Homeಮುಖಪುಟವಾಟ್ಸಾಪ್‌ ಗ್ರೂಪ್‌ನಲ್ಲಿ ಸದಸ್ಯರು ಮಾಡುವ ಪೋಸ್ಟ್‌ಗಳಿಗೆ ಗ್ರೂಪ್ ರಚನೆಕಾರ ಹೊಣೆಯಲ್ಲ: ಕೇರಳ ಹೈಕೋರ್ಟ್

ವಾಟ್ಸಾಪ್‌ ಗ್ರೂಪ್‌ನಲ್ಲಿ ಸದಸ್ಯರು ಮಾಡುವ ಪೋಸ್ಟ್‌ಗಳಿಗೆ ಗ್ರೂಪ್ ರಚನೆಕಾರ ಹೊಣೆಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ವಾಟ್ಸಾಪ್ ಗ್ರೂಪ್‌ಗಳಲ್ಲಿ ಅದರ ಯಾವುದೇ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಗಳಿಗೆ ಗ್ರೂಪ್ ರಚನೆಕಾರರನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಸ್ಪಷ್ಟನೆ ನೀಡಿದೆ.

ವಾಟ್ಸಾಪ್ ಗ್ರೂಪ್‌ ಒಂದರಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಗುಂಪಿನ ಅಡ್ಮಿನ್ ಒಬ್ಬರು ಪೋಸ್ಟ್ ಮಾಡಿದ್ದರು. ಈ ಪ್ರಕರಣದಲ್ಲಿ ವಾಟ್ಸಾಪ್ ಗ್ರೂಪ್‌ನ ರಚನೆಕಾರರ ವಿರುದ್ಧದ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಹೈಕೋರ್ಟ್ ಈ ತೀರ್ಪು ನೀಡಿದೆ.

ಬಾಂಬೆ ಮತ್ತು ದೆಹಲಿ ಹೈಕೋರ್ಟ್‌ಗಳು ಈಗಾಗಳೇ ಈ ಬಗ್ಗೆ “ಇತರ ಸದಸ್ಯರಿಗಿಂತ ವಾಟ್ಸಾಪ್ ಗುಂಪಿನ ಅಡ್ಮಿನ್‌ಗೆ ಇರುವ ಏಕೈಕ ಸವಲತ್ತು ಎಂದರೆ ಅವರು ಗುಂಪಿಗೆ ಯಾವುದೇ ಸದಸ್ಯರನ್ನು ಸೇರಿಸಬಹುದು ಅಥವಾ ಗುಂಪಿನಿಂದ ತೆಗೆಯಬಹುದು” ಎಂದು ಉಲ್ಲೇಖಿಸಿರುವುದನ್ನು ನ್ಯಾಯಾಲಯ ಒತ್ತಿ ಹೇಳಿದೆ.

“ಗುಂಪಿನ ಸದಸ್ಯರು ಅದರಲ್ಲಿ ಏನು ಪೋಸ್ಟ್ ಮಾಡುತ್ತಿದ್ದಾರೆ ಎಂಬುದರ ಮೇಲೆ ಅವರು ಭೌತಿಕವಾಗಿ ಅಥವಾ ಯಾವುದೇ ನಿಯಂತ್ರಣವನ್ನು ಹೊಂದಿಲ್ಲ. ಅವರು ಗುಂಪಿನಲ್ಲಿ ಬರುವ ಸಂದೇಶಗಳನ್ನು ಮಾಡರೇಟ್ ಮಾಡಲು ಅಥವಾ ಸೆನ್ಸಾರ್ ಮಾಡಲು ಸಾಧ್ಯವಿಲ್ಲ. ಹೀಗಾಗಿ, ವಾಟ್ಸಾಪ್ ಗುಂಪಿನ ರಚನೆಕಾರರು ಗುಂಪಿನ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಕ್ಕೆ ಜವಾಬ್ದಾರರಾಗಿರುವುದಿಲ್ಲ” ಎಂದು ಕೇರಳ ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಚುನಾವಣೆ: ಗೋಡ್ಸೆ ಸಮರ್ಥಕಿ, ಬಿಜೆಪಿ ಅಭ್ಯರ್ಥಿ ಚೆನ್ನೈ ಪಾಲಿಕೆಗೆ ಆಯ್ಕೆ

