರೂ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈ ಚಿತ್ರವು 2019 ರ ‘ಲೂಸಿಫರ್’ ಚಿತ್ರದ ಮುಂದುವರಿದ ಭಾಗವಾಗಿದೆ.

ಗೋಧ್ರಾ ಗಲಭೆಯ ಬಗ್ಗೆ ಚಿತ್ರದಲ್ಲಿ ಉಲ್ಲೇಖಿಸಿದ್ದಕ್ಕೆ ಚಿತ್ರ ಬಿಜೆಪಿ, ಆರ್‌ಎಸ್‌ಎಸ್‌ ಸೇರಿದಂತೆ ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿದೆ. ಚಿತ್ರದ ಬರಹಗಾರ ಮುರಳಿ ಗೋಪಿ ಮತ್ತು ನಿರ್ಮಾಪಕ ಆಂಥೋನಿ ಪೆರುಬ್ಮಾವೂರ್ (ಚಿತ್ರದಲ್ಲಿ ಸಣ್ಣ ಪಾತ್ರವನ್ನು ನಿರ್ವಹಿಸಿದ್ದಾರೆ) ಸೇರಿದಂತೆ ಇಡೀ ಚಿತ್ರತಂಡ ಟೀಕೆಗೆ ಗುರಿಯಾಗಿದೆ. ಅವರನ್ನು ‘ಹಿಂದೂ ವಿರೋಧಿ’ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ.

ವಿವಾದದ ನಂತರ ಚಿತ್ರದ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಸ್ವಯಂ ಪ್ರೇರಿತರಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬದಲಾವಣೆಗಳೊಂದಿಗೆ ಈ ವಾರ ಚಿತ್ರ ಪ್ರದರ್ಶನಗೊಳ್ಳುವ ಸಾಧ್ಯತೆ ಇದೆ. ಮೋಹನ್ ಲಾಲ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, ವಿವಾದಾತ್ಮಕ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಲಾಗುವುದು ಎಂದು ಹೇಳಿದ್ದಾರೆ.

ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ‘ಎಲ್‌2 : ಎಂಪುರಾನ್‌ ಚಿತ್ರ’; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...