Homeಮುಖಪುಟವಾಟ್ಸಾಪ್‌ ಗ್ರೂಪ್‌ನಲ್ಲಿ ಸದಸ್ಯರು ಮಾಡುವ ಪೋಸ್ಟ್‌ಗಳಿಗೆ ಗ್ರೂಪ್ ರಚನೆಕಾರ ಹೊಣೆಯಲ್ಲ: ಕೇರಳ ಹೈಕೋರ್ಟ್

ವಾಟ್ಸಾಪ್‌ ಗ್ರೂಪ್‌ನಲ್ಲಿ ಸದಸ್ಯರು ಮಾಡುವ ಪೋಸ್ಟ್‌ಗಳಿಗೆ ಗ್ರೂಪ್ ರಚನೆಕಾರ ಹೊಣೆಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ವಾಟ್ಸಾಪ್ ಗ್ರೂಪ್‌ಗಳಲ್ಲಿ ಅದರ ಯಾವುದೇ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಗಳಿಗೆ ಗ್ರೂಪ್ ರಚನೆಕಾರರನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಸ್ಪಷ್ಟನೆ ನೀಡಿದೆ.

ವಾಟ್ಸಾಪ್ ಗ್ರೂಪ್‌ ಒಂದರಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಗುಂಪಿನ ಅಡ್ಮಿನ್ ಒಬ್ಬರು ಪೋಸ್ಟ್ ಮಾಡಿದ್ದರು. ಈ ಪ್ರಕರಣದಲ್ಲಿ ವಾಟ್ಸಾಪ್ ಗ್ರೂಪ್‌ನ ರಚನೆಕಾರರ ವಿರುದ್ಧದ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಹೈಕೋರ್ಟ್ ಈ ತೀರ್ಪು ನೀಡಿದೆ.

ಬಾಂಬೆ ಮತ್ತು ದೆಹಲಿ ಹೈಕೋರ್ಟ್‌ಗಳು ಈಗಾಗಳೇ ಈ ಬಗ್ಗೆ “ಇತರ ಸದಸ್ಯರಿಗಿಂತ ವಾಟ್ಸಾಪ್ ಗುಂಪಿನ ಅಡ್ಮಿನ್‌ಗೆ ಇರುವ ಏಕೈಕ ಸವಲತ್ತು ಎಂದರೆ ಅವರು ಗುಂಪಿಗೆ ಯಾವುದೇ ಸದಸ್ಯರನ್ನು ಸೇರಿಸಬಹುದು ಅಥವಾ ಗುಂಪಿನಿಂದ ತೆಗೆಯಬಹುದು” ಎಂದು ಉಲ್ಲೇಖಿಸಿರುವುದನ್ನು ನ್ಯಾಯಾಲಯ ಒತ್ತಿ ಹೇಳಿದೆ.

“ಗುಂಪಿನ ಸದಸ್ಯರು ಅದರಲ್ಲಿ ಏನು ಪೋಸ್ಟ್ ಮಾಡುತ್ತಿದ್ದಾರೆ ಎಂಬುದರ ಮೇಲೆ ಅವರು ಭೌತಿಕವಾಗಿ ಅಥವಾ ಯಾವುದೇ ನಿಯಂತ್ರಣವನ್ನು ಹೊಂದಿಲ್ಲ. ಅವರು ಗುಂಪಿನಲ್ಲಿ ಬರುವ ಸಂದೇಶಗಳನ್ನು ಮಾಡರೇಟ್ ಮಾಡಲು ಅಥವಾ ಸೆನ್ಸಾರ್ ಮಾಡಲು ಸಾಧ್ಯವಿಲ್ಲ. ಹೀಗಾಗಿ, ವಾಟ್ಸಾಪ್ ಗುಂಪಿನ ರಚನೆಕಾರರು ಗುಂಪಿನ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಕ್ಕೆ ಜವಾಬ್ದಾರರಾಗಿರುವುದಿಲ್ಲ” ಎಂದು ಕೇರಳ ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಚುನಾವಣೆ: ಗೋಡ್ಸೆ ಸಮರ್ಥಕಿ, ಬಿಜೆಪಿ ಅಭ್ಯರ್ಥಿ ಚೆನ್ನೈ ಪಾಲಿಕೆಗೆ ಆಯ್ಕೆ

ವಿಚಾರಣೆ ನಡೆದ ಪ್ರಕರಣದಲ್ಲಿ, ಅರ್ಜಿದಾರರು ಫ್ರೆಂಡ್ಸ್ ಎಂಬ ವಾಟ್ಸಾಪ್ ಗ್ರೂಪ್ ರಚಿಸಿದ್ದರು. ಅವರು ತಮ್ಮೊಂದಿಗೆ ಇತರ ಇಬ್ಬರು ವ್ಯಕ್ತಿಗಳನ್ನು ಸಹ ಅಡ್ಮಿನ್‌ಗಳಾಗಿ ಮಾಡಿಕೊಂಡಿದ್ದಾರೆ. ಅವರಲ್ಲಿ ಒಬ್ಬರು ಮಕ್ಕಳು ಅಶ್ಲೀಲ ಕೃತ್ಯದಲ್ಲಿ ತೊಡಗಿರುವ ಪೋರ್ನ್ ವೀಡಿಯೊವನ್ನು ಗುಂಪಿನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರಿಂದ ಪೊಲೀಸರು ಆ ವ್ಯಕ್ತಿಯ ವಿರುದ್ಧ POCSO ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಅಡಿಯಲ್ಲಿ ದೂರು ದಾಖಲಿಸಿ, ಆರೋಪಿ ನಂ.1 ಎಂದಿದ್ದರು.

ವಾಟ್ಸಾಪ್ ಗ್ರೂಪ್ ರಚನೆ ಮಾಡಿದ್ದ ಅರ್ಜಿದಾರರನ್ನು ಆರೋಪಿ ನಂ. 2 ಎಂದು ಹೆಸರಿಸಲಾಗಿತ್ತು. ಅರ್ಜಿದಾರರು, ತಮ್ಮ ವಿರುದ್ಧದ ಆರೋಪಗಳನ್ನು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದ್ದರು. ತಾವು ಯಾವುದೇ ಅಪರಾಧ ಮಾಡಿಲ್ಲ ಎಂದು ಪ್ರತಿಪಾದಿಸಿದ್ದರು.

ಹೈಕೋರ್ಟ್ ಅರ್ಜಿದಾರರ ವಾದವನ್ನು ಒಪ್ಪಿಕೊಂಡಿತ್ತು. “ಅರ್ಜಿದಾರರು ಯಾವುದೇ ಎಲೆಕ್ಟ್ರಾನಿಕ್ ರೂಪದಲ್ಲಿ ಆಪಾದಿತ ಅಶ್ಲೀಲ ವಸ್ತುಗಳನ್ನು ಪ್ರಕಟಿಸಿದ್ದಾರೆ, ಪ್ರಸಾರ ಮಾಡಿದ್ದಾರೆ ಎಂದು ಸೂಚಿಸಲು ಯಾವುದೇ ದಾಖಲೆಗಳಿಲ್ಲ. ಇದರಿಂದ ಆನ್‌ಲೈನ್‌ನಲ್ಲಿ ಮಕ್ಕಳನ್ನು ದುರುಪಯೋಗಪಡಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದೆ ಎಂಬುದಕ್ಕೆ ಸಾಕ್ಷಿಯಿಲ್ಲ. ಜೊತೆಗೆ ಅರ್ಜಿದಾರರು ತನ್ನ ಲೈಂಗಿಕ ತೃಪ್ತಿಗಾಗಿ ಯಾವುದೇ ರೀತಿಯ ಮಾಧ್ಯಮಗಳಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾನೆ ಅಥವಾ ವಾಣಿಜ್ಯ ಉದ್ದೇಶಕ್ಕಾಗಿ ಮಕ್ಕಳ ಅಶ್ಲೀಲ ವಸ್ತುಗಳನ್ನು ಸಂಗ್ರಹಿಸಿದ ಯಾವುದೇ ಪ್ರಕರಣವನ್ನು ಪ್ರಾಸಿಕ್ಯೂಷನ್ ಹೊಂದಿಲ್ಲ. ಹೀಗಾಗಿ ಗ್ರೂಪ್‌ನ ಸದಸ್ಯರು ಮಾಡಿದ ಪೋಸ್ಟ್‌ಗೆ ಗ್ರೂಪ್‌ನ ರಚನಾಕಾರರನ್ನು ಹೊಣೆಗಾರರನ್ನಾಗಿ ಮಾಡುವ ಯಾವುದೇ ಕಾನೂನು ಇಲ್ಲ” ಎಂದು ನ್ಯಾಯಾಲಯ ಹೇಳಿದೆ.


ಇದನ್ನೂ ಓದಿ: ಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...