ವಿಚಾರಣೆ ನಡೆದ ಪ್ರಕರಣದಲ್ಲಿ, ಅರ್ಜಿದಾರರು ಫ್ರೆಂಡ್ಸ್ ಎಂಬ ವಾಟ್ಸಾಪ್ ಗ್ರೂಪ್ ರಚಿಸಿದ್ದರು. ಅವರು ತಮ್ಮೊಂದಿಗೆ ಇತರ ಇಬ್ಬರು ವ್ಯಕ್ತಿಗಳನ್ನು ಸಹ ಅಡ್ಮಿನ್‌ಗಳಾಗಿ ಮಾಡಿಕೊಂಡಿದ್ದಾರೆ. ಅವರಲ್ಲಿ ಒಬ್ಬರು ಮಕ್ಕಳು ಅಶ್ಲೀಲ ಕೃತ್ಯದಲ್ಲಿ ತೊಡಗಿರುವ ಪೋರ್ನ್ ವೀಡಿಯೊವನ್ನು ಗುಂಪಿನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರಿಂದ ಪೊಲೀಸರು ಆ ವ್ಯಕ್ತಿಯ ವಿರುದ್ಧ POCSO ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಅಡಿಯಲ್ಲಿ ದೂರು ದಾಖಲಿಸಿ, ಆರೋಪಿ ನಂ.1 ಎಂದಿದ್ದರು.

ವಾಟ್ಸಾಪ್ ಗ್ರೂಪ್ ರಚನೆ ಮಾಡಿದ್ದ ಅರ್ಜಿದಾರರನ್ನು ಆರೋಪಿ ನಂ. 2 ಎಂದು ಹೆಸರಿಸಲಾಗಿತ್ತು. ಅರ್ಜಿದಾರರು, ತಮ್ಮ ವಿರುದ್ಧದ ಆರೋಪಗಳನ್ನು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದ್ದರು. ತಾವು ಯಾವುದೇ ಅಪರಾಧ ಮಾಡಿಲ್ಲ ಎಂದು ಪ್ರತಿಪಾದಿಸಿದ್ದರು.

ಹೈಕೋರ್ಟ್ ಅರ್ಜಿದಾರರ ವಾದವನ್ನು ಒಪ್ಪಿಕೊಂಡಿತ್ತು. “ಅರ್ಜಿದಾರರು ಯಾವುದೇ ಎಲೆಕ್ಟ್ರಾನಿಕ್ ರೂಪದಲ್ಲಿ ಆಪಾದಿತ ಅಶ್ಲೀಲ ವಸ್ತುಗಳನ್ನು ಪ್ರಕಟಿಸಿದ್ದಾರೆ, ಪ್ರಸಾರ ಮಾಡಿದ್ದಾರೆ ಎಂದು ಸೂಚಿಸಲು ಯಾವುದೇ ದಾಖಲೆಗಳಿಲ್ಲ. ಇದರಿಂದ ಆನ್‌ಲೈನ್‌ನಲ್ಲಿ ಮಕ್ಕಳನ್ನು ದುರುಪಯೋಗಪಡಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದೆ ಎಂಬುದಕ್ಕೆ ಸಾಕ್ಷಿಯಿಲ್ಲ. ಜೊತೆಗೆ ಅರ್ಜಿದಾರರು ತನ್ನ ಲೈಂಗಿಕ ತೃಪ್ತಿಗಾಗಿ ಯಾವುದೇ ರೀತಿಯ ಮಾಧ್ಯಮಗಳಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾನೆ ಅಥವಾ ವಾಣಿಜ್ಯ ಉದ್ದೇಶಕ್ಕಾಗಿ ಮಕ್ಕಳ ಅಶ್ಲೀಲ ವಸ್ತುಗಳನ್ನು ಸಂಗ್ರಹಿಸಿದ ಯಾವುದೇ ಪ್ರಕರಣವನ್ನು ಪ್ರಾಸಿಕ್ಯೂಷನ್ ಹೊಂದಿಲ್ಲ. ಹೀಗಾಗಿ ಗ್ರೂಪ್‌ನ ಸದಸ್ಯರು ಮಾಡಿದ ಪೋಸ್ಟ್‌ಗೆ ಗ್ರೂಪ್‌ನ ರಚನಾಕಾರರನ್ನು ಹೊಣೆಗಾರರನ್ನಾಗಿ ಮಾಡುವ ಯಾವುದೇ ಕಾನೂನು ಇಲ್ಲ” ಎಂದು ನ್ಯಾಯಾಲಯ ಹೇಳಿದೆ.


ಇದನ್ನೂ ಓದಿ: ಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....