Homeಮುಖಪುಟವಾಟ್ಸಾಪ್‌ ಗ್ರೂಪ್‌ನಲ್ಲಿ ಸದಸ್ಯರು ಮಾಡುವ ಪೋಸ್ಟ್‌ಗಳಿಗೆ ಗ್ರೂಪ್ ರಚನೆಕಾರ ಹೊಣೆಯಲ್ಲ: ಕೇರಳ ಹೈಕೋರ್ಟ್

ವಾಟ್ಸಾಪ್‌ ಗ್ರೂಪ್‌ನಲ್ಲಿ ಸದಸ್ಯರು ಮಾಡುವ ಪೋಸ್ಟ್‌ಗಳಿಗೆ ಗ್ರೂಪ್ ರಚನೆಕಾರ ಹೊಣೆಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ವಾಟ್ಸಾಪ್ ಗ್ರೂಪ್‌ಗಳಲ್ಲಿ ಅದರ ಯಾವುದೇ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಗಳಿಗೆ ಗ್ರೂಪ್ ರಚನೆಕಾರರನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಸ್ಪಷ್ಟನೆ ನೀಡಿದೆ.

ವಾಟ್ಸಾಪ್ ಗ್ರೂಪ್‌ ಒಂದರಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಗುಂಪಿನ ಅಡ್ಮಿನ್ ಒಬ್ಬರು ಪೋಸ್ಟ್ ಮಾಡಿದ್ದರು. ಈ ಪ್ರಕರಣದಲ್ಲಿ ವಾಟ್ಸಾಪ್ ಗ್ರೂಪ್‌ನ ರಚನೆಕಾರರ ವಿರುದ್ಧದ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಹೈಕೋರ್ಟ್ ಈ ತೀರ್ಪು ನೀಡಿದೆ.

ಬಾಂಬೆ ಮತ್ತು ದೆಹಲಿ ಹೈಕೋರ್ಟ್‌ಗಳು ಈಗಾಗಳೇ ಈ ಬಗ್ಗೆ “ಇತರ ಸದಸ್ಯರಿಗಿಂತ ವಾಟ್ಸಾಪ್ ಗುಂಪಿನ ಅಡ್ಮಿನ್‌ಗೆ ಇರುವ ಏಕೈಕ ಸವಲತ್ತು ಎಂದರೆ ಅವರು ಗುಂಪಿಗೆ ಯಾವುದೇ ಸದಸ್ಯರನ್ನು ಸೇರಿಸಬಹುದು ಅಥವಾ ಗುಂಪಿನಿಂದ ತೆಗೆಯಬಹುದು” ಎಂದು ಉಲ್ಲೇಖಿಸಿರುವುದನ್ನು ನ್ಯಾಯಾಲಯ ಒತ್ತಿ ಹೇಳಿದೆ.

“ಗುಂಪಿನ ಸದಸ್ಯರು ಅದರಲ್ಲಿ ಏನು ಪೋಸ್ಟ್ ಮಾಡುತ್ತಿದ್ದಾರೆ ಎಂಬುದರ ಮೇಲೆ ಅವರು ಭೌತಿಕವಾಗಿ ಅಥವಾ ಯಾವುದೇ ನಿಯಂತ್ರಣವನ್ನು ಹೊಂದಿಲ್ಲ. ಅವರು ಗುಂಪಿನಲ್ಲಿ ಬರುವ ಸಂದೇಶಗಳನ್ನು ಮಾಡರೇಟ್ ಮಾಡಲು ಅಥವಾ ಸೆನ್ಸಾರ್ ಮಾಡಲು ಸಾಧ್ಯವಿಲ್ಲ. ಹೀಗಾಗಿ, ವಾಟ್ಸಾಪ್ ಗುಂಪಿನ ರಚನೆಕಾರರು ಗುಂಪಿನ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಕ್ಕೆ ಜವಾಬ್ದಾರರಾಗಿರುವುದಿಲ್ಲ” ಎಂದು ಕೇರಳ ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಚುನಾವಣೆ: ಗೋಡ್ಸೆ ಸಮರ್ಥಕಿ, ಬಿಜೆಪಿ ಅಭ್ಯರ್ಥಿ ಚೆನ್ನೈ ಪಾಲಿಕೆಗೆ ಆಯ್ಕೆ

ವಿಚಾರಣೆ ನಡೆದ ಪ್ರಕರಣದಲ್ಲಿ, ಅರ್ಜಿದಾರರು ಫ್ರೆಂಡ್ಸ್ ಎಂಬ ವಾಟ್ಸಾಪ್ ಗ್ರೂಪ್ ರಚಿಸಿದ್ದರು. ಅವರು ತಮ್ಮೊಂದಿಗೆ ಇತರ ಇಬ್ಬರು ವ್ಯಕ್ತಿಗಳನ್ನು ಸಹ ಅಡ್ಮಿನ್‌ಗಳಾಗಿ ಮಾಡಿಕೊಂಡಿದ್ದಾರೆ. ಅವರಲ್ಲಿ ಒಬ್ಬರು ಮಕ್ಕಳು ಅಶ್ಲೀಲ ಕೃತ್ಯದಲ್ಲಿ ತೊಡಗಿರುವ ಪೋರ್ನ್ ವೀಡಿಯೊವನ್ನು ಗುಂಪಿನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರಿಂದ ಪೊಲೀಸರು ಆ ವ್ಯಕ್ತಿಯ ವಿರುದ್ಧ POCSO ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಅಡಿಯಲ್ಲಿ ದೂರು ದಾಖಲಿಸಿ, ಆರೋಪಿ ನಂ.1 ಎಂದಿದ್ದರು.

ವಾಟ್ಸಾಪ್ ಗ್ರೂಪ್ ರಚನೆ ಮಾಡಿದ್ದ ಅರ್ಜಿದಾರರನ್ನು ಆರೋಪಿ ನಂ. 2 ಎಂದು ಹೆಸರಿಸಲಾಗಿತ್ತು. ಅರ್ಜಿದಾರರು, ತಮ್ಮ ವಿರುದ್ಧದ ಆರೋಪಗಳನ್ನು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದ್ದರು. ತಾವು ಯಾವುದೇ ಅಪರಾಧ ಮಾಡಿಲ್ಲ ಎಂದು ಪ್ರತಿಪಾದಿಸಿದ್ದರು.

ಹೈಕೋರ್ಟ್ ಅರ್ಜಿದಾರರ ವಾದವನ್ನು ಒಪ್ಪಿಕೊಂಡಿತ್ತು. “ಅರ್ಜಿದಾರರು ಯಾವುದೇ ಎಲೆಕ್ಟ್ರಾನಿಕ್ ರೂಪದಲ್ಲಿ ಆಪಾದಿತ ಅಶ್ಲೀಲ ವಸ್ತುಗಳನ್ನು ಪ್ರಕಟಿಸಿದ್ದಾರೆ, ಪ್ರಸಾರ ಮಾಡಿದ್ದಾರೆ ಎಂದು ಸೂಚಿಸಲು ಯಾವುದೇ ದಾಖಲೆಗಳಿಲ್ಲ. ಇದರಿಂದ ಆನ್‌ಲೈನ್‌ನಲ್ಲಿ ಮಕ್ಕಳನ್ನು ದುರುಪಯೋಗಪಡಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದೆ ಎಂಬುದಕ್ಕೆ ಸಾಕ್ಷಿಯಿಲ್ಲ. ಜೊತೆಗೆ ಅರ್ಜಿದಾರರು ತನ್ನ ಲೈಂಗಿಕ ತೃಪ್ತಿಗಾಗಿ ಯಾವುದೇ ರೀತಿಯ ಮಾಧ್ಯಮಗಳಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾನೆ ಅಥವಾ ವಾಣಿಜ್ಯ ಉದ್ದೇಶಕ್ಕಾಗಿ ಮಕ್ಕಳ ಅಶ್ಲೀಲ ವಸ್ತುಗಳನ್ನು ಸಂಗ್ರಹಿಸಿದ ಯಾವುದೇ ಪ್ರಕರಣವನ್ನು ಪ್ರಾಸಿಕ್ಯೂಷನ್ ಹೊಂದಿಲ್ಲ. ಹೀಗಾಗಿ ಗ್ರೂಪ್‌ನ ಸದಸ್ಯರು ಮಾಡಿದ ಪೋಸ್ಟ್‌ಗೆ ಗ್ರೂಪ್‌ನ ರಚನಾಕಾರರನ್ನು ಹೊಣೆಗಾರರನ್ನಾಗಿ ಮಾಡುವ ಯಾವುದೇ ಕಾನೂನು ಇಲ್ಲ” ಎಂದು ನ್ಯಾಯಾಲಯ ಹೇಳಿದೆ.


ಇದನ್ನೂ ಓದಿ: ಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